ಚಿತ್ತಾಪುರ: ಪಟ್ಟಣದ ಪ್ರಜಾ ಸೌಧದಲ್ಲಿ ಗುರುವಾರ ಮಾನ್ಯ ತಹಸೀಲ್ದಾರರ ಅಧ್ಯಕ್ಷತೆಯಲ್ಲಿ ಶ್ರೀ ಭಗೀರಥ ಮಹರ್ಷಿ ಅವರ ಜಯಂತಿಯನ್ನು ಅತ್ಯಂತ ಸಡಗರ ಹಾಗೂ ಭಕ್ತಿಭಾವದಿಂದ ಆಚರಿಸಲಾಯಿತು.
ಕಾರ್ಯಕ್ರಮದ ಕುರಿತು ಪ್ರಮುಖರಾದ ಅಂಬರೀಶ ಸುಲೇಗಾಂವ ಅವರು ಪ್ರಾಸ್ತವಿಕವಾಗಿ ಮಾತನಾಡಿ, "ತಮ್ಮ ಕಠಿಣ ತಪಸ್ಸಿನ ಮೂಲಕ ಗಂಗೆಯನ್ನು ಭೂಮಿಗೆ ತಂದ ಭಗೀರಥ ಮಹರ್ಷಿಗಳು ದೃಢ ಸಂಕಲ್ಪದ ಸಂಕೇತ. ಅವರ ಜೀವನ ಮತ್ತು ಸಾಧನೆ ಇಂದಿನ ಪೀಳಿಗೆಗೆ ಮಾದರಿಯಾಗಿದೆ," ಎಂದು ತಿಳಿಸಿದರು.
ಅಧ್ಯಕ್ಷತೆಯ ನುಡಿಗಳನ್ನಾಡಿದ ತಹಸೀಲ್ದಾರ ನಾಗಯ್ಯ ಹಿರೇಮಠ ಮಹರ್ಷಿಗಳ ಜೀವನ ಸಂದೇಶವನ್ನು ಸ್ಮರಿಸುತ್ತಾ, ಸಮಾಜದ ಅಭಿವೃದ್ಧಿಯಲ್ಲಿ ಪ್ರತಿಯೊಬ್ಬರ ಪಾಲ್ಗೊಳ್ಳುವಿಕೆ ಅತ್ಯಗತ್ಯ ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಉಪ್ಪಾರ ಸಮಾಜದ ಅಧ್ಯಕ್ಷರಾದ ಶ್ರೀ ಶ್ರೀನಿವಾಸ ಹಳ್ಳಿ, ಪ್ರಮುಖ ಮುಖಂಡರಾದ ಲಕ್ಷ್ಮಣ ಟಳ್ಳಿ, ಮಲ್ಲಿಕಾರ್ಜುನ ಉಪ್ಪಾರ, ಗೋವಿಂದಪ್ಪ ಜಡಿ, ಭೀಮರಾಯ ಉಪ್ಪಾರ, ಹಾಗೂ ಶರಣಪ್ಪ ಬೀಮನಹಳ್ಳಿ ಸೇರಿದಂತೆ ಸಮಾಜದ ಮುಖಂಡರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ