ಗುರುವಾರ, ಸೆಪ್ಟೆಂಬರ್ 18, 2025

ದುಡ್ಡು ಕೊಟ್ರೆ ಮನೆ ನಿರ್ಮಾಣಕ್ಕೆ ಅನುಮತಿ ಪತ್ರ: ದಸಂಸ ಆರೋಪ.

ಚಿತ್ತಾಪುರ: ಮತ ಕ್ಷೇತ್ರದ ಮಾಲಗತ್ತಿ ಗ್ರಾಮ ಪಂಚಾಯತನ  ಅಧ್ಯಕ್ಷರು ಮತ್ತು ಪಿಡಿಓ ಸೇರಿಕೊಂಡು ದುಡ್ಡು ಕೊಟ್ಟವರಿಗೆ ಮಾತ್ರ ಮನೆ ನಿರ್ಮಾಣಕ್ಕೆ ಅನುಮತಿ ಪತ್ರ ನೀಡುವುದು ದುಡ್ಡು ಕೊಡದವರಿಗೆ ನೀಡದೆ ಅನ್ಯಾಯ ಮಾಡುತ್ತಿರುವುದು ಖಂಡನೀಯ ಎಂದು ಆರೋಪಿಸಿ ಪತ್ರಿಕಾ ಪ್ರಕಟಣೆ ದಲಿತ ಸಂಘರ್ಷ ಸಮಿತಿ ತಾಲೂಕು ಸಂಚಾಲಕ ಶಿವಮೂರ್ತಿ ಪಾಮನೋರ ತಿಳಿಸಿದ್ದಾರೆ.

ಪಂಚಾಯತ ವ್ಯಾಪ್ತಿಯಲ್ಲಿರುವ ಯರಗಲ್ ಗ್ರಾಮದ 2024-25ನೇ ಸಾಲಿನ ಇಂದಿರಾ ಆವಾಜ ಯೋಜನೆ, ಮನೆಯಲ್ಲಿ ಫಲಾನುಭವುಗಳಿಗೆ ಆಯ್ಕೆಯಾದ ಮನೆಗಳಲ್ಲಿ 2012-13ನೇ ಸಾಲಿನಲ್ಲಿ ಆಯ್ಕೆಯಾದ ಹಲವಾರು ಫಲಾನುಭವಿಗಳಿಗೆ ಈಗಾಗಲೇ ಮನೆ ಕಟ್ಟಲು ಅನುಮತಿ ಪತ್ರ ಕೊಟ್ಟಿದ್ದು ತಮಗೆ ಯಾರು ಹಣ ಕೊಟ್ಟಿರುವರೋ ಅಂಥವರಿಗೆ ಮಾತ್ರ ಅನುಮತಿ ಪತ್ರ (ವರ್ಕ ಆರ್ಡರ) ಕೊಟ್ಟು ಮನೆ ಕಟ್ಟಲು ಅವಕಾಶ ಮಾಡಿ ಮೊದಲನೆ ಹಂತ ಬಿಲ್ ಸಹ ಮಾಡಿರುತ್ತಾರೆ. ಇನ್ನುಳಿದ ಫಲಾನುಭವಿಗಳು ವರ್ಕ ಆರ್ಡರ ಕೇಳಿದರೆ  ನಿಮ್ಮ ಮನೆಗಳು ಹಿಂದೆ 2012-13ನೇ ಸಾಲಿನಲ್ಲಿ ತೆಗೆದುಕೊಂಡಿರುವಿರಿ ಎಂದು ಹಣ ಕೊಡದವರಿಗೆ ಹಾರಿಕೆ ಉತ್ತರ ನೀಡುತ್ತಿದ್ದಾರೆ.

ಮಾಲಗತ್ತಿ ಗ್ರಾಮ ಪಂಚಾಯತ ಅಧ್ಯಕ್ಷರು ಮತ್ತು ಅಭಿವೃದ್ಧಿ ಅಧಿಕಾರಿಗಳು ಸೇರಿಕೊಂಡು ಫಲಾನುಭವಿಗಳಿಗೆ ಅನ್ಯಾಯ ಮಾಡುತ್ತಿದ್ದು ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮ ಜರುಗಿಸಿ ಅನ್ಯಾಯಕೊಳಗಾದ ಫಲಾನುಭವಿಗಳಿಗೆ ನ್ಯಾಯ ಕೊಡಿಸಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ದಲಿತ ಸಂಘರ್ಷ ಸಮಿತಿಯಿಂದ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಎಸ್ಸೆಸ್ಸೆಲ್ಸಿ ಮಕ್ಕಳೊಂದಿಗೆ ಜಿಪಂ ಸಿಇಒ ಚರ್ಚೆ.

ಚಿತ್ತಾಪುರ: ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮಪಡಿಸಲು ಪೂರ್ವಸಿದ್ಧತಾ ಪರೀಕ್ಷೆ-1 ರಲ್ಲಿ ಅತ್ಯಂತ ಕಡಿಮೆ ಫಲಿತಾಂಶ ಪಡೆದ ಕರ್ನಾಟಕ ಪಬ್ಲಿಕ್ ಶಾಲೆ ಮಾಡಬೂಳ,...