ಜನತೆಯ ಸುದ್ದಿ ವಾಹಿನಿ

ಮಂಗಳವಾರ, ಮೇ 27, 2025

ಮರ ಕಟಾವು ಮಾಡಿದ ಸ್ಥಳಕ್ಕೆ ಅರಣ್ಯಾಧಿಕಾರಿ ಭೇಟಿ.

ಮರ ಕಟಾವು ಮಾಡಿದ ಸ್ಥಳಕ್ಕೆ ಅರಣ್ಯಾಧಿಕಾರಿ ಭೇಟಿ.

ಚಿತ್ತಾಪುರ: ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ಸೋಮವಾರ ಅನುಮತಿ ಪಡೆಯದೆ ಮರ ಕಟಾವು ಮಾಡಿದ ವಿಷಯ ತಿಳಿದು ಸ್ಥಳಕ್ಕೆ ವಲಯ ಅರಣ್ಯಾಧಿಕಾರಿ ವಿಜಯಕುಮಾರ ಬಡೀಗೇರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಂತರ ಮಾತನಾಡಿದ ಅವರು ಎಪಿಎಂಸಿ ಕಾರ್ಯದರ್ಶಿ ಅನುಮತಿ ಕೋರಿ ಅರಣ್ಯ ಇಲಾಖೆಗೆ ಪತ್ರ ಬರೆದಿದ್ದರು ಇನ್ನೂ ನಮ್ಮ ಇಲಾಖೆಯಿಂದ ಅನುಮತಿ ನೀಡಿರಲಿಲ್ಲ ಈಗ ಏಕಾಏಕಿ ಮರ ಕಡಿದ ವಿಷಯ ತಿಳಿದುಬಂದಿದೆ ಈ ಕುರಿತು ಕೊಡಲೆ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಉಪ ವಲಯ ಅರಣ್ಯಾಧಿಕಾರಿ ಮೊಹಮ್ಮದ್ ಜಾವೀದ್, ಅರಣ್ಯ ವೀಕ್ಷಕ ಸವಿತಾ ಸೇರಿದಂತೆ ಇತರರು ಇದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಮೋದಿ-ಷಾ ಅಬ್ಬರಕ್ಕೆ ಬಂಗಾಳದ ಸರ್ವಾಧಿಕಾರಿ ಸರ್ಕಾರ ಧೂಳಿಪಟ; ಮಣಿಕಂಠ ರಾಠೋಡ.

ಚಿತ್ತಾಪುರ: ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಷಾ ಅವರ ದಕ್ಷ ನಾಯಕತ್ವದ ಅಬ್ಬರಕ್ಕೆ ಪಶ್ಚಿಮ ಬಂಗಾಳದಲ್ಲಿ ಸರ್ವಾಧಿಕಾರಿಯಂತೆ ಮೆರೆಯುತ್ತಿದ...