ಶುಕ್ರವಾರ, ಏಪ್ರಿಲ್ 3, 2026

ಶ್ರೀಗಳ ಜನ್ಮದಿನದ ಸವಿನೆನಪು: ಗೋಶಾಲೆಗೆ ಕಣಕಿ ದೇಣಿಗೆ

ಚಿತ್ತಾಪುರ: ಪಟ್ಟಣದ ಧಾರ್ಮಿಕ ಮತ್ತು ಸಾಮಾಜಿಕ ಚಟುವಟಿಕೆಗಳ ಕೇಂದ್ರಬಿಂದುವಾಗಿರುವ ಕಂಬಳೇಶ್ವರ ಮಠದ ಪೀಠಾಧಿಪತಿಗಳಾದ ಶ್ರೀ ಸೋಮಶೇಖರ ಶಿವಾಚಾರ್ಯರ 59ನೇ ಜನ್ಮದಿನದ ಏಪ್ರಿಲ್ 4ರಂದು ಇದ್ದು. ಒಂದು ದಿನ ಮುಂಚಿತವಾಗಿ ಶುಕ್ರವಾರ ಪಟ್ಟಣದ ಗೋಶಾಲೆಯಲ್ಲಿ ಗೋವುಗಳಿಗೆ ಮೇವು ನೀಡುವ ವಿಶೇಷ ಸೇವಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶ್ರೀಗಳ ಜನ್ಮದಿನದ ಸವಿನೆನಪಿಗಾಗಿ ಸಮಾಜ ಸೇವಕ ಅಂಬರೀಷ್ ಕಲ್ ಶೆಟ್ಟಿ ಅವರು ಗೋಶಾಲೆಗೆ ಒಂದು ಟ್ರ್ಯಾಕ್ಟರ್ ಲೋಡ್ ಕಣಕಿಯನ್ನು ಕಾಣಿಕೆಯಾಗಿ ನೀಡಿದರು

ಶ್ರೀಗಳು ತಮ್ಮ ಜನ್ಮದಿನದ ಅಂಗವಾಗಿ ಪಟ್ಟಣದ ಗೋಶಾಲೆಗೆ ಭೇಟಿ ನೀಡಿದ ಶ್ರೀ ಸೋಮಶೇಖರ ಶಿವಾಚಾರ್ಯರು, ಗೋವುಗಳಿಗೆ ಸ್ವತಃ ಮೇವು (ಕಣಕಿ) ತಿನ್ನಿಸುವ ಮೂಲಕ ಗೋಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀಗಳು, "ಗೋವುಗಳು ಭಾರತೀಯ ಸಂಸ್ಕೃತಿಯ ಜೀವಾಳ. ಗೋಸೇವೆಯು ಈಶ್ವರನ ಸೇವೆಗೆ ಸಮಾನವಾದುದು. ಭಕ್ತರು ಇಂತಹ ಪುಣ್ಯ ಕಾರ್ಯಗಳ ಮೂಲಕ ಗೋವುಗಳ ಹಸಿವು ನೀಗಿಸುತ್ತಿರುವುದು ಸಂತಸದ ವಿಷಯ," ಎಂದು ಆಶೀರ್ವದಿಸಿದರು.
ಅಖಿಲ ಭಾರತ ವೀರಶೈವ ಮಹಾಸಭಾದ ತಾಲೂಕು ಅಧ್ಯಕ್ಷ ನಾಗರಾಜ್ ಬಂಕಲಗಿ ರವರು ಮಾತನಾಡಿ "ಶ್ರೀಗಳ ಹುಟ್ಟುಹಬ್ಬದ ಸವಿನೆನಪಿಗಾಗಿ ಅಂಬರೀಷ್ ಕಲ್ ಶೆಟ್ಟಿ ಅವರು ಗೋಶಾಲೆಗೆ ಕಣಕಿ ಕಾಣಿಕೆ ನೀಡಿರುವುದು ಶ್ಲಾಘನೀಯ. ಗೋವುಗಳ ಪಾಲನೆಗೆ ಇಂತಹ ದಾನಿಗಳು ಪ್ರೇರಣೆಯಾಗಿದ್ದಾರೆ," ಎಂದು ತಿಳಿಸಿದರು.

"ನಮ್ಮ ಗುರುಗಳಾದ ಶ್ರೀ ಸೋಮಶೇಖರ ಶಿವಾಚಾರ್ಯರ ಜನ್ಮದಿನವನ್ನು ಆಡಂಬರವಿಲ್ಲದೆ, ಅರ್ಥಪೂರ್ಣವಾಗಿ ಆಚರಿಸಬೇಕು ಎಂಬ ಉದ್ದೇಶದಿಂದ ಗೋವುಗಳಿಗೆ ಮೇವು ನೀಡುವ ಸಂಕಲ್ಪ ಮಾಡಿದೆ. ಗೋವುಗಳಿಗೆ ಹಸಿವು ನೀಗಿಸುವುದು ಕೋಟಿ ಪುಣ್ಯಕ್ಕೆ ಸಮಾನ. ಶ್ರೀಗಳ ಆಶೀರ್ವಾದ ನಮ್ಮ ಮೇಲೆ ಸದಾ ಇರಲಿ ಎಂದು ಈ ಸೇವೆಯನ್ನು ಅರ್ಪಿಸುತ್ತಿದ್ದೇನೆ," ಎಂದು ಭಕ್ತಿಪೂರ್ವಕವಾಗಿ ನುಡಿದರು.

- ಅಂಬರೀಷ್ ಕಲಶೆಟ್ಟಿ (ಸಮಾಜ ಸೇವಕರು ಚಿತ್ತಾಪೂರ )
ಈ ಸಂದರ್ಭದಲ್ಲಿ ಹಿರಿಯರಾದ ಅನ್ನದಾನ ಶಾಸ್ತ್ರಿಗಳು ಹಿರೇಮಠ್, ಶಾಂತನಂದ ಗವಾಯಿಗಳು, ವೀರಶೈವ ಸಮಾಜದ ಕಾರ್ಯದರ್ಶಿ ಆನಂದ್ ಪಾಟೀಲ್ ನರಬೂಳ್ಳಿ, ಹಾಗೂ ಗೋಶಾಲೆ ಅಧ್ಯಕ್ಷ ರಮೇಶ್ ಬೊಮ್ನಳ್ಳಿ, ವೀರಶೈವ ಸಮಾಜದ ಮುಖಂಡರಾದ ಶಿವಾನಂದ ಸ್ವಾಮಿ ಗಚ್ಚಿನಮಠ, ಸಂಜು ರೆಡ್ಡಿ ಪಾಲಪ್, ಅನಿಲ್ ವಡ್ಡಡಗಿ, ವಿಶ್ವನಾಥ್ ಕುಂಬಾರ್, ಬಸವರಾಜ್ ಹೂಗಾರ್, ಶಾಂತಕುಮಾರ್ ಹತ್ತಿ, ಪ್ರಸಾದ್ ಅವಂಟಿ, ಸುರೇಶ್ ಅಲ್ಲೂರು, ಜಗದೇವ ದಿಗ್ಗಾವ್ಕಾರ್, ಸುನಿಲ್ ಲಕ್ಕುಂಡಿ, ಮಲ್ಲಿಕಾರ್ಜುನ್ ಪೂಜಾರಿ, ಸಾಹೇಬ್ ಗೌಡ ಬಂಗಿ, ಚಂದ್ರು ಉಟ್ಗೂರು, ಸಂತೋಷ್ ಹಾವೇರಿ, ಸಾಗರ್ ಮಾಡಗಿ, ಶರಣು ಜಡಿ, ಅಂಬರೀಶ್ ಸಾತನೂರು, ಶೇಸಪ್ಪ ಬಡಿಗೇರ್ ಸೇರಿದಂತೆ ಅನೇಕ ಭಕ್ತಾದಿಗಳು ಮತ್ತು ಸಮಾಜದ ಮುಖಂಡರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶ್ರೀಗಳ ಆಶೀರ್ವಾದ ಪಡೆದರು.

ಬುಧವಾರ, ಏಪ್ರಿಲ್ 1, 2026

ಈಶ್ವರ ಖಂಡ್ರೆ ಅವರಿಗೆ ತಾಲ್ಲೂಕು ವೀರಶೈವ ಸಮಾಜದಿಂದ ಸನ್ಮಾನ.

ಚಿತ್ತಾಪುರ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಅರಣ್ಯ ಸಚಿವರಾದ ಈಶ್ವರ ಖಂಡ್ರೆ ಅವರನ್ನು ಚಿತ್ತಾಪುರ ತಾಲ್ಲೂಕು ವೀರಶೈವ ಸಮಾಜದ ವತಿಯಿಂದ ಬೆಂಗಳೂರಿನ ಅವರ ಗೃಹ ಕಚೇರಿಯಲ್ಲಿ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.

ತಾಲ್ಲೂಕು ವೀರಶೈವ ಸಮಾಜದ ಗೌರವಾಧ್ಯಕ್ಷರಾದ ಲಿಂಗಾರೆಡ್ಡಿ ಬಾಸರೆಡ್ಡಿ ಅವರ ನೇತೃತ್ವದಲ್ಲಿ ಸಚಿವರನ್ನು ಭೇಟಿ ಮಾಡಿದ ಮುಖಂಡರು, ಸಮಾಜಕ್ಕೆ ಅವರು ನೀಡುತ್ತಿರುವ ಕೊಡುಗೆ ಮತ್ತು ಸಂಘಟನಾತ್ಮಕ ಕಾರ್ಯಗಳನ್ನು ಶ್ಲಾಘಿಸಿ ಗೌರವ ಸಮರ್ಪಿಸಿದರು.

ಈ ಸಂದರ್ಭದಲ್ಲಿ ಸಮಾಜದ ಪ್ರಮುಖ ಮುಖಂಡರಾದ ವೀರಣ್ಣಗೌಡ ಪರಸರೆಡ್ಡಿ, ಶಿವಲಿಂಗಪ್ಪ ವಾಡೇದ್, ಸೋಮಶೇಖರ ಪಾಟೀಲ ಬೆಳಗುಂಪಾ, ರಮೇಶ್ ಮರಗೋಳ, ಶಿವಾನಂದ ಪಾಟೀಲ, ಜಗಣ್ಣಗೌಡ ರಾಮತೀರ್ಥ, ಶಾಂತಣ್ಣ ಚಾಳೀಕಾರ, ಅಣ್ಣಾರಾವ ಬಾಳಿ, ಆನಂದ ಪಾಟೀಲ ನರಿಬೋಳ, ಮಲ್ಲಿನಾಥ ಭಾಗೋಡಿ, ರವೀಂದ್ರರೆಡ್ಡಿ ಭಂಕಲಗಿ, ಸಿದ್ದಣ್ಣಗೌಡ ದಳಪತಿ ಹಾಗೂ ರವೀಂದ್ರ ರೆಡ್ಡಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಸಮಾಜದ ಸಂಘಟನೆ ಮತ್ತು ಅಭಿವೃದ್ಧಿ ವಿಷಯಗಳ ಕುರಿತು ಈ ವೇಳೆ ಸಚಿವರೊಂದಿಗೆ ಸಮಾಲೋಚನೆ ನಡೆಸಲಾಯಿತು ಎಂದು ತಿಳಿಸಿದ್ದಾರೆ.

ಏಪ್ರಿಲ್ 4ಕ್ಕೆ ಉಚಿತ ನೇತ್ರ ತಪಾಸಣೆ ಹಾಗೂ ಶಸ್ತ್ರಚಿಕಿತ್ಸೆ ಶಿಬಿರ.

ಚಿತ್ತಾಪುರ: ಪಟ್ಟಣದ ಕಂಬಳೇಶ್ವರ ಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ ಸೋಮಶೇಖರ ಶಿವಾಚಾರ್ಯರ 59ನೇ ಜನ್ಮದಿನದ ಅಂಗವಾಗಿ, ಸಾರ್ವಜನಿಕರಿಗಾಗಿ ಬೃಹತ್ ಉಚಿತ ನೇತ್ರ ತಪಾಸಣೆ, ಶಸ್ತ್ರಚಿಕಿತ್ಸೆ ಹಾಗೂ ಉಚಿತ ಕನ್ನಡಕ ವಿತರಣಾ ಶಿಬಿರವನ್ನು ಆಯೋಜಿಸಲಾಗಿದೆ.

ಯಾದಗಿರಿಯ ವೇದಾ ಕಣ್ಣಿನ ಆಸ್ಪತ್ರೆ ಹಾಗೂ ಕಲಬುರಗಿಯ ದೃಷ್ಟಿ ಕಣ್ಣಿನ ಆಸ್ಪತ್ರೆಯ ಸಹಯೋಗದೊಂದಿಗೆ, ಏಪ್ರಿಲ್ 4 ರಂದು ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 3:00 ಗಂಟೆಯವರೆಗೆ ಪಟ್ಟಣದ ಕಂಬಳೇಶ್ವರ ಕಲ್ಯಾಣ ಮಂಟಪದಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದು ಆಯೋಜಕರಾದ ಮಲ್ಲು ಇಂದೂರ ಹಾಗೂ ನಾಗರೆಡ್ಡಿ ಗೋಪಸೇನ್ ಅವರು ತಿಳಿಸಿದ್ದಾರೆ.

ಕಂಬಳೇಶ್ವರ ಮಠದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನುರಿತ ವೈದ್ಯರಿಂದ ಕಣ್ಣಿನ ಪರೀಕ್ಷೆಯ ಜೊತೆಗೆ ಬಿಪಿ (ರಕ್ತದೊತ್ತಡ) ಮತ್ತು ಶುಗರ್ (ಮಧುಮೇಹ) ತಪಾಸಣೆಯನ್ನೂ ಮಾಡಲಾಗುವುದು.ಅರ್ಹ ಫಲಾನುಭವಿಗಳಿಗೆ ಉಚಿತ ಕನ್ನಡಕ ವಿತರಣೆ ಹಾಗೂ ಅಗತ್ಯವಿರುವವರಿಗೆ ಶಸ್ತ್ರಚಿಕಿತ್ಸೆಯ ವ್ಯವಸ್ಥೆ ಮಾಡಲಾಗುವುದು.ಅಂದು ಸಂಜೆ 5:00 ಗಂಟೆಗೆ ಕಂಬಳೇಶ್ವರ ಶ್ರೀಗಳ 59ನೇ ಜನ್ಮ ದಿನೋತ್ಸವದ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ

"ತಾಲ್ಲೂಕಿನ ಸಾರ್ವಜನಿಕರು ಹಾಗೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಈ ಉಚಿತ ಆರೋಗ್ಯ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬೇಕು." 

— ಮಲ್ಲು ಇಂದೂರ ಹಾಗೂ ನಾಗರೆಡ್ಡಿ ಗೋಪಸೇನ್, ಆಯೋಜಕರು.

ಮಕ್ಕಳ ಕೈಗೆ ಮೊಬೈಲ್ ಬದಲಾಗಿ ಪುಸ್ತಕ ನೀಡಿ: ಕಂಬಳೇಶ್ವರ ಶ್ರೀಗಳು

ಚಿತ್ತಾಪುರ: "ಶಿಕ್ಷಣ ಸಂಸ್ಥೆಯೊಂದನ್ನು ನಡೆಸುವುದು ಹತ್ತು ಆನೆಗಳನ್ನು ಸಾಕಿದಂತೆ. ದೇಶದ ಭವಿಷ್ಯ ರೂಪಿಸುವ ಅತಿದೊಡ್ಡ ಶಕ್ತಿ ಶಾಲೆಗಳಲ್ಲಿದೆ," ಎಂದು ಕಂಬಳೇಶ್ವರ ಮಠದ  ಸೋಮಶೇಖರ ಶಿವಾಚಾರ್ಯರು ಅಭಿಪ್ರಾಯಪಟ್ಟರು.

ಪಟ್ಟಣದ ಮಾತೋಶ್ರೀ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಹಮ್ಮಿಕೊಂಡಿದ್ದ 15ನೇ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಸರಸ್ವತಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದ ಬಳಿಕ ಆಶೀರ್ವಚನ ನೀಡಿ ಮಾತನಾಡಿದ ಅವರು "ಬಡ ಮಕ್ಕಳ ಶಿಕ್ಷಣಕ್ಕಾಗಿ ಶ್ರಮಿಸುತ್ತಿರುವ ಮಾತೋಶ್ರೀ ಶಾಲೆಯ ಕಾರ್ಯ ಶ್ಲಾಘನೀಯ. ಪಾಲಕರು ಮಕ್ಕಳಿಗೆ ಮೊಬೈಲ್ ನೀಡಿ ಅವರ ಭವಿಷ್ಯ ಹಾಳು ಮಾಡಬಾರದು. ಅದರ ಬದಲಾಗಿ ಪುಸ್ತಕಗಳನ್ನು ನೀಡಿ ಅವರ ಬದುಕನ್ನು ಸಾರ್ಥಕಗೊಳಿಸಬೇಕು," ಎಂದು ಅವರು ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಪಿಎಲ್‌ಡಿ ಬ್ಯಾಂಕ್ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ ಮಾತನಾಡಿ, "ಹಿಂದುಳಿದ ಪ್ರದೇಶದ ಬಡ ಮಕ್ಕಳಿಗಾಗಿ ಶಿಕ್ಷಣ ಸಂಸ್ಥೆ ನಡೆಸುತ್ತಿರುವುದು ಪುಣ್ಯದ ಕೆಲಸ. ಇಂತಹ ಸಂಸ್ಥೆಗಳಿಗೆ ಸಾರ್ವಜನಿಕರ ಸಹಕಾರ ಅತ್ಯಗತ್ಯ. ಮುಂಬರುವ ದಿನಗಳಲ್ಲಿ ಶಾಲೆಯ ಅಭಿವೃದ್ಧಿಗೆ ವೈಯಕ್ತಿಕವಾಗಿ ಬೆಂಬಲ ನೀಡಲಾಗುವುದು," ಎಂದು ಭರವಸೆ ನೀಡಿದರು.
ಶಾಲೆಯ ಮುಖ್ಯಗುರುಗಳಾದ ಜಗದೇವ ಕುಂಬಾರ ಅವರು ವಾರ್ಷಿಕ ವರದಿ ವಾಚಿಸಿ, "2025-26ನೇ ಸಾಲಿನಲ್ಲಿ ಶಾಲೆಯು ಅತ್ಯುತ್ತಮ ಫಲಿತಾಂಶ ಪಡೆದಿದೆ. ಮಕ್ಕಳಲ್ಲಿ ಕೌಶಲ ಬೆಳೆಸಲು 'ನಿರಂತರ ಕಲಿಕೆ' ಎಂಬ ವಿಶೇಷ ತರಗತಿಗಳನ್ನು ನಡೆಸಲಾಗುತ್ತಿದೆ. ಶಿಕ್ಷಕರ ಅವಿರತ ಶ್ರಮದಿಂದ ಶಾಲೆಯು ಪ್ರಗತಿಯ ಪಥದಲ್ಲಿ ಸಾಗುತ್ತಿದೆ," ಎಂದರು.

ಕಸಾಪ ಮಾಜಿ ಅಧ್ಯಕ್ಷ ವೀರೇಂದ್ರ ಕೊಲ್ಲೂರ, ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ಅಧ್ಯಕ್ಷ ರೇವಣಸಿದ್ದಪ್ಪ ರೋಣದ, ಪ್ರಗತಿ ಪರ ರೈತ ಅಂಬರೀಶ್ ಕಲ್ಲಶೆಟ್ಟಿ, ಮಾಜಿ ಪುರಸಭೆ ಸದಸ್ಯ ವಿಶ್ವನಾಥ ಕಾಶಿ, ಪತ್ರಕರ್ತ ಚಂದ್ರಶೇಖರ ಬಳ್ಳಾ, ಕೊಲಿ ಸಮಾಜ ನಗರ ಅಧ್ಯಕ್ಷ ಬಸವರಾಜ ಮೈನಾಳಕರ್, ವೇದಿಕೆಯಲ್ಲಿ ಇದ್ದರು.

ಈ ಸಂದರ್ಭದಲ್ಲಿ ಶಿಕ್ಷಕರಾದ ಅಂಬರೀಶ್ ಭೋವಿ, ವಿಶ್ವನಾಥ ಕುಂಬಾರ, ಶೇಷಪ್ಪ ಬಡಿಗೇರ್, ಕಾಸಿಂ ಅಲಿ, ಶ್ರೀಮತಿ ಫೈಮುದ್ ಬೇಗಂ, ಶ್ರೀಮತಿ ಸುಜಾತಾ ಜೆ ಕುಂಬಾರ, ಶ್ರೀಮತಿ ಸುನಿತಾ, ಶಮರಿನ್ ಬೇಗಂ, ಶ್ರೀದೇವಿ, ಇದ್ದರು. ನಿರೂಪಣೆ ಶಿಕ್ಷಕ ನರಸಪ್ಪ ಚಿನ್ನಕಟ್ಟಿ ನೆರವೇರಿಸಿದರು.

ಕಾರ್ಯಕ್ರಮ ನಂತರ ಶಾಲೆಯ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ನೃತ್ಯ, ನಾಟಕ, ನಡೆದವು ನೃತ್ಯಗಳು ಪಾಲಕರ ಕಣ್ಮನ ಸೆಳೆದವು,

ಶ್ರೀಗಳ ಜನ್ಮದಿನದ ಸವಿನೆನಪು: ಗೋಶಾಲೆಗೆ ಕಣಕಿ ದೇಣಿಗೆ

ಚಿತ್ತಾಪುರ: ಪಟ್ಟಣದ ಧಾರ್ಮಿಕ ಮತ್ತು ಸಾಮಾಜಿಕ ಚಟುವಟಿಕೆಗಳ ಕೇಂದ್ರಬಿಂದುವಾಗಿರುವ ಕಂಬಳೇಶ್ವರ ಮಠದ ಪೀಠಾಧಿಪತಿಗಳಾದ ಶ್ರೀ ಸೋಮಶೇಖರ ಶಿವಾಚಾರ್ಯರ 59ನೇ ಜ...