ಜನತೆಯ ಸುದ್ದಿ ವಾಹಿನಿ

ಬುಧವಾರ, ಮೇ 6, 2026

ಮೋದಿ-ಷಾ ಅಬ್ಬರಕ್ಕೆ ಬಂಗಾಳದ ಸರ್ವಾಧಿಕಾರಿ ಸರ್ಕಾರ ಧೂಳಿಪಟ; ಮಣಿಕಂಠ ರಾಠೋಡ.

ಚಿತ್ತಾಪುರ: ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಷಾ ಅವರ ದಕ್ಷ ನಾಯಕತ್ವದ ಅಬ್ಬರಕ್ಕೆ ಪಶ್ಚಿಮ ಬಂಗಾಳದಲ್ಲಿ ಸರ್ವಾಧಿಕಾರಿಯಂತೆ ಮೆರೆಯುತ್ತಿದ್ದ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ಧೂಳಿಪಟವಾಗಿದೆ ಎಂದು ಬಿಜೆಪಿ ಮುಖಂಡ ಹಾಗೂ ಕ್ಷೇತ್ರದ ಪರಾಜಿತ ಅಭ್ಯರ್ಥಿ ಮಣಿಕಂಠ ರಾಠೋಡ ವಿಶ್ವಾಸ ವ್ಯಕ್ತಪಡಿಸಿದರು.

ಪಟ್ಟಣದ ಲಾಡ್ಜಿಂಗ್ ಕ್ರಾಸ್ ಬಳಿ ಸೋಮವಾರ ಬಿಜೆಪಿ ವತಿಯಿಂದ ಆಯೋಜಿಸಲಾಗಿದ್ದ ಪಶ್ಚಿಮ ಬಂಗಾಳ, ಅಸ್ಸಾಂ ಹಾಗೂ ಪುದುಚೇರಿ ರಾಜ್ಯಗಳ ಚುನಾವಣಾ ವಿಜಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು "ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತರು ಯಾರಿಗೂ ಎದೆಗುಂದದೆ ಧೈರ್ಯದಿಂದ ಚುನಾವಣೆ ಎದುರಿಸಿದ್ದರಿಂದ 15 ವರ್ಷಗಳ ಮಮತಾ ಆಡಳಿತ ಅಂತ್ಯಗೊಂಡಿದೆ. ಅದೇ ಮಾದರಿಯಲ್ಲಿ ಚಿತ್ತಾಪುರ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಸಹ ಯಾರಿಗೂ ಹೆದರುವ ಅವಶ್ಯಕತೆಯಿಲ್ಲ. ಬಿಜೆಪಿ ವಿಶ್ವದಲ್ಲೇ ಅತಿದೊಡ್ಡ ಪಕ್ಷವಾಗಿದ್ದು, ನಮ್ಮನ್ನು ಎದುರಿಸಲು ಯಾರಿಂದಲೂ ಸಾಧ್ಯವಿಲ್ಲ," ಎಂದು ಕಾರ್ಯಕರ್ತರಲ್ಲಿ ಧೈರ್ಯ ತುಂಬಿದರು.

ಮಮತಾ ಬ್ಯಾನರ್ಜಿ ಸರ್ಕಾರವನ್ನು 'ರಾಕ್ಷಸಿ ರೂಪದ ಸರ್ಕಾರ' ಎಂದು ಟೀಕಿಸಿದ ಅವರು, "ಅಲ್ಲಿ ಸರ್ವಾಧಿಕಾರಿ ಧೋರಣೆ ಮತ್ತು ಭಯದ ವಾತಾವರಣವಿತ್ತು. ಮೋದಿ ಮತ್ತು ಅಮಿತ್ ಷಾ ಅವರು ಕಾರ್ಯಕರ್ತರಲ್ಲಿ ಚೈತನ್ಯ ತುಂಬಿದ್ದರಿಂದಲೇ ಈ ಅಭೂತಪೂರ್ವ ಗೆಲುವು ಸಾಧ್ಯವಾಗಿದೆ. ಬಿಜೆಪಿಯವರನ್ನು ರಸ್ತೆಗಿಳಿಯದಂತೆ ಮಾಡುವುದು ಹಾಗೂ ಆರ್‌ಎಸ್‌ಎಸ್ ಪಥಸಂಚಲನ ತಡೆಯುವ ಸಂಚು ನಡೆದಿತ್ತು. ಆದರೆ ಇಂದು ದೇಶವೇ ತಿರುಗಿ ನೋಡುವಂತೆ ಅದ್ದೂರಿ ಗೆಲುವು ಲಭಿಸಿದೆ," ಎಂದರು.

ಕ್ಷೇತ್ರದ ರಾಜಕೀಯದ ಕುರಿತು ಮಾತನಾಡಿದ ರಾಠೋಡ, "ಪಶ್ಚಿಮ ಬಂಗಾಳದಲ್ಲಿ ಎಸ್‌ಐಆರ್ ನಡೆದ ಕಾರಣ ಸಾವಿರಾರು ಬೋಕಸ್ ಮತಗಳು ರದ್ದಾಗಿವೆ. ಅದೇ ರೀತಿ ಚಿತ್ತಾಪುರದಲ್ಲೂ ಎಸ್‌ಐಆರ್ ಪ್ರಕ್ರಿಯೆ ನಡೆಯಲಿದ್ದು, ಇಲ್ಲಿನ ಸುಮಾರು 18 ಸಾವಿರ ಬೋಕಸ್ ಮತಗಳು ಕಟ್ ಆಗಲಿವೆ. ಆಗ ಇಲ್ಲಿನ ಕಾಂಗ್ರೆಸ್ ಸರ್ಕಾರವೂ ಧೂಳಿಪಟವಾಗುವುದು ನಿಶ್ಚಿತ," ಎಂದು ಭವಿಷ್ಯ ನುಡಿದರು.

"ಬರುವ ದಿನಗಳಲ್ಲಿ ಇಲ್ಲಿನ ಶಾಸಕರಿಗೆ ಭವಿಷ್ಯವಿಲ್ಲ. ಅವರ ಹಿಂದೆ ಓಡಾಡುವುದನ್ನು ಬಿಡಿ. ನಮ್ಮವರೇ ಕೆಲವು ಮುಖಂಡರು ಶಾಸಕರನ್ನು ಭೇಟಿ ಮಾಡಿ ಫೋಟೋ ಶೂಟ್ ಮಾಡಿಸಿಕೊಳ್ಳುತ್ತಿರುವುದು ಪಕ್ಷದ ನಾಯಕರ ಗಮನದಲ್ಲಿದೆ."

— ಮಣಿಕಂಠ ರಾಠೋಡ, ಬಿಜೆಪಿ ಮುಖಂಡ.

ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಗಿರೀಶ್ ಭಜಂತ್ರಿ, ಪುರಸಭೆ ಮಾಜಿ ಸದಸ್ಯ ಶಾಮ್ ಮೇಧಾ, ಅಶ್ವಥ್‌ ರಾಠೋಡ ಮಾತನಾಡಿದರು. ವೇದಿಕೆಯ ಮೇಲೆ ಬಿಜೆಪಿ ನಗರಾಧ್ಯಕ್ಷ ಆನಂದ ಪಾಟೀಲ ನರಿಬೋಳ, ಮಂಡಲ ಪ್ರಧಾನ ಕಾರ್ಯದರ್ಶಿ ನಾಗರಾಜ ಹೂಗಾರ, ಮಲ್ಲಿಕಾರ್ಜುನ ಇಟಗಿ, ಯುವ ಅಧ್ಯಕ್ಷ ದೇವರಾಜ್ ತಳವಾರ ಸೇರಿದಂತೆ ಪ್ರಮುಖರಾದ ಬಸವರಾಜ ಸಂಕನೂರ, ರಮೇಶ್ ಬೊಮ್ಮನಳ್ಳಿ, ಪ್ರಭು ಗಂಗಾಣಿ ಹಾಗೂ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

ಕಾರ್ಯಕರ್ತರು ಜೈಘೋಷಗಳನ್ನು ಕೂಗಿ, ಪಟಾಕಿ ಸಿಡಿಸಿ ಹಾಗೂ ಸಿಹಿ ಹಂಚುವ ಮೂಲಕ ವಿಜಯೋತ್ಸವವನ್ನು ಸಡಗರದಿಂದ ಆಚರಿಸಿದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಮೋದಿ-ಷಾ ಅಬ್ಬರಕ್ಕೆ ಬಂಗಾಳದ ಸರ್ವಾಧಿಕಾರಿ ಸರ್ಕಾರ ಧೂಳಿಪಟ; ಮಣಿಕಂಠ ರಾಠೋಡ.

ಚಿತ್ತಾಪುರ: ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಷಾ ಅವರ ದಕ್ಷ ನಾಯಕತ್ವದ ಅಬ್ಬರಕ್ಕೆ ಪಶ್ಚಿಮ ಬಂಗಾಳದಲ್ಲಿ ಸರ್ವಾಧಿಕಾರಿಯಂತೆ ಮೆರೆಯುತ್ತಿದ...