ಶುಕ್ರವಾರ, ಫೆಬ್ರವರಿ 6, 2026

ಎಸ್ಸೆಸ್ಸೆಲ್ಸಿ ಮಕ್ಕಳೊಂದಿಗೆ ಜಿಪಂ ಸಿಇಒ ಚರ್ಚೆ.

ಚಿತ್ತಾಪುರ: ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮಪಡಿಸಲು ಪೂರ್ವಸಿದ್ಧತಾ ಪರೀಕ್ಷೆ-1 ರಲ್ಲಿ ಅತ್ಯಂತ ಕಡಿಮೆ ಫಲಿತಾಂಶ ಪಡೆದ ಕರ್ನಾಟಕ ಪಬ್ಲಿಕ್ ಶಾಲೆ ಮಾಡಬೂಳ, ಸರ್ಕಾರಿ ಪ್ರೌಢ ಶಾಲೆ ಪೇಠಶಿರೂರ, ಬಾಲಕರ ಪ್ರೌಢ ಶಾಲೆ ಶಹಾಬಾದ ಹಾಗೂ ಸರ್ಕಾರಿ ಪ್ರೌಢ ಶಾಲೆ ಮರತೂರ ಶಾಲೆಗಳಿಗೆ ಶುಕ್ರವಾರ ಕಲಬುರಗಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾ ಭಂವರಸಿಂಗ್ ಮೀನಾ ಭೇಟಿ ನೀಡಿದರು.

ಎಸ್ಸೆಸ್ಸೆಲ್ಸಿ ಫಲಿತಾಂಶ ಕಡಿಮೆ ಬರಲು ಕಾರಣ ಮತ್ತು ಫಲಿತಾಂಶ ಹೆಚ್ಚಳ ಮಾಡಲು ಅಗತ್ಯ ಸಲಹೆ ನೀಡಿ ಮಕ್ಕಳೊಂದಿಗೆ ಮಾತನಾಡಿದ ಅವರು, ಯಾವ ವಿಷಯದಲ್ಲಿ ಕಲಿಕೆಗೆ ತೊಂದರೆ ಕುರಿತು ಚರ್ಚಿಸಿದರು ಹಾಗೂ ಪರೀಕ್ಷೆಗಳನ್ನು ಹೇಗೆ ಎದುರಿಸಬೇಕು ಎಂದು ಮಕ್ಕಳಿಗೆ ಮಾರ್ಗದರ್ಶನ ನೀಡಿದರು ಹಾಗೂ ಅರಿವೆ ಗುರು ಎಂಬ ಮಾದರಿ ಪ್ರಶ್ನೆ ಪತ್ರಿಕೆ ಹಾಗೂ ಉತ್ತರಗಳನ್ನು ಒಳಗೊಂಡ ಪುಸ್ತಕ ಅದರ ಬಳಕೆ ಮತ್ತು ಅಗತ್ಯತೆ ಕುರಿತು ಚರ್ಚಿಸಿ ಮಾರ್ಗದರ್ಶನ ನೀಡಿದರು.

ಶಹಾಬಾದ ಹಾಗೂ ಮರತೂರ ಶಾಲೆಯಲ್ಲಿ ಬಿಸಿಯೂಟ ಸಿದ್ಧತೆ ಪರಿಶೀಲಿಸಿ ಆಹಾರಧಾನ್ಯಗಳ ಗುಣಮಟ್ಟ ಪರಿಶೀಲಿಸಿ, ಸರ್ಕಾರಿ ಪ್ರೌಢ ಶಾಲೆ ಮರತೂರಲ್ಲಿ ಮಕ್ಕಳೊಂದಿಗೆ ಕುಳಿತು ಬಿಸಿಯೂಟ ಮಾಡಿದರು. ಮಕ್ಕಳಿಗೆ ಮೊಟ್ಟೆ ಹಾಗೂ ಬಾಳೆಹಣ್ಣು ನೀಡುವ ಬಗ್ಗೆ ವಿಚಾರಿಸಿದರು ಹಾಗೂ ಮೊಟ್ಟೆ ತಿನ್ನದೆ ಇರುವ ಮಕ್ಕಳಿಗೆ ಮೊಟ್ಟೆಯ ಪೌಷ್ಟಿಕಾಂಶ ಬಗ್ಗೆ ತಿಳಿಹೇಳಿದರು. ಈ ಸಂದರ್ಭದಲ್ಲಿ ಕ್ಷೇತ್ರಶಿಕ್ಷಣಾಧಿಕಾರಿ ಶಶಿಧರ ಬಿರಾದಾರ ಸೇರಿದಂತೆ ಶಿಕ್ಷಕರು ಹಾಜರಿದ್ದರು.

ನಾಳೆ ಬೃಹತ್ ಹಿಂದೂ ಸಮ್ಮೇಳನ: ಸಾಸಬಾಳ್

ಚಿತ್ತಾಪುರ: ಪಟ್ಟಣದಲ್ಲಿ ಹಿಂದು ಸಮ್ಮೇಳನ ಆಯೋಜನ ಸಮಿತಿ ವತಿಯಿಂದ ನಾಳೆ ದಿ. 7 ರಂದು ಹಿಂದೂ ಸಮ್ಮೇಳನ ಹಾಗೂ ಬೃಹತ್ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿದೆ ಆದ್ದರಿಂದ ಹಿಂದೂ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಸಮಿತಿ ಅಧ್ಯಕ್ಷ ಉಮೇಶಬಾಬು ಸಾಸಬಾಳ್ ಹೇಳಿದರು.

ಪಟ್ಟಣದ ಶರಣಬಸವೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದು ಮಧ್ಯಾಹ್ನ 2.45 ಕ್ಕೆ ಪಟ್ಟಣದ ಅಕ್ಕಮಹಾದೇವಿ ಮಂದಿರದಿಂದ ಪ್ರಾರಂಭವಾಗುವ ಬೃಹತ್ ಶೋಭಾಯಾತ್ರೆ ಚಿತ್ತಾವಲ್ಲಿ ವೃತ್ತ, ಕಪ್ಪಡಾ ಬಜಾರ್, ಜನತಾ ವೃತ್ತ, ಭುವನೇಶ್ವರಿ ವೃತ್ತ, ಅಂಬೇಡ್ಕ‌ರ್ ವೃತ್ತ, ಬಸ್‌ ನಿಲ್ದಾಣ ರಸ್ತೆ, ಲಾಡ್ಡಿಂಗ್ ಕ್ರಾಸ್, ಕೋರ್ಟ್ ರಸ್ತೆಯ ಮೂಲಕ ವರುಣ್ ನಗರದ ಶರಣಬಸವೇಶ್ವರ ದೇವಸ್ಥಾನಕ್ಕೆ ತಲುಪಲಿದ್ದು, ನಂತರ ಸಾಯಂಕಾಲ 5 ಗಂಟೆಗೆ ಹಿಂದೂ ಸಮಾವೇಶ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಸಮಾರಂಭದಲ್ಲಿ ದಿವ್ಯ ಸಾನಿಧ್ಯವನ್ನು ದಿಗ್ಗಾಂವ ಶ್ರೀ ಸಿದ್ದವೀರ ಶಿವಾಚಾರ್ಯರು, ಬೆಳಗುಂಪಾ ಶ್ರೀ ಅಬಿನವ ಪರ್ವತೇಶ್ವರ ಶಿವಾಚಾರ್ಯರು, ದಂಡೋತಿ ಶ್ರೀ ಬಾಲಯೋಗಿನಿ ಜಯಶ್ರೀ ಮಾತಾಜೀ ಅವರು ವಹಿಸುವರು. ಮುಖ್ಯ ವಕ್ತಾರರಾಗಿ ಪ್ರಜ್ಞಾ ಪ್ರವಾಹ ಅಖೀಲ ಭಾರತೀಯ ಸಹ ಸಂಯೋಜಕ ರಘುನಂದನ ಜೀ, ಹಿಂದು ಸಮ್ಮೇಳನ ಆಯೋಜನ ಸಮಿತಿ ಗೌರವಾಧ್ಯಕ್ಷ ತುಕಾರಾಮ ನಾಯಕ ರಾಠೋಡ ಗೌರವ ಅಧ್ಯಕ್ಷತೆ ವಹಿಸುವರು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಅಧ್ಯಕ್ಷ ನಾಗರಾಜ ಭಂಕಲಗಿ, ಅಯ್ಯಪ್ಪ ರಾಮತೀರ್ಥ, ಕೋಟೇಶ್ವರ ರೇಷ್ಮೆ, ಗಿರೀಶ್ ಭಜಂತ್ರಿ, ನಟರಾಜ್ ಶಿಲ್ಪಿ, ಸಮಿತಿ ಗೌರವಾಧ್ಯಕ್ಷ ತುಕಾರಾಮ ನಾಯಕ ರಾಠೋಡ, ಕಾರ್ಯಾಧ್ಯಕ್ಷ ಸತ್ಯನಾರಾಯಣ ಯಾದವ್, ಅಂಬರೀಶ ಸುಲೇಗಾಂವ್, ಉಪಾಧ್ಯಕ್ಷರಾದ ಅಶೋಕ ಹಡಪದ, ಮಹಾದೇವಪ್ಪ ಉಪ್ಪಾರ, ನಾಗರಾಜ ರಾವೂರಕ‌ರ್, ದೇವಾನಂದ್‌ ತ್ರೀಮಲ್, ಕಾರ್ಯದರ್ಶಿ ಮೈಪಾಲ್ ಮೂಲಿಮನಿ, ಶಿವುಕುಮಾರ ಘವಾರಿಯಾ ಸೇರಿದಂತೆ ಇತರರು.

ನಾಮಫಲಕ ಅಳವಡಿಕೆಗೆ ಆಟೋ ಚಾಲಕರ ಆಗ್ರಹ

ಚಿತ್ತಾಪುರ: ಪಟ್ಟಣದ ಬಸ್ ನಿಲ್ದಾಣ ಹತ್ತಿರ ಇರುವ
ಆಟೋ ನಿಲ್ದಾಣದಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಪಟ್ಟಣದ ವಿವಿಧೆಡೆ ಆಟೋ ನಿಲ್ದಾಣ ಮತ್ತು ನಾಮಫಲಕಗಳು ಅಳವಡಿಸಬೇಕು ಎಂದು ಆಗ್ರಹಿಸಿ ತಾಲೂಕು ಆಟೋ ಚಾಲಕರು ಮತ್ತು ಮಾಲೀಕರ ಸಂಘದ ವತಿಯಿಂದ ಪುರಸಭೆ ಮುಖ್ಯಸ್ಥರಿಗೆ ಮನವಿ ಪತ್ರ ಸಲ್ಲಿಸಿದರು.

ನಾಗಾವಿ ವೃತ್ತದಲ್ಲಿ, ಭುವನೇಶ್ವರಿ ವೃತ್ತದಲ್ಲಿ, ಶ್ರೀ ನಾಗಾವಿ ಯಲ್ಲಮ್ಮ ದೇವಸ್ಥಾನ ಹತ್ತಿರ, ಅಂಬೇಡ್ಕ‌ರ್ ವೃತ್ತದಲ್ಲಿ, ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಹತ್ತಿರ, ಸ್ಟೇಷನ್ ರಸ್ತೆಯಲ್ಲಿರುವ ತಿರುಮಲ ಮನೆ ಎದುರುಗಡೆ ಇಟಗಾ ಗ್ರಾಮಕ್ಕೆ ಹೋಗುವ ಸ್ಥಳದಲ್ಲಿ ಹಾಗೂ ದಿಗ್ಗಾಂವ ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿ ಆಟೋ ನಿಲ್ದಾಣಗಳು ಹಾಕಿ ನಾಮಫಲಕಗಳು ಅಳವಡಿಸಬೇಕು ಎಂದು ಸಂಘದ ಪದಾಧಿಕಾರಿಗಳು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಲಕ್ಷ್ಮಯ್ಯ ಸಾಬಣ್ಣ ಭೋವಿ, ಕಾರ್ಯದರ್ಶಿ ಸುಭಾಷ್ ಕಾಶಿ, ಖಜಾಂಚಿ ಮುನಿಯಪ್ಪ ಬಾಗೋಡಿಕ‌ರ್, ಸದಸ್ಯರಾದ ಮಹೇಶ್ ಬುರ್ಲಿ, ಅಯಾಜ್, ನಾಗರಾಜ್ ಪೂಜಾರಿ, ಮಹೇಶ್ ಕಾಶಿ, ಶರಬಣ್ಣ ಮಡಿವಾಳ, ಗುರುರಾಜ್ ಚೌದರಿ, ಚಿತ್ತಣ್ಣ ಗುತ್ತೇದಾ‌ರ್, ಭೀಮು ಜಮಾದಾ‌ರ್, ಸಿದ್ದಪ್ಪ ರಾಂಪುರಹಳ್ಳಿ ಸೇರಿದಂತೆ ಇತರರು ಇದ್ದರು.

ಭಾಗೋಡಿಯಲ್ಲಿ ಅಂಬಿಗರ ಚೌಡಯ್ಯ ಮೂರ್ತಿ ಅನಾವರಣ,

ಚಿತ್ತಾಪುರ: ತಾಲೂಕಿನ ಭಾಗೋಡಿ ಗ್ರಾಮದಲ್ಲಿ
ಕೋಲಿ ಸಮಾಜದ ವತಿಯಿಂದ ನಿಜಶರಣ ಅಂಬಿಗರ ಚೌಡಯ್ಯನವರ ಮೂರ್ತಿ ಅನಾವರಣ ಸಮಾರಂಭವನ್ನು ದಿ.8 ರಂದು ಬೆಳಗ್ಗೆ 10.30ಕ್ಕೆ ಅದ್ದೂರಿಯಾಗಿ ನಡೆಯಲಿದೆ ಎಂದು ಕೋಲಿ ಸಮಾಜದ ಮುಖಂಡ ದೇವೇಂದ್ರ ನಾಟೀಕಾರ, ಭಾಗೋಡಿ ಅಧ್ಯಕ್ಷ ದೇವಿಂದ್ರ ಹಾಸಬಾ, ತಾಲೂಕು ಕಾರ್ಯದರ್ಶಿ ಶರಣು ಅರಣಕಲ್, ಯುವ ಅಧ್ಯಕ್ಷ ಮಲ್ಲಿಕಾರ್ಜುನ ಅಲ್ಲೂರಕರ್ ಅವರು ಜಂಟಿಯಾಗಿ ಹೇಳಿದರು.

ಪಟ್ಟಣದ ಅಂಬಿಗರ ಚೌಡಯ್ಯ ಸಮುದಾಯ ಭವನದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು 12ನೇ ಶತಮಾನದ ನಿಜಶರಣ ಅಂಬಿಗರ ಚೌಡಯ್ಯನವರ ವಚನಗಳ ಪ್ರಚಾರಕ್ಕಾಗಿ ಹಾಗೂ ಕೋಲಿ ಸಮಾಜದ ಸಂಘಟನೆಗಾಗಿ ಮತ್ತು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಗ್ರಾಮದಲ್ಲಿ ಎಲ್ಲರೂ ಒಗ್ಗೂಡಿ ಮೂರ್ತಿ ಅನಾವರಣ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ, ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜದ ಬಂಧುಗಳು ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರೆ

ಪೂಜ್ಯ ಶಾಂತಭೀಷ್ಮ ಚೌಡಯ್ಯ ಮಹಾಸ್ವಾಮಿಗಳು ನರಸಿಪುರ, ತೊನಸನಳ್ಳಿ ಶ್ರೀ ಡಾ. ಮಲ್ಲಣ್ಣಪ್ಪ ಮಹಾಸ್ವಾಮಿಗಳು, ಗುರುಮಠಕಲ್ ಶ್ರೀ ಶಾಂತವೀರ ಗುರು ಮುರಘರಾಜೇಂದ್ರ ಮಹಾಸ್ವಾಮಿಗಳು, ಪೂಜ್ಯ ಮಲ್ಲಿಕಾರ್ಜುನ ಮುತ್ಯಾ ಮಹಲರೋಜಾ, ಪೂಜ್ಯ ಪರಶುರಾಮ ಮುತ್ಯಾ ಭಾಗೋಡಿ ಅವರು ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ವಿಧಾನ ಪರಿಷತ್‌ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಅವರು ಉದ್ಘಾಟಿಸುವರು, ನಿಜ ಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ ಚಿಂಚನಸೂರ ಅವರು ಧ್ವಜಾರೋಹಣ ನೆರವೇರಿಸುವರು ಎಂದು ಹೇಳಿದರು.

ಪಿಎಲ್‌'ಡಿ ಬ್ಯಾಂಕ್‌ ಅಧ್ಯಕ್ಷ ಭೀಮಣ್ಣ ಸಾಲಿ, ಕೆಪಿಸಿಸಿ ಸದಸ್ಯ ನಾಗರಡ್ಡಿ ಪಾಟೀಲ ಕರದಾಳ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಮೇಶ ಮರಗೋಳ ಅವರು ಅಂಬಿಗರ ಚೌಡಯ್ಯನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವರು. ಕೆಪಿಸಿಸಿ ಕಾರ್ಯದರ್ಶಿ ರಾಜಗೋಪಾಲ ರೆಡ್ಡಿ, ರಾಜ್ಯ ಅಪೇಕ್ಸ್‌ ಬ್ಯಾಂಕ್ ನಿರ್ದೇಶಕ ಸುನೀಲ ದೊಡ್ಡಮನಿ, ಉದ್ಯಮಿ ಶಿವರಾಯ ಕಮಕನೂರ ಅವರು ಮಾತಾ ಮಾಣಿಕೇಶ್ವರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವರು. ಕೂಡು ಒಕ್ಕಲಿಗ ಸಮಾಜದ ರಾಜ್ಯಾಧ್ಯಕ್ಷ ಶಿವರಾಜ ಪಾಟೀಲ ಕಲಗುರ್ತಿ, ಕುರುಬ ಸಮಾಜದ ತಾಲೂಕು ಅಧ್ಯಕ್ಷ ಬಸವರಾಜ ಹೊಸಳ್ಳಿ, ಉದ್ಯಮಿ ಯಲ್ಲಾಲಿಂಗ ಪೂಜಾರಿ ಅವರು ದಿ.ವಿಠಲ್ 
ಹೇರೂರು ಭಾವಚಿತ್ರಕ್ಕೆ ಪೂಜೆ ಸಲ್ಲಿಸುವರು.

 ರಾಯಚೂರು ಕೃಷಿ ವಿಶ್ವವಿದ್ಯಾಲಯ ವಿಶ್ರಾಂತ ಕುಲಪತಿ ಡಾ. ಮಹಾಂತಗೌಡ ಎಸ್. ಪಾಟೀಲ, ಅಂಬಿಗರ ಚೌಡಯ್ಯ ಜಯಂತ್ಯೋತ್ಸವ ಸಮಿತಿ ಜಿಲ್ಲಾಧ್ಯಕ್ಷ ಜಯಪ್ರಕಾಶ ಕಮಕನೂರ, ಜಿಪಂ ಮಾಜಿ ಸದಸ್ಯ ಅರವಿಂದ ಚವ್ಹಾಣ, ಕೋಲಿ ಕಬ್ಬಲಿಗ ಎಸ್‌.ಟಿ.ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಲಚ್ಚಪ್ಪ ಜಮಾದಾರ, ಬಿಜೆಪಿ ರಾಜ್ಯ ಹಿಂದುಳಿದ ಮೋರ್ಚಾ ಕಾರ್ಯದರ್ಶಿ ಅವ್ವಣ್ಣ ಮ್ಯಾಕೇರಿ, ಜಿಲ್ಲಾಧ್ಯಕ್ಷ ರವಿರಾಜ ಕೋರವಿ, ತಾಲೂಕು ಅಧ್ಯಕ್ಷ ಶಿವಕುಮಾರ ಯಾಗಾಪೂರ ಅವರು ಜ್ಯೋತಿ ಬೆಳಗಿಸುವರು, ಕೋಲಿ ಸಮಾಜ ಹಿರಿಯ ಮುಖಂಡ ರಾಜೇಂದ್ರಪ್ಪ ಅರಣಕಲ್‌ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಕೋಲಿ ಸಮಾಜದ ಯುವ ಅಧ್ಯಕ್ಷ ರಾಜೇಶ್‌ ಹೊಳಿಕಟ್ಟಿ, ಮುಖಂಡರಾದ ದೇವಿಂದ್ರ ಡೋಣಗಾಂವ, ನಾಗರಾಜ ಬೆಣ್ಣೂರ, ಶರಣಪ್ಪ ಹಾಸಬಾ, ಕಾಮೇಶ್, ಸಂತೋಷ ನದಿಮುಲ್‌, ನಾಗರಾಜ ಹಾಸಬಾ, ಕಾಶಿನಾಥ ಭಂಗಿ ಸೇರಿದಂತೆ ಇತರರು ಇದ್ದರು.

ಬಜೆಟ್‌ಗೆ ಮುಖಂಡ ರಾಮತೀರ್ಥ ಮೆಚ್ಚುಗೆ.


ಚಿತ್ತಾಪುರ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 9ನೇ ಬಾರಿಗೆ ಬಜೆಟ್ ಮಂಡಿಸುವಲ್ಲಿ ಯಶಸ್ವಿ ಹೆಜ್ಜೆ ಇಟ್ಟಿದ್ದಾರೆ ಎಂದು ಬಿಜೆಪಿ ಮುಖಂಡ ಅಯ್ಯಪ್ಪ ರಾಮತೀರ್ಥ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿದ ಅವರು, ಈ ಬಾರಿ ಕರ್ಬಾಟಕ ರಾಜ್ಯಕ್ಕೆ 2 ಹೈಸ್ಪೀಡ್ ರೈಲು ಘೋಷಿಸಿದ್ದಾರೆ. ದೇಶದ ಸಮಗ್ರ ಅಭಿವೃದ್ಧಿಗಾಗಿ ರಕ್ಷಣಾ, ಗೃಹ, ಕೃಷಿ ಸಾರಿಗೆ, ಆರೋಗ್ಯ, ಗ್ರಾಮೀಣಾಭಿವೃದ್ಧಿ, ಶಿಕ್ಷಣ, ವಿಮೆ, ಪ್ರವಾಸೋದ್ಯಮ, ಕೈಗಾರಿಕೆ ಹಾಗೂ ಎಐ ಆಧುನಿಕ ತಂತ್ರಜ್ಞಾನಕ್ಕೆ ಒತ್ತು ನೀಡಿರುವುದು ಹಾಗು ಮೂಲಭೂತ ಸೌಕರ್ಯಕ್ಕೆ ಆದ್ಯತೆ ನೀಡಿರುವುದು ಸಂತಸ.ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳ ಉತ್ತೇಜನಕ್ಕಾಗಿ 10 ಸಾವಿರ ಕೋಟಿ, ಬಯೋ ಫಾರ್ಮ ಗೆ 10 ಸಾವಿರ ಕೋಟಿ, ಚಾಂಪಿಯಾನಿಗಳಿಗಾಗಿ 10 ಸಾವಿರ ಕೋಟಿ ಮೀಸಲಿಟ್ಟಿದ್ದಾರೆ.

ಕ್ರೀಡಾಪಟುಗಳಿಗೆ ಖೇಲ್ ಇಂಡಿಯಾ ಯೋಜನೆ ಘೋಷಣೆ, ಎಸ್‌ಎಚ್‌ ಇ ಮಾರ್ಟ್ ಗಳ ಮೂಲಕ ಮಹಿಳಾ ಸಬಲೀಕರಣ, ಮುಂದಿನ 5 ವರ್ಷದಲ್ಲಿ 20 ಹೊಸ ಜಲಮಾರ್ಗ ನಿರ್ಮಾಣದ ಯೋಜನೆ ಕಾರ್ಯ ನಡೆಯಲಿದೆ ಎಂದಿದ್ದಾರೆ.

ಅತಿವೃಷಿಯಿಂದ ತತ್ತರಿಸಿದ ದೇಶದ ರೈತ, ಕೃಷಿ ಸಾಲ ಮನ್ನಾ ಮಾಡಬಹುದೆಂದು ನಿರೀಕ್ಷೆ ಮಾಡಲಾಗಿದ್ದು, ಅದು ಈಡೇರಲಿಲ್ಲ ಎಂಬ ತುಸು ನಿರಾಶೆಯ ಬೆನ್ನಲ್ಲೇ ಕರಾವಳಿ ಭಾಗದ ರೈತರು ಬೆಳೆಯುವ ಗೋಡಂಬಿ, ಕೋಕೋ, ತೆಂಗು ಮುಂತಾದ ಬೆಳೆಗಳಿಗೆ ಕೇಂದ್ರದ ಬೆಂಬಲದ ಅಭಯಹಸ್ತ ಹಾಗೂ ಸ್ವಾವಲಂಬಿ ಬದುಕು ರೈತನಿಗೆ ಸಂಧಾನ ತಂದಿದೆ. ತಂಬಾಕು, ಮದ್ಯದಂತಹ ಹಾನಿಕಾರಕ ಮಾದಕ ದ್ರವ್ಯಗಳ ಮೇಲೆ ಹೆಚ್ಚಿನ ಸುಂಕ ವಿಧಿಸಿ 17 ಕ್ಯಾನ್ಸರ್ ಔಷಧಿಗಳ ಸುಂಕ ವಿನಾಯ್ತಿ ನೀಡಿದ್ದು, ಅದರಲ್ಲಿ 7 ಔಷಧಗಳ ಮೇಲೆ ತೆರಿಗೆಯನ್ನೇರದ್ದು ಮಾಡಿದ್ದು ಉತ್ತಮ. ಹೀಗೆ ಬಜೆಟ್ ನಲ್ಲಿ ಹಲವಾರು ಉಪಯುಕ್ತ ಯೋಜನೆ ನೀಡಲಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಚಿವ ಸಂತೋಷ್ ಲಾಡ್ ನಾಲಿಗೆ ಹಿಡಿತವಿರಲಿ: ಮುರಳಿಕುಮಾರ.

ಚಿತ್ತಾಪುರ: ವಿಧಾನಸೌಧದ ಮುಂಭಾಗದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಕಾರ್ಮಿಕ ಇಲಾಖೆಯ ಸಚಿವರಾದ ಸಂತೋಷ ಲಾಡ್‌ ರವರು ಬಾರ್ಬರ್ ಅಂದರೆ ಹಜಾಮ ಎಂಬ ಹಡಪದ ಸಮಾಜದ ನಿಷೇಧಿತ ಪದ ಬಳಸಿ ಅಸಂಘಟಿತ ವಲಯದ ಕಾರ್ಮಿಕರಾದ ಕ್ಷೌರಿಕರಿಗೆ ಅವಮಾನಿಸಿದ್ದಾರೆ ಜವಾಬ್ದಾರಿಯುತ ಸಚಿವರು ಶಾಸಕರುಗಳೆ ನಿಷೇಧಿತ ಪದ ಬಳಸಿ ಅನುಮಾನಿಸುತ್ತಿದ್ದಾರೆ.

ತಕ್ಷಣ ಕ್ಷಮೆಯಾಚಿಸಬೇಕು ವಿಧಾನ ಸಭೆ ಅಧಿವೇಶನದಲ್ಲಿ ಕಾನೂನು ಜಾರಿಗೆ ತರುವ ಕುರಿತು ಚರ್ಚಿಸಲಿ ಎಂದು ಹಡಪದ ಸಮಾಜದ ನಗರ ಅಧ್ಯಕ್ಷ ಮುರಳಿಕುಮಾರ ಸಾತನೂರ ಪತ್ರಿಕೆ ಮುಖಾಂತರ ಒತ್ತಾಯಿಸಿದ್ದಾರೆ.

ಎಸ್ಸೆಸ್ಸೆಲ್ಸಿ ಮಕ್ಕಳೊಂದಿಗೆ ಜಿಪಂ ಸಿಇಒ ಚರ್ಚೆ.

ಚಿತ್ತಾಪುರ: ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮಪಡಿಸಲು ಪೂರ್ವಸಿದ್ಧತಾ ಪರೀಕ್ಷೆ-1 ರಲ್ಲಿ ಅತ್ಯಂತ ಕಡಿಮೆ ಫಲಿತಾಂಶ ಪಡೆದ ಕರ್ನಾಟಕ ಪಬ್ಲಿಕ್ ಶಾಲೆ ಮಾಡಬೂಳ,...