ಶುಕ್ರವಾರ, ಜನವರಿ 30, 2026

ನೂತನ ಅಧ್ಯಕ್ಷರಾಗಿ ಅಣ್ಣಾರಾಯ ಇವಣಿ ನೇಮಕ.

ಚಿತ್ತಾಪುರ: ನಾಡು-ನುಡಿ ಹಾಗೂ ಸರ್ಕಾರಿ ಕನ್ನಡ ಶಾಲೆಗಳ ಸಂರಕ್ಷಣೆಗಾಗಿ ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿರುವ “ಕನ್ನಡ ಶಾಲೆ ಉಳಿಸಿ-ಬೆಳೆಸಿ” ಅಭಿಯಾನದ ಕಲಬುರಗಿ ಜಿಲ್ಲಾಧ್ಯಕ್ಷರಾಗಿ ಅಣ್ಣಾರಾಯ ಇವಣಿ ಅವರನ್ನು ನೇಮಕ ಮಾಡಲಾಗಿದೆ ಎಂದು ಅಭಿಯಾನದ ರಾಜ್ಯಾಧ್ಯಕ್ಷ ಉನೈಸ್ ಪೆರಾಜೆ ತಿಳಿಸಿದ್ದಾರೆ.

ಕನ್ನಡ ಶಾಲೆಗಳ ಉಳಿವಿಗಾಗಿ ಜನಜಾಗೃತಿ ಮೂಡಿಸುವುದು, ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿಸುವುದು ಹಾಗೂ ಶಿಕ್ಷಣದ ಗುಣಮಟ್ಟವನ್ನು ಸುಧಾರಿಸುವ ಪವಿತ್ರ ಉದ್ದೇಶದೊಂದಿಗೆ ಈ ಅಭಿಯಾನವು ರಾಜ್ಯಮಟ್ಟದಲ್ಲಿ ಕಾರ್ಯಾಚರಿಸುತ್ತಿದೆ. ಸಂಘಟನೆಯ ರಾಜ್ಯ ನಾಯಕರು ಹಾಗೂ ಕಾರ್ಯಕರ್ತರ ಒಮ್ಮತದ ನಿರ್ಧಾರದಂತೆ ಅಣ್ಣಾರಾಯ ಇವಣಿ ಅವರಿಗೆ ಈ ಮಹತ್ವದ ಜವಾಬ್ದಾರಿಯನ್ನು ಹಸ್ತಾಂತರಿಸಲಾಗಿದೆ.

ನೂತನ ಅಧ್ಯಕ್ಷ ಅಣ್ಣಾರಾಯ ಇವಣಿ ಮಾತನಾಡಿ "ಕನ್ನಡ ಶಾಲೆಗಳ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ನಾಡು-ನುಡಿ ಉಳಿಸುವ ಈ ಹೋರಾಟದಲ್ಲಿ ಶಿಕ್ಷಕರು, ಪೋಷಕರು, ವಿದ್ಯಾರ್ಥಿಗಳು ಹಾಗೂ ಕನ್ನಡಪರ ಸಂಘಟನೆಗಳನ್ನು ಒಗ್ಗೂಡಿಸಿಕೊಂಡು ಕಲಬುರಗಿ ಜಿಲ್ಲೆಯನ್ನು ರಾಜ್ಯದಲ್ಲೇ ಮಾದರಿಯಾಗಿ ರೂಪಿಸಲಾಗುವುದು. ಜಿಲ್ಲೆಯ ಸರ್ಕಾರಿ ಶಾಲೆಗಳ ಬಲವರ್ಧನೆಗಾಗಿ ನಿರಂತರವಾಗಿ ಶ್ರಮಿಸುತ್ತೇನೆ," ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಎಸ್ಸೆಸ್ಸೆಲ್ಸಿ ಮಕ್ಕಳೊಂದಿಗೆ ಜಿಪಂ ಸಿಇಒ ಚರ್ಚೆ.

ಚಿತ್ತಾಪುರ: ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮಪಡಿಸಲು ಪೂರ್ವಸಿದ್ಧತಾ ಪರೀಕ್ಷೆ-1 ರಲ್ಲಿ ಅತ್ಯಂತ ಕಡಿಮೆ ಫಲಿತಾಂಶ ಪಡೆದ ಕರ್ನಾಟಕ ಪಬ್ಲಿಕ್ ಶಾಲೆ ಮಾಡಬೂಳ,...