ಉತ್ಸವ ಯಶಸ್ಸು: ಕೃತಜ್ಞತೆ ಸಲ್ಲಿಸಿದ ಹಿರೇಮಠ
ಚಿತ್ತಾಪುರ: ಐತಿಹಾಸಿಕ ಶ್ರೀ ನಾಗಾವಿ ಯಲ್ಲಮ್ಮ ದೇವಿಯ ಪಲ್ಲಕ್ಕಿ ಉತ್ಸವದ ಯಶಸ್ಸಿಗೆ ಶ್ರಮಿಸಿದ ಮತ್ತು ಸಹಕರಿಸಿದ ಎಲ್ಲರಿಗೂ ದೇವಸ್ಥಾನ ಸಮಿತಿ ಅಧ್ಯಕ್ಷರು/ತಹಸೀಲ್ದಾರ್ ನಾಗಯ್ಯ ಹಿರೇಮಠ ರವರು ತಾಲೂಕು ಆಡಳಿತದಿಂದ ಹೃದಯ ಪೂರ್ವಕ ಧನ್ಯವಾದಗಳು ತಿಳಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ನೀಡಿದ ಮಾರ್ಗದರ್ಶನದಿಂದ ಯಾವುದೇ ಲೋಪವಿಲ್ಲದೆ ಪಲ್ಲಕ್ಕಿ ಉತ್ಸವ ಶಾಂತಿಯುತವಾಗಿ ನಡೆಯಿತ್ತು. ನಾಗಾವಿ ಯಲ್ಲಮ್ಮ ದೇವಿ ಪಲ್ಲಕ್ಕಿ ಉತ್ಸವ ಮತ್ತು ಜಾತ್ರೆಯು ಸುಗಮವಾಗಿ ನಡೆಯುವಲ್ಲಿ ಪೊಲೀಸ್ ಇಲಾಖೆ, ಕಂದಾಯ ಇಲಾಖೆ, ಪುರಸಭೆ ಕಾರ್ಯಲಯದ ಸಿಬ್ಬಂದಿ ವರ್ಗ, ಪದವಿ ಕಾಲೇಜಿನ ಎನ್.ಎಸ್.ಎಸ್ ಮತ್ತು ಎನ್.ಸಿ.ಸಿ ವಿದ್ಯಾರ್ಥಿಗಳು ಸ್ವಯಂ ಸೇವಕರಾಗಿ ಮಾಡಿದ ಶಿಸ್ತುಬದ್ಧ ಸೇವೆ, ದೇವಸ್ಥಾನ ಸಮಿತಿಯ ಪದಾಧಿಕಾರಿಗಳು, ದೀಪಾಲಂಕಾರ ಸಮಿತಿ ಸದಸ್ಯರು ಸದಸ್ಯರು, ಪತ್ರಕರ್ತರಿಗೂ ಮತ್ತೂ ಪ್ರತ್ಯಕ್ಷ ಪರೋಕ್ಷವಾಗಿ ಸಹಕಾರ ನೀಡದ ಭಕ್ತಾದಿಗಳ ಜೊತೆಗೆ ಎಲ್ಲರ ಸಾಮೂಹಿಕ ಪ್ರಯತ್ನದಿಂದಾಗಿ ಜಾತ್ರೆಯು ವಿಜ್ರಂಭಣೆಯಿಂದ ನೆರವೇರಿತು ಎಂದು ಹೇಳಿ ಕೃತಜ್ಞತೆ ಸಲ್ಲಿಸಿದ್ದಾರೆ.
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ