ಭಾನುವಾರ, ಏಪ್ರಿಲ್ 5, 2026

ಸಮಾಜಮುಖಿ ಕಾರ್ಯಗಳಿಂದ ಜನ್ಮದಿನಕ್ಕೆ ಸಾರ್ಥಕತೆ: ಕಂಬಳೇಶ್ವರ ಶ್ರೀ.

ಚಿತ್ತಾಪುರ: ಜನ್ಮದಿನೋತ್ಸವವು ಕೇವಲ ಆಚರಣೆಯಾಗದೆ, ಬಡವರು, ದೀನದಲಿತರಿಗೆ ಹಾಗೂ ಸಮಾಜಕ್ಕೆ ಅನುಕೂಲವಾದಾಗ ಮಾತ್ರ ಅದಕ್ಕೊಂದು ಅರ್ಥ ಬರಲಿದೆ ಎಂದು ಕಂಬಳೇಶ್ವರ ಮಠದ ಶ್ರೀ ಸೋಮಶೇಖರ ಶಿವಾಚಾರ್ಯರು ತಿಳಿಸಿದರು.

ಪಟ್ಟಣದ ಕಂಬಳೇಶ್ವರ ಕಲ್ಯಾಣ ಮಂಟಪದಲ್ಲಿ ಶನಿವಾರ ರಾತ್ರಿ ಹಮ್ಮಿಕೊಂಡಿದ್ದ ತಮ್ಮ 59ನೇ ಜನ್ಮ ದಿನೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು ಜನ್ಮದಿನದ ಅಂಗವಾಗಿ ಭಕ್ತರು ಉಚಿತ ಕಣ್ಣಿನ ತಪಾಸಣೆ ಹಾಗೂ ಕನ್ನಡಕ ವಿತರಣಾ ಶಿಬಿರ ಹಮ್ಮಿಕೊಂಡಿರುವುದು ಶ್ಲಾಘನೀಯ. ಸಂಪತ್ತನ್ನು ಸತ್ಕಾರ್ಯಕ್ಕೆ ಬಳಸಿದಾಗ ಮಾತ್ರ ನಿಜವಾದ ತುಲಾಭಾರಕ್ಕೆ ಬೆಲೆ ಬರುತ್ತದೆ ಎಂದು ಶ್ರೀಗಳು ಅಭಿಪ್ರಾಯಪಟ್ಟರು.

ಹಾನಗಲ್ಲ ಕುಮಾರೇಶ್ವರರ ವಾಣಿಯಂತೆ, ಭಕ್ತರ ದೇಣಿಗೆ ಹಾಗೂ ಸರ್ಕಾರದ ಅನುದಾನದ ಸದ್ಬಳಕೆ ಮಾಡಿಕೊಂಡು ಶಿಥಿಲವಾಗಿದ್ದ ಮಠವನ್ನು ಇಂದು ಮಾದರಿಯಾಗಿ ಕಟ್ಟಲಾಗಿದೆ ಎಂದು ಸ್ಮರಿಸಿದರು.
ದಿಗಾಂವದ ಶ್ರೀ ಸಿದ್ದವೀರ ಶಿವಾಚಾರ್ಯರು ಮಾತನಾಡಿ, ಸೋಮಶೇಖರ ಶ್ರೀಗಳು ಕಲ್ಯಾಣ ಕರ್ನಾಟಕದ ಅತ್ಯುತ್ತಮ ವಾಗ್ಮಿಗಳು ಎಂದು ಬಣ್ಣಿಸಿದರು. ಸೇಡಂನ ಶ್ರೀ ಶಿವಶಂಕರ ಶಿವಾಚಾರ್ಯರು ಸೇರಿದಂತೆ ಹಲವು ಮಠಾಧೀಶರು ಶ್ರೀಗಳ ಜನಪರ ಕಾರ್ಯಗಳನ್ನು ಕೊಂಡಾಡಿದರು.

ಇದೇ ಸಂದರ್ಭದಲ್ಲಿ ಗೌರವ ಡಾಕ್ಟರೇಟ್ ಪದವಿ ಪಡೆದ ಮಾಲಗತ್ತಿಯ ಶ್ರೀ ಚನ್ನಬಸವ ಶರಣರು ಹಾಗೂ ಶಿವಶರಣಯ್ಯ ಪುರದಯ್ಯನಮಠ ಅವರನ್ನು ಸನ್ಮಾನಿಸಲಾಯಿತು.

 ಕಾರ್ಯಕ್ರಮದಲ್ಲಿ ನದಿಶಿನ್ನೂರು ಶ್ರೀ ಗುರುರಾಜೇಂದ್ರ ಮಹಾಶಿವಯೋಗಿಗಳು, ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷರು ಮತ್ತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ, ನಾಗರೆಡ್ಡಿ ಗೋಪಸೇನ್, ನಾಗರಾಜ ರೇಷ್ಮೆ ಸೇರಿದಂತೆ ನೂರಾರು ಭಕ್ತರು ಹಾಗೂ ವಿವಿಧ ಪಕ್ಷಗಳ ಮುಖಂಡರು ಉಪಸ್ಥಿತರಿದ್ದರು. ಜಗದೇವ ದಿಗ್ಗಾಂವಕರ್ ಸ್ವಾಗತಿಸಿದರು, ನರಸಪ್ಪ ಚಿನ್ನಾಕಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಸಮಾಜಮುಖಿ ಕಾರ್ಯಗಳಿಂದ ಜನ್ಮದಿನಕ್ಕೆ ಸಾರ್ಥಕತೆ: ಕಂಬಳೇಶ್ವರ ಶ್ರೀ.

ಚಿತ್ತಾಪುರ: ಜನ್ಮದಿನೋತ್ಸವವು ಕೇವಲ ಆಚರಣೆಯಾಗದೆ, ಬಡವರು, ದೀನದಲಿತರಿಗೆ ಹಾಗೂ ಸಮಾಜಕ್ಕೆ ಅನುಕೂಲವಾದಾಗ ಮಾತ್ರ ಅದಕ್ಕೊಂದು ಅರ್ಥ ಬರಲಿದೆ ಎಂದು ಕಂಬಳೇಶ...