ಮಂಗಳವಾರ, ಫೆಬ್ರವರಿ 17, 2026

ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದುಗೌಡ ಕುರಾಳ ನೇಮಕ.

ಚಿತ್ತಾಪುರ: ರಾಜ್ಯಾದ್ಯಂತ ನಡೆಯುತ್ತಿರುವ ಬಿಜೆಪಿ ಸಂಘಟನಾ ಪರ್ವದ ಅಂಗವಾಗಿ, ಕಲಬುರಗಿ ಗ್ರಾಮಾಂತರ ಜಿಲ್ಲೆಯ ಚಿತ್ತಾಪುರ ಮಂಡಲದ ವಿವಿಧ ಮೋರ್ಚಾಗಳಿಗೆ ನೂತನ ಪದಾಧಿಕಾರಿಗಳ ನೇಮಕ ಮಾಡಲಾಗಿದೆ. ಇದರಲ್ಲಿ ಬಿಜೆಪಿ ಯುವ ಮೋರ್ಚಾದ ಮಂಡಲ ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದುಗೌಡ ಕುರಾಳ ಅವರನ್ನು ನೇಮಕ ಮಾಡಲಾಗಿದ್ದು, ಪಕ್ಷದ ಸಂಘಟನೆಗೆ ಹೊಸ ಚೈತನ್ಯ ತುಂಬುವ ಜವಾಬ್ದಾರಿ ನೀಡಲಾಗಿದೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಮಂಡಲ ಅಧ್ಯಕ್ಷರಾದ ರವೀಂದ್ರ ಸಜ್ಜನಶೆಟ್ಟಿ ಅವರು, ಪಕ್ಷದ ಹಿರಿಯ ಮುಖಂಡರ ಮಾರ್ಗದರ್ಶನದಲ್ಲಿ ಸಮರ್ಥ ಹಾಗೂ ಕ್ರಿಯಾಶೀಲ ಕಾರ್ಯಕರ್ತರನ್ನು ಗುರುತಿಸಿ ಈ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ತಮ್ಮ ನೇಮಕಾತಿ ಕುರಿತು ಸಂತಸ ವ್ಯಕ್ತಪಡಿಸಿರುವ ಸಿದ್ದುಗೌಡ ಕುರಾಳ ಅವರು ಮಾತನಾಡುತ್ತಾ "ನನ್ನ ಮೇಲೆ ನಂಬಿಕೆಯಿಟ್ಟು ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಜವಾಬ್ದಾರಿಯನ್ನು ನೀಡಿದ ಪಕ್ಷದ ಎಲ್ಲಾ ಹಿರಿಯ ನಾಯಕರಿಗೆ ಮತ್ತು ಮಂಡಲ ಅಧ್ಯಕ್ಷರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಪ್ರಧಾನಿ ನರೇಂದ್ರ ಮೋದಿ ಅವರ ಅಭಿವೃದ್ಧಿ ಕಾರ್ಯಗಳು ಮತ್ತು ಪಕ್ಷದ ಸಿದ್ಧಾಂತಗಳನ್ನು ತಳಮಟ್ಟದ ಯುವಕರಿಗೆ ತಲುಪಿಸುವುದು ನನ್ನ ಆದ್ಯತೆಯಾಗಿದೆ. ಚಿತ್ತಾಪುರ ಕ್ಷೇತ್ರದಲ್ಲಿ ಬಿಜೆಪಿಯನ್ನು ಮತ್ತಷ್ಟು ಸದೃಢಗೊಳಿಸಲು ಮತ್ತು ಯುವಶಕ್ತಿಯನ್ನು ಸಂಘಟಿಸಲು ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ," ಎಂದು ತಿಳಿಸಿದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಶ್ರೀಮತಿ ಮಹಾದೇವಮ್ಮ ಬಿ. ಪಾಟೀಲ್ ಸ್ಮಾರಕ ಸಿ.ಬಿ.ಎಸ್.ಇ ಶಾಲೆಗೆ ಶೇ. 99 ರಷ್ಟು ಫಲಿತಾಂಶ: ಶೈಕ್ಷಣಿಕ ಕ್ಷೇತ್ರದಲ್ಲಿ ಮೈಲಿಗಲ್ಲು

ಚಿತ್ತಾಪುರ: ಪಟ್ಟಣದ ವಿಶ್ವರು ಶಿಕ್ಷಣ ಹಾಗೂ ಕಲ್ಯಾಣ ಸಂಸ್ಥೆಯ ಶ್ರೀಮತಿ ಮಹಾದೇವಮ್ಮ ಬಿ. ಪಾಟೀಲ್ ಸ್ಮಾರಕ ಸಿ.ಬಿ.ಎಸ್.ಇ ಶಾಲೆಯು 2025-26ನೇ ಸಾಲಿನ ಸಿ...