ಜನತೆಯ ಸುದ್ದಿ ವಾಹಿನಿ

ಶುಕ್ರವಾರ, ಮಾರ್ಚ್ 27, 2026

ಅರಣಕಲ್ ಅವರಿಂದ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಗೌರವ ಸಮರ್ಪಣೆ.

ಚಿತ್ತಾಪುರ: ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘಕ್ಕೆ ಅವಿರೋಧವಾಗಿ ಆಯ್ಕೆಯಾದ ನೂತನ ಅಧ್ಯಕ್ಷ ದೇವಿಂದ್ರ ಅರಣಕಲ್‌ ಅವರು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಹಾಗೂ ಐಟಿಬಿಟಿ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಎಂ. ಖರ್ಗೆ ಅವರನ್ನು ಬೆಂಗಳೂರಿನ ಸರ್ಕಾರಿ ಗೃಹ ಕಚೇರಿಯಲ್ಲಿ ಭೇಟಿ ಮಾಡಿ ಬುದ್ಧನ ಪ್ರತಿಮೆ ನೀಡಿ ಸನ್ಮಾನಿಸಿ ಆಶೀರ್ವಾದ ಪಡೆದರು.

ನೂತನ ಅಧ್ಯಕ್ಷರನ್ನು ಆತ್ಮೀಯವಾಗಿ ಬರಮಾಡಿಕೊಂಡ ಸಚಿವ ಪ್ರಿಯಾಂಕ್ ಖರ್ಗೆ ಅವರು, ಸಂಘದ ಅಭಿವೃದ್ಧಿಗೆ ಮತ್ತು ರೈತರ ಹಿತರಕ್ಷಣೆಗೆ ಶ್ರಮಿಸುವಂತೆ ಹಾರೈಸಿ ಶುಭ ಕೋರಿದರು.

​ಈ ಸಂದರ್ಭದಲ್ಲಿ ಮಾತನಾಡಿದ ದೇವಿಂದ್ರ ಅರಣಕಲ್ ಅವರು, ಸಚಿವರ ಮಾರ್ಗದರ್ಶನದಲ್ಲಿ ಚಿತ್ತಾಪುರ ತಾಲೂಕಿನ ರೈತರಿಗೆ ಸಹಕಾರ ಸಂಘದ ಮೂಲಕ ಸಿಗಬೇಕಾದ ಎಲ್ಲಾ ಸೌಲಭ್ಯಗಳನ್ನು ತಲುಪಿಸಲು ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಕೋಲಿ ಕಬ್ಬಲಿಗ ಎಸ್ಟಿ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಲಚ್ಚಪ್ಪ ಜಮಾದಾ‌ರ್, ಪಿಎಲ್ಲಿ ಬ್ಯಾಂಕ್ ಅಧ್ಯಕ್ಷ ಭೀಮಣ್ಣ ಸಾಲಿ, ಕೃಷಿಕ ಸಮಾಜದ ಅಧ್ಯಕ್ಷ ನಾಗರೆಡ್ಡಿ ಗೋಪಸೇನ್, ಪಂಚ ಗ್ಯಾರಂಟಿ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಬೊಮ್ಮನಳ್ಳಿ, ಕೋಲಿ ಸಮಾಜದ ತಾಲೂಕು ಅಧ್ಯಕ್ಷ ನಿಂಗಣ್ಣ ಹೆಗಲೇರಿ, ಗೌರವಾಧ್ಯಕ್ಷ ರಾಮಲಿಂಗ ಬಾನ‌ರ್, ತಾಪಂ ಮಾಜಿ ಅಧ್ಯಕ್ಷ ಶರಣಗೌಡ ಪಾಟೀಲ ಭಾಗೋಡಿ, ಎಪಿಎಂಸಿ ಮಾಜಿ ಸದಸ್ಯ ಹಣಮಂತ ಸಂಕನೂರ, ಮುಖಂಡರಾದ ಇಂದುಶೇಖರ್ ಬೆಂಕಿ, ಪ್ರಭು ಹಲಕರ್ಟಿ, ಬಸವರಾಜ ಚಿನ್ನಮಳ್ಳಿ, ನಾಗೇಂದ್ರ ಜೈಗಂಗಾ, ಬಸವರಾಜ ಪಾಟೀಲ ದಳಪತಿ, ಮಲ್ಲಪ್ಪ ಮಳಖೇಡ, ಪಾಶಾ ಶಿರೂರು ಸೇರಿದಂತೆ ಸಹಕಾರ ಸಂಘದ ಪ್ರಮುಖರು, ಮುಖಂಡರು ಹಾಗೂ ಗಣ್ಯರು ಉಪಸ್ಥಿತರಿದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ವಿದ್ಯುತ್ ವ್ಯತ್ಯಯ: ಅಧಿಕಾರಿಗಳ ಹಾರಿಕೆ ಉತ್ತರಕ್ಕೆ ಸಾರ್ವಜನಿಕರ ಆಕ್ರೋಶ.

ಚಿತ್ತಾಪುರ: ಪಟ್ಟಣದ ಆಶ್ರಯ ಕಾಲೋನಿ ಪ್ರದೇಶದಲ್ಲಿ ಶನಿವಾರ ರಾತ್ರಿಯಿಂದ ವಿದ್ಯುತ್ ಸರಬರಾಜು ಸಂಪೂರ್ಣ ಸ್ಥಗಿತಗೊಂಡಿದ್ದು, ನಿವಾಸಿಗಳು ತೀವ್ರ ಆಕ್ರೋಶ ವ...