ಮಂಗಳವಾರ, ಫೆಬ್ರವರಿ 17, 2026

ಶಿವಾಜಿ ಮತ್ತು ಸರ್ವಜ್ಞ ಜಯಂತಿ: ತಾಲ್ಲೂಕು ಆಡಳಿತ ಸಜ್ಜು.

ಚಿತ್ತಾಪುರ: ಪಟ್ಟಣದ ಪ್ರಜಾಸೌಧದಲ್ಲಿ ತಹಸೀಲ್ದಾರ್ ನಾಗಯ್ಯ ಹಿರೇಮಠ ಅವರ ಅಧ್ಯಕ್ಷತೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಹಾಗೂ ಸಂತ ಕವಿ ಸರ್ವಜ್ಞರ ಜಯಂತ್ಯುತ್ಸವದ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಸಭೆಯನ್ನುದ್ದೇಶಿಸಿ ಮಾತನಾಡಿದ ತಹಸೀಲ್ದಾರ್ ನಾಗಯ್ಯ ಹಿರೇಮಠ ಅವರು, "ಮಹಾನ್ ಪುರುಷರ ಜಯಂತಿಗಳನ್ನು ಶಾಂತಿ ಮತ್ತು ಸೌಹಾರ್ದತೆಯಿಂದ ಆಚರಿಸೋಣ. ತಾಲ್ಲೂಕು ಆಡಳಿತದ ವತಿಯಿಂದ ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುವುದು. ಸಮಾಜದ ಮುಖಂಡರು ಮತ್ತು ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು," ಎಂದು ತಿಳಿಸಿದರು.

ಜಯಂತ್ಯುತ್ಸವ ಸಮಿತಿ ಅಧ್ಯಕ್ಷರಾದ ಅನಿಲ ಯೆಂದೆ ಅವರು ಮಾತನಾಡಿ, "ಬರುವ ಫೆಬ್ರವರಿ 19ರಂದು ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯು ತಾಲ್ಲೂಕಿನಲ್ಲಿ ಅತ್ಯಂತ ಅದ್ದೂರಿಯಾಗಿ ಮತ್ತು ಶಿಸ್ತುಬದ್ಧವಾಗಿ ಆಚರಿಸಲು ನಿರ್ಧರಿಸಲಾಗಿದೆ," ಎಂದರು.

ಇದೇ ವೇಳೆ ಕುಂಬಾರ ಸಮಾಜದ ಮಾಜಿ ಅಧ್ಯಕ್ಷರಾದ ಜಗದೇವ ಕುಂಬಾರ ಅವರು ಮಾತನಾಡಿ, "ಫೆಬ್ರವರಿ 20ರಂದು ಸರ್ವಜ್ಞ ಜಯಂತಿ ಇದ್ದು, ಅಂದು ಶಿಷ್ಟಾಚಾರದಂತೆ ತಹಸೀಲ್ದಾರ್ ಕಾರ್ಯಾಲಯದಲ್ಲಿ ಸರಳವಾಗಿ ಆಚರಣೆಯಲ್ಲಿ ನಮ್ಮ ಸಮಾಜದ ಮುಖಂಡರು ಭಾಗವಹಿಸುತ್ತೆವೆ. ಮುಂದಿನ ಕೆಲವೇ ದಿನಗಳಲ್ಲಿ ಸಮಾಜದ ವತಿಯಿಂದ ಸರ್ವಜ್ಞ ಜಯಂತಿಯನ್ನು ಬೃಹತ್ ಪ್ರಮಾಣದಲ್ಲಿ ಆಚರಿಸಲು ಚಿಂತಿಸಲಾಗಿದೆ. ಆ ಸಂದರ್ಭದಲ್ಲಿ ತಾಲ್ಲೂಕು ಆಡಳಿತವು ಪೂರ್ಣ ಪ್ರಮಾಣದ ಸಹಕಾರ ನೀಡಬೇಕು," ಎಂದು ಕೋರಿದರು.

ವಿವಿಧ ಜಯಂತೋತ್ಸವದಲ್ಲಿ ಮಹಾನ್ ಪುರುಷರ ಭಾವಚಿತ್ರಗಳಿಗೆ ಪ್ಲಾಸ್ಟಿಕ್ ಹಾರ ಹಾಕಿ ಜಯಂತಿ ಮಾಡುತ್ತಿರುವು ಕಂಡುಬರುತ್ತಿದೆ ಕೊಡಲೆ ತಹಸೀಲ್ದಾರರು ಎಲ್ಲಾ ಇಲಾಖೆಗಳಿಗೆ ಪ್ಲಾಸ್ಟಿಕ್ ಹಾರ ನಿಷೇಧ ಮಾಡಲು ಆದೇಶ ಹೊರಡಿಸಬೇಕು ಎಂದರು 

ಈ ಸಂದರ್ಭದಲ್ಲಿ ಗ್ರೇಡ್-2 ತಹಸೀಲ್ದಾರ್ ರಾಜಕುಮಾರ್ ಮರತೂರ, ಶಿಕ್ಷಣ ಇಲಾಖೆಯ ಶಿವಶರಣಪ್ಪ, ರೋಹಿತ್ ಚವ್ಹಾಣ್, ಶಿವಪ್ರಕಾಶ್, ಅಮೃತ ಕ್ಷೀರ ಸಾಗರ, ರತ್ನ ಕುಮಾರ್, ಡಾ. ಶಾಂತಯ್ಯ, ಶ್ರೀಮತಿ ಸುನಿತಾ, ಸಂತೋಷ ಕುಮಾರ್, ರೋಹಿತ್ ಯೆಂದೆ, ಮನೋಜ್, ಮೋಹಿತ್ ಕಟ್ಟಿಮನಿ. ಆಕಾಶ್ ಸುಗಂಧಿ, ಶಶಿಕುಮಾರ್ ಕುಂಬಾರ ಇತರರು ಇದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದುಗೌಡ ಕುರಾಳ ನೇಮಕ.

ಚಿತ್ತಾಪುರ: ರಾಜ್ಯಾದ್ಯಂತ ನಡೆಯುತ್ತಿರುವ ಬಿಜೆಪಿ ಸಂಘಟನಾ ಪರ್ವದ ಅಂಗವಾಗಿ, ಕಲಬುರಗಿ ಗ್ರಾಮಾಂತರ ಜಿಲ್ಲೆಯ ಚಿತ್ತಾಪುರ ಮಂಡಲದ ವಿವಿಧ ಮೋರ್ಚಾಗಳಿಗೆ ನೂತ...