ಬುಧವಾರ, ಜೂನ್ 25, 2025

ಪಿಂಚಣಿ ಮತ್ತು ಕುಟುಂಬ ಪಿಂಚಣಿ ಪರಿಷ್ಕರಿಸಲು ಒತ್ತಾಯ.


ಪಿಂಚಣಿ ಮತ್ತು ಕುಟುಂಬ ಪಿಂಚಣಿ ಪರಿಷ್ಕರಿಸಲು ಒತ್ತಾಯ.

ಚಿತ್ತಾಪುರ: ನಿವೃತ್ತಿ ಸರ್ಕಾರಿ ನೌಕರರಿಗೆ ಪಿಂಚಣಿ
ಮತ್ತು ಕುಟುಂಬ ಪಿಂಚಣಿ ಪರಿಷ್ಕರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ನಿವೃತ್ತ ಸರಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ರೇವಣಸಿದ್ದಪ್ಪ ರೋಣದ್ ನೇತೃತ್ವದಲ್ಲಿ ಬುಧವಾರ ಪ್ರಧಾನ ಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ತಹಸೀಲ್ದಾರ್ ಅವರಿಗೆ ಸಲ್ಲಿಸಿದರು.

ನಿವೃತ್ತ ಹೊಂದಿದ ಸರಕಾರಿ ನೌಕರರು ಆರ್ಥಿಕ ಸೌಲಭ್ಯದಿಂದ ವಂಚಿತರಾಗದಿರಲಿ ಎಂದು ಕೇಂದ್ರ ಸರ್ಕಾರವು 2004 ರಲ್ಲಿ ಹೊಸ ಪಿಂಚಣಿಯನ್ನು ಜಾರಿ ತರಲಾಗಿದೆ ಹಾಗೂ ಎಲ್ಲಾ ರಾಜ್ಯಗಳು ಸಹ ಕೇಂದ್ರ ಸರ್ಕಾರದ ಮಾದರಿಯಲ್ಲಿ ಹೊಸದಾಗಿ ಸರ್ಕಾರಿ ಸೇವೆಗೆ ಸೇರಿದ ನೌಕರರಿಗೆ ಹೊಸ ಪಿಂಚಣಿ ಯೋಜನೆಯನ್ನು ಜಾರಿಗೆ ತರಲು ಸಾಕಷ್ಟು ಹೋರಾಟವೆ ನಡೆದಿದೆ. ಇತ್ತೀಚೆಗೆ ಕೇಂದ್ರ ಸರ್ಕಾರವು ಸರ್ಕಾರಿ ನೌಕರರಿಗೆ ಹಾಗೂ ಪಿಂಚಣಿದಾರರಿಗೆ ಹೊಸ ವೇತನ ಶ್ರೇಣಿ ಪರಿಷ್ಕರಿಸಲು 8ನೇ ವೇತನ ಆಯೋಗ ರಚನೆ ಮಾಡಲಾಗಿದೆ. ಆಯೋಗದ ವರದಿಯು ಪ್ರಗತಿ ಹಂತದಲ್ಲಿದೆ ಎಂದು ತಿಳಿಸಿದ್ದಾರೆ.
ಈ ಮಧ್ಯೆ ಕೇಂದ್ರ ಸರ್ಕಾರವು ಮಾರ್ಚ್ 25 ರಂದು ಲೋಕಸಭೆಯಲ್ಲಿ ಆರ್ಥಿಕ ಬಿಲ್ಲು ಮಂಡಿಸಿ 1 ಏಪ್ರಿಲ್ 2026 ಕ್ಕೆ ಮೊದಲು ನಿವೃತ್ತಿಯಾದ ಸರ್ಕಾರಿ ನೌಕರರಿಗೆ ಪಿಂಚಣಿ ಮತ್ತು ಕುಟುಂಬ ಪಿಂಚಣಿಯನ್ನು ಪರಿಷ್ಕರಿಸಲು ಸಾಧ್ಯವಿಲ್ಲವೆಂಬ ನಿರ್ಣಯವನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರವರು ಲೋಕಸಭೆಯಲ್ಲಿ ಮಂಡಿಸಿದ್ದಾರೆ. ಇದರಿಂದ ನಿವೃತ್ತ ಸರಕಾರಿ ನೌಕರ ಪಿಂಚಣಿದಾರರಿಗೆ ಮತ್ತು ಕುಟುಂಬ ಪಿಂಚಣಿದಾರರಿಗೆ 8ನೇ ವೇತನ ಆಯೋಗದಲ್ಲಿ ಪರಿಷ್ಕರಿಸಲು ಸಾಧ್ಯವಾಗುವುದಿಲ್ಲವೆಂದು ತಿಳಿಸಿದ್ದಾರೆ. ಇದರಿಂದ ನಿವೃತ್ತ ಪಿಂಚಣಿದಾರರು ಮತ್ತು ಕುಟುಂಬ ಪಿಂಚಣಿದಾರರು ಸಂಕಷ್ಟಕ್ಕೆ ಒಳಗಾಗುತ್ತಾರೆ. ಈ ಕುರಿತು ಈಗಾಗಲೇ ದೆಹಲಿಯಲ್ಲಿ ನಾಲ್ಕು ಬಲವಾದ ಸಂಘಟನೆಗಳು ಹೋರಾಟಕ್ಕಿಳಿದಿವೆ ನಮ್ಮ ಸಂಘವು ಸಹ ಅವರಿಗೆ ಬೆಂಬಲ ನೀಡುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷ ವಿಜಯಕುಮಾ‌ರ್ ಲೊಡ್ಡೆನೋರ, ಉಪಾಧ್ಯಕ್ಷ ಕಿಶನ್ ರಾಠೋಡ, ಮಹಾದೇವಪ್ಪ ಉಪ್ಪಾರ, ಖಜಾಂಚಿ ಮಲ್ಲಣ್ಣ ಮುಡಬೂಳ, ಪ್ರಧಾನ ಕಾರ್ಯದರ್ಶಿ ಶಶೀಧರ ಪಾಟೀಲ, ಸಹ ಕಾರ್ಯದರ್ಶಿ ಸುಭಾಷ್ ಮೇಗಂಜಿ, ಸಂಘಟನಾ ಕಾರ್ಯದರ್ಶಿಗಳಾದ ಮೋನಯ್ಯ ಪಂಚಾಳ, ಬಾಬು ಕರದಾಳ, ಶಮೀಮ್, ಕಾನೂನು ಸಲಹೆಗಾರ ಮೋತಿಲಾಲ್‌ ಚವ್ಹಾಣ, ಸಾಂಸ್ಕೃತಿಕ ಕಾರ್ಯದರ್ಶಿ ದೇವಪ್ಪ ನಂದೂರಕರ್, ಕ್ರೀಡಾ ಕಾರ್ಯದರ್ಶಿ ಶಿವನಾಗಪ್ಪ ಮುತ್ತಲಗಡ್ಡಿ, ಜಂಟಿ ಕಾರ್ಯದರ್ಶಿ ಹಾಜಪ್ಪ ಬಿಳಾರ್, ನಿರ್ದೇಶಕರಾದ ಬಸವರಾಜ ಕಲಬುರಗಿ, ತುಕಾರಾಮ ನಾಯಕ, ಶ್ರೀಮತಿ ಸರಳಬಾಯಿ, ಶಾಂತಬಾಯಿ, ಶಿವಲಿಂಗಪ್ಪ ದೊಡ್ಡಮನಿ, ಮಲ್ಲೇಶಪ್ಪ ದಂಡೋತಿ, ಸಿದ್ದಯ್ಯ ಸ್ಥಾವರಮಠ, ಲಿಂಗಣ್ಣ ಮಲಕನ್, ಮುನಿಯಪ್ಪ ಸೇರಿದಂತೆ ಇತರರು ಇದ್ದರು.

ಸೋಮವಾರ, ಜೂನ್ 16, 2025

ದೇವರಲ್ಲಿ ಶ್ರದ್ಧೆ, ಭಕ್ತಿ ಇರಲಿ: ಮರೆಪ್ಪ ಮುತ್ಯಾ.

       ದೇವರಲ್ಲಿ ಶ್ರದ್ಧೆ, ಭಕ್ತಿ ಇರಲಿ: ಮರೆಪ್ಪ ಮುತ್ಯಾ.

ಚಿತ್ತಾಪುರ: ಪ್ರತಿಯೊಬ್ಬರೂ ದೇವರಲ್ಲಿ ಶ್ರದ್ಧೆ, ಭಕ್ತಿ ಇಟ್ಟುಕೊಳ್ಳಬೇಕು ಎಂದು ಹೂಡಾ(ಬಿ) ಗ್ರಾಮದ ಹಯ್ಯಾಳಸಿದ್ದೇಶ್ವರ ದೇವಸ್ಥಾನದ ಶ್ರೀಗಳಾದ ಮರೆಪ್ಪ ಮುತ್ಯಾ ಹೇಳಿದರು.

ತಾಲೂಕಿನ ಮರಗೋಳ ಗ್ರಾಮದಲ್ಲಿ ನಡೆದ ಶ್ರೀ ಬೀರಲಿಂಗೇಶ್ವರ ಹಾಗೂ ಶ್ರೀ ಮಾಳಿಂಗೇಶ್ವರರ ನೂತನ ಮಂದಿರ ಲೋಕಾರ್ಪಣೆ, ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ಗ್ರಾಮದಲ್ಲಿ ಹಾಲುಮತದ ಜನರು ಹಾಗೂ ಊರಿನವರ ಸಹಕಾರದಿಂದ ಕುರಿದೊಡ್ಡಿ ಇದ್ದ ಸ್ಥಳದಲ್ಲಿ ಇಂತಹ ಭವ್ಯ ಮಂದಿರ ನಿರ್ಮಾಣ ಮಾಡಿದ್ದು ಹೆಮ್ಮೆಯ ವಿಷಯ.ಜೀವನದಲ್ಲಿ ಏನನ್ನೂ ಸಾಧಿಸುವುದು ಸಾಧ್ಯವಿಲ್ಲವೆಂದು ಕೈಕಟ್ಟಿ ಕುಳಿತುಕೊಂಡರೆ, ಸಾಧನೆ ಮಾಡುವುದು ಅಸಾಧ್ಯ. ಗುರುವಿನ ಕೆಲಸದಲ್ಲಿ ಪ್ರಾಮಾಣಿಕ, ಶ್ರದ್ಧೆ, ಭಕ್ತಿ ಇದ್ದರೆ ಇಂತಹ ಕಾರ್ಯ ಕೆಲಸಗಳು ಆಗಲು ಸಾಧ್ಯ. ಸಮಾಜದ ಗುರುಗಳನ್ನು ಪೂಜಿಸುವುದರ ಜೊತೆಗೆ 
ಸಮಾಜದಲ್ಲಿ ಸತ್ಕಾರ್ಯ ಮಾಡುವ ಗುಣ ಬೆಳೆಸಿಕೊಳ್ಳಬೇಕು. 

ಹಾಲುಮತ ಸಮಾಜದ ಜಿಲ್ಲಾಧ್ಯಕ್ಷ ರೇವಣಸಿದ್ದಪ್ಪ ಸಾತನೂರ ಮಾತನಾಡಿ ಈ ಗ್ರಾಮದಲ್ಲಿ ಬೀರಲಿಂಗೇಶ್ವರ ಮತ್ತು ಮಾಳಿಂಗರಾಯ ದೇವಸ್ಥಾನವನ್ನು ಇಷ್ಟು ದೊಡ್ಡ ಪ್ರಮಾಣದಲ್ಲಿ ನಿರ್ಮಿಸಿರುವುದು ತುಂಬಾ ಹೆಮ್ಮೆಯ ವಿಷಯವಾಗಿದೆ ಅಲ್ಲದೇ ಇಲ್ಲಿನ ಜನರ ಸೌರ್ಹಾದತೆಯನ್ನು ಎತ್ತಿ ತೋರಿಸುತ್ತದೆ ಈ ಸಮಾಜವು ಸಧೃಡವಾಗಬೇಕಾದರೆ ನಾವುಗಳು ಎಲ್ಲರೂ ನಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿದಾಗ ಮಾತ್ರ ನಮ್ಮ ಸಮಾಜ ಶೈಕ್ಷಣಿಕವಾಗಿ ಹಾಗೂ ಆರ್ಥಿಕವಾಗಿ ಸದೃಡರಾಗಲು ಸಾಧ್ಯವಾಗುತ್ತದೆ ಎಂದರು.
ದೇವಸ್ಥಾನದ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಕೊಂಡಂಪಳ್ಳಿ ಅಧ್ಯಕ್ಷತೆ ವಹಿಸಿದ್ದರು. ದಿಗ್ಗಾಂವದ ಕಂಚಗಾರ ಹಳ್ಳಿಯ ಶ್ರೀ ಮಲ್ಲಯ್ಯ ಮಹಾಸ್ವಾಮಿಗಳು, ಶ್ರೀ ಶರಣಯ್ಯ ಸ್ವಾಮಿ, ಬೀರಣ್ಣ ಸ್ವಾಮಿ ಕೋರವಾರ, ಹಿರಗಪ್ಪ ತಾತಾ ಸೂಗೂರ, ಮುಖಂಡರಾದ ನಾಗಣ್ಣಗೌಡ, ಬಸವರಾಜ ವಾರದ, ಶರಣಗೌಡ ಪೊಲೀಸ್ ಪಾಟೀಲ್, ಅಣ್ಣಾರಾವ ಸಣ್ಣೂರಕ‌ರ್, ಶರಣು ಸಾಹು, ಬಸವರಾಜ ಪೂಜಾರಿ ಮೊಗಲಾ, ಮಲ್ಲಿಕಾರ್ಜುನ ಪೂಜಾರಿ ಮೊಗಲಾ, ಈರಪ್ಪ ಭೋವಿ, ಯಲ್ಲಾಲಿಂಗ ಪೂಜಾರಿ, ಬೀರಪ್ಪ ಹೆಬ್ಬಾಳ, ಬೀರಪ್ಪ ಮುಗಟಿ ಸೇರಿದಂತೆ ಇತರರು ವೇದಿಕೆಯಲ್ಲಿದ್ದರು.

ಇದೇ ಸಂದರ್ಭದಲ್ಲಿ ಗ್ರಾಮದಲ್ಲಿ ಉತ್ತಮ ಶಿಕ್ಷಣವನ್ನು ಪಡೆದ ಹಾಗೂ ಸಾಧನೆ ಮಾಡಿದವರಿಗೆ ಸನ್ಮಾನಿಸಲಾಯಿತು. ಕಾಶಿರಾಯ ಕಲಾಲ್ ಸ್ವಾಗತಿಸಿದರು, ನರಸಪ್ಪ ಚಿನ್ನಾಕಟ್ಟಿ ನಿರೂಪಿಸಿದರು.

ಗುರುವಾರ, ಜೂನ್ 5, 2025

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ: ಕರಣ್ ಗುಜ್ಜರ್.


ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ: ಕರಣ್ ಗುಜ್ಜರ್.

ಚಿತ್ತಾಪುರ: ಜೀವ ಸಂಕುಲದ ಉಳುವಿಗಾಗಿ ಪರಿಸರದಲ್ಲಿನ ಹಾಗೂ ನಮ್ಮ ಸುತ್ತಲಿನ ಮರ-ಗಿಡಗಳನ್ನು ಸಂರಕ್ಷಿಸುವುದು ನಮ್ಮೆಲ್ಲರ ಹೊಣೆಯಾಗಿದೆ ಎಂದು 4ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಕರಣ್ ಗುಜ್ಜರ್ ಹೇಳಿದರು.

ಪಟ್ಟಣದ ಶಿಶುವಿಹಾರ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಪ್ರಾದೇಶಿಕ ಅರಣ್ಯ ವಲಯ ಮತ್ತು ಶಿಶುವಿಹಾರ ಪ್ರಾಥಮಿಕ ಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ "ವಿಶ್ವ ಪರಿಸರ ದಿನ" ಕಾನೂನು ಅರಿವು ಕಾರ್ಯಕ್ರಮ ನಿಮಿತ್ಯ ಸಸಿಗೆ ನೀರು ಉಣಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಹಿಂದಿನ ಕಾಲದ ಜನರು ಗಿಡ-ಮರಗಳನ್ನು ಹೆಚ್ಚೆಚ್ಚು ಸಂರಕ್ಷಿಸುತ್ತಿದ್ದರು ಆದ್ರೆ ಇಂದಿನ ಕಾಲದಲ್ಲಿ ಗಿಡ-ಮರಗಳು ನಾಶ ಮಾಡುವುದು ನೋಡುತ್ತಿದ್ದೇವೆ ನಗರೀಕರಣ ಬೆಳೆದಂತೆ ಗಿಡಮರಗಳು ಸಂಖ್ಯೆ ಕಡಿಮೆ ಆಗುತ್ತಿದೆ ಮುಂದೊಂದಿನ ಆಮ್ಲಜನಕ ಬೆನ್ನಿಗೆ ಕಟ್ಟಿಕೊಂಡು ಓಡಾಡುವ ಪರಿಸ್ಥಿತಿ ಬರಬಹುದು ಹೀಗಾಗಿ ಪರಿಸರದಲ್ಲಿನ ಗಿಡಮರಗಳು ಬೆಳೆಸುವ ಮನೋಭಾವ ಕಲಿಯಬೇಕು ಪ್ರತಿದಿನ ಪರಿಸರ ದಿವಾಗಿರಲ್ಲಿ ಎಂದು ಹೇಳಿದರು.

ಶಾಲಾ ಆವರಣದಲ್ಲಿ ಕೆಲ ವಿದ್ಯಾರ್ಥಿಗಳಿಗೆ ವಿಶ್ವ ಪರಿಸರ ದಿನದ ನಿಮಿತ್ಯ ಸಸಿಗಳನ್ನು ವಿತರಿಸಲಾಗುತ್ತದೆ ಯಾವ ವಿದ್ಯಾರ್ಥಿ ದಿನನಿತ್ಯ ಸಸಿಗೆ ನೀರು ಹಾಕುವುದರ ಜೊತೆಗೆ ಸಂರಕ್ಷಿಸಿ ಚೆನ್ನಾಗಿ ಬೆಳೆಸುತ್ತಾರೆ ಆ ವಿದ್ಯಾರ್ಥಿಗೆ ಮುಂದಿನ ವರ್ಷ ನಮ್ಮ ಕೋರ್ಟ್ ವತಿಯಿಂದ ಪ್ರಶಸ್ತಿ ನೀಡುವುದಾಗಿ ಘೋಷಿಸಿದರು.

- ಅಭಿಷೇಕ್ ಆರ್ ಜೋಶಿ
ಸಿವಿಲ್ ನ್ಯಾಯಾಧೀಶರು ಚಿತ್ತಾಪುರ.
==================================

ಶಾಲಾ ಆವರಣದಲ್ಲಿ ವಿಧ್ಯಾರ್ಥಿಗಳು ಪ್ಲಾಸ್ಟಿಕ್ ಮಾಲಿನ್ಯಕ್ಕೆ ಅವಕಾಶ ಮಾಡಿಕೊಡಬೇಡಿ ಮತ್ತು ಪ್ಲಾಸ್ಟಿಕ್ ಬಳಕೆಯಿಂದ ನಮ್ಮ ಆರೋಗ್ಯದ ಮೇಲೆ ದುಷ್ಪರಿಣಾಮ ಬಿಳುವ ಸಾಧ್ಯತೆ ಇರುತ್ತದೆ ಇದರಿಂದ ಬಳಕೆ ಬೇಡ ಎಂದು ಕಿವಿ ಮಾತು ಹೇಳಿದರು.

- ಸಿಸ್ಟರ್ ಸಿಂಪ್ರೊಸ್
ಮುಖ್ಯಗುರುಗಳು, ಶಿಶುವಿಹಾರ ಹಿ.ಪ್ರಾ.ಶಾಲೆ ಚಿತ್ತಾಪೂರ

ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಕಿಶನ್ ಮಾಡಲಗಿ, ವಕೀಲರ ಸಂಘದ ಅಧ್ಯಕ್ಷ ನಾಗರಾಜ ಕಡಬೂರ, ವಲಯ ಅರಣ್ಯಾಧಿಕಾರಿ ವಿಜಯಕುಮಾರ್ ಬಡಿಗೇರ್,  ಭೆಂಥನಿ ಪ್ರೌಢ ಶಾಲಾ ಮುಖ್ಯೋಪಾಧ್ಯಾಯ ಕವಿತಾ ಬಿಎಸ್, ಸಹಾಯಕ ಸರ್ಕಾರಿ ಅಭಿಯೋಜಕರಾದ ಅಂಜನಾದೇವಿ, ವಕೀಲರಾದ ಎಸ್ಎಂ ಪಾಟೀಲ್, ಎಸ್ಎಂ ನಂದೂರಕರ್, ಶಿಕ್ಷಕರಾದ ಶೆಶಪ್ಪ ಬಡಿಗೇರ್, ಸತೀಶ್, ಸುಜಾತಾ, ಮಲ್ಲಪ್ಪ, ಕಲ್ಪನಾ, ಅರುಣಕುಮಾರ, ಸೇರಿದಂತೆ ಇತರರು ಇದ್ದರು ನಿರೂಪಣೆ ಸುಮಲತಾ ನಾಡಗೌಡ ನೆರವೇರಿಸಿದರು ವಿಶ್ವನಾಥ ಟೋನಿ ಸ್ವಾಗತಿಸಿಕೊಂಡರು ವಿಶ್ವನಾಥ ಕುಂಬಾರ ವಂದಿಸಿದರು.

ಭಾನುವಾರ, ಜೂನ್ 1, 2025

ಜನ್ಮದಿನದ ಆಚರಿಸಿದ ಅಭೀಮಾನಿಗಳು.

ಜನ್ಮದಿನದ ಆಚರಿಸಿದ ಅಭೀಮಾನಿಗಳು.

ಚಿತ್ತಾಪುರ: ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಕಾಂಗ್ರೆಸ್ ಹಿರಿಯ ಮುಖಂಡರಾದ ಶಿವರುದ್ರ ಭೀಣಿ ರವರ 56ನೇ ಜನ್ಮದಿನದ ನಿಮಿತ್ಯ ಅವರ ಅಭಿಮಾನಿ ಬಳಗದ ವತಿಯಿಂದ ಕೇಕ್ ಕತ್ತರಿಸುವ ಮೂಲಕ ಜನ್ಮದಿನ ಆಚರಿಸಿ ಸಂಭ್ರಮಿಸಿದರು.
ಈ ವೇಳೆಯಲ್ಲಿ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಚನ್ನವೀರ ಬಿ ಕಣ್ಣಿಗಿ,ಕಾಂಗ್ರೆಸ್ ಯುವ ಘಟಕ ಮಾಜಿ ಅಧ್ಯಕ್ಷ ಸಂಜಯ ಬುಳಕರ, ಶಿಕ್ಷಕರಾದ ಸದಾಶಿವ, ರೇವಣಸಿದ್ಧಪ್ಪ ರೋಣದ, ದಿಗ್ಗಾಂವ ಗ್ರಾಪಂ ಸದಸ್ಯರಾದ ಗುರುಶಾಂತ ಭಾಗೋಡಿ, ಸುರೇಶ ಅಚ್ಚೆಲಿ, ವಿವಿಎಸ್ಎಸ್ಎನ್ ಸದಸ್ಯ ಸಿದ್ದಣ್ಣ ಸಜ್ಜನ, ಗುರುಲಿಂಗ ಬಂದಳ್ಳಿ, ಭೀಮರಾಯ ದೇವರ, ಹಣಮಂತ ಭೀಮನಹಳ್ಳಿ, ಉದಯ ಕುಮಾರ ದಿಗಾಂವ್, ಶ್ರೀಧರ ಬಡಿಗೇರ್, ಬಸಪ್ಪ ದೊಡ್ಡಮನಿ, ಸಂಜಯ ಬುಳಕರ ಸೇರಿದಂತೆ ಇತರರು ಇದ್ದರು.

ಎಸ್ಸೆಸ್ಸೆಲ್ಸಿ ಮಕ್ಕಳೊಂದಿಗೆ ಜಿಪಂ ಸಿಇಒ ಚರ್ಚೆ.

ಚಿತ್ತಾಪುರ: ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮಪಡಿಸಲು ಪೂರ್ವಸಿದ್ಧತಾ ಪರೀಕ್ಷೆ-1 ರಲ್ಲಿ ಅತ್ಯಂತ ಕಡಿಮೆ ಫಲಿತಾಂಶ ಪಡೆದ ಕರ್ನಾಟಕ ಪಬ್ಲಿಕ್ ಶಾಲೆ ಮಾಡಬೂಳ,...