ಸೋಮವಾರ, ಫೆಬ್ರವರಿ 9, 2026

ಕೋಲಿ ಸಮಾಜದ ಹಿತರಕ್ಷಣೆಗೆ ಸರ್ಕಾರದ ಪಣ: ಕಮಕನೂರ.

✓ಚೌಡಯ್ಯನವರ ಮೂರ್ತಿ ಅನಾವರಣ, ✓ಎಸ್‌ಟಿ ಪಟ್ಟಿಗೆ ಸೇರಿಸಲು ಬದ್ಧ.

ಚಿತ್ತಾಪುರ: ಕರ್ನಾಟಕದಲ್ಲಿ ಕೋಲಿ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ (ST) ಸೇರಿಸುವ ನಿಟ್ಟಿನಲ್ಲಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಈ ಪ್ರಕ್ರಿಯೆಯನ್ನು ಯಶಸ್ವಿಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಭರವಸೆ ನೀಡಿದರು.

ತಾಲೂಕಿನ ಭಾಗೋಡಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ನಿಜಶರಣ ಅಂಬಿಗರ ಚೌಡಯ್ಯನವರ ಮೂರ್ತಿ ಅನಾವರಣ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದ ಅವರು ಕೋಲಿ ಸಮಾಜದ ಪರ್ಯಾಯ ಪದಗಳಾದ ಕೋಲಿ, ಕಬ್ಬಲಿಗ, ಬೆಸ್ತ, ಅಂಬಿಗ ಮತ್ತು ಬಾರ್ಕಿ ಪದಗಳನ್ನು ಎಸ್‌ಟಿ ಪಟ್ಟಿಗೆ ಸೇರಿಸಲು ಕಲ್ಯಾಣ ಕರ್ನಾಟಕ ಭಾಗದ ಸಚಿವರು ಹಾಗೂ ಶಾಸಕರು ಬೆಂಬಲ ನೀಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಈ ಬಗ್ಗೆ ವಿಶೇಷ ಆಸಕ್ತಿ ವಹಿಸಿದ್ದಾರೆ.
ಕಲಬುರಗಿ ನಗರದ ಗಾಂಧಿ ಚೌಕ್ ಹಾಗೂ ಜಗಜೀವನರಾಮ್ ಮೂರ್ತಿಗಳ ಮಧ್ಯೆ ಅಂಬಿಗರ ಚೌಡಯ್ಯನವರ ಬೃಹತ್ ಮೂರ್ತಿ ಸ್ಥಾಪನೆಗೆ ಕ್ಯಾಬಿನೆಟ್ ಅನುಮೋದನೆ ದೊರೆತಿದೆ. ಮಹಾನಗರ ಪಾಲಿಕೆಯಿಂದ 40 ಲಕ್ಷ ರೂ. ಅನುದಾನ ಮೀಸಲಿಡಲಾಗಿದ್ದು, ಎರಡು ತಿಂಗಳಲ್ಲಿ ಕಾರ್ಯ ಪೂರ್ಣಗೊಳ್ಳಲಿದೆ. ಹಾಗೂ ಬೆಂಗಳೂರಿನ ವಿಧಾನಸೌಧದ ಎದುರು ಚೌಡಯ್ಯನವರ ಮೂರ್ತಿ ಸ್ಥಾಪನೆಗೆ ವಿಧಾನ ಪರಿಷತ್ತಿನ 75 ಸದಸ್ಯರು ಬೆಂಬಲ ಸೂಚಿಸಿದ್ದು, ಸರ್ಕಾರ ಶೀಘ್ರವೇ ಕ್ರಮ ಕೈಗೊಳ್ಳಲಿದೆ.

ಮಾತಾ ಮಾಣಿಕೇಶ್ವರಿ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಸರ್ಕಾರ ಸಮ್ಮತಿಸಿದ್ದು, 200 ಕೋಟಿ ರೂ. ಅನುದಾನಕ್ಕೆ ಮನವಿ ಮಾಡಲಾಗಿದೆ. ಮತ್ತು ಕೂಡಲಸಂಗಮ ಮಾದರಿಯಲ್ಲಿ ಅಂಬಿಗರ ಚೌಡಯ್ಯ ಐಕ್ಯ ಸ್ಥಳವನ್ನು ಅಭಿವೃದ್ಧಿಪಡಿಸಲು 50 ಕೋಟಿ ರೂ. ವೆಚ್ಚದ ಪ್ರಾಧಿಕಾರ ರಚನೆಗೆ ಸರ್ಕಾರ ಒಪ್ಪಿಗೆ ನೀಡಿದೆ ಎಂದರು.
ಕಾರ್ಯಕ್ರಮದಲ್ಲಿ ತೊನಸನಳ್ಳಿ ಶ್ರೀ ಡಾ. ಮಲ್ಲಣ್ಣಪ್ಪ ಮಹಾಸ್ವಾಮಿಗಳು ಆಶೀರ್ವಚನ ನೀಡಿದರು. ಗುರುಮಠಕಲ್‌ನ ಶ್ರೀ ಶಾಂತವೀರ ಗುರು ಮುರಘರಾಜೇಂದ್ರ ಮಹಾಸ್ವಾಮಿಗಳು ಹಾಗೂ ಪೂಜ್ಯ ಪರಶುರಾಮ ಮುತ್ಯಾ ಸಾನಿಧ್ಯ ವಹಿಸಿದ್ದರು.
ವೇದಿಕೆಯಲ್ಲಿ ಕೆಪಿಸಿಸಿ ಸದಸ್ಯ ನಾಗರಡ್ಡಿ ಪಾಟೀಲ ಕರದಾಳ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಭೀಮಣ್ಣ ಸಾಲಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಮೇಶ ಮರಗೋಳ, ಉದ್ಯಮಿ ಶಿವರಾಯ ಕಮಕನೂರ, ರಾಜೇಂದ್ರಪ್ಪ ಅರಣಕಲ್ ಸೇರಿದಂತೆ ಸಮಾಜದ ಪ್ರಮುಖ ಮುಖಂಡರು ಉಪಸ್ಥಿತರಿದ್ದರು. ಕಾರ್ಯಕ್ರಮದ ನಂತರ ಗ್ರಾಮದ ಪ್ರಮುಖ ಬೀದಿಗಳಲ್ಲಿ ಅಂಬಿಗರ ಚೌಡಯ್ಯನವರ ಮೂರ್ತಿಯ ಭವ್ಯ ಮೆರವಣಿಗೆ ಅದ್ಧೂರಿಯಾಗಿ ನಡೆಯಿತು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಕಾನೂನಿನ ಜೊತೆ ಸಾರ್ವಜನಿಕ ಜಾಗೃತಿ ಅಗತ್ಯ: ನ್ಯಾಯಾಧೀಶರು

ಚಿತ್ತಾಪುರ: ಸಮಾಜದಲ್ಲಿ ಇಂದಿಗೂ ಪರೋಕ್ಷವಾಗಿ ಅಸ್ತಿತ್ವದಲ್ಲಿರುವ ಜೀತ ಪದ್ಧತಿಯನ್ನು ನಿರ್ಮೂಲನೆ ಮಾಡಲು ಕೇವಲ ಕಠಿಣ ಕಾನೂನುಗಳಿದ್ದರೆ ಸಾಲದು, ಸಾರ್ವಜನಿ...