ಪ್ರಿಯಾಂಕ್ ಖರ್ಗೆ ಅವರಿಗೆ ಡಿಸಿಎಂ ಸ್ಥಾನ ನೀಡಲು ಹಡಪದ ಸಮಾಜ ಆಗ್ರಹ

ಚಿತ್ತಾಪುರ: ಕ್ಷೇತ್ರದ ಜನಪ್ರಿಯ ಶಾಸಕ ಹಾಗೂ ಹಾಲಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಉಪಮುಖ್ಯಮಂತ್ರಿ (ಡಿಸಿಎಂ) ಸ್ಥಾನವನ್ನು ನೀಡಬೇಕು ಎಂದು ಹಡಪದ ಸಮಾಜದ ತಾಲೂಕಾಧ್ಯಕ್ಷ ಹಾಗೂ ವಾಡಿ ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಮೇಶ ಹಡಪದ ಮತ್ತು ತಾಲೂಕಾ ಪ್ರಧಾನ ಕಾರ್ಯದರ್ಶಿ ಕಲ್ಯಾಣಿ ಗುಂಡುಗುರ್ತಿ ಅವರು ಸರ್ಕಾರದ ಹೈಕಮಾಂಡ್ ಅನ್ನು ಒತ್ತಾಯಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪ್ರಿಯಾಂಕ್ ಖರ್ಗೆ ಅವರು ಚಿತ್ತಾಪುರ ಕ್ಷೇತ್ರ ಸೇರಿದಂತೆ ಇಡೀ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿದ್ದಾರೆ. ಯುವ ನಾಯಕರಾಗಿರುವ ಅವರು ತಂತ್ರಜ್ಞಾನ, ಗ್ರಾಮೀಣಾಭಿವೃದ್ಧಿ ಹಾಗೂ ಸಾಮಾಜಿಕ ನ್ಯಾಯದ ಪರವಾಗಿ ದಕ್ಷತೆಯಿಂದ ಕೆಲಸ ಮಾಡುತ್ತಿದ್ದಾರೆ. ಅವರ ನಾಯಕತ್ವ ಮತ್ತು ಆಡಳಿತ ವೈಖರಿಯನ್ನು ಗುರುತಿಸಿ ಅವರಿಗೆ ಡಿಸಿಎಂ ಸ್ಥಾನ ನೀಡಬೇಕು ಎಂಬುದು ಕಾಂಗ್ರೆಸ್ ಪಕ್ಷದ ಹಡಪದ ಸಮಾಜದ ಮುಖಂಡರ ಆಶಯವಾಗಿದೆ ಎಂದು ತಿಳಿಸಿದ್ದಾರೆ.

"ಪ್ರಿಯಾಂಕ್ ಖರ್ಗೆ ಅವರು ಸಚಿವರಾಗಿ ಅತ್ಯುತ್ತಮ ಕಾರ್ಯನಿರ್ವಹಿಸುತ್ತಿದ್ದಾರೆ. ಅವರಿಗೆ ಡಿಸಿಎಂ ಸ್ಥಾನ ನೀಡುವುದರಿಂದ ಕಲ್ಯಾಣ ಕರ್ನಾಟಕ ಭಾಗಕ್ಕೆ ಮತ್ತಷ್ಟು ಹೆಚ್ಚಿನ ಬಲ ಸಿಗಲಿದೆ ಮತ್ತು ಅಭಿವೃದ್ಧಿ ಕಾರ್ಯಗಳು ವೇಗವಾಗಿ ಸಾಗಲಿವೆ." 

— ರಮೇಶ ಹಡಪದ 
ಹಡಪದ ಸಮಾಜದ ತಾಲೂಕಾಧ್ಯಕ್ಷ ಹಾಗೂ ವಾಡಿ ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಚಿತ್ತಾಪೂರ.

ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಹಾಗೂ ರಾಜ್ಯದ ಹಿರಿಯ ನಾಯಕರು ಈ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಿ, ಪ್ರಿಯಾಂಕ್ ಖರ್ಗೆ ಅವರಿಗೆ ಸೂಕ್ತ ಸ್ಥಾನಮಾನ ನೀಡಬೇಕು ಎಂದು ಅವರು ಪ್ರಕಟಣೆಯ ಮೂಲಕ ಆಗ್ರಹಿಸಿದ್ದಾರೆ.

Jtv kannada

ಜನತೆಯ ಸುದ್ದಿ ವಾಹಿನಿ, ನೇರ ದಿಟ್ಟ ನಿರಂತರ.

إرسال تعليق

أحدث أقدم