ಜನತೆಯ ಸುದ್ದಿ ವಾಹಿನಿ

ಬುಧವಾರ, ಅಕ್ಟೋಬರ್ 8, 2025

ಉತ್ಸವ ಯಶಸ್ಸು: ಕೃತಜ್ಞತೆ ಸಲ್ಲಿಸಿದ ಹಿರೇಮಠ

ಚಿತ್ತಾಪುರ: ಐತಿಹಾಸಿಕ ಶ್ರೀ ನಾಗಾವಿ ಯಲ್ಲಮ್ಮ ದೇವಿಯ ಪಲ್ಲಕ್ಕಿ ಉತ್ಸವದ ಯಶಸ್ಸಿಗೆ ಶ್ರಮಿಸಿದ ಮತ್ತು ಸಹಕರಿಸಿದ ಎಲ್ಲರಿಗೂ ದೇವಸ್ಥಾನ ಸಮಿತಿ ಅಧ್ಯಕ್ಷರು/ತಹಸೀಲ್ದಾರ್ ನಾಗಯ್ಯ ಹಿರೇಮಠ ರವರು ತಾಲೂಕು ಆಡಳಿತದಿಂದ ಹೃದಯ ಪೂರ್ವಕ ಧನ್ಯವಾದಗಳು ತಿಳಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ನೀಡಿದ ಮಾರ್ಗದರ್ಶನದಿಂದ ಯಾವುದೇ ಲೋಪವಿಲ್ಲದೆ ಪಲ್ಲಕ್ಕಿ ಉತ್ಸವ ಶಾಂತಿಯುತವಾಗಿ ನಡೆಯಿತ್ತು. ನಾಗಾವಿ ಯಲ್ಲಮ್ಮ ದೇವಿ ಪಲ್ಲಕ್ಕಿ ಉತ್ಸವ ಮತ್ತು ಜಾತ್ರೆಯು ಸುಗಮವಾಗಿ ನಡೆಯುವಲ್ಲಿ ಪೊಲೀಸ್ ಇಲಾಖೆ, ಕಂದಾಯ ಇಲಾಖೆ, ಪುರಸಭೆ ಕಾರ್ಯಲಯದ ಸಿಬ್ಬಂದಿ ವರ್ಗ, ಪದವಿ ಕಾಲೇಜಿನ ಎನ್.ಎಸ್.ಎಸ್ ಮತ್ತು ಎನ್.ಸಿ.ಸಿ ವಿದ್ಯಾರ್ಥಿಗಳು ಸ್ವಯಂ ಸೇವಕರಾಗಿ ಮಾಡಿದ ಶಿಸ್ತುಬದ್ಧ ಸೇವೆ, ದೇವಸ್ಥಾನ ಸಮಿತಿಯ ಪದಾಧಿಕಾರಿಗಳು, ದೀಪಾಲಂಕಾರ ಸಮಿತಿ ಸದಸ್ಯರು ಸದಸ್ಯರು, ಪತ್ರಕರ್ತರಿಗೂ ಮತ್ತೂ ಪ್ರತ್ಯಕ್ಷ ಪರೋಕ್ಷವಾಗಿ ಸಹಕಾರ ನೀಡದ ಭಕ್ತಾದಿಗಳ ಜೊತೆಗೆ ಎಲ್ಲರ ಸಾಮೂಹಿಕ ಪ್ರಯತ್ನದಿಂದಾಗಿ ಜಾತ್ರೆಯು ವಿಜ್ರಂಭಣೆಯಿಂದ ನೆರವೇರಿತು ಎಂದು ಹೇಳಿ ಕೃತಜ್ಞತೆ ಸಲ್ಲಿಸಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ವಿದ್ಯುತ್ ವ್ಯತ್ಯಯ: ಅಧಿಕಾರಿಗಳ ಹಾರಿಕೆ ಉತ್ತರಕ್ಕೆ ಸಾರ್ವಜನಿಕರ ಆಕ್ರೋಶ.

ಚಿತ್ತಾಪುರ: ಪಟ್ಟಣದ ಆಶ್ರಯ ಕಾಲೋನಿ ಪ್ರದೇಶದಲ್ಲಿ ಶನಿವಾರ ರಾತ್ರಿಯಿಂದ ವಿದ್ಯುತ್ ಸರಬರಾಜು ಸಂಪೂರ್ಣ ಸ್ಥಗಿತಗೊಂಡಿದ್ದು, ನಿವಾಸಿಗಳು ತೀವ್ರ ಆಕ್ರೋಶ ವ...