ಜನತೆಯ ಸುದ್ದಿ ವಾಹಿನಿ

ಬುಧವಾರ, ಮಾರ್ಚ್ 25, 2026

ಬಾಬು ಜಗಜೀವನ್ ರಾಮ್ ಜಯಂತಿ ಅಂಗವಾಗಿ ಪೂರ್ವಭಾವಿ ಸಭೆ.

ಚಿತ್ತಾಪುರ: ಹಸಿರು ಕ್ರಾಂತಿಯ ಹರಿಕಾರ, ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ರವರ ಜಯಂತಿಯನ್ನು ಏಪ್ರಿಲ್ 5 ರಂದು ಅರ್ಥಪೂರ್ಣವಾಗಿ ಆಚರಿಸುವ ಕುರಿತು ಬುಧವಾರ ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಪೂರ್ವಭಾವಿ ಸಭೆ ಜರುಗಿತು.

​ತಹಸೀಲ್ದಾರ್ ನಾಗಯ್ಯ ಹಿರೇಮಠ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಜಯಂತಿಯ ಆಚರಣೆಯ ರೂಪುರೇಷೆಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಲಾಯಿತು. ಅಂದು ಬೆಳಿಗ್ಗೆ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಂತರ ವೇದಿಕೆ ಕಾರ್ಯಕ್ರಮ ನಡೆಯಲಿದೆ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಮತ್ತು ಶಿಸ್ತುಬದ್ಧವಾಗಿ ಆಯೋಜಿಸಲು ವಿವಿಧ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.

ಸಭೆಯಲ್ಲಿ ಗ್ರೇಡ್-2 ತಹಸೀಲ್ದಾರ್  ರಾಜಕುಮಾರ ಮರತೂರಕರ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಚೇತನ್ ಗುರಿಕರ್, ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ಪಂಡಿತ ಶಿಂದೆ, ದೈಹಿಕ ಶಿಕ್ಷಣಾಧಿಕಾರಿ ಶಿವಶರಣಪ್ಪ ಮಂಠಾಳೆ ಸೇರಿದಂತೆ ಪುರಸಭೆ, ಅಬಕಾರಿ ಮತ್ತು ಶಿಶು ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸಮಾಜದ ಮುಖಂಡರಾದ ರಾಜಣ್ಣ ಕರದಾಳ, ಮಲ್ಲಿಕಾರ್ಜುನ್ ಕಾಳಗಿ, ಹಿರಿಯರಾದ ಮರೆಪ್ಪ ಸಂದೇನ್, ನಾಗೇಶ ಹಲಿಗಿ, ಸಾಬಣ್ಣ ಹಲಿಗಿ, ಶ್ರೀಕಾಂತ ಹೊಸಳ್ಳಿಕರ, ಶಿವರಾಜಕುಮಾರ ಬೊಮ್ಮನಗಳ್ಳಿಕರ, ವಿಶ್ವನಾಥ ಬೊಮ್ಮನಗಳ್ಳಿಕರ, ಮಹಾಂತೇಶ ಬೊಮ್ಮನಗಳ್ಳಿಕರ ಹಾಗೂ ರಮೇಶ ಕಟ್ಟಿಮನಿ ಸೇರಿದಂತೆ ಅನೇಕರು ಸಭೆಯಲ್ಲಿ ಪಾಲ್ಗೊಂಡು ಅಮೂಲ್ಯ ಸಲಹೆಗಳನ್ನು ನೀಡಿದರು.
​ಬಾಬು ಜಗಜೀವನ್ ರಾಮ್ ಅವರ ತತ್ವ ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ನಿಟ್ಟಿನಲ್ಲಿ ಜಯಂತಿಯನ್ನು ಯಶಸ್ವಿಗೊಳಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ವಿದ್ಯುತ್ ವ್ಯತ್ಯಯ: ಅಧಿಕಾರಿಗಳ ಹಾರಿಕೆ ಉತ್ತರಕ್ಕೆ ಸಾರ್ವಜನಿಕರ ಆಕ್ರೋಶ.

ಚಿತ್ತಾಪುರ: ಪಟ್ಟಣದ ಆಶ್ರಯ ಕಾಲೋನಿ ಪ್ರದೇಶದಲ್ಲಿ ಶನಿವಾರ ರಾತ್ರಿಯಿಂದ ವಿದ್ಯುತ್ ಸರಬರಾಜು ಸಂಪೂರ್ಣ ಸ್ಥಗಿತಗೊಂಡಿದ್ದು, ನಿವಾಸಿಗಳು ತೀವ್ರ ಆಕ್ರೋಶ ವ...