ಬುಧವಾರ, ಏಪ್ರಿಲ್ 22, 2026

ಸಮಾಜಕ್ಕಾಗಿ ಬದುಕಿದಾಗ ಮಾತ್ರ ಜೀವನ ಸಾರ್ಥಕ: ಹಿರೇಮಠ.

ಚಿತ್ತಾಪುರ: ನಮ್ಮ ಜೀವನವನ್ನು ಕೇವಲ ಸ್ವಂತಕ್ಕಾಗಿ ಸೀಮಿತಗೊಳಿಸದೆ ಸಮಾಜಕ್ಕಾಗಿ ಮುಡಿಪಾಗಿಟ್ಟಾಗ ಮಾತ್ರ ಅದು ಸಾರ್ಥಕತೆ ಪಡೆಯುತ್ತದೆ ಎಂದು ತಹಸೀಲ್ದಾ‌ರ್ ನಾಗಯ್ಯ ಹಿರೇಮಠ ಅವರು ಅಭಿಪ್ರಾಯಪಟ್ಟರು.

ಪಟ್ಟಣದ ಪ್ರಜಾ ಸೌಧದ ಆವರಣದಲ್ಲಿ ತಾಲೂಕು ಆಡಳಿತದ ವತಿಯಿಂದ ಹಮ್ಮಿಕೊಂಡಿದ್ದ ಶ್ರೀ ಶಂಕರಾಚಾರ್ಯರ ಜಯಂತಿ ಕಾರ್ಯಕ್ರಮದಲ್ಲಿ ಶಂಕರಾಚಾರ್ಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು "ನಾವು ಪ್ರತಿನಿತ್ಯ ಸ್ವಾರ್ಥಕ್ಕಾಗಿ ಬದುಕುತ್ತಿದ್ದೇವೆ. ಆದರೆ ಹಿಂದಿನ ಮಹಾಪುರುಷರು ಸಂಸಾರ ಮತ್ತು ಸಂಬಂಧಗಳನ್ನು ಬದಿಗಿಟ್ಟು ಸಮಾಜ ಹಾಗೂ ಧರ್ಮದ ಉಳಿವಿಗಾಗಿ ಶ್ರಮಿಸಿದ್ದಾರೆ. ತಮ್ಮ ಜೀವನವನ್ನೇ ಧಾರೆ ಎರೆದ ಕಾರಣಕ್ಕೆ ಇಂದು ನಾವು ಅವರ ಜಯಂತಿಯನ್ನು ಗೌರವಪೂರ್ವಕವಾಗಿ ಆಚರಿಸುತ್ತಿದ್ದೇವೆ. ಅವರ ತತ್ವ ಸಿದ್ಧಾಂತಗಳನ್ನು ಪಾಲಿಸುವ ಮೂಲಕ ನಾವು ಕೂಡ ಸಮಾಜಮುಖಿಯಾಗಿ ಬದುಕಬೇಕು," ಎಂದು ಅವರು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಕುಮಾರಿ ಅಕ್ಷತಾ ಜಾನೀಬ್ ಅವರು ಶಂಕರಾಚಾರ್ಯರ ಜೀವನ ಚರಿತ್ರೆಯ ಕುರಿತು ಉಪನ್ಯಾಸ ನೀಡಿದರು. ವಿಪ್ರ ಸಮಾಜದ ಕೋಶಾಧ್ಯಕ್ಷ ಜಯಂತ ಮಾಲಗತ್ತಿ ಅವರು ಮಾತನಾಡಿ, ಶಂಕರಾಚಾರ್ಯರ ಕೊಡುಗೆಯನ್ನು ಸ್ಮರಿಸಿದರು.

ಈ ಸಂದರ್ಭದಲ್ಲಿ ಗ್ರೇಡ್ 2 ತಹಸೀಲ್ದಾರ್ ರಾಜಕುಮಾರ್ ಮರತೂರಕರ್, ಅಶ್ವತ್ಥ ನಾರಾಯಣ ಕುಲಕರ್ಣಿ, ಉಪ ನೋಂದಣಾಧಿಕಾರಿ ಆನಂದರಾವ್ ಕುಲಕರ್ಣಿ ಸೇರಿದಂತೆ
ತಾಲೂಕು ಗೌರವ ಅಧ್ಯಕ್ಷ ದೇವಿದಾಸ್ ಕುಲಕರ್ಣಿ, ತಾಲೂಕು ಅಧ್ಯಕ್ಷರು ಗಿರೀಶ್ ಜಾನೀಬ್, ಉಪಾಧ್ಯಕ್ಷ ವಿಶ್ವನಾಥ ಅಫಜಲಪುರಕರ್, ಹಣಮೇಶ್ ಆಚಾರ್ಯ, ಭೀಮರಾವ್ ಅಫಜಲಪುರಕರ್, ಗೌತಮ್ ನಾಯಕ್, ಗೋಪಾಲ್ ಹಾಗೂ ವಿಪ್ರ ಸಮಾಜದ ಮಹಿಳಾ ಮುಖಂಡರಾದ ಸರೋಜಾ ಅಫಜಲಪುರಕರ್, ಶೃತಿ ಜಾನೀಬ್, ಸಕ್ಕುಬಾಯಿ ಕುಲಕರ್ಣಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಸಮಾಜಕ್ಕಾಗಿ ಬದುಕಿದಾಗ ಮಾತ್ರ ಜೀವನ ಸಾರ್ಥಕ: ಹಿರೇಮಠ.

ಚಿತ್ತಾಪುರ: ನಮ್ಮ ಜೀವನವನ್ನು ಕೇವಲ ಸ್ವಂತಕ್ಕಾಗಿ ಸೀಮಿತಗೊಳಿಸದೆ ಸಮಾಜಕ್ಕಾಗಿ ಮುಡಿಪಾಗಿಟ್ಟಾಗ ಮಾತ್ರ ಅದು ಸಾರ್ಥಕತೆ ಪಡೆಯುತ್ತದೆ ಎಂದು ತಹಸೀಲ್ದಾ‌ರ್ ...