ಮಂಗಳವಾರ, ಜನವರಿ 20, 2026

ಶರಣಬಸವೇಶ್ವರ ದೇವಸ್ಥಾನದ ಹುಂಡಿ ಕಳವು.

ಚಿತ್ತಾಪುರ: ಪಟ್ಟಣದ ವರಣನಗರದಲ್ಲಿರುವ ಪುರಾತನ ಶರಣಬಸವೇಶ್ವರ ದೇವಸ್ಥಾನದಲ್ಲಿ ಜನೆವರಿ 19ರ ಸೋಮವಾರ ರಾತ್ರಿ ಕಳ್ಳರು ನುಗ್ಗಿ ದೇವಸ್ಥಾನದ ಹುಂಡಿಯನ್ನು ಕಳವು ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ಜನೆವರಿ 20ರ ಬೆಳಗಿನ ಜಾವ ಅರ್ಚಕರು ಎಂದಿನಂತೆ ಪೂಜೆ ಸಲ್ಲಿಸಲು ದೇವಸ್ಥಾನಕ್ಕೆ ಬಂದಾಗ, ಹುಂಡಿಯ ಬೀಗ ಮುರಿದಿರುವುದು ಕಂಡುಬಂದಿದೆ. ಹುಂಡಿಯಲ್ಲಿದ್ದ ನಗದು ಹಣವನ್ನು ಕಳ್ಳರು ದೋಚಿದ್ದಾರೆ. ಇದರಿಂದ ಆತಂಕಗೊಂಡ ಅರ್ಚಕರು ತಕ್ಷಣವೇ ದೇವಸ್ಥಾನದ ನಿರ್ವಹಣಾ ಸಮಿತಿಯ ಗಮನಕ್ಕೆ ತಂದಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆಯೇ ದೇವಸ್ಥಾನದ ಸಮಿತಿ ಸದಸ್ಯರು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪಿಎಸ್ಐ ಮಂಜುನಾಥ್ ರೆಡ್ಡಿ ಅವರ ನಿರ್ದೇಶನದ ಮೇರೆಗೆ ಪೊಲೀಸ್ ಸಿಬ್ಬಂದಿಗಳಾದ ಅನಿಲ್ ಕುಮಾರ್, ರವಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
ಕಲಬುರಗಿಯಿಂದ ಆಗಮಿಸಿದ ಜಿಲ್ಲಾ ಶ್ವಾನದಳ ಹಾಗೂ ಬೆರಳಚ್ಚು ತಜ್ಞರ ತಂಡ ಸ್ಥಳದಲ್ಲಿ ಲಭ್ಯವಿದ್ದ ಸುಳಿವುಗಳನ್ನು ಸಂಗ್ರಹಿಸಿದೆ. ಕಳ್ಳರ ಪತ್ತೆಗಾಗಿ ಪೊಲೀಸರು ದೇವಸ್ಥಾನದ ಸಿಸಿಟಿವಿ ಹಾಗೂ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದು, ತನಿಖೆ ಚುರುಕುಗೊಳಿಸಿದ್ದಾರೆ.

ದೇವಸ್ಥಾನದಲ್ಲಿ ನಡೆದ ಈ ಕಳುವು ಘಟನೆಯಿಂದ ಭಕ್ತರಲ್ಲಿ ಆತಂಕ ಮತ್ತು ಆಕ್ರೋಶ ವ್ಯಕ್ತವಾಗಿದ್ದು, ಶೀಘ್ರವೇ ಆರೋಪಿಗಳನ್ನು ಬಂಧಿಸುವಂತೆ ಶರಣಬಸವೇಶ್ವರ ದೇವಸ್ಥಾನದ ಜೀವನೋದ್ಧಾರ ಹಾಗೂ ಸೇವಾ ಟ್ರಸ್ಟ್ ಖಜಾಂಚಿ ಕೊಟೇಶ್ವರ ರೇಷ್ಮೆ, ದೇವಸ್ಥಾನದ ನಿರ್ವಹಣಾ ಸಮಿತಿ ಸದಸ್ಯ ಮಹಾದೇವ ಅಂಗಡಿ 
 ಆಗ್ರಹಿಸಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಎಸ್ಸೆಸ್ಸೆಲ್ಸಿ ಮಕ್ಕಳೊಂದಿಗೆ ಜಿಪಂ ಸಿಇಒ ಚರ್ಚೆ.

ಚಿತ್ತಾಪುರ: ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮಪಡಿಸಲು ಪೂರ್ವಸಿದ್ಧತಾ ಪರೀಕ್ಷೆ-1 ರಲ್ಲಿ ಅತ್ಯಂತ ಕಡಿಮೆ ಫಲಿತಾಂಶ ಪಡೆದ ಕರ್ನಾಟಕ ಪಬ್ಲಿಕ್ ಶಾಲೆ ಮಾಡಬೂಳ,...