ಚಿತ್ತಾಪುರ: ಪಟ್ಟಣದ ಶ್ರೀ ಸಾವಳಗಿ ಶಿವಲಿಂಗೇಶ್ವರ ಮಠ ಹಾಗೂ ಶ್ರೀ ನಾಗಾವಿ ಗೋಶಾಲೆ ಹತ್ತಿರ ನವೀಕರಣಗೊಂಡ ಶಿಲಾ ಮಂಟಪದಲ್ಲಿ ಶ್ರೀ ಮಹಾನಂದಿ ಮೂರ್ತಿ ಪ್ರತಿಷ್ಠಾಪನೆ ಮತ್ತು ಪ್ರಾಣ ಪ್ರತಿಷ್ಠಾಪನೆ ಸಮಾರಂಭವು ಇದೇ ಮಾರ್ಚ್ 17 ರಂದು ಬೆಳಿಗ್ಗೆ 10.45 ಕ್ಕೆ ಜರುಗಲಿದೆ ಎಂದು ಸಮಿತಿ ಅಧ್ಯಕ್ಷ ಶಾಂತಕುಮಾರ್ ಹತ್ತಿ ಹಾಗೂ ಗೋಶಾಲೆ ಅಧ್ಯಕ್ಷ ರಮೇಶ್ ಬೊಮ್ಮನಳ್ಳಿ ತಿಳಿಸಿದರು.
ಗೋಶಾಲೆಯಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಈ ಭಾಗದಲ್ಲಿದ್ದ ಪುರಾತನ ಹಾದಿ ಬಸವಣ್ಣನ ಮೂರ್ತಿಯು ಭಗ್ನಗೊಂಡಿತ್ತು. ಇದನ್ನು ಜೀರ್ಣೋದ್ಧಾರ ಮಾಡಬೇಕೆಂಬ ಈ ಭಾಗದ ಜನರ ಬಹುದಿನಗಳ ಕನಸು ಈಗ ನನಸಾಗಿದೆ. ಸಾರ್ವಜನಿಕರ ಹಾಗೂ ಮುಖಂಡರ ದೇಣಿಗೆಯಿಂದ ಅಂದಾಜು 5 ಲಕ್ಷ ರೂ. ವೆಚ್ಚದಲ್ಲಿ ಸುಸಜ್ಜಿತ ಶಿಲಾ ಮಂಟಪ ಹಾಗೂ 3 ಅಡಿ ಎತ್ತರದ ಭವ್ಯ ಮಹಾನಂದಿ ಮೂರ್ತಿಯನ್ನು ಸ್ಥಾಪಿಸಲಾಗುತ್ತಿದೆ," ಎಂದರು.
ಕಾರ್ಯಕ್ರಮದಲ್ಲಿ ಮುಗಳಕೋಡ ಜಿಡಗಾ ಮಠದ ಶ್ರೀ ಷಡಕ್ಷರಿ ಶಿವಯೋಗಿ ಡಾ. ಮುರುಘರಾಜೇಂದ್ರ ಮಹಾಸ್ವಾಮಿಗಳು, ಸಾವಳಗಿ(ಬಿ) ಸಂಸ್ಥಾನ ಮಠದ ಶ್ರೀ ಗುರುನಾಥ ಮಹಾಸ್ವಾಮಿಗಳು, ಕಂಬಳೇಶ್ವರ ಸಂಸ್ಥಾನ ಮಠದ ಶ್ರೀ ಸೋಮಶೇಖರ ಶಿವಾಚಾರ್ಯರು.ಸಮಿತಿ ಅಧ್ಯಕ್ಷ ಶಾಂತಕುಮಾರ್ ಹತ್ತಿ. ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಅಧ್ಯಕ್ಷ ನಾಗರಾಜ ಭಂಕಲಗಿ ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.
ಶ್ರೀ ರಾಚೋಟೇಶ್ವರ ವೈದಿಕ ಬಳಗದಿಂದ ಮಹಾನಂದಿಗೆ ಕಾಶಿ ವಿಶ್ವನಾಥ ಕ್ಷೇತ್ರದ ಶೈಲಿಯ ಮಹಾಆರತಿ ನಡೆಯಲಿದೆ. ಇದೇ ಸಂದರ್ಭದಲ್ಲಿ ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ ಹಾಗೂ ಭಕ್ತಾದಿಗಳಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿದೆ ಎಂದು ಸಮಿತಿ ತಿಳಿಸಿದೆ.
ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಚಂದ್ರಶೇಖರ ಉಟಗೂರ್, ಅನಿಲ್ ವಡ್ಡಡಗಿ, ಬಸವರಾಜ ಕಾಳಗಿ, ಬಸವರಾಜ ಸಂಕನೂರ, ಬಸವರಾಜ ಹೂಗಾರ, ರಮೇಶ್ ಕಾಳನೂರ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ