ಈ ರಸ್ತೆಗೆ ಸಂಚರಿಸಿದರೆ ಜೀವದ ಭಯ.ಕಿರಿದಾದ ರಸ್ತೆ, ರಸ್ತೆ ಉದ್ದಕ್ಕೂ ತಗ್ಗು ಗುಂಡಿಗಳು, ದಿನ ಒಂದಲ್ಲ ಒಂದು ಘಟನೆ.

-ಜಗದೇವ ಎಸ್ ಕುಂಬಾರ.
ಚಿತ್ತಾಪುರ: ಪಟ್ಟಣದ ಹೊರವಲಯದಿಂದ ರಾವೂರ ಹೋಗುವ 6 ಕಿಲೋ ಮೀಟರ್ ಡಾಂಬರೀಕರಣ ರಸ್ತೆಯು ಸುಮಾರು ವರ್ಷಗಳಿಂದ ಕಿರಿದಾದ ರಸ್ತೆಯಾಗಿದ್ದು, ಈಗ ಆ ರಸ್ತೆ ಉದ್ದಕ್ಕೂ ಅಲ್ಲಿಲ್ಲಿ ತಗ್ಗು-ಗುಂಡಿಗಳು ನಿರ್ಮಾಣವಾಗಿದ್ದು, ಬೆಳಿಗ್ಗೆಯಿಂದ ರಾತ್ರಿವರೆಗೆ ಒಂದಲ್ಲ ಒಂದು ವಾಹನ ಸವಾರರ ಮಧ್ಯ ಸಣ್ಣಪುಟ್ಟ ಘಟನೆಗಳು ಸಂಭವಿಸುತ್ತಿದ್ದು, ಈಗಾಗ್ಲೇ ಸಾಕಷ್ಟು ಜೀವ ಹಾನಿಗಳು ಆಗಿದ್ದು, ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರಿಗೆ ಜೀವದ ಭಯ ಉಂಟಾಗುತ್ತಿದೆ ಎನ್ನುತ್ತಾರೆ.
ಈ ರಸ್ತೆ ಮೇಲೆ ಎದುರಿನಿಂದ ಬರುವ ವಾಹನಗಳಿಗೆ ಇನ್ನೊಂದು ವಾಹನ ಜಾಗ ಬಿಡದಿದ್ದರೆ ವಾಹನ ನೆಲಕಚ್ಚುವ ಸಾಧ್ಯತೆಗಳೇ ಹೆಚ್ಚಾಗಿವೆ. ಎದುರಿನಿಂದ ಬರುವ ವಾಹನಗಳಿಗೆ ಜಾಗ ಬಿಡಲು ಸಾಧ್ಯವಾಗದಷ್ಟು ರಸ್ತೆ ಇಕ್ಕಟ್ಟಾಗಿದೆ. ಇದರಿಂದಾಗಿ ಅನೇಕ ಬಾರಿ ಬೈಕ್ ಸವಾರರು ತೊಂದರೆ ಅನುಭವಿಸಿದ ಉದಾಹರಣೆಗಳಿವೆ ಎಂದು ತಮ್ಮ ಮನದಾಳದ ಮಾತು ಹೇಳುತ್ತಿದ್ದಾರೆ.
ರಸ್ತೆಗಳ ದುರಸ್ತಿಗಾಗಿ ಕೇಂದ್ರ ಮತ್ತು ರಾಜ್ಯ ಸರಕಾರ ವಿವಿಧ ಯೋಜನೆಯಡಿ ಕೋಟ್ಯಾಂತರ ರೂ. ಅನುದಾನ ನೀಡುತ್ತಿದೆ. ಆದರೆ ಈ ರಸ್ತೆಗೆ ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕಾದ ಜನಪ್ರತಿನಿಧಿಗಳ ಹಾಗೂ ಅಧಿಕಾರಿಗಳ ನಿಷ್ಕಾಳಜಿಯಿಂದ ರಸ್ತೆ ಮಾತ್ರ ಹಾಗೇ ಉಳಿಯುವಂತಾಗಿದೆ. ಒಟ್ಟಿನಲ್ಲಿ ಹದಗೆಟ್ಟ ಕಿರಿದಾದ ರಸ್ತೆಯ ದುಃಸ್ಥಿತಿಯಿಂದ ಚಿತ್ತಾಪುರ ಸುತ್ತ ಮುತ್ತಲಿನ ಗ್ರಾಮಸ್ಥರು ನಿತ್ಯ ಹಿಡಿಶಾಪ ಹಾಕುತ್ತಾ ಓಡಾಡುವಂತಾಗಿದ್ದು, ಜನಪ್ರತಿನಿಧಿಗಳು, ಅಧಿಕಾರಿಗಳು ರಸ್ತೆ ಬಗ್ಗೆ ನಿರ್ಲಕ್ಷ್ಯತನ ಬಿಟ್ಟು ಶೀಘ್ರ ರಸ್ತೆ ನಿರ್ಮಾಣ ಕಾರ್ಯಕ್ಕೆ ಮುಂದಾಗಬೇಕಿದೆ ಎಂದರು.

ಜನ ನಿತ್ಯ ನರಕಯಾತನೆ ಅನುಭವಿಸುವಂತಾಗಿದೆ. ರಸ್ತೆ ತೀರ ಕಿರಿದಾಗಿದ್ದು, ರಸ್ತೆಯ ಮಧ್ಯ ಭಾಗದಲ್ಲಿ ತಗ್ಗು-ಗುಂಡಿಗಳು ಬಿದ್ದು ಹಾಳಾಗಿದ್ದರಿಂದ ವಾಹನಗಳು ಸರ್ಕಸ್ ಮಾಡುತ್ತ ಚಲಿಸಬೇಕಾದ ಸ್ಥಿತಿ ನಿರ್ಮಾಣವಾಗಿದೆ. ರಸ್ತೆಯ ಡಾಂಬರೀಕರಣ ಕಿತ್ತು ಹೋಗಿದ್ದರಿಂದ ಅಲ್ಲಲ್ಲಿ ಕಂಕರ್ ಕಲ್ಲುಗಳು ಮೇಲೆದ್ದು ಕೆಲವು ಕಡೆ ಗುಂಡಿಗಳು ನಿರ್ಮಾಣವಾಗಿವೆ ಎನ್ನುತ್ತಾರೆ.

- ವೆಂಕಟೇಶ ರಾಠೋಡ್
 ಕರವೇ (ಸ್ವಾಭಿಮಾನಿ ಬಣ)ಕಾರ್ಯಕರ್ತರು ಚಿತ್ತಾಪೂರ.

===================================

ಇಂದು ಬೆಳಗಿನ ಜಾವ ಓರಿಯಂಟ್ ಸಿಮೆಂಟ್ ಕಂಪೆನಿಯಲ್ಲಿ ಸೆಕ್ಯೂರಿಟಿ ಕೆಲಸಕ್ಕೆ ಹೋಗುತ್ತಿದ್ದ ರಾವೂರ ಗ್ರಾಮದ ರಾಜಕುಮಾರ ಶೆಟ್ಟಿ ಎನ್ನುವ ನಿವಾಸಿ ಇದೇ ಇಕ್ಕಟ್ಟಾದ ರಸ್ತೆಯಲ್ಲಿ ನಿಂತಿದ್ದ ವಾಹನಕ್ಕೆ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದ ಘಟನೆ ನಡೆದಿದೆ.

-ಮಹೇಶ ಬಾಳಿ
ರಾವೂರ ಗ್ರಾಮಸ್ಥರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಬಿಜೆಪಿ ಕಾರ್ಯಕರ್ತರಿಂದ ವಾಹನಕ್ಕೆ ಹಾಲಿನ ಅಭಿಷೇಕ.

ಎತ್ತಿನ ಗಾಡಿಗೆ ಪಿಕಪ್ ಗಾಡಿ ಡಿಕ್ಕಿ:8 ಜನರಿಗೆ ಗಾಯ.

ಬಿಜೆಪಿ ಕಾರ್ಯಕರ್ತರ ಆತ್ಮಾವಲೋಕನ ಸಭೆ.

ಮನೆಗಳ ಹಂಚಿಕೆ ಪ್ರಕ್ರಿಯೆ ಮುಂದೂಡಲಾಗಿದೆ

ರಾಜ್ಯೋತ್ಸವ ಪ್ರಶಸ್ತಿಗೆ ಏಳು ಜನ ಸಾಧಕರ ಆಯ್ಕೆ.

ಬಜಾಜ್ ಕಾಂಪ್ಲೆಕ್ಸ್ ನಲ್ಲಿ ಅನೈತಿಕ ಚಟುವಟಿಕೆ.

ತಾಲ್ಲೂಕು ಅಧಿಕಾರಿಗಳ ವಿರುದ್ಧ ಸಚಿವರ ಅಸಮಾಧಾನ.

ಪ್ರಯಾಗರಾಜ್ ಪವಿತ್ರ ತೀರ್ಥಸ್ಥಳ: ಕಂಬಳೇಶ್ವರ ಶ್ರೀ.

ತಹಸೀಲ್ ಕಛೇರಿಯಲ್ಲಿ ಪೋಲೀಸ ಪೇದೆ ಸಾವು.

ಮಗನ ಸಾಧನೆಗೆ ತಂದೆ-ತಾಯಿ ಮೆಚ್ಚುಗೆ.