ಜನತೆಯ ಸುದ್ದಿ ವಾಹಿನಿ

ಬುಧವಾರ, ಏಪ್ರಿಲ್ 8, 2026

ತರಕಾರಿ ಬೀಜಗಳ ಕಿಟ್ ವಿತರಣಾ ಕಾರ್ಯಕ್ರಮ: ಸಚಿವ ಪ್ರಿಯಾಂಕ್ ಖರ್ಗೆ ಚಾಲನೆ.

ಚಿತ್ತಾಪುರ: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (KKRDB) ಹಾಗೂ ತೋಟಗಾರಿಕೆ ಇಲಾಖೆ ಕಲಬುರ್ಗಿ ಇವರ ಸಂಯುಕ್ತ ಆಶ್ರಯದಲ್ಲಿ ಏಪ್ರಿಲ್ 9ರಂದು ಮಧ್ಯಾಹ್ನ 1 ಗಂಟೆಗೆ ಪಟ್ಟಣದ ಬಜಾಜ್ ಕಲ್ಯಾಣ ಮಂಟಪದಲ್ಲಿ "ತರಕಾರಿ ಬೀಜಗಳ ಕಿಟ್ ವಿತರಣಾ ಕಾರ್ಯಕ್ರಮ"ವನ್ನು ಆಯೋಜಿಸಲಾಗಿದೆ ಎಂದು ತೋಟಗಾರಿಕೆ ಇಲಾಖೆಯ ಹಿರಿಯ ನಿರ್ದೇಶಕರಾದ ರಾಜಕುಮಾರ್ ಗೋವಿನ್ ಅವರು ತಿಳಿಸಿದ್ದಾರೆ.

ಕಾರ್ಯಕ್ರಮದ ಉದ್ಘಾಟನೆ ಮತ್ತು ಅಧ್ಯಕ್ಷತೆಯನ್ನು ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಹಾಗೂ ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಎಂ. ಖರ್ಗೆ ಅವರು ವಹಿಸಲಿದ್ದಾರೆ. ಜೂತೆಗೆ  ವೈದ್ಯಕೀಯ ಶಿಕ್ಷಣ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರು.ಡಾ. ಶರಣಪ್ರಕಾಶ್ ಪಾಟೀಲ್,  ತೋಟಗಾರಿಕೆ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್, ಕೆಕೆಆರ್ಡಿಬಿ ಅಧ್ಯಕ್ಷರು ಹಾಗೂ ಜೇವರ್ಗಿ ಶಾಸಕರು.ಡಾ. ಅಜಯಸಿಂಗ್,ಆಳಂದ್ ಶಾಸಕರಾದ ಬಿ.ಆರ್. ಪಾಟೀಲ್,  ಕಲಬುರ್ಗಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀಮತಿ ಖನೀಜಾ ಫಾತಿಮಾ, ಇವರೊಂದಿಗೆ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಜಿಲ್ಲಾ ಪಂಚಾಯತ್ ಸಿಇಒ ಭಂವರ್ ಸಿಂಗ್ ಮೀನಾ, ಜಿಲ್ಲಾ ತೋಟಗಾರಿಕೆ ಜಂಟಿ ನಿರ್ದೇಶಕರಾದ ಸಂತೋಷ್ ಇನಾಮದಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರ್ ಶ್ರೀನಿವಾಸಲು ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ವಿಶೇಷ ಆಹ್ವಾನಿತರು ಭಾಗವಹಿಸಲಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಹಿರಿಯ ನಿರ್ದೇಶಕ ರಾಜಕುಮಾರ್ ಗೋವಿನ್ ಅವರು, "ಸ್ಥಳೀಯವಾಗಿ ತರಕಾರಿ ಉತ್ಪಾದನೆಯನ್ನು ಉತ್ತೇಜಿಸಲು ಮತ್ತು ರೈತರಿಗೆ ನೆರವಾಗಲು ಈ ಕಿಟ್ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ತಾಲೂಕಿನ ರೈತರು, ಸಾರ್ವಜನಿಕರು ಹಾಗೂ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು," ಎಂದು ವಿನಂತಿಸಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಪ್ರಿಯಾಂಕ್ ಖರ್ಗೆ ಅವರಿಗೆ ಡಿಸಿಎಂ ಹುದ್ದೆ ನೀಡಲು ಆನಂದ್ ಯರಗಲ್ ಆಗ್ರಹ

  ಚಿತ್ತಾಪುರ: ರಾಜ್ಯ ಸರ್ಕಾರದಲ್ಲಿ ಸಚಿವರಾಗಿ ಅತ್ಯುತ್ತಮ ಆಡಳಿತ ನೀಡುತ್ತಿರುವ ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಉಪಮುಖ್ಯಮಂತ್ರಿ (ಡಿಸಿಎ...