ಚಿತ್ತಾಪುರ: ತಾಲೂಕಿನ ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಕಂಬಳೇಶ್ವರ ಮಠಕ್ಕೆ ಕೊಪ್ಪಳದ ಗವಿಮಠದ ಪೀಠಾಧಿಪತಿಗಳಾದ ಅಭಿನವ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಇದೇ ಫೆಬ್ರವರಿ 23ರಂದು ಭೇಟಿ ನೀಡಲಿದ್ದಾರೆ ಎಂದು ಮಠದ ಪೀಠಾಧಿಪತಿಗಳಾದ ಪೂಜ್ಯ ಶ್ರೀ ಸೋಮಶೇಖರ ಶಿವಾಚಾರ್ಯರು ತಿಳಿಸಿದ್ದಾರೆ.
ಅಂದು ಮಧ್ಯಾಹ್ನ 12 ಗಂಟೆಗೆ ಮಠಕ್ಕೆ ಆಗಮಿಸಲಿರುವ ಶ್ರೀಗಳು, ಮೊದಲು ಕಂಬಳೇಶ್ವರ ಕರ್ತೃ ಗದ್ದುಗೆಗೆ ವಿಶೇಷ ಪೂಜೆ ಹಾಗೂ ನಮನಗಳನ್ನು ಸಲ್ಲಿಸಲಿದ್ದಾರೆ. ನಂತರ ನಡೆಯುವ ಧಾರ್ಮಿಕ ಸಭೆಯಲ್ಲಿ ಸೋಮಶೇಖರ ಶಿವಾಚಾರ್ಯರು ಗವಿಸಿದ್ದೇಶ್ವರ ಶ್ರೀಗಳಿಗೆ ನಾಗಾವಿ ನಾಡಿನ ಇತಿಹಾಸ ಸಾರುವ ಪುಸ್ತಕಗಳನ್ನು ನೀಡಿ, ಮಠದ ಪರವಾಗಿ ಭಕ್ತಿಪೂರ್ವಕವಾಗಿ ಸತ್ಕರಿಸಿ ಗೌರವಿಸಲಿದ್ದಾರೆ.
"ಅಪರೂಪದ ಪವಾಡ ಪುರುಷರು ಹಾಗೂ ಸಮಾಜಮುಖಿ ಚಿಂತಕರಾದ ಗವಿಸಿದ್ದೇಶ್ವರ ಶ್ರೀಗಳ ಆಗಮನವು ನಮ್ಮ ಭಾಗದ ಭಕ್ತರಿಗೆ ಸೌಭಾಗ್ಯದ ಸಂಗತಿಯಾಗಿದೆ. ಈ ಸುಸಂದರ್ಭದಲ್ಲಿ ತಾಲೂಕಿನ ಸಮಸ್ತ ಭಕ್ತಾದಿಗಳು, ಗಣ್ಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು. ಶ್ರೀಗಳ ದರ್ಶನಾಶೀರ್ವಾದ ಪಡೆದು ಪುನೀತರಾಗಬೇಕು" ಎಂದು ಸೋಮಶೇಖರ ಶಿವಾಚಾರ್ಯರು ಪತ್ರಿಕಾ ಪ್ರಕಟಣೆಯ ಮೂಲಕ ಮನವಿ ಮಾಡಿದ್ದಾರೆ.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ