ಚಿತ್ತಾಪುರ: ಪಟ್ಟಣದ ಪ್ರಜಾ ಸೌಧದ ಆವರಣದಲ್ಲಿ ತಾಲೂಕು ಆಡಳಿತದ ವತಿಯಿಂದ ಶನಿವಾರ ಹಮ್ಮಿಕೊಳ್ಳಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ, ಶಿಕ್ಷಣ ಇಲಾಖೆಯ ಭೀಮನಳ್ಳಿ ಕ್ಲಸ್ಟರ್ನ ಸಿಆರ್ಪಿ ವಿಜಯಲಕ್ಷ್ಮಿ ಹೊಸಮನಿ ಅವರಿಗೆ 'ಉತ್ತಮ ಸಾಧಕಿ' ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಹಿನ್ನೆಲೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸರಕಾರಿ ಮತ್ತು ಅರೆ ಸರಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಅರುಣ್ ಕುಮಾರ್ ಚಿಂಚನಸೂರ್ ಹಾಗೂ ಪದಾಧಿಕಾರಿಗಳು ತೀವ್ರ ಹರ್ಷ ವ್ಯಕ್ತಪಡಿಸಿದ್ದಾರೆ.
ಅವರ ಕರ್ತವ್ಯನಿಷ್ಠೆ, ಪರಿಶ್ರಮ, ಪ್ರಾಮಾಣಿಕ ಸೇವೆ ಹಾಗೂ ಉತ್ತಮ ಕಾರ್ಯನಿರ್ವಹಣೆಗೆ ಸಂದ ಈ ಗೌರವವು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿಯಾಗಿದೆ ಎಂದು ನಾಯಕರು ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ಪ್ರಶಸ್ತಿ ಪ್ರದಾನ ಮಾಡಿದ ತಹಸೀಲ್ದಾರ್ ನಾಗಯ್ಯ ಹಿರೇಮಠ ಹಾಗೂ ಪ್ರೋತ್ಸಾಹ ಮತ್ತು ಸಹಕಾರ ನೀಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ ಬಿರಾದಾರ ಅವರಿಗೆ ಸಂಘದ ವತಿಯಿಂದ ಕೃತಜ್ಞತೆಗಳನ್ನು ಸಲ್ಲಿಸಲಾಗಿದೆ.