ಶುಕ್ರವಾರ, ಏಪ್ರಿಲ್ 17, 2026

ಕುಂಬಾರ ಮಹಾಸಭಾದ ನೂತನ ಅಧ್ಯಕ್ಷ ಹಾಗೂ ಪದಾಧಿಕಾರಿಗಳಿಗೆ ಅದ್ಧೂರಿ ಸನ್ಮಾನ.

ಚಿತ್ತಾಪುರ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಅಖಿಲ ಭಾರತ ಕುಂಬಾರ ಮಹಾಸಭಾದ ತಾಲ್ಲೂಕು ಘಟಕದ ಸಭೆಯಲ್ಲಿ, ನೂತನವಾಗಿ ಆಯ್ಕೆಯಾದ ಅಧ್ಯಕ್ಷರಿಗೆ ಹಾಗೂ ವಿವಿಧ ಪದಾಧಿಕಾರಿಗಳಿಗೆ ಕುಂಬಾರ ಸಮಾಜದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.​ಅಖಿಲ ಭಾರತ ಕುಂಬಾರ ಮಹಾಸಭಾದ ತಾಲೂಕು ಅಧ್ಯಕ್ಷರಾಗಿ ನೇಮಕಗೊಂಡ ವಿಶ್ವನಾಥ ಎಸ್. ಕುಂಬಾರ ಅವರಿಗೆ ಸಮಾಜದ ಮುಖಂಡರು ಶಾಲು ಹೊದಿಸಿ, ಮಾಲಾರ್ಪಣೆ ಮಾಡಿ ಶುಭ ಹಾರೈಸಿದರು.
​ಅಧ್ಯಕ್ಷರ ಜೊತೆಗೆ ಸಂಘದ ವಿವಿಧ ಜವಾಬ್ದಾರಿಗಳಿಗೆ ಆಯ್ಕೆಯಾದ ಈ ಕೆಳಗಿನ ಪ್ರಮುಖರನ್ನು ಸಹ ಇದೇ ಸಂದರ್ಭದಲ್ಲಿ ಗೌರವಿಸಲಾಯಿತು ​ಗೌರವ ಅಧ್ಯಕ್ಷರಾಗಿ ಮಹಾದೇವ ಕುಂಬಾರ ಅಲ್ಲೂರ, ಮೋಗಲಪ್ಪ ಕುಂಬಾರ ಚಿತ್ತಾಪುರ, ಮಹಾದೇವ ಕುಂಬಾರ.​ಉಪಾಧ್ಯಕ್ಷರಾಗಿ ಆನಂದ ಕುಂಬಾರ ಚಿತ್ತಾಪುರ.​ಸಹ ಕಾರ್ಯದರ್ಶಿ ಬಸವರಾಜ ಕುಂಬಾರ. ನೇಮಕಗೊಂಡಿದ್ದಾರೆ.

​ಸನ್ಮಾನ ಸ್ವೀಕರಿಸಿ ಮಾತನಾಡಿದ ನೂತನ ಅಧ್ಯಕ್ಷ ವಿಶ್ವನಾಥ ಕುಂಬಾರ ಅವರು, ಸಮಾಜ ಬಾಂಧವರು ತನ್ನ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಂಡು, ತಾಲ್ಲೂಕಿನಲ್ಲಿ ಕುಂಬಾರ ಸಮಾಜದ ಏಳಿಗೆಗಾಗಿ ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ತಿಳಿಸಿದರು.

​ಅಖಿಲ ಭಾರತ ಕುಂಬಾರ ಮಹಾಸಭಾ ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ಜಗದೇವ ಕುಂಬಾರ ಮಾತನಾಡಿ, ಸಂಘಟನೆಯ ಶಕ್ತಿ ಒಗ್ಗಟ್ಟಿನಲ್ಲಿದೆ. ಪದಾಧಿಕಾರಿಗಳು ಸಮಾಜದ ಶೈಕ್ಷಣಿಕ ಹಾಗೂ ಆರ್ಥಿಕ ಪ್ರಗತಿಗೆ ಒತ್ತು ನೀಡಬೇಕು ಎಂದು ಕರೆ ನೀಡಿದರು.

​ಈ ಸಮಾರಂಭದಲ್ಲಿ ಶ್ರೀಮಂತ ಕುಂಬಾರ, ಮಹಾದೇವ ಕುಂಬಾರ, ಬಸವರಾಜ ಕುಂಬಾರ, ಶರಣಪ್ಪ ಕುಂಬಾರ ಕರದಾಳ, ಶರಣಪ್ಪ ಕುಂಬಾರ, ಸಂಗಮೇಶ ಕುಂಬಾರ, ಆನಂದ ಮುಡಬೂಳಕರ್ ಕುಂಬಾರ, ರಾಜು ಕುಂಬಾರ, ಅಂಬರೀಶ್ ಕುಂಬಾರ, ರವಿ ಕುಂಬಾರ, ಮಲ್ಲಿಕಾರ್ಜುನ ಕುಂಬಾರ ಅಲ್ಲೂರ, ಮಲ್ಲಿಕಾರ್ಜುನ ಕುಂಬಾರ, ಸಿದ್ದಣ್ಣ ಕುಂಬಾರ, ಸುಭಾಷ ಕುಂಬಾರ, ಜಗದೀಶ್ ಕುಂಬಾರ, ಬಂಡೆಪ್ಪ ಕುಂಬಾರ, ಶರಣಪ್ಪ ಕುಂಬಾರ, ಶರಣಪ್ಪ ಎನ್. ಕುಂಬಾರ, ಮಲ್ಲಿಕಾರ್ಜುನ ಕುಂಬಾರ, ದಶರಥ್ ಕುಂಬಾರ, ಕಾಶಿನಾಥ್ ಕುಂಬಾರ ಬೆಣ್ಣೂರ, ಗುರುರಾಜ್ ಕುಂಬಾರ ಸೇರಿದಂತೆ ಸಮಾಜದ ನೂರಾರು ಕುಲಬಾಂಧವರು ಪಾಲ್ಗೊಂಡಿದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಕುಂಬಾರ ಮಹಾಸಭಾದ ನೂತನ ಅಧ್ಯಕ್ಷ ಹಾಗೂ ಪದಾಧಿಕಾರಿಗಳಿಗೆ ಅದ್ಧೂರಿ ಸನ್ಮಾನ.

ಚಿತ್ತಾಪುರ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಅಖಿಲ ಭಾರತ ಕುಂಬಾರ ಮಹಾಸಭಾದ ತಾಲ್ಲೂಕು ಘಟಕದ ಸಭೆಯಲ್ಲಿ, ನೂತನವಾಗಿ ಆಯ್ಕೆಯಾದ ಅ...