ಭಾನುವಾರ, ಅಕ್ಟೋಬರ್ 5, 2025

ವಿದ್ಯಾರ್ಥಿಗಳ ಗೋಳು ಕೇಳೋರಿಲ್ಲ : ವಾರ್ಡನ್ ನಿರ್ಲಕ್ಷ.

ಹೈಟೆಕ್ ವಸತಿ ನಿಲಯ, ಒಳಗೆ ಹೋಗಲು ಮುಜುಗರ.

ಚಿತ್ತಾಪುರ: ಪಟ್ಟಣದ ಬಾಲಾಜಿ ಮಂದಿರದ ಮುಂದೆ ಇರುವ ಡಾ. ಬಿ ಆರ್ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಹೋಗುವ ರಸ್ತೆಯಲ್ಲಿ ಸುಮಾರು ದಿನಗಳಿಂದ ಮಳೆ ನೀರು ನಿಂತು ಗಬ್ಬು ನಾರುತ್ತಿದರು ಸಹ ಆ ನೀರನ್ನು ಸ್ವಚ್ಛಗೊಳಿಸದೆ ಕ್ರಮ ಕೈಗೊಳ್ಳದೆ ವಸತಿ ನಿಲಯದ ವಾರ್ಡನ್ ನಿರ್ಲಕ್ಷತನ ತೋರುತ್ತಿರುವುದು ಎದ್ದು ಕಾಣುತ್ತಿದೆ.

ಪ್ರತಿನಿತ್ಯ ವಸತಿ ನಿಲಯದ ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ಹೋಗಿ /ಬರುವಾಗ ಅದೇ ನೀರಿನಲ್ಲಿ ಮೂಗು ಮುಚ್ಚಿಕೊಂಡು ನಡೆದುಕೊಂಡು ಹೋಗುವ ಪರಿಸ್ಥಿತಿ ಉಂಟಾಗಿದೆ. ಕೆಲ ವಿದ್ಯಾರ್ಥಿಗಳು ಆ ಗಬ್ಬು ನೀರಿನಲ್ಲಿ ನಡೆದುಕೊಂಡು ಹೋಗಲು ಹಿಂಜರಿದು ಕಾಂಪೌಂಡ ಹಾರಿ (ಜಿಗಿದು) ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಲ್ಲದೆ ನಿಲಯದ ಅಡುಗೆ ಸಿಬ್ಬಂದಿ ವರ್ಗ ವಾರ್ಡನ್ ಸಹ ಇದೇ ನೀರಿನಲ್ಲಿ ನಡೆದುಕೊಂಡು ಬರುತ್ತಿದ್ದಾರೆ ಇದಕ್ಕೆ ಪರಿಹಾರ ಕಂಡುಕೊಳ್ಳಲು ಇವರಿಗೆ ಆಗುತ್ತಿಲ್ಲ. 

ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಚಿವ ಪ್ರಿಯಾಂಕ ಖರ್ಗೆ ಹೈಟೆಕ್ ವಸತಿ ನಿಲಯ ನಿರ್ಮಿಸಿದ್ದಾರೆ ಆದರೆ ಸ್ಥಳೀಯ ಅಧಿಕಾರಿಗಳ ನಿರ್ಲಕ್ಷದಿಂದ ಇಂತಹ ಸಣ್ಣ-ಪುಟ್ಟ ಸಮಸ್ಯೆಗಳು ಉದ್ಭವಿಸುತ್ತಿವೆ ಎನ್ನುತ್ತಿದ್ದಾರೆ ಸ್ಥಳೀಯರು.

ವಸತಿ ನಿಲಯದ ವಿದ್ಯಾರ್ಥಿಗಳು ಉದಯಕಾಲ ವರದಿಗಾರ ಜೊತೆ ಮಾತನಾಡಿ ಅವರು ಈ ನಿಂತ ನೀರಿನಿಂದ ಬೆಳಗ್ಗೆ ಸಾಯಂಕಾಲ ಗಬ್ಬು ವಾಸನೆ ಬರುತ್ತಿದ್ದು, ಇದರ ಜೊತೆಗೆ ಸೊಳ್ಳೆಗಳ ಕಾಟ ಹೆಚ್ಚಾಗಿದ್ದು ಈ ಕುರಿತು ವಾರ್ಡನ್ ಅವರಿಗೆ ಹೇಳಿದರೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ತಮ್ಮ ಗೋಳು ಹೇಳಿಕೊಂಡಿದ್ಜಾರೆ.

ಈಗಲಾದರೂ ಸಂಬಂಧಪಟ್ಟ ಅಧಿಕಾರಿಗಳು ಸುದ್ದಿಯನ್ನು ನೋಡಿ ಎಚ್ಚೆತ್ತುಕೊಂಡು ವಿದ್ಯಾರ್ಥಿಗಳ ಗೋಳನ್ನು ಆಲಿಸಿ ಕ್ರಮ ಕೈಗೊಳ್ಳುತ್ತಾರೆ ಕಾದು ನೋಡಬೇಕಿದೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಕ್ರಮ ವಹಿಸಿ: ಪ್ರಭುರೆಡ್ಡಿ ಸೂಚನೆ.

ಚಿತ್ತಾಪುರ: ಮುಂಬರುವ ಬೇಸಿಗೆ ಮತ್ತು ಮುಂಗಾರು ಮಳೆಗಾಲದ ಆರಂಭದ ಅವಧಿಯಲ್ಲಿ ತಾಲೂಕಿನಾದ್ಯಂತ ಕುಡಿಯುವ ನೀರಿನ ಅಭಾವ ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆ...