ಚಿತ್ತಾಪುರ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಅರಣ್ಯ ಸಚಿವರಾದ ಈಶ್ವರ ಖಂಡ್ರೆ ಅವರನ್ನು ಚಿತ್ತಾಪುರ ತಾಲ್ಲೂಕು ವೀರಶೈವ ಸಮಾಜದ ವತಿಯಿಂದ ಬೆಂಗಳೂರಿನ ಅವರ ಗೃಹ ಕಚೇರಿಯಲ್ಲಿ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.
ತಾಲ್ಲೂಕು ವೀರಶೈವ ಸಮಾಜದ ಗೌರವಾಧ್ಯಕ್ಷರಾದ ಲಿಂಗಾರೆಡ್ಡಿ ಬಾಸರೆಡ್ಡಿ ಅವರ ನೇತೃತ್ವದಲ್ಲಿ ಸಚಿವರನ್ನು ಭೇಟಿ ಮಾಡಿದ ಮುಖಂಡರು, ಸಮಾಜಕ್ಕೆ ಅವರು ನೀಡುತ್ತಿರುವ ಕೊಡುಗೆ ಮತ್ತು ಸಂಘಟನಾತ್ಮಕ ಕಾರ್ಯಗಳನ್ನು ಶ್ಲಾಘಿಸಿ ಗೌರವ ಸಮರ್ಪಿಸಿದರು.
ಈ ಸಂದರ್ಭದಲ್ಲಿ ಸಮಾಜದ ಪ್ರಮುಖ ಮುಖಂಡರಾದ ವೀರಣ್ಣಗೌಡ ಪರಸರೆಡ್ಡಿ, ಶಿವಲಿಂಗಪ್ಪ ವಾಡೇದ್, ಸೋಮಶೇಖರ ಪಾಟೀಲ ಬೆಳಗುಂಪಾ, ರಮೇಶ್ ಮರಗೋಳ, ಶಿವಾನಂದ ಪಾಟೀಲ, ಜಗಣ್ಣಗೌಡ ರಾಮತೀರ್ಥ, ಶಾಂತಣ್ಣ ಚಾಳೀಕಾರ, ಅಣ್ಣಾರಾವ ಬಾಳಿ, ಆನಂದ ಪಾಟೀಲ ನರಿಬೋಳ, ಮಲ್ಲಿನಾಥ ಭಾಗೋಡಿ, ರವೀಂದ್ರರೆಡ್ಡಿ ಭಂಕಲಗಿ, ಸಿದ್ದಣ್ಣಗೌಡ ದಳಪತಿ ಹಾಗೂ ರವೀಂದ್ರ ರೆಡ್ಡಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಸಮಾಜದ ಸಂಘಟನೆ ಮತ್ತು ಅಭಿವೃದ್ಧಿ ವಿಷಯಗಳ ಕುರಿತು ಈ ವೇಳೆ ಸಚಿವರೊಂದಿಗೆ ಸಮಾಲೋಚನೆ ನಡೆಸಲಾಯಿತು ಎಂದು ತಿಳಿಸಿದ್ದಾರೆ.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ