ಮಂಗಳವಾರ, ನವೆಂಬರ್ 15, 2022
ಒಗ್ಗಟ್ಟಿನಿಂದ ಸಮಾಜದ ಅಭಿವೃದ್ಧಿ ಸಾಧ್ಯ:ಗಿರೀಶ್.
ನಿಮ್ಮ ಪಕ್ಷ ದಲಿತರ ಮೇಲೆ ದೌರ್ಜನ್ಯ ಮಾಡುವ ಪಕ್ಷ.
ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಚರ್ಚಿಸಲು ಸವಾಲ್.
ಸೋಮವಾರ, ನವೆಂಬರ್ 14, 2022
ನಮ್ಮ ಸರ್ಕಾರ ರೈತರ ಪರ ಸರ್ಕಾರ: ಬೊಮ್ಮಾಯಿ.
ಭಾನುವಾರ, ನವೆಂಬರ್ 13, 2022
ಬರವಣಿಗೆಗಳು ಸದಾ ಕಾಲ ಪ್ರಸ್ತುತ : ಗುತ್ತೇದಾರ.
ಶುಕ್ರವಾರ, ನವೆಂಬರ್ 11, 2022
ಕನಕದಾಸರ ಆದರ್ಶ ಮೈಗೂಡಿಸಿಕೊಳ್ಳಿ : ಪ್ರಿಯಾಂಕ್ ಖರ್ಗೆ.
ಗುರುವಾರ, ನವೆಂಬರ್ 10, 2022
ಪ್ರಿಯಾಂಕ್ ಖರ್ಗೆ ಬೆಂಬಲಿಗರಿಂದ ಗುಂಡಾವರ್ತನೆ: ಅರವಿಂದ್ ಚವ್ಹಾಣ್.
ಶನಿವಾರ, ಅಕ್ಟೋಬರ್ 29, 2022
ಪುನೀತ್ ರಾಜ್ಕುಮಾರ್ ಪ್ರಥಮ ಪುಣ್ಯಸ್ಮರಣೆ: ಗುತ್ತೇದಾರ್ ಕುಟುಂಬದಿಂದ ಪೂಜೆ.
ಕದ್ದರ್ಗಿ ಶಾಲೆಯಲ್ಲಿ ಕೋಟಿ ಕಂಠ ಗಾಯನ.
ಶನಿವಾರ, ಮಾರ್ಚ್ 5, 2022
ಗ್ರಾಮೀಣ ಭಾಗಗಳ ಅಭಿವೃದ್ದಿಗೆ ಸಿದ್ಧ: ಪ್ರಿಯಾಂಕ ಖರ್ಗೆ.
ಚಿತ್ತಾಪುರ: ಗ್ರಾಮೀಣ ಭಾಗಗಳ ಅಭಿವೃದ್ದಿಗೆ ಸದಾ ಸಿದ್ದರಿರುವುದಾಗಿ ಶಾಸಕ ಪ್ರಿಯಾಂಕ್ ಖರ್ಗೆ ಭರವಸೆ ನೀಡಿದರು.
ಮತ ಕ್ಷೇತ್ರದ ಅಶೋಕ ನಗರದಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಅಡಿಗಲ್ಲು ನೆರವೇರಿಸಿ ಮಾತನಾಡಿದ ಅವರು ರೂ. 15 ಲಕ್ಷ ವೆಚ್ಚದಲ್ಲಿ ಡಾ ಬಾಬು ಜಗಜೀವನರಾಂ ಭವನ, ರೂ 15 ಲಕ್ಷ ವೆಚ್ಚದಲ್ಲಿ ಸೇವಾಲಾಲ್ ಭವನ ಉದ್ಘಾಟನೆ ಹಾಗೂ ರೂ 25 ಲಕ್ಷ ವೆಚ್ಚದಲ್ಲಿ ಕೈಗತ್ತಿಕೊಳ್ಳಲಾಗುತ್ತಿರುವ ಆರ್.ಸಿ.ಬಿ ಮಖ್ಯ ಕ್ಯಾನೆಲ್ ನಿಂದ ಬೆಣ್ಣೂರು (ಕೆ) ಗ್ರಾಮದವರೆಗೆ ಆಣೆಕಟ್ಟು ರಸ್ತೆ ನಿರ್ಮಾಣಕ್ಕೆ ಅಡಿಗಲ್ಲು ನೆರವೇರಿಸಲಾಯಿತು.
ಬಿಜೆಪಿ ಸರ್ಕಾರದಲ್ಲಿ ಅಭಿವೃದ್ದಿಗೆ ಹಿನ್ನೆಡೆಯಾಗುತ್ತಿದೆ. ನಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ ಎಸ್ ಸಿ ಪಿ / ಟಿಎಸ್ ಪಿ ಅಡಿಯಲ್ಲಿ 28,000 ಕೋಟಿ ನಿಗದಿಪಡಿಸಿ ಎಸ್ ಸಿ ಹಾಗೂ ಎಸ್ ಟಿ ಜನಾಂಗದ ಅಭಿವೃದ್ದಿಗೆ ಕ್ರಮ ಕೈಗೊಳ್ಳಲಾಗಿದೆ. ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ 150 ಬೋರ್ ವೆಲ್ ಮಂಜೂರಾಗಿದ್ದವು. ಆದರೆ ಈ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕೇವಲ 5 ಬೋರ್ ವೆಲ್ ಮಾತ್ರ ಮಂಜೂರು ಮಾಡಿದ್ದಾರೆ. ಇದು ಸರ್ಕಾರದ ಬದ್ದತೆ ತೋರಿಸುತ್ತದೆ ಎಂದು ಟೀಕಿಸಿದರು.
ಗ್ರಾಮಗಳ ಅಭಿವೃದ್ದಿಗೆ ನಾನು ಸದಾ ಸಿದ್ದನಿದ್ದು ನಿಮ್ಮ ಸೇವೆಗೆ ಬದ್ಧನಾಗಿದ್ದೇನೆ. ಈ ಸರ್ಕಾರದ ನಿರ್ಲಕ್ಷ್ಯತನದ ನಡುವೆಯೂ ಅನುದಾನ ಮಂಜೂರು ಮಾಡಿಸಿಕೊಂಡು ಭವನಗಳ ನಿರ್ಮಾಣ ಮಾಡುತ್ತಿದ್ದೇನೆ. ರಸ್ತೆ ನಿರ್ಮಾಣ ಹಾಗೂ ಮಹಿಳೆಯರ ಶೌಚಾಲಯ ನಿರ್ಮಾಣಕ್ಕೂ ಆದ್ಯತೆ ನೀಡುತ್ತೇನೆ. ನಾನು ನಿಮ್ಮ ಕೆಲಸ ಮಾಡುತ್ತೇನೆ, ನೀವು ನನಗೆ ಅಶೀರ್ವಾದ ಮಾಡಿ. ಆದರೆ, ಜೂಜುಕೋರರು, ಅಕ್ರಮ ಮರುಳು ಸಾಗಾಣಿಕೆ ಮಾಡುವವರನ್ನು ಮಾತ್ರ ಬೆಂಬಲಿಸಬೇಡಿ. ಅವರ ಕೈಗೆ ಅಧಿಕಾರ ಕೊಡಬೇಡಿ, ಅವರಿಂದ ದೂರವಿರಿ ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಿದ್ದುಗೌಡ ಪಾಟೀಲ್, ಶಿವರಾಜ್ ಪಾಟೀಲ್ ಕಲಗುರ್ತಿ, ಬಸವರಾಜ್ ಹೊಸಳ್ಳಿ, ಮಲ್ಲಪ್ಪ ಹೊಸಮನಿ, ಕೃಷ್ಣ ಕಟ್ಟಿಮನಿ, ರಾಕೇಶ್ ಕಟ್ಟಿಮನಿ, ಪ್ರವೀಣ್ ನಾಮದಾರ್ ಇತರರು ಇದ್ದರು.
ಗುರುವಾರ, ಫೆಬ್ರವರಿ 10, 2022
ರಾಯಚೂರು ಘಟನೆ: ಮೀಸಲು ಕ್ಷೇತ್ರದಿಂದ ಗೆದ್ದವರ ಮೌನ.
ಚಿತ್ತಾಪುರ: 73ನೇ ಗಣರಾಜ್ಯೋತ್ಸವ ಸಂದರ್ಭದಲ್ಲಿ ಡಾ. ಬಿಆರ್. ಅಂಬೇಡ್ಕರ್ ಅವರಿಗೆ ರಾಯಚೂರು ನ್ಯಾಯಾದೀಶರು ಅವಮಾನ ಮಾಡಿರುವ ಘಟನೆ ಖಂಡಿಸಿ ರಾಜ್ಯಾದ್ಯಂತಹ ಪ್ರತಿಭಟನೆಗಳು ನಡೆಯುತ್ತಿವೆ. ಆದರೆ ಮೀಸಲು ಮತಕ್ಷೇತ್ರದಿಂದ ಗೆದ್ದು ಅಧಿಕಾರಕ್ಕೆ ಬಂದಿರುವ ಸಂಸದರು ಮತ್ತು ಶಾಸಕರು ಮೌನಕ್ಕೆ ಜಾರಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗುರಿಯಾಗಿದೆ.
ಕಲಬುರ್ಗಿ ಸಂಸದ ಡಾ.ಉಮೇಶ ಜಾಧವ್ ಶಾಸಕರಾದ ಪ್ರಿಯಾಂಕ್ ಖರ್ಗೆ, ಬಸವರಾಜ ಮತ್ತಿಮೂಡ, ಅವಿನಾಶ ಜಾಧವ್ ಅವರು ಮೀಸಲು ಮತಕ್ಷೇತ್ರಗಳಿಂದ ಗೆದ್ದು ಅಧಿಕಾರದಲ್ಲಿದ್ದಾರೆ. ಅಂಬೇಡ್ಕರ್ ರಚಿಸಿದ ಸಂವಿಧಾನದ ಹಕ್ಕಿನಿಂದ ಗೆದ್ದವರು, ಡಾ. ಬಿಆರ್. ಅಂಬೇಡ್ಕರ್ ಅವರಿಗೆ ಮಾಡಿರುವ ಅಪಮಾನದ ಘಟನೆ ಖಂಡಿಸದೆ, ಮೌನಕ್ಕೆ ಶರಣಾಗಿರುವುದು ಎಷ್ಟರ ಮಟ್ಟಿಗೆ ಸರಿ.? ಎನ್ನುವುದು ಸಾರ್ವಜನಿಕರ ಪ್ರಶ್ನೆಯಾಗಿದೆ.
ಸಂಸದರು, ಶಾಸಕರ ಸಾಮಾಜಿಕ ಜಾಲತಾಣ ಹಾಗೂ ಪತ್ರಿಕಾ ಹೇಳಿಕೆಗಳನ್ನು ಗಮನಿಸಿದರೆ ಡಾ.ಅಂಬೇಡ್ಕರ್ ಅವರಿಗೆ ಆಗಿರುವ ಅವಮಾನದ ಘಟನೆ ಎಲ್ಲಿಯೂ ಸಹ ಖಂಡಿಸಿಲ್ಲ. ಸಂಸದರು ಹಾಗೂ ಶಾಸಕರ ನಡೆಯನ್ನು ತೀವ್ರವಾಗಿ ವಿರೋಧಿಸಿದ್ದಾರೆ.
ಬಿಜೆಪಿ ಎಸ್ಸಿ ಮೋರ್ಚಾ ಸಹ ಡಾ.ಅಂಬೇಡ್ಕರ್ ಅವರ ಅವಮಾನದ ಘಟನೆ ಖಂಡಿಸದೇ, ಸಾರ್ವಜನಿಕರು ಹಾಗೂ ಸಂಘಟನೆಗಳು ಏರ್ಪಡಿಸಿದ ಪ್ರತಿಭಟನೆಗಳಲ್ಲಿ ಕಾಟಚಾರಕ್ಕೆ ಭಾಗಿಯಾಗುವ ಮೂಲಕ ಅಟಕ್ಕುಂಟು ಲೆಕ್ಕಕ್ಕಿಲ್ಲ ಎನ್ನುವ ವರ್ತನೆ ತೋರಿದ್ದಾರೆ. ಆದರೆ, ಎಸ್ಸಿ ಮೋರ್ಚಾದ ಬಿಜೆಪಿ ಕಾರ್ಯಕರ್ತರು ತಾವು ಪ್ರತಿಭಟನೆಗಿಳಿಯದಿರುವುದ ಸಾರ್ವಜನಿಕರ ಆಕ್ರೋಶಕ್ಕೆ ಕಾರಣರಾಗಿದ್ದಾರೆ
ಅಂಬೇಡ್ಕರರಿಗೆ ಆದ ಅವಮಾನವನ್ನು ಖಂಡಿಸಿ ಮೀಸಲು ಮತಕ್ಷೇತ್ರದಲ್ಲಿನ ವಿವಿಧ ಸಂಘ ಸಂಘಟನೆಗಳಿಂದ ರಸ್ತೆಗಿಳಿದು ಪ್ರತಿಭಟನೆ ನಡೆಸಿದರೂ ಸಹ ರಾಯಚೂರಿನ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡನ ವಿರುದ್ಧ ಇಲ್ಲಿವರೆಗೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಯಾಕೆ? ಎನ್ನುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಎಸ್ಸೆಸ್ಸೆಲ್ಸಿ ಮಕ್ಕಳೊಂದಿಗೆ ಜಿಪಂ ಸಿಇಒ ಚರ್ಚೆ.
ಚಿತ್ತಾಪುರ: ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮಪಡಿಸಲು ಪೂರ್ವಸಿದ್ಧತಾ ಪರೀಕ್ಷೆ-1 ರಲ್ಲಿ ಅತ್ಯಂತ ಕಡಿಮೆ ಫಲಿತಾಂಶ ಪಡೆದ ಕರ್ನಾಟಕ ಪಬ್ಲಿಕ್ ಶಾಲೆ ಮಾಡಬೂಳ,...
-
ಚಿತ್ತಾಪುರ: ಪಟ್ಟಣದ ವರಣನಗರದಲ್ಲಿರುವ ಪುರಾತನ ಶರಣಬಸವೇಶ್ವರ ದೇವಸ್ಥಾನದಲ್ಲಿ ಜನೆವರಿ 19ರ ಸೋಮವಾರ ರಾತ್ರಿ ಕಳ್ಳರು ನುಗ್ಗಿ ದೇವಸ್ಥಾನದ ಹುಂಡಿಯನ್ನು ಕಳ...
-
ಮನೆಗಳ ಹಂಚಿಕೆ ಪ್ರಕ್ರಿಯೆ ಮುಂದೂಡಲಾಗಿದೆ ಚಿತ್ತಾಪುರ: ಪಟ್ಟಣದ ನಾಗಾವಿ ಎಜುಕೇಷನ್ ಹಬ್ ಪ್ರದೇಶದಲ್ಲಿ ನಿರ್ಮಿಸಲಾದ 1000 ಜಿ+1 ಮನೆಗಳ ಹಂಚಿಕೆಯು ಮಂಗಳ...
