ಮಂಗಳವಾರ, ಏಪ್ರಿಲ್ 7, 2026

ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಟೀಕೆ: ಮಣಿಕಂಠ ರಾಠೋಡ್ ನಡೆಗೆ ಜಗದೀಶ ಚವ್ಹಾಣ ತೀವ್ರ ಆಕ್ರೋಶ

ಚಿತ್ತಾಪುರ: ಸಮಾಜ ಸೇವೆಯ ಹೆಸರಿನಲ್ಲಿ ಮೋಜು-ಮಸ್ತಿ ಮಾಡುತ್ತಾ, ಸಮುದಾಯಗಳ ನಡುವೆ ದ್ವೇಷ ಬಿತ್ತುವ ಕೆಲಸ ಮಾಡುತ್ತಿರುವ ಮಣಿಕಂಠ ರಾಠೋಡ್ ಅವರಿಗೆ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಟೀಕಿಸುವ ಯಾವುದೇ ನೈತಿಕತೆ ಇಲ್ಲ ಎಂದು ಪುರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಯುವ ಮುಖಂಡ ಜಗದೀಶ ಚವ್ಹಾಣ ಕಿಡಿಕಾರಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಮಣಿಕಂಠ ರಾಠೋಡ್ ಅವರ ನಡೆಯನ್ನು ಕಟುವಾಗಿ ಟೀಕಿಸಿ ಮಾತನಾಡಿದ ಅವರು  ಚುನಾವಣೆಯ ಮುಂಚೆ ಚಿತ್ತಾಪುರದಲ್ಲಿ ಅನೇಕ ಮಂದಿರಗಳನ್ನು ಕಟ್ಟಿಸಿಕೊಡುತ್ತೇನೆ ಎಂದು ನಂಬಿಸಿದ ಮಣಿಕಂಠ, ಇದ್ದ ಮಂದಿರಗಳನ್ನೇ ಬೀಳಿಸಿ ಇಂದಿಗೂ ಅವು ಹಾಳಾಗಿ ಬಿದ್ದಿರುವಂತೆ ಮಾಡಿದ್ದಾರೆ. ಇವರ ಮಾತನ್ನು ನಂಬಿ ದೇವಸ್ಥಾನದ ಪೂಜಾರಿಗಳು ಹಾಗೂ ಭಕ್ತರು ಇಂದು ಮೋಸ ಹೋಗಿದ್ದಾರೆ.

ಕನಿಷ್ಠ ಒಬ್ಬ ಗ್ರಾಮ ಪಂಚಾಯತಿ ಸದಸ್ಯನನ್ನು ಸೋಲಿಸುವ ಯೋಗ್ಯತೆ ಇಲ್ಲದ ಇವರು ಪ್ರಧಾನಿಯಾಗುವ ಮಾತುಗಳನ್ನಾಡುತ್ತಿದ್ದಾರೆ. ಸಂವಿಧಾನದ ಅರಿವಾಗಲಿ ಅಥವಾ ಮೀಸಲಾತಿಯ ಬಗ್ಗೆ ಗೌರವವಾಗಲಿ ಇವರಿಗಿಲ್ಲ. ಯಾವ ಮೀಸಲಾತಿಯಿಂದ ಶಾಸಕ ಸ್ಥಾನಕ್ಕೆ ಸ್ಪರ್ಧಿಸಿದ್ದರೋ, ಅದೇ ಮೀಸಲಾತಿಯನ್ನು ರದ್ದುಪಡಿಸುತ್ತೇನೆ ಎಂದು ಹೇಳುವುದು ಇವರ ಅಜ್ಞಾನಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲೇ ಇವರ ನಡವಳಿಕೆಯಿಂದಾಗಿ ಇವರನ್ನು 'ತಡಿಪಾರ್' ಮಾಡಲಾಗಿತ್ತು. ಇಂತಹ ವ್ಯಕ್ತಿ ಇಂದು ಪ್ರಬುದ್ಧ ರಾಜಕಾರಣಿ ಪ್ರಿಯಾಂಕ್ ಖರ್ಗೆ ಅವರ ಬಗ್ಗೆ ಮಾತನಾಡುವುದು ಹಾಸ್ಯಾಸ್ಪದ.

ಸಚಿವ ಪ್ರಿಯಾಂಕ್ ಖರ್ಗೆ ಅವರು ಜ್ಞಾನ ಭಂಡಾರವುಳ್ಳ, ಸಂವಿಧಾನವನ್ನು ಅರಿತ ಹಾಗೂ ಜನರ ಸಮಸ್ಯೆಗಳಿಗೆ ಸ್ಪಂದಿಸುವ ನಾಯಕರು. ರಾಜ್ಯದ ಮೂರು ಪ್ರಮುಖ ಖಾತೆಗಳನ್ನು ನಿಭಾಯಿಸುತ್ತಿರುವ ಅವರ ಜೊತೆ ಚಿತ್ತಾಪುರ ಮತ್ತು ಕಲಬುರಗಿಯ ಸಮಸ್ತ ಪ್ರಜ್ಞಾವಂತ ಮತದಾರರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸದಾ ಇರುತ್ತಾರೆ ಎಂದು ಜಗದೀಶ ಚವ್ಹಾಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಅರಿವಿನ ಗವಿಯಲ್ಲಿ ಮೂರ್ತಿ ಪ್ರತಿಷ್ಠಾಪನೆಗೆ ಆಗ್ರಹ: ಸಿಎಂಗೆ ಮನವಿ.

ಚಿತ್ತಾಪುರ: ಬೀದರ್ ಜಿಲ್ಲೆಯ ಬಸವಕಲ್ಯಾಣದ ತ್ರಿಪುರಾಂತಕ ಕೆರೆ ಬಳಿಯಿರುವ ಹನ್ನೆರಡನೇ ಶತಮಾನದ ಶಿವಶರಣ ಹಡಪದ ಅಪ್ಪಣ್ಣನವರ ಅರಿವಿನ ಗವಿಯಲ್ಲಿ ಅಕ್ರಮವಾಗಿ ...