ಬುಧವಾರ, ಡಿಸೆಂಬರ್ 3, 2025

ಆರ್‌ಎಸ್ಎಸ್, ಬಿಜೆಪಿ ನಕಲಿ ದೇಶಭಕ್ತರು: ಹೊಸಮನಿ.

✓ಭೀಮನಡೆ ಯಶಸ್ವಿ ಬಿಜೆಪಿ ಹತಾಶೆ,   ✓ಬಿಜೆಪಿಗರ ಆರೋಪ ಸತ್ಯಕ್ಕೆ ದೂರ.

ಚಿತ್ತಾಪುರ: ಆರ್‌ಎಸ್ಎಸ್ ನವರು ತ್ರಿವರ್ಣ ಧ್ವಜಗಳು ಹಿಡಿದಿಲ್ಲ ಕೈಯಲ್ಲಿ ಬಡಗಿ ಹಿಡಿದು ಪಥಸಂಚಲನ ಮಾಡಿದ್ದರೆ ನಾವು ತ್ರಿವರ್ಣ ಧ್ವಜಗಳು ಹಿಡಿದು ಹಾಗೂ ಸಂವಿಧಾನ ಪೀಠಕೆ ಜೊತೆಗೆ ಎಲ್ಲಾ ಸಮಾಜಗಳ ಗುರುಗಳ ಭಾವಚಿತ್ರಗಳೊಂದಿಗೆ ಮೆರವಣಿಗೆ ಮಾಡಿದ್ದೇವೆ ಹಾಗಾಗಿ ಆರ್‌ಎಸ್ಎಸ್ ಮತ್ತು ಬಿಜೆಪಿ ನವರು ನಕಲಿ ದೇಶಭಕ್ತರು ನಾವು ನಿಜವಾದ ದೇಶಭಕ್ತರು ಎಂದು ದಲಿತ ಪ್ಯಾಂಥರ್ ರಾಜ್ಯಾಧ್ಯಕ್ಷ ಮಲ್ಲಪ್ಪ ಹೊಸಮನಿ ಹೇಳಿದರು.

ಪಟ್ಟಣದ ಬುದ್ಧ ಮಂದಿರದಲ್ಲಿ ಸಂವಿಧಾನ 
ಸಂರಕ್ಷಣಾ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಭೀಮ ನಡಿಗೆ ಪಥಸಂಚಲನದಲ್ಲಿ ಅಂಬೇಡ್ಕ‌ರ್ ಅನುಯಾಯಿಗಳು ಹಾಗೂ 22 ಸಮಾಜದ ಜನರು ಭಾಗವಹಿಸಿದ್ದರಿಂದ ಅಭೂತಪೂರ್ವ ಯಶಸ್ವಿಗೊಂಡಿದೆ, ಇದನ್ನು ಸಹಿಸಿಕೊಳ್ಳಲು ಆಗದ ಬಿಜೆಪಿ ಮುಖಂಡರು ಹತಾಶೆಗೊಂಡು ಇಲ್ಲಸಲ್ಲದ ಹೇಳಿಕೆ ನೀಡಿದ್ದಾರೆ ಎಂದು ಹೇಳಿದರು.

ಆ‌ರ್.ಎಸ್.ಎಸ್ ನವರು ಕೈಯಲ್ಲಿ ಬಡಗಿ ಹಿಡಿದು ಪಥ ಸಂಚಲನ ಮಾಡುವ ಮೂಲಕ ಜನರಲ್ಲಿ ಭಯದ ವಾತಾವರಣ ನಿರ್ಮಾಣ ಮಾಡಿದ್ದಾರೆ, ಆದರೆ ನಾವು ಯಾವುದೇ ಮಾರಕಾಸ್ತ್ರ ಇಲ್ಲದೇ ಶಿಸ್ತುಬದ್ಧವಾಗಿ, ಶಾಂತಿಯುತವಾಗಿ ಐತಿಹಾಸಿಕ ಭೀಮ ನಡಿಗೆ ಪಥ ಸಂಚಲನ ಮಾಡಿದ್ದೇವೆ, ಭೀಮ ನಡಿಗೆ ಪಥಸಂಚಲನದಲ್ಲಿ ಸ್ವಯಂಪ್ರೇರಿತವಾಗಿ ಜನ ಬಂದಿದ್ದಾರೆ ಯಾರನ್ನೂ ಹಣ ನೀಡಿ ಕರೆಯಿಸಿಲ್ಲ. ಪ್ರಿಯಾಂಕ್ ಖರ್ಗೆ ಅವರು ಸಂವಿಧಾನದ ಪರ ಇದ್ದಾರೆ ಹೀಗಾಗಿ ಅವರ ಪರ ಘೋಷಣೆ ಕೂಗಿದ್ದೇವೆ, ಸಂವಿಧಾನ ವಿಷಯದಲ್ಲಿ ಬಿಜೆಪಿ ಮುಖಂಡರು ರಾಜಕೀಯ ಮಾಡುವುದನ್ನು ಬಿಟ್ಟುಬಿಡಿಲ್ಲಿ ಎಂದು ಬಿಜೆಪಿ ಮುಖಂಡರಿಗೆ ತಿರುಗೇಟು ನೀಡಿದರು.

ಮಾದಿಗ ಸಮಾಜದ ಅಧ್ಯಕ್ಷ ಮಲ್ಲಿಕಾರ್ಜುನ ಬೊಮ್ಮನಳ್ಳಿ ಮಾತನಾಡಿ, ಸಂವಿಧಾನ ಪರವಾಗಿ ಯಾರು ಇರುತ್ತಾರೆ ಅವರ ಪರ ಘೋಷಣೆ ಕೂಗುತ್ತೇವೆ ಅಷ್ಟೇ ಅಲ್ಲ ತಲೆ ಮೇಲೆ ಹೊತ್ತುಕೊಂಡು ಮೆರವಣಿಗೆ ಸಹ ಮಾಡುತ್ತೇವೆ. ಭೀಮ ನಡಿಗೆ ಪಥಸಂಚಲನದಲ್ಲಿ ಎಲ್ಲಾ ಸಮಾಜದವರು ಭಾಗವಹಿಸಿದ್ದರಿಂದ ಬಿಜೆಪಿ ಅವರಿಗೆ ಹೊಟ್ಟೆ ಕಿಚ್ಚು ಆಗಿದೆ ಹೀಗಾಗಿ ಹತಾಶೆಯಿಂದ ಹೇಳಿಕೆ ನೀಡಿದ್ದಾರೆ. ಪ್ರತಿ ವರ್ಷ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಮಾಡುತ್ತೇವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಡಿಎಸ್‌ಎಸ್‌ ಜಿಲ್ಲಾ ಸಂಚಾಲಕ ಮಲ್ಲಿಕಾರ್ಜುನ ಬೆಣ್ಣೂರಕರ್, ಕೋಲಿ ಸಮಾಜದ ಅಧ್ಯಕ್ಷ ನಿಂಗಣ್ಣ ಹೆಗಲೇರಿ, ಬಂಜಾರ ಸಮಾಜದ ಅಧ್ಯಕ್ಷ ಭೀಮಸಿಂಗ ಚವ್ಹಾಣ, ಮುಸ್ಲಿಂ ಸಮಾಜದ ಅಧ್ಯಕ್ಷ ಎಂ.ಎ.ರಷೀದ್, ಮಹಾದೇವ ರಾಠೋಡ, ಮಲ್ಲಿಕಾರ್ಜುನ ಮುಡಬೂಳಕ‌ರ್, ಶರಣು ಡೋಣಗಾಂವ, ಜಗನ್ನಾಥ ಮುಡಬೂಳಕ‌ರ್, ಶರಣಪ್ಪ ಹೊನ್ನಪೂರ, ದೇವು ಯಾಬಾಳ ಇದ್ದರು.

ಸಚಿವರ ಕೈಗೊಂಬೆಯಾದ ತಹಸೀಲ್ದಾರ: ಸಜ್ಜನಶೆಟ್ಟಿ.

ಚಿತ್ತಾಪುರ: ಭೀಮ ನಡಿಗೆ ಪಥಸಂಚಲನಕ್ಕೆ
ಎರೆಡೆರಡು ಬಾರಿ ಅನುಮತಿ ನೀಡುವ ಮೂಲಕ ತಹಸೀಲ್ದಾರ್ ತಮ್ಮ ಮನಬಂದಂತೆ ವರ್ತಿಸಿದ್ದು, ಸಚಿವರ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ  ಎಂದು ಬಿಜೆಪಿ ತಾಲೂಕು ಅಧ್ಯಕ್ಷ ರವೀಂದ್ರ ಸಜ್ಜನಶೆಟ್ಟಿ ಹೇಳಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆ‌ರ್ ಎಸ್ಎಸ್ ಪಥ ಸಂಚಲನಕ್ಕೆ ತಾಲೂಕು ಕಂದಾಯ ವ್ಯಾಪ್ತಿಯಲ್ಲಿ ಇರುವವರಿಗೆ ಹಾಗೂ 350 ಜನರಿಗೆ ಮಾತ್ರ ಅವಕಾಶ ನೀಡಲಾಗಿತ್ತು, ಸಂಚಲನಕ್ಕೆ ಬರುವವರ ಐಡಿ ಕಾರ್ಡ್ ಪರಿಶೀಲನೆ ನಡೆಸಿ ಬ್ಯಾರಿಕೇಡ್ ಹಾಕಿ ನಾಕಾಬಂಧ ಹಾಕಿ, ಪಥ ಸಂಚಲನ ಫೇಲ್ ಮಾಡುವ ಉದ್ದೇಶದಿಂದ ಪೊಲೀಸರು ತುಂಬಾ ತೊಂದರೆ ನೀಡಿದ್ದರು. ಆದರೆ ಭೀಮ ನಡಿಗೆ ಪಥಸಂಚಲನಕ್ಕೆ ಯಾವುದೇ ಬ್ಯಾರಿಕೇಡ್ ಹಾಕಿಲ್ಲ, ಯಾರನ್ನು ತಪಾಸಣೆ ನಡೆಸಲಿಲ್ಲ ಮತ್ತು ಇಂತಿಷ್ಟೇ ಜನರು ಭಾಗವಹಿಸಬೇಕು ಅಂತ ಹೇಳಿಲ್ಲ ಮತ್ತು ಸಮಯ ಪರಿಪಾಲನೆ ಮಾಡಿಲ್ಲ ಹೀಗಾಗಿ ಇಲ್ಲಿ ಅಧಿಕಾರಿಗಳು ತಾರತಮ್ಯ ಮಾಡಿ ಕಾನೂನು ತಮಗೆ ಬೇಕಾದ ಹಾಗೆ ಬಳಸಿಕೊಂಡಿದ್ದಾರೆ ಎಂದು ದೂರಿದರು.

ಆರ್.ಎಸ್ಎಸ್ ಪಥ ಸಂಚಲನ ಸಮಯದಲ್ಲಿ ನಾವು ಪಥ ಸಂಚಲನ ಮಾಡುತ್ತೇವೆ ಎಂದು ಹೇಳಿದ ಸಂಘಟನೆಗಳೇ ಬೇರೆ, ಈಗ ಮಾಡಿದವರೇ ಬೇರೆನೇ ಎಂದು ಕುಟುಕಿದರು. ಶಾಂತಿಪ್ರಿಯ ಚಿತ್ತಾಪುರದಲ್ಲಿ ಇಷ್ಟೊಂದು ಗದ್ದಲ, ಅಶಾಂತಿ ವಾತಾವರಣ ನಿರ್ಮಾಣವಾಗುವುದಕ್ಕೆ ಕಾರಣ ಯಾರು ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ ಎಂದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬಸವರಾಜ ಬೆಣ್ಣೂರಕ‌ರ್ ಮಾತನಾಡಿ ಕಾನೂನು ಎಲ್ಲರಿಗೂ ಒಂದೇ ಇರುವಾಗ ಇಲ್ಲಿಯ ತಹಸೀಲ್ದಾ‌ರ್ ಸೇರಿದಂತೆ ತಾಲೂಕು ಆಡಳಿತ ಆರ್.ಎಸ್ಎಸ್ ಪಥ ಸಂಚಲನಕ್ಕೆ ಒಂದು ಕಾನೂನು, ಭೀಮ ನಡಿಗೆ ಪಥಸಂಚಲನಕ್ಕೆ ಇನ್ನೊಂದು ಕಾನೂನು ಮಾಡಿ ಕಾನೂನು ಹಾಗೂ ಪ್ರಜಾಪ್ರಭುತ್ವದ ಆಶಯಗಳನ್ನು ಗಾಳಿಗೆ ತೂರಿದ್ದಾರೆ. ತಾಲೂಕಿನ ಕಂದಾಯ ವ್ಯಾಪ್ತಿಯಲ್ಲಿ ಇರುವವರಿಗೆ ಮಾತ್ರ ಪಥಸಂಚಲನದಲ್ಲಿ ಭಾಗವಹಿಸುವ ಅವಕಾಶ ಇದೆ ಎಂದು ಆದೇಶ ಹೊರಡಿಸಿದ್ದ ತಹಸೀಲ್ದಾರ್ ಬೆಳಿಗ್ಗೆ ಬೇರೆ ಜಿಲ್ಲೆಯವರಿಗೂ ಅವಕಾಶ ಇದೆ ಎಂದು ಮತ್ತೊಂದು ಆದೇಶ ಹೊರಡಿಸಿರುವುದು ಖಂಡನೀಯ ಎಂದರು.

2015 ರಲ್ಲಿ ಸಂವಿಧಾನ ಸಮರ್ಪಣೆ ದಿನಾಚರಣೆ ಜಾರಿಗೆ ತಂದಿದ್ದೇ ಪ್ರಧಾನಿ ಮೋದಿ. ಅಂಬೇಡ್ಕ‌ರ್ ಅವರಿಗೆ ಕಾಂಗ್ರೆಸ್ ಅವಮಾನಿಸಿದೆ ಆದರೆ ಬಿಜೆಪಿ ಗೌರವಿಸಿದೆ ಎಂದರು. ಸಂವಿಧಾನದ 108 ತಿದ್ದುಪಡಿಗಳಲ್ಲಿ ಕಾಂಗ್ರೆಸ್ 100 ತಿದ್ದುಪಡಿ ಮಾಡಿದೆ ಆದರೆ ಬಿಜೆಪಿ ಬರೀ 8 ತಿದ್ದುಪಡಿ ಮಾಡಿದೆ ಎಂದು ಹೇಳಿದರು.

ಪ್ರಜಾಪ್ರಭುತ್ವದಲ್ಲಿ ಹೋರಾಟ ಮಾಡುವ ಹಕ್ಕು ಎಲ್ಲರಿಗೂ ಇದೆ ಹೀಗಾಗಿ ನಮ್ಮದು ಭೀಮ ನಡಿಗೆ ಪಥಸಂಚಲನಕ್ಕೆ ವಿರೋಧ ಇರಲಿಲ್ಲ, ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ಪಥ ಸಂಚಲನ ಮಾಡಿರುವುದಕ್ಕೆ ನಾವು ಸ್ವಾಗತಿಸುತ್ತೇವೆ ಎಂದರು.

ಸುದ್ದಿಗೋಷ್ಠಿಯಲ್ಲಿ ಪುರಸಭೆ ಮಾಜಿ ಸದಸ್ಯರಾದ ನಾಗರಾಜ ಭಂಕಲಗಿ, ಸುರೇಶ್ ಬೆನಕನಳ್ಳಿ, ಬಿಜೆಪಿ ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಎಮ್ಮೆನೋರ್, ಪ್ರಧಾನ ಕಾರ್ಯದರ್ಶಿ ನಾಗರಾಜ್ ಹೂಗಾರ, ಶಿವರಾಮ್ ಚವ್ಹಾಣ, ರಾಜು ದೊರೆ ಇದ್ದರು.

ಎಸ್ಸೆಸ್ಸೆಲ್ಸಿ ಮಕ್ಕಳೊಂದಿಗೆ ಜಿಪಂ ಸಿಇಒ ಚರ್ಚೆ.

ಚಿತ್ತಾಪುರ: ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮಪಡಿಸಲು ಪೂರ್ವಸಿದ್ಧತಾ ಪರೀಕ್ಷೆ-1 ರಲ್ಲಿ ಅತ್ಯಂತ ಕಡಿಮೆ ಫಲಿತಾಂಶ ಪಡೆದ ಕರ್ನಾಟಕ ಪಬ್ಲಿಕ್ ಶಾಲೆ ಮಾಡಬೂಳ,...