ಸೋಮವಾರ, ಮೇ 26, 2025

ಮರಕ್ಕೆ ಕೊಡಲಿ, ಎಪಿಎಂಸಿ ಮತ್ತು ಅರಣ್ಯ ಇಲಾಖೆ ಜಾಣಮೌನ.

ಜಗದೇವ ಎಸ್ ಕುಂಬಾರ.
ಚಿತ್ತಾಪುರ: ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಹಾಡು ಹಗಲೇ ಮರಗಳು ಧರೆಗೆ ಉರಳಿಸುತ್ತಿದ್ದರೂ ಯಾರೂ ಕೇಳುವರಿಲ್ಲದಂತಾಗಿದೆ ಎಪಿಎಂಸಿ ಮತ್ತು ಅರಣ್ಯ ಅಧಿಕಾರಿಗಳು ಜಾಣಮೌನಕ್ಕೆ ಜಾರಿದ್ದು ನೋಡಿದರೆ ಇನ್ನೂ ಅದೆಷ್ಟೋ ಮರಳು ನೆಲಕ್ಕೆ ಉರುಳುತ್ತವೆ ಎಂಬ ಚಿಂತೆ ಸಾರ್ವಜನಿಕರಲ್ಲಿ ಚರ್ಚೆ ಆಗುತ್ತಿದೆ.

ಸುಮಾರು 50ಕ್ಕೂ ಅಧಿಕ ವರ್ಷಗಳ ಹಳೆಯದಾದ ಬೆಲೆಬಾಳುವ ಮರಗಳು ಕಡಿಯುತ್ತಿರುವುದು ನೋಡಿದರೆ ಎಪಿಎಂಸಿ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳ ಮೌನ ಹಲವಾರು ಗುಮಾನಿಗೆ ಎಡೆ ಮಾಡಿಕೊಟ್ಟಿದೆ ಎಂದು ಜನರು ದೂರುತ್ತಿದ್ದಾರೆ. ಕಾನೂನಿನ ಯಾವುದೇ ಅಳಕು ಅಂಜಿಕೆಯಿಲ್ಲದೆ ಗಿಡ, ಮರಗಳನ್ನು ಅವ್ಯಾಹತವಾಗಿ ಕಡಿಯುವ ದುಷ್ಕರ್ಮಿಗಳ ಅಟ್ಟಹಾಸ ಮುಂದುವರೆದಿದೆ.

ಕಾಡು ಬೆಳೆಸಿ ನಾಡು ಉಳಿಸಿ ಎಂದು ಅರಣ್ಯ ಇಲಾಖೆ ಘೋಷಣೆ ಕೇವಲ ದಾಖಲೆಯಲ್ಲಿ ಮಾತ್ರ ಉಳಿದಿದೆ. ಅನುಷ್ಠಾನದಲ್ಲಿ ಜಾರಿಯಾಗಿಲ್ಲ ಎಂಬುದಕ್ಕೆ ಸಾಕ್ಷಿಗಳು ಸಾಕಷ್ಟು ಸಿಗಲಿವೆ. ಸರಕಾರ ಇಲ್ಲಿನ ಗಿಡ ಮರಗಳ ರಕ್ಷಣೆಗೆ ಈಗಲಾದರೂ ಎಚ್ಚೆತ್ತು ತುರ್ತು ಕ್ರಮ ಕೈಗೂಳ್ಳಬೇಕು. ಇರದಿದ್ದರೆ ಜನ ಹೋರಾಟ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.

ದಿನಕ್ಕೆ ಒಂದೆರಡರಂತೆ ನಿತ್ಯ ಮರಗಳ ಮಾರಣ ಹೋಮ ನಡೆಸಿದರೆ ಹೀಗೆ ಬಿಟ್ಟರೆ ಕೆಲ ದಿನದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿನ ಎಲ್ಲ ಹಸಿರು ಸಂಪತ್ತು ನಾಶವಾಗಲಿದೆ ಎಂದು ಪರಿಸರ ಪ್ರೇಮಿಗಳು ಆತಂಕ ವ್ಯಕ್ತ ಪಡಿಸಿದ್ದಾರೆ.

ನಮ್ಮ ವ್ಯಾಪ್ತಿಗೆ ಒಳಪಡುವ ಎಪಿಎಂಸಿಯಲ್ಲಿ ಮರಗಳು ಕಡಿದಿದ್ದು ನಮ್ಮ ಗಮನಕ್ಕೆ ಇಲ್ಲ ಒಂದು ವೇಳೆ ಮರಗಳು ಕಡಿದಿದ್ದು ನಿಜವಾಗಿದ್ದರೆ ನಾನು ಕ್ರಮ ಕೈಗೊಳ್ಳುವೆ ನಮ್ಮ ಇಲಾಖೆಯಿಂದ ಯಾವುದೇ ರೀತಿಯ ಮರಗಳು ಕಡಿಸಲು ಸೂಚಿಸಿಲ್ಲ ಎಂದರು.

- ಶ್ರೀಮತಿ ಸವಿತಾ ಘೋನಿ.
ಕಾರ್ಯದರ್ಶಿ,ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಚಿತ್ತಾಪೂರ.

ಎಪಿಎಂಸಿಯಲ್ಲಿ ಯಾವುದೇ ರೀತಿಯ ಒಪ್ಪಿಗೆ ಪರವಾನಿಗೆ ಇರದೆ ಬೆಳಿಗ್ಗೆ ಮರ ಕಡಿದ ವಿಷಯ ತಿಳಿದು ಬಂದಿದೆ ಕೂಡಲೆ ಮರ ಕಡಿದವರ ವಿರುದ್ಧ ಕ್ರಮ ಕೈಗೊಳ್ಳಲು ಸ್ಥಳೀಯ ಪಂಚನಾಮೆ ಮಾಡಿಕೊಳ್ಳಲಾಗಿದೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

- ಮಹಮ್ಮದ್ ಜಾವೀದ್
ಉಪ ವಲಯ ಅರಣ್ಯಾಧಿಕಾರಿ ಚಿತ್ತಾಪೂರ.



ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಎಸ್ಸೆಸ್ಸೆಲ್ಸಿ ಮಕ್ಕಳೊಂದಿಗೆ ಜಿಪಂ ಸಿಇಒ ಚರ್ಚೆ.

ಚಿತ್ತಾಪುರ: ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮಪಡಿಸಲು ಪೂರ್ವಸಿದ್ಧತಾ ಪರೀಕ್ಷೆ-1 ರಲ್ಲಿ ಅತ್ಯಂತ ಕಡಿಮೆ ಫಲಿತಾಂಶ ಪಡೆದ ಕರ್ನಾಟಕ ಪಬ್ಲಿಕ್ ಶಾಲೆ ಮಾಡಬೂಳ,...