ಭಾನುವಾರ, ಅಕ್ಟೋಬರ್ 1, 2023

ಬೀದಿ ನಾಯಿಗಳ ಹಾವಳಿ

ಪಟ್ಟಣದ ಮಾರ್ಕೆಟ್ ನಲ್ಲಿ ಬೀದಿ ನಾಯಿಗಳ ಓಡಾಟ, ಜಗಳ, ಜನರಲ್ಲಿ ಭಯದ ವಾತಾವರಣ ನಿರ್ಮಾಣ.

ಚಿತ್ತಾಪುರ: ಮಾರ್ಕೆಟ್ ನಲ್ಲಿ  ಬೀದಿ ನಾಯಿಗಳದ್ದೇ ಕಾರುಬಾರು. ಪಟ್ಟಣದ ಬಹುತೇಕ ರಸ್ತೆಗಳನ್ನು ಆಕ್ರಮಿಸಿಕೊಂಡಿರುವ ಬೀದಿ ನಾಯಿಗಳಿಗೆ ರಸ್ತೆಗಳೇ ಆಶ್ರಯ ತಾಣಗಳಾಗಿವೆ. ಇದರಿಂದ ನಗರದಲ್ಲಿ ಸಂಚರಿಸುವ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುವಂತಾಗಿದೆ.

ರಸ್ತೆ ಮಧ್ಯೆದಲ್ಲಿಯೇ ದಿನನಿತ್ಯ ಅಡ್ಡಾಡುವ ನಾಯಿಗಳ ಹಾವಳಿಯಿಂದ ವಾಹನ ಸವಾರರು ನೆಮ್ಮದಿಯಿಂದ ವಾಹನ ಚಾಲನೆ ಮಾಡಲು ಆಗದ ಸ್ಥಿತಿ ನಿರ್ಮಾಣವಾಗಿದೆ. ಆದರೆ, ಪುರಸಭೆ ಮಾತ್ರ ಈ ವಿಷಯದಲ್ಲಿ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂಬ ಆರೋಪ ಸಾರ್ವಜನಿಕರಿಂದ ಕೇಳಿ ಬರುತ್ತಿದೆ.

ಈಗಲಾದರೂ ಪುರಸಭೆ ಎಚ್ಚೆತ್ತುಕೊಂಡು ಪಟ್ಟಣದಲ್ಲಿನ ನಾಯಿಗಳ ಹಾವಳಿ ತಡೆಗಟ್ಟುವಂತೆ ಕ್ರಮವಹಿಸುತ್ತಾರೆ ಎಂಬುದು ಕಾದು ನೋಡಬೇಕಾಗಿದೆ.

ಮಾರ್ಕೆಟ್ ರಸ್ತೆಯಲ್ಲಿ ನಾಯಿಗಳ ಹಾವಳಿ ಮಿತಿ ಮೀರಿದೆ. ಬೆಳಗಿನ ಸಮಯದಲ್ಲಿ ವಾಯುವಿಹಾರಕ್ಕಾಗಿ ಹೋಗುವರಿಗೂ ಹಾಗೂ ಮಕ್ಕಳು ಈ ರಸ್ತೆಯಲ್ಲಿ ಸಂಚರಿಸಲು ಭಯ ಪಡುವಂತಹ ವಾತಾವರಣ ನಿರ್ಮಾಣ ಆಗಿದೆ ಎನ್ನುತ್ತಾರೆ.

             -ಮಂಜುನಾಥ್ ಸ್ವಾಮಿ
ತಾಲೂಕಾಧ್ಯಕ್ಷ, ಕರವೇ ಕಾವಲು ಪಡೆ ಚಿತ್ತಾಪುರ.
==================================

ಪಟ್ಟಣದಲ್ಲಿ ಅನೇಕ ಕಡೆಗಳಲ್ಲಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಕಚ್ಚಿಸಿಕೊಂಡು ತೊಂದರೆ ಅನುಭವಿಸಿದ್ದೇವೆ. ವಾಹನಕ್ಕೆ ಅಡ್ಡವಾದಾಗ ತಪ್ಪಿಸಲು ಹೋಗಿ ಕೈಕಾಲು ಪೆಟ್ಟು ಮಾಡಿಕೊಂಡಿದ್ದೇವೆ ಎನ್ನುತ್ತಾರೆ.

                  - ವೀರಣ್ಣ ಸುಲ್ತಾನಪುರ್
 ಮಾಜಿ ಅಧ್ಯಕ್ಷ, ನೇತಾಜಿ ಯುವಕ ಸಂಘ ಚಿತ್ತಾಪುರ.

ಗುರುವಾರ, ಸೆಪ್ಟೆಂಬರ್ 28, 2023

ಸಾಹಿತ್ಯ ಬೆಳೆಸುವಲ್ಲಿ ಸಚಿವರ ಕೊಡುಗೆ ಅಪಾರ: ಡಾ.ಸಿದ್ದತೋಟೇಂದ್ರ.


ಚಿತ್ತಾಪೂರ: ಕ್ಷೇತ್ರದ ಶಾಸಕರು, ಸಚಿವರಾದ ಪ್ರಿಯಾಂಕ ಖರ್ಗೆ ಅವರಲ್ಲಿ ಕನ್ನಡ ಸಾಹಿತ್ಯದ ಬಗ್ಗೆ ಅಭಿರುಚಿ ಹಾಗೂ ಸಾಹಿತ್ಯ ಜ್ಞಾನ ಬೆಳೆಸಿಕೊಳ್ಳುವ ಆಸಕ್ತಿ ಇದೆ. ಜೊತೆಗೆ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ಕೊಟ್ಟು ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಸುವ ನಿಟ್ಟಿನಲ್ಲಿ ಎಜುಕೇಶನ್ ಹಬ್ ಮಾಡಿದ್ದಾರೆ ಹಾಗೂ ಈ ಭಾಗದಲ್ಲಿನ ಕನ್ನಡ ಸಾಹಿತ್ಯ ಬೆಳೆಸುವಲ್ಲಿ ಸಚಿವರ ಅಪಾರವಾದ ಕೊಡುಗೆಯಿದೆ ಎಂದು ಶ್ರೀ ಕೋರಿಸಿದ್ದೇಶ್ವರ ಸಂಸ್ಥಾನ ಮಠ ನಾಲವಾರದ ಪೂಜ್ಯ ಶ್ರೀ ಡಾ. ಸಿದ್ಧತೋಟೇಂದ್ರ ಮಹಾಸ್ವಾಮಿಗಳು ಹೇಳಿದರು.

ಪಟ್ಟಣದ ಬಜಾಜ್ ಕಲ್ಯಾಣ್ ಮಂಟಪ ಆವರಣದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಮ್ಮಿಕೊಂಡಿದ್ದ ತಾಲೂಕು ಮಟ್ಟದ 4ನೇ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ನಾಗಾವಿ ನಾಡು ಭವ್ಯ ಇತಿಹಾಸ ಹೊಂದಿದ್ದ ನಾಡಾಗಿದ್ದು ಇಲ್ಲಿನ 69 ಗುಡಿ ಅಂದಿನ ಪ್ರಾಚೀನ ವಿಶ್ವವಿದ್ಯಾಲಯವಾಗಿತ್ತು. ಇಲ್ಲಿ ದೇಶ ವಿದೇಶಗಳಿಂದ ಅಧ್ಯಯನ ಮಾಡಲು ಬರುತ್ತಿದ್ದರು ಇಂಥ ಪ್ರಾಚೀನ ಕಾಲದ ದತ್ತ ವೈಭವ ಮತ್ತೆ ಮರುಕಳಿಸಬೇಕಿದೆ ಎಂದು ಹೇಳಿ ಕನ್ನಡ ನಾನು ನುಡಿಯ ಬಗ್ಗೆ ಕೊಂಡಾಡಿದರು.


ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ್ ತೇಗಲತಿಪ್ಪಿ, ಮಾತನಾಡಿ ಈ ೪ನೇ ಕನ್ನಡ ಸಾಹಿತ್ಯ ಸಮ್ಮೇಳನದ ಮೂಲಕ ಸಮಾಜಕ್ಕೆ ಒಂದು ವಿಶೇಷವಾದ ಸಂದೇಶವನ್ನು ನೀಡಲು ಬಯಸುತ್ತೇನೆ ನಾಗಾವಿ ನಾಡಿನಲ್ಲಿ ಐತಿಹಾಸಿಕ ಸ್ಮಾರಕಗಳು, ಶಾಸನಗಳು, ದೊರೆತಿವೆ ಈ ನೆಲದ ಶ್ರೀಮಂತಿಕೆ, ಪರಂಪರೆಯ ಇತಿಹಾಸವನ್ನು ಹೊಸ ಪೀಳಿಗೆಗೆ ತಿಳಿಸಬೇಕಾದರೆ ಈ ಭಾಗದ ಇತಿಹಾಸವನ್ನು ಪಠ್ಯಪುಸ್ತಕದಲ್ಲಿ ಅಳವಡಿಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು. ಬೇಲೂರು ಹಳೇಬೀಡಿನ ಇತಿಹಾಸ ನಮ್ಮ ಮಕ್ಕಳಿಗೆ ಬೇಕಾಗಿಲ್ಲ. ಅದಕ್ಕಿಂತ ಎರಡು ಪಟ್ಟು ಇತಿಹಾಸ ಈ ಭಾಗದಲ್ಲಿದೆ ಹೀಗಾಗಿ ನಮ್ಮ ಮಕ್ಕಳು ಓದುವ ಪಠ್ಯಪುಸ್ತಕದಲ್ಲಿ ಈ ಭಾಗದ ಇತಿಹಾಸ ಅಳವಡಿಸಬೇಕು ಎಂದು ಒತ್ತಾಯಿಸಿದರು.


ವೇದಿಕೆಯ ಮೇಲೆ ಕೇಂದ್ರೀಯ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ. ಅಪ್ಪಗೇರೆ ಸೋಮಶೇಖರ್, ನೀಲಮ್ಮ ಕತ್ನಳ್ಳಿ, ಲಿಂಗಾರೆಡ್ಡಿ ಗೌಡ ಭಾಸ ರೆಡ್ಡಿ, ನಾಗರೆಡ್ಡಿ ಪಾಟೀಲ್, ಬಾಗನಗೌಡ ಸಂಕನೂರ್, ಭೀಮಣ್ಣ ಸಾಲಿ, ಸೋಮಶೇಖರ್ ಪಾಟೀಲ್, ಶಿವಾನಂದ್ ಪಾಟೀಲ್, ಮಲ್ಲಿಕಾರ್ಜುನ್ ಕಾಳಗಿ, ಮಲ್ಲಿನಾಥ್ ಇಂದೂರ, ಮುಕ್ತಾರ್ ಪಟೇಲ್, ಬಸವರಾಜ್ ಬಳೂಂಡಗಿ, ಶಂಭುಲಿಂಗ ಗುಂಡಗುರ್ತಿ, ಕಾಶಿನಾಥ್ ಗುತ್ತೇದಾರ್, ರಮೇಶ್ ಮರಗೂಳ, ವೇದಿಕೆ ಮೇಲೆ ಇದ್ದರು.
ವೀರಣ್ಣ ಸುಲ್ತಾನಪುರ, ಮಹಮ್ಮದ್ ಇಬ್ರಾಹಿಂ, ಮಲ್ಲಿಕಾರ್ಜುನ್ ಬೊಮ್ಮನಹಳ್ಳಿಕರ್, ವೆಂಕಟೇಶ್ ಬಳಿಚಕ್ರ, ಶ್ರೀಮತಿ ಪೂಜಾ ಬಂಕಲಗಿ, ನರಸಪ್ಪ ಚಿನ್ನಕಟ್ಟಿ, ಕಾಶಿರಾಯ್ ಕಲಾಲ್, ವೀರಭದ್ರಪ್ಪ ಹುಮನಾಬಾದ್, ನರಸಿಂಹ ಆಲ್ಮೇಲ್ಕರ್, ಮನೋಹರ್ ಹಡಪದ, ಕರಣಕುಮಾರ ಅಲ್ಲೂರ, ಸಾಬಣ್ಣ ಭರಾಟಿ, ಆನಂದ್ ಕಲ್ಲಕ್, ಇದ್ದರು. ನಾಡಗೀತೆ ಮತ್ತು ರೈತ ಗೀತೆಯನ್ನು ಗುಲ್ಬರ್ಗ ವಿಶ್ವವಿದ್ಯಾಲಯದ ಸಂಗೀತ ಪ್ರಾಧ್ಯಾಪಕರಾದ ಸಿದ್ಧಾರ್ಥ ಚಿಮ್ಮಾ ಇದ್ಲಾಯಿ ನಡೆಸಿಕೊಟ್ಟರು ಅದೇ ರೀತಿ ಜನಕಲಾ ಸಮಿತಿ ವಾಡಿ ವತಿಯಿಂದ ಸಂವಿಧಾನ ಪೀಠಿಕೆ ಗಾಯನ ನಡೆಯಿತು. ಮಲ್ಲಿಕಾರ್ಜುನ್ ಮುಡಬೂಳಕರ್ ನಿರೂಪಿಸಿದರು. ಜಗದೇವ್ ದಿಗ್ಗಾಂವಕರ್ ಸ್ವಾಗತಿಸಿದರು. ಬಸಪ್ಪ ಯಂಭತ್ನಾಳ ವಂದನಾರ್ಪಣೆ ನಡೆಸಿಕೊಟ್ಟರು.


ಮಾತೃಭಾಷೆಯಲ್ಲಿ ಪ್ರತಿಯೊಬ್ಬರು ಶಿಕ್ಷಣ ಪಡೆಯಬೇಕು, ಪ್ರತಿಯೊಂದು ಇಲಾಖೆ ವಾಣಿಜ್ಯ ಮಾಳಿಗೆ ಹೆಸರಿನ ನಾಮ ಫಲಕಗಳು ಕನ್ನಡದಲ್ಲಿ ಬರೆದು ಕನ್ನಡಮಯವಾಗುವಂತೆ ಮನೋ ಧರ್ಮ ಬೆಳೆಸಿಕೊಳ್ಳಬೇಕು ಎಲ್ಲಿದ್ದರೇನು ಎಂತಿದ್ದರೇನು ಹೇಗಿದ್ದರೇನು? ನಾವು ಎಲ್ಲರೂ ಕನ್ನಡವ ಬಳಸಿ ಬೆಳೆಸಬೇಕು ಮಾತನಾಡಬೇಕು ಪ್ರತಿ ಕ್ಷೇತ್ರದಲ್ಲಿ ಬರವಣಿಗೆ ಕನ್ನಡ ಮಾಯವಾಗಬೇಕು ಎಂದರು

             - ನಿಂಗಪ್ಪ ಮಲ್ಕನ್ ಕೊಲ್ಲೂರ
      ಸಮ್ಮೇಳನ ಅಧ್ಯಕ್ಷರು. ಸಾಹಿತಿಗಳು ಚಿತ್ತಾಪುರ


ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವರ್ಷವಿಡಿ ತಾಲೂಕಿನ ಅತ್ಯಂತ ಕವಿಗೋಷ್ಠಿಗಳು ಕಾವ್ಯ ಸಮ್ಮೇಳನಗಳನ್ನು ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಪರಿಷತ್ತು ಕೆಲಸ ಮಾಡುತ್ತಿದೆ. ೪ನೇ ಕನ್ನಡ ಸಾಹಿತ್ಯ ಸಮ್ಮೇಳನದ ತೇರನ್ನು ನಿಮ್ಮೆಲ್ಲರ ಸಹಕಾರದಿಂದ ಯಶಸ್ವಿಯಾಗಿ ಎಳೆದಿದ್ದೇನೆ ಎಂದರು.

            - ವೀರೇಂದ್ರಕುಮಾರ ಕೊಲ್ಲೂರು
         ಅಧ್ಯಕ್ಷರು ತಾಲೂಕು ಕಸಾಪ ಚಿತ್ತಾಪುರ

ನಿರ್ಣಯಗಳು ಕೈಗೊಳ್ಳದೆ ಮುಕ್ತಾಯಗೊಂಡ ೪ನೇ ಸಾಹಿತ್ಯ ಸಮ್ಮೇಳನ.

   4ನೇ ಕನ್ನಡ ಸಾಹಿತ್ಯ ಸಮ್ಮೇಳನದ ಭವ್ಯ ಮೆರವಣಿಗೆಯ ಸಾರೋಟಿನಲ್ಲಿ ಯಾರು ಇಲ್ಲದ ದೃಶ್ಯ.

ಚಿತ್ತಾಪುರ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಪಟ್ಟಣದ ಬಜಾಜ್ ಕಲ್ಯಾಣ ಮಂಟಪದ ಆವರಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ೪ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಹಿರಂಗ ಅಧಿವೇಶನ ಮಾಡದೇ ನಿರ್ಣಯಗಳನ್ನು ಕೈಗೊಳ್ಳದೇ ಮುಕ್ತಾಯಗೊಂಡಿರುವುದು ಸಾಹಿತ್ಯಾಭಿಮಾನಿಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಕನ್ನಡ ಸಾಹಿತ್ಯ ಸಮ್ಮೇಳನದ ಮೂಲಕ ಜನರಲ್ಲಿ ಕನ್ನಡ ನಾಡು ನುಡಿ,ನೆಲ,ಜಲ ಭಾಷೆಯ ಬಗ್ಗೆ ಜಾಗೃತಿ ಉಂಟು ಮಾಡುವುದು ಹಾಗೂ ಕನ್ನಡಾಭಿಮಾನ ಮೂಡಿಸುವುದು ಜೊತೆಗೆ ಕನ್ನಡ ನಾಡಿನ ಶ್ರೀಮಂತಿಗೆ ಮತ್ತು ಇತಿಹಾಸ ಬಗ್ಗೆ ಪರಿಚಯಿಸುವ ಕೆಲಸ ಮಾಡುವ ಮೂಲಕ ಸಮ್ಮೇಳನದ ಕೊನೆಯಲ್ಲಿ ಪ್ರಮುಖ ನಿರ್ಣಯಗಳನ್ನು ಕೈಗೊಂಡು ಅವುಗಳ ಅನುಷ್ಠಾನಕ್ಕೆ ಸರಕಾರಕ್ಕೆ ವರದಿ ಸಲ್ಲಿಸುವುದು ಕನ್ನಡ ಸಾಹಿತ್ಯ ಪರಿಷತ್ತಿನ ನಿಯಮಾವಳಿಯಾಗಿದೆ, ಆದರೆ ತಾಲೂಕು ಕಸಾಪ ಅಧ್ಯಕ್ಷರು ಪರಿಷತ್ತಿನ ನಿಯಮಗಳನ್ನೇ ಉಲ್ಲಂಘಿಸಿ ತಮ್ಮ ಮನ ಬಂದಂತೆ ವರ್ತಿಸಿರುವುದು ಕಂಡುಬಂದಿದೆ.

4ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ರಾಷ್ಟ್ರಧ್ವಜ ಹಾಗೂ ಕನ್ನಡ ಧ್ವಜವಿದ್ದು ಪರಿಷತ್ತಿನ ಧ್ವಜ ಇಲ್ಲದೇ ಇರುವುದು.

ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪರಿಷತ್ತಿನ ದ್ವಜಾರೋಹಣ ಮಾಡುವುದು ನಿಯಮವಿದೆ ಆದರೆ ಇಲ್ಲಿನ ಕಸಾಪ ಅಧ್ಯಕ್ಷರು ಕೇವಲ ರಾಷ್ಟ್ರದ್ವಜಾರೋಹಣ ಮತ್ತು ನಾಡ ದ್ಜಜಾರೋಹಣ ನೆರವೇರಿಸಿ ಪರಿಷತ್ತಿನ ದ್ವಜಾರೋಹಣ ಮಾಡದೇ ಪರಿಷತ್ತಿನ ನಿಯಮಗಳನ್ನು ಸಂಪೂರ್ಣವಾಗಿ ಉಲ್ಲಂಘಿಸುವ ಮೂಲಕ ಪರಿಷತ್ತಿನ ಘನತೆ ಗೌರವಕ್ಕೆ ದಕ್ಕೆ ತಂದಿದ್ದಾರೆ.

ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನು ಕಸಾಪ ಜಿಲ್ಲಾಧ್ಯಕ್ಷರು ಮತ್ತು ತಾಲೂಕು ಅಧ್ಯಕ್ಷರು ಸಾರೋಟಿನಲ್ಲಿ ಭವ್ಯ ಮೆರವಣಿಗೆಯೊಂದಿಗೆ ಸಮ್ಮೇಳನದ ಸ್ಥಳಕ್ಕೆ ಕರೆತರುವುದು ಸಂಪ್ರದಾಯ, ಆದರೆ ಬಜಾಜ್ ಕಲ್ಯಾಣ ಮಂಟಪದ ಆವರಣ ಇನ್ನೂ ದೂರ ಇರುವಾಗಲೇ ಜಿಲ್ಲಾಧ್ಯಕ್ಷರು ಮತ್ತು ತಾಲೂಕು ಅಧ್ಯಕ್ಷರು ರಥದಿಂದ ಇಳಿದು ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು ಹಾಗೂ ನಾ ಡ್ರೈವರ್ ಹಾಡಿಗೆ ನೃತ್ಯ ಮಾಡಿದರು. ರಥದಲ್ಲಿದ್ದ ಸರ್ವಾಧ್ಯಕ್ಷರು ಅವರು ಇಳಿದು ನೃತ್ಯದಲ್ಲಿ ಭಾಗಿಯಾದರು.ಸರ್ವಾಧ್ಯಕ್ಷರನ್ನು ಸಮ್ಮೇಳನ ಸ್ಥಳದವರೆಗೂ ಸಾರೋಟಿನಲ್ಲಿ ಮೆರವಣಿಗೆ ಮೂಲಕ ಗೌರವಯುತದಿಂದ ವೇದಿಕೆ ಕರೆತರುವ ಸಂಪ್ರದಾಯವನ್ನು ಗಾಳಿಗೆ ತೂರಿದ್ದಾರೆ.

ಭಾನುವಾರ, ಸೆಪ್ಟೆಂಬರ್ 24, 2023

ಸಮ್ಮೇಳನ ಆಯೋಜನೆಯ ಸ್ವಷ್ಟನೆ ನೀಡಲಿ: ನಾಲವಾರಕರ್ ಆಗ್ರಹ.


ಚಿತ್ತಾಪುರ: ಜಿಲ್ಲೆಯಲ್ಲಿ ಬರಗಾಲ ಆವರಿಸಿರುವುದರಿಂದ ಜಿಲ್ಲೆಯ ಯಾವುದೇ ತಾಲೂಕುಗಳಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆವಾಗಿರುವುದಿಲ್ಲ. ಆದರೆ ಯಾವ ಕಾರಣಕ್ಕಾಗಿ ಚಿತ್ತಾಪುರ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆ ಮಾಡಿರುವ ಬಗ್ಗೆ ಸ್ವಷ್ಟನೆ ನೀಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಕಾವಲು ಪಡೆ ರಾಜ್ಯ ವಕ್ತಾರ ಜಿಲ್ಲಾಧ್ಯಕ್ಷ ಮಂಜುನಾಥ ನಾಲವಾರಕರ್ ಆಗ್ರಹಿಸಿದ್ದಾರೆ.

 ಪಟ್ಟಣದಲ್ಲಿ ರವಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಜ್ಯದಲ್ಲಿ ಬರಗಾಲ ಘೋಷಣೆಯಾಗಿರುವುದರಿಂದ ರೈತರು ಸಂಕಷ್ಟದಲ್ಲಿದ್ದಾರೆ ಹೀಗಾಗಿ ಹಂಪಿ ಉತ್ಸವ, ಮೈಸೂರು ದಸರಾ ಉತ್ಸವಗಳನ್ನು ಸರಳ ರೀತಿಯಲ್ಲಿ ಆಚರಣೆಗೆ ರಾಜ್ಯ ಸರಕಾರ ಬದ್ಧವಾಗಿದ್ದು ಅಲ್ಲದೇ ಮಂಡ್ಯ ಜಿಲ್ಲೆಯಲ್ಲಿ ನಡೆಯಬೇಕಾದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ರದ್ದು ಮಾಡಿರುವ ಮಾದರಿಯಲ್ಲಿ ಚಿತ್ತಾಪುರ ತಾಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಕೂಡಾ ಮುಂದೂಡಬೇಕು ಎಂದರು 

 ಕನ್ನಡ ಸಾಹಿತ್ಯ ಪರಿಷತ್ತಿನ ಅಜೀವ ಸದಸ್ಯರಿಗೆ ಮಾಹಿತಿ ನೀಡದೇ, ಕನ್ನಡಪರ ಹೋರಾಟಗಾರರನ್ನು ಹಾಗೂ ಸಾಹಿತಿಗಳನ್ನು ಹೊರಗಿಟ್ಟು ಏಕ ಪಕ್ಷೀಯವಾಗಿ ನಡೆದುಕೊಂಡು ಬರೀ ಕಾಂಗ್ರೆಸ್ ಪಕ್ಷದ ಮುಖಂಡರನ್ನು ಅಹ್ವಾನಿಸಿದ್ದರಿಂದ ಇದು ಸಾಹಿತ್ಯ ಸಮ್ಮೇಳನವಲ್ಲ ಕಾಂಗ್ರೆಸ್ ಸಮ್ಮೇಳನವಾಗಿದೆ ಎಂದು ಆರೋಪಿಸಿದರು.

  ಉತ್ಸವಗಳಿಗೆ ಬಳಸುವ ಹಣವನ್ನು ರೈತರ ಸಂಕಷ್ಟಕ್ಕೆ ಬಳಸಲಾಗುವುದು ಎಂದು ಸರಕಾರ ಹೇಳಿದೆ ಹೀಗಿರುವಾಗ ಚಿತ್ತಾಪುರ ಸಮ್ಮೇಳನಕ್ಕೆ ಹಣ ಎಲ್ಲಿಂದ ಬಂದಿದೆ ಎಂಬುದನ್ನು ಹಾಗೂ ಕನ್ನಡ ಭವನ ಯಾಕೆ ನೆನಗುದಿಯಲ್ಲಿದೆ ಎಂಬುದು ಸಚಿವ ಪ್ರಿಯಾಂಕ್ ಖರ್ಗೆ ಸ್ವಷ್ಟಪಡಿಸಬೇಕು. ಕಸಾಪ ಅಧ್ಯಕ್ಷರು ಸಮ್ಮೇಳನದ ಅಮಂತ್ರಣ ಪತ್ರಿಕೆಯಲ್ಲಿ ಪರಿಷತ್ತಿನ ದ್ಜಜಾರೋಹಣ ಕೈ ಬಿಟ್ಟು ಪರಿಷತ್ತಿನ ನಿಯಮಕ್ಕೆ ದಕ್ಕೆ ತಂದಿದ್ದಾರೆ, ಅಲ್ಲದೇ ಕೆಕೆಆರ್‌ಡಿಬಿ ಅಧ್ಯಕ್ಷ ಡಾ.ಅಜಯಸಿಂಗ್ ಅವರ ಹೆಸರು ಕೈ ಬಿಟ್ಟಿದ್ದಾರೆ ಹಾಗೂ ನಾಗಾವಿ ನಾಡಿನ ಅಕ್ಷರ ಜಾತ್ರೆಗೆ ಬನ್ನಿ ಎಂದು ಹೇಳಿ ನಾಗಾವಿ ಯಲ್ಲಮ್ಮ ದೇವಿಯ ಚಿತ್ರ ಹಾಕದೇ ಅವಮಾನಿಸಿರುವುದು ಖಂಡನೀಯ ಎಂದರು.

  ಮಂಡ್ಯ ಜಿಲ್ಲೆಯಲ್ಲಿ ನಡೆಯಬೇಕಾದ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು  ರದ್ದು ಮಾಡಿದ ರಾಜ್ಯಾಧ್ಯಕ್ಷ ಡಾ.ಮಹೇಶ ಜೋಶಿ ಅವರು ಯಾವ ಮುಖ ಇಟ್ಟುಕೊಂಡು, ಯಾವ ಉದ್ದೇಶಕ್ಕಾಗಿ ಚಿತ್ತಾಪುರ ತಾಲೂಕು ಮಟ್ಟದ ಸಾಹಿತ್ಯ ಸಮ್ಮೇಳನ ಉದ್ಘಾಟನೆಗೆ ಆಗಮಿಸುತ್ತಿದ್ದಾರೆ ಇದೆಂಥ ವಿಪರ್ಯಸ ಸಂಗತಿ, ಇದರಿಂದ ರಾಜ್ಯಕ್ಕೆ ಯಾವ ಸಂದೇಶ ನೀಡುವಿರಿ ರಾಜ್ಯಾಧ್ಯಕ್ಷರೇ ಉತ್ತರ ನೀಡಿ ಎಂದು ಆಗ್ರಹಿಸಿದರು.

  ಸುದ್ದಿಗೋಷ್ಠಿಯಲ್ಲಿ ಕರವೇ ಜಿಲ್ಲಾ ಗೌರವಾಧ್ಯಕ್ಷ ರವಿ ವಾಲಿ, ತಾಲೂಕು ಅಧ್ಯಕ್ಷ ಮಂಜುನಾಥ ಸ್ವಾಮಿ,ಮುಖಂಡ ಚಂದ್ರಕಾಂತ ನಾಟೀಕಾರ ಇದ್ದರು.
      

ಭಾನುವಾರ, ಸೆಪ್ಟೆಂಬರ್ 10, 2023

ಟ್ರಸ್ಟ್‌ಗೆ ಸಂಬಂಧಿಸಿದ ಜಮೀನು ಕಾನೂನು ಬಾಹಿರ ಮಾರಾಟ.

ಕಲಬುರಗಿ: ನಗರದ ಕೆಎಚ್‌ಬಿ ಕಾಲೋನಿ ಮಾಲಗತ್ತಿ ಭೂಮಿ ಮಂಡಳಿಂದ ಅಬ್ದುಲ್ ಶುಕೂರ್ ತಂದೆ ಮೊಹಮ್ಮದ್ ಮಹಮೂದ್ ಅಲಿ ಎಂಬುವರು ಮಾಮುಪುರಿ ವಾಲೆ ಎಂಬ ಹೆಸರಿನಿಂದ ಕರೆಯಲ್ಪಡುವ ಇವರು ಕಾನೂನಿನ ಬಾಹಿರವಾಗಿ, ಕೆಎಚ್‌ಬಿ ಸಿ.ಎ ಸೈಟ್ ನಂ.1 ಗ್ರಾಮ ಪಂಚಾಯತ ನಂ. ಸರ್ವೆ ನಂ.84/1 ಹಾಗೂ 84/2, ಸೈಟಿ ನಂ.1 ವಿಸ್ತೀರ್ಣ4376.80 ಚ. ಮೀಟರ, ಕೆ ಎಚ್ ಬಿ ಕಾಲೋನಿ ಮಾಲಗತ್ತಿ ಕಲಬುರಗಿ, ಈ ಜಮೀನನ್ನು ಟ್ರಸ್ಟ ಕಡೆಯಿಂದ ಖರೀದಿ ಮಾಡಿ ಕಾನೂನು ಬಾಹಿರವಾಗಿ ಸೈಟಗಳನ್ನು ಮಾರಾಟ ಮಾಡುತ್ತಿದ್ದಾರೆ ಎಂದು ಪ್ರೆಸಿಡೆಂಟ್ ವರ್ಕಿಂಗ್ ಜರ್ನಾಲಿಸ್ಟ ಯೂನಿಯನ್ ಸೋಶಿಯಲ್ ಹಾಗೂ ವಲ್ವೇರ್ ಅಧ್ಯಕ್ಷ ಪಠಾನ ಸೂಫಿಯಾನ ಖಾನ ಆಗ್ರಹಿಸಿದ್ದಾರೆ.

 ಮಾನ್ಯ ಜಿಲ್ಲಾ ಅಧಿಕಾರಿಗಳಿಗೆ ಮನವಿ ಮಾಡಿ ಮಾತನಾಡಿದ ಅವರು ಈ ಖರೀದಿ ಪತ್ರದ ನೊಂದಣಿ ಸಂಖ್ಯೆ ಜಿಎಲ್‌ಬಿ-1-07748--2021–22, ಸಿ.ಡಿ. ನಂ.ಜಿಎಲ್‌ಬಿಡಿ!146 ದಿನಾಂಕ 18-09-2021ರಂದು ಖರೀದಿ ಮಾಡಿರುತ್ತಾರೆ, ಈ ಜಮೀನು ಟ್ರಸ್ಟ ಜಮೀನು ಆದ ಕಾರಣ ಇದನ್ನು ಯಾವುದೆ ವ್ಯಕ್ತಿ ಸ್ವಯಂಗಾಗಿ ಖರೀದಿ ಮಾಡುವುದು ಕಾನೂನಿನ ಬಾಹಿರವಾಗಿರುತ್ತದೆ ಇದನ್ನು ಖರೀದಿಮಾಡಬೇಕಾದರೆ ಇದಕ್ಕೆ ತನ್ನದೆ ಆದ ಟ್ರಸ್ಟ್ ಗುರಿ ಉದ್ದೇಶಗಳು ಇರುತ್ತವೆ ಅವು ಯಾವುದೇ ಅನುಸರಿಸದೆ ಟ್ರಸ್ಟ್‌ನ ನಿಯಮಗಳನ್ನು ಉಲ್ಲಂಘಿಸಿದ ಯಾರೆ ಆಗರಿ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದರು.

ಖರೀದಿದಾರರು ಈ ಜಮೀನನ್ನು ಖರೀದಿಸಿದ ನಂತರ ಈ ಜಮೀನಿನ ಮೇಲೆ 25 ನಿವೇಶನಗಳನ್ನು ರಚಿಸಿ ಇವುಗಳನ್ನು ಮಾರಾಟ ಮಾಡುತ್ತಿದ್ದಾರೆ, ಆದ ಕಾರಣ ಅಬ್ದುಲ ಶುಕೂರ ತಂದೆ ಮಹ್ಮದ ಮೆಹಮೂದ ಅಲಿ ಇವರ ಮೇಲೆ ಕಾನೂನಿನ ಕ್ರಮ ಜರುಗಿಸಬೇಕೆಂದು ಹಾಗೂ ಈ ಎಲ್ಲಾ 25 ನಿವೇಶನಗಳ ಎಲ್ಲಾ ಆದೇಶಗಳನ್ನು ಹಾಗೂ ಮಾರಾಟಗಳನ್ನು ರದ್ದುಗೋಳಿಸಬೇಕೆಂದು ಆಗ್ರಹಿಸಿದ್ದಾರೆ.

ಮಂಗಳವಾರ, ಆಗಸ್ಟ್ 29, 2023

ತಾಲ್ಲೂಕು ಅಧಿಕಾರಿಗಳ ವಿರುದ್ಧ ಸಚಿವರ ಅಸಮಾಧಾನ.

ಚಿತ್ತಾಪುರ: ತಾಲೂಕನ್ನು ಸಮಗ್ರ ಅಭಿವೃದ್ದಿಗೊಳಿಸಲು ಮುಂದಿನ ಐದು ವರ್ಷಗಳ ಅವಧಿಗಾಗಿ ನೂತನ ಯೋಜನೆಗಳ ಬಗ್ಗೆ ಪರಿಕಲ್ಪನೆ ಹೊಂದಿ‌ ಆ ಬಗ್ಗೆ ವರದಿ ತಯಾರಿಸುವಂತೆ ಕಳೆದ ಸಭೆಯಲ್ಲಿ ಸೂಚಿಸಿದ್ದೆ, ಆದರೆ‌ ಸರ್ಕಾರದ‌ ಬಹುತೇಕ‌ ಇಲಾಖೆಗಳ ಅಧಿಕಾರಿಗಳು ಆ ಬಗ್ಗೆ ಗಮನ ಹರಿಸಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದರು.

 ಪಟ್ಟಣದ ತಾಪಂ ಸಭಾಂಗಣದಲ್ಲಿ ನಡೆದ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಹಳೆ ಕಲ್ಯಾಣಿಗಳ ಪುನಶ್ಚೇತನಗೊಳಿಸುವುದು ಸೇರಿದಂತೆ ತಾಲೂಕಿನ ಜಲಮೂಲಗಳ ಸಂರಕ್ಷಣೆಗಾಗಿ ಯೋಜನೆ ಹಾಕಿಕೊಳ್ಳಲಾಗಿದ್ದು, ಸಣ್ಣ, ಬೃಹತ್ ನೀರಾವರಿ ಇಲಾಖೆ, ಕೆಬಿಜೆಎನ್‌ಎಲ್, ಕೆಎನ್ ಎನ್ ಎಲ್ ಹಾಗೂ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಗಳಯ ಜಂಟಿಯಾಗಿ ನೀಲನಕ್ಷೆ ತಯಾರಿಸಿ ಎಂದು ಸಚಿವರು ಸೂಚಿಸಿದರು.
ಸನ್ನತಿ ಏತ ನೀರಾವರಿ ಯೋಜನೆಯಡಿಯಲ್ಲಿ‌ 16,000 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸುವ ಗುರಿ ಹೊಂದಲಾಗಿದ್ದು, ಈವರೆಗೆ 11,830 ಹೆಕ್ಟರ್ ನೀರಾವರಿ ಹೊಂದಲಾಗಿದ್ದು ಸ್ಥಳೀಯ ರೈತರ ಸಹಕಾರದಿಂದಾಗಿ ಬಾಕಿ‌ ಇರುವ ಪ್ರದೇಶಕ್ಕೆ ನೀರಾವರಿ ಕಲ್ಪಿಸಲಾಗಿಲ್ಲ ಎಂದು ಕೆಎನ್ ಎನ್ ಎಲ್ ಅಧಿಕಾರಿಗಳು ತಿಳಿಸಿದರು.

ಪುನರ್ವಸತಿ ಕುರಿತಂತೆ ಯಾವ ಕ್ರಮ‌ಕೈಗೊಳ್ಳಲಾಗಿದೆ ಎಂದು ಸಚಿವರು ಅಧಿಕಾರಿಗಳಿಗೆ ಪ್ರಶ್ನಿಸಿದಾಗ ಉತ್ತರಿಸಿದ ಅಧಿಕಾರಿಗಳು‌ ಸನ್ನತಿ ಯೋಜನೆಯಿಂದಾಗಿ‌ ಸನ್ನತಿ ಗ್ರಾಮ ಭಾದ್ಯಸ್ಥವಾಗುವುದಿಲ್ಲ ಆದರೆ, ಹುರಸಗುಂಡಗಿ‌ ಗ್ರಾಮದ 700 ಕ್ಕೂ ಅಧಿಕ ಮನೆಗಳು ಹಾನಿಯಾಗುತ್ತಿದ್ದು ಆ ಪೈಕಿ 400 ಕ್ಕೂ ಅಧಿಕ ಮನೆಗಳಿಗೆ ಪರಿಹಾರ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

ಕೆಎನ್‌ಎನ್ ಎಲ್‌ಇಲಾಖೆಯ ವತಿಯಿಂದ ಎಸ್ ಸಿಪಿ‌/ ಟಿಎಸ್ ಪಿ ಯೋಜನೆಯಡಿಯಲ್ಲಿ‌ ಈ ಹಿಂದೆ‌ ಕರೆಯಲಾಗಿರುವ ಎಲ್ಲ ಟೆಂಡರ್ ಗಳನ್ನು ರದ್ದುಗೊಳಿಸಿ ಹೊಸದಾಗಿ ಟೆಂಡರ್ ಕರೆಯಲು ಕ್ರಮ ಕೈಗೊಳ್ಳಿ ಎಂದರು 
ಪಿಎಂ‌ಜಿಎಸ್ ವೈ ಹಾಗೂ ಪಿಆರ್ ಇ‌ ಇಲಾಖೆಯವರು ಯಾವ ರಸ್ತೆಗಳನ್ನು ಮೇಲ್ದರ್ಜೆಗೇರಿಸಬೇಕು ಎನ್ನುವ ಕುರಿತು ಪ್ರಸ್ತಾವನೆ ಸಲ್ಲಿಸಿದ್ದೀರಾ ಎಂದು ಸಚಿವರು ಪ್ರಶ್ನಿಸಿದಾಗ ಸಿಇಓ ಅವರಿಗೆ ಕಳಿಸಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದರು.
ಇದೇ ವೇಳೆ ಕೃಷಿ‌‌‌ ಇಲಾಖೆ ಸಹಾಯಕ ನಿರ್ದೇಶಕರಾದ ಸಂಜೀವಕುಮಾರ ಮಾನಕರ್ ಸಭೆಯಲ್ಲಿ ಮಾತನಾಡಿ ತಾಲೂಕಿನಲ್ಲಿ ಮಳೆಯ ಅಭಾವದಿಂದಾಗಿ ಉದ್ದು ಹಾಗೂ ಹೆಸರು ಸಂಪೂರ್ಣ ಹಾನಿಯಾಗಿದೆ. ತೊಗರಿ ಶೇ 100% ಬಿತ್ತನೆ ಪೂರ್ಣಗೊಂಡಿದೆ. ಆದರೆ, ಇನ್ನೊಂದು ವಾರದೊಳಗೆ ಮಳೆ ಬೀಳದೆ ಇದ್ದರೆ ತೊಗರಿ ಬೆಳೆಯೂ ಕೂಡಾ ಹಾನಿಯಾಗಲಿದೆ ಎಂದು ಕೃಷಿ‌‌‌ ಇಲಾಖೆ ಸಹಾಯಕ ನಿರ್ದೇಶಕ ಸಂಜೀವ್ ತಿಳಿಸಿದರು.

ತೊಗರಿಯ ನೆಟೆ‌ರೋಗದ ಪರಿಹಾರದ ಮೂರು ಹಂತಗಳ ಪೈಕಿ‌ ಇದುವರೆಗೆ ಒಂದು ಹಂತದ ಪರಿವಾರ ಬಿಡುಗಡೆಯಾಗಿದ್ದು ಇನ್ನುಳಿದ‌ ಹಂತದ ಪರಿಹಾರ ಬಿಡುಗಡೆ ಈಗಾಗಲೇ ಮೇಲಾಧಿಕಾರಿಗಳಿಗೆ ಪತ್ರ ಬರೆಯಲಾಗಿದೆ. ಜೊತೆಗೆ ಬರ ಘೋಷಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಬೆಳೆ ಹಾನಿಯ ಸರ್ವೆ ಮಾಡಲಾಗಿದೆ ಎಂದರು.ತಾಲೂಕಿಗೆ ಗೊಡೌನ್ ಅವಶ್ಯಕತೆ ಇದ್ದು ನಿರ್ಮಾಣ ಮಾಡಿದರೆ ರೈತರಿಗೆ ಅನುಕೂಲವಾಗಲಿದೆ ಎಂದು ಅಧಿಕಾರಿ‌ ತಿಳಿಸಿದಾಗ ಪ್ರಸ್ತಾವನೆ ಸಲ್ಲಿಸಿ ಎಂದು‌ ಸಚಿವರು ಸೂಚಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸಿದ್ದವೀರಯ್ಯ ಸ್ವಾಮಿ ಮಾತನಾಡಿ 15 ಹೊಸ ಶಾಲೆಗಳ ನಿರ್ಮಾಣಕ್ಕಾಗಿ ನೀಲಿನಕ್ಷೆ ತಯಾರಿಸಲಾಗಿದೆ‌ ಎಂದರು. ಸಚಿವರು ಮಾತನಾಡಿ ಶಾಲೆ ಕಟ್ಟಡಗಳ ನಿರ್ಮಾಣಕ್ಕಾಗಿ ಕೋಟಿಗಟ್ಟಲೇ ಅನುದಾನ ಬಿಡುಗಡೆ ಮಾಡಿದ್ದರೂ ಕೂಡಾ ಕಳಪೆ ಕಾಮಗಾರಿ ಆಗುತ್ತಿವೆ ಎಂದು ಸಚಿವರು ಅಸಮಧಾನ ವ್ಯಕ್ತಪಡಿಸಿದರು. ಕಟ್ಟಡಗಳ ಕಳಪೆ ಕಾಮಗಾರಿಯಲ್ಲಿ ಅಧಿಕಾರಿಗಳು ಯಾವುಕ್ಕೆ ಕ್ರಮ ಯಾಕೆ ಕೈಗೊಳ್ಳುವುದಿಲ್ಲ. ಕಟ್ಟಡ ನಿರ್ಮಾಣ ಮಾಡಿ ನಾಲ್ಕು ವರ್ಷ ಆಗಿರುವುದಿಲ್ಲ ಆದರೂ ಸೋರುತ್ತಿವೆ ಯಾಕೆ ಎಂದ ಪ್ರಶ್ನಿಸಿದರು.

ತಾಲೂಕಿನಲ್ಲಿ 334 ಶಿಕ್ಷಕರ ಕೊರತೆ ಇದ್ದು 254 ಅತಿಥಿ ಶಿಕ್ಷಕರನ್ನು ಇಲಾಖೆ ಒದಗಿಸಿದೆ ಎಂದು ರುದ್ನೂರು ಹೇಳಿದರು. ಆಗ ಉತ್ತರಿಸಿದ ಸಚಿವರು, ಮೂಲಭೂತ ಸೌಲಭ್ಯ ಒದಗಿಸುವ ಜವಾಬ್ದಾರಿ ನನ್ನದು ಆದರೆ, ಉತ್ತಮ ‌ಕಲಿಕೆ ಜವಾಬ್ದಾರಿ ನಿಮ್ಮದು ಎಂದರು.ಜಿಲ್ಲಾ ಪಂಚಾಯತ ಇಂಜಿನಿಯರಿಂಗ್ ವಿಭಾಗದ ಇಂಜಿನಿಯರ್ ಗಳು ವರ್ಗಾವಣೆಯಾದರೂ ಯಾಕೆ ರಿಲೀವ್ ಆಗಿಲ್ಲ ಹಾಗೂ ಯಾಕೆ ರಿಲೀವ್ ಮಾಡಿಲ್ಲ. ಸಂಬಂದಪಟ್ಟ ಆ ಎಲ್ಲ ಅಧಿಕಾರಿಗಳನ್ನು ಅಮಾನತು ಮಾಡಿ ಎಂದು ಸಚಿವರು ಪಂಚಾಯತ ರಾಜ್ ಇಲಾಖೆಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಅವರಿಗೆ ಸೂಚಿಸಿದರು.
ತಾಲೂಕಿನಲ್ಲಿ ಇನ್ನೂ ಎಷ್ಟು ಪ್ರಾಥಮಿಕ ಆರೋಗ್ಯ ಕೇಂದ್ರ ಬೇಕಾಗುತ್ತದೆ ಹಾಗೂ ಅದಕ್ಕೆ ಬೇಕಾಗುವ ಸಿಬ್ಬಂದಿಗಳು ಮತ್ತು ಇತರೆ ಮೂಲಭೂತ ಸೌಲಭ್ಯಗಳ ಬಗ್ಗೆ ಸಮಗ್ರ ವರದಿ ಸಲ್ಲಿಸುವಂತೆ ಸಚಿವರು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.ಇಲಾಖೆಯ ವತಿಯಿಂದ ಮೆಟ್ರಿಕ್ ಪೂರ್ವ ಹಾಗೂ ನಂತರದ ಹೊಸ ಹಾಸ್ಟೆಲ್ ಗಳ ನಿರ್ಮಾಣಕ್ಕೆ ಹಾಗೂ ಹಳೆ ಹಾಸ್ಟೆಲ್ ಗಳನ್ನು ಹೊಡೆದುಹಾಕಿ ನೂತನ ಹಾಸ್ಟೆಲ್ ಗಳ ಮತ್ತು ಜನಸಂಖ್ಯೆಗೆ ಅನುಗುಣವಾಗಿ ಹೊಸ ಹಾಸ್ಟೆಲ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಆದಷ್ಟು ಬೇಗ ಪ್ರಸ್ತಾವನೆ ಸಲ್ಲಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ತಾಲೂಕಿನ ಸಮಗ್ರ ಅಭಿವೃದ್ಧಿಗೆ ವಿನೂತನ ಕಾರ್ಯಕ್ರಮಗಳನ್ನು ಜಾರಿಗೆ ತರಲು ಪ್ರಯತ್ನಿಸುತ್ತಿದ್ದು ಕೆಲ ಅಧಿಕಾರಿಗಳನ್ನು ಹೊರತುಪಡಿಸಿ‌ ಉಳಿದವರು ಆ ಬಗ್ಗೆ ಗಂಭೀರವಾಗಿ ಪರಿಗಣಿಸಿದಂತೆ ಕಂಡು ಬರುತ್ತಿಲ್ಲ. ಹಾಗಾಗಿ, ಸರ್ಕಾರದ ಇಲಾಖೆಯ ಅಧಿಕಾರಿಗಳು ಆದಷ್ಟು ಬೇಗ ಪ್ರಸ್ತಾವನೆ ಸಲ್ಲಿಸಿ, ಈ ಅವಧಿಯಲ್ಲಿ ಚಿತ್ತಾಪುರದ ಅಭಿವೃದ್ದಿ ಆಗದಿದ್ದರೆ ಮುಂದೆಯೂ ಆಗುವುದಿಲ್ಲ. ನೀವು ಬಜೆಟ್ ಬಂದ ಮೇಲೂ ಮೈಗಳ್ಳತನ ತೋರಿಸಿದರೆ ನಾನೂ ಕೂಡಾ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಖಡಕ್ ಆಗಿ ಹೇಳಿದರು.

ಈ ಸಂದರ್ಭದಲ್ಲಿ ತಹಸೀಲ್ದಾರ್ ಸಯ್ಯಾದ ಶಾಷಾವಲಿ,
ತಾಪಂ ಇಓ ನೀಲಗಂಗಾ ಬಬಲಾದ್, ಸಿಪಿಐ ಪ್ರಕಾಶ ಯಾತನೂರು, ಕಾಳಗಿ ಮತ್ತು ಶಹಾಬಾದ್ ತಹಸೀಲ್ದಾರ ಅವರು ಉಪಸ್ಥಿತರಿದ್ದರು‌.

ಗುರುವಾರ, ಆಗಸ್ಟ್ 17, 2023

ಸಚಿವರ ಮಾತಿಗೆ ಬೆಲೆ ಕೊಡದ ಅಬಕಾರಿ ಇಲಾಖೆ.


ಹಳ್ಳಿ-ಗಲ್ಲಿಗಳಲ್ಲಿ ಮದ್ಯ ದಂಧೆ ಜೋರು. 

ಚಿತ್ತಾಪುರ: ತಾಲೂಕಿನ ಬಹುತೇಕ ಹಳ್ಳಿಗಳ ಗಲ್ಲಿ ಗಲ್ಲಿಗಳಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಬೇಕಾಬಿಟ್ಟಿ ಅಕ್ರಮ ಸರಾಯಿ ಮಾರಾಟ ಹಾಗೂ ಸಾಗಾಟ ಜೋರಾಗಿ ನಡೆಯುತ್ತಿದೆ. ಇದನ್ನೆಲ್ಲ ನೋಡಿದರೆ ಈ ಅಕ್ರಮ ಸರಾಯಿ ಮಾರಾಟಕ್ಕೆ ಅಬಕಾರಿ ಇಲಾಖೆಯ ಅಧಿಕಾರಿಗಳು ಸಾಥ್ ನೀಡುತ್ತಿರುವುದು ಕಂಡುಬರುತ್ತಿದೆ. 
ಸಚಿವ ಪ್ರಿಯಾಂಕ್ ಖರ್ಗೆ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಎಚ್ಚರಿಕೆ.

ಅಗಸ್ಟ್ 4ರಂದು ತಾಲ್ಲೂಕು ಪಂಚಾಯಿತ್ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಬಕಾರಿ ಇಲಾಖೆಗೆ ಸಂಬಂಧಿಸಿದಂತೆ ಪಟ್ಟಣದಲ್ಲಿ ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಕಿರಾಣ ಅಂಗಡಿಗಳಲ್ಲಿ ದಾಭಾಗಳಲ್ಲಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಅವಧಿಗೆ ಮೀರಿದ ಸಮಯದವರೆಗೆ ದಾಭಾಗಳು ತೆಗೆದಿರುತ್ತವೆ.‌ಈ ಬಗ್ಗೆ ಅಬಕಾರಿ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ ಸಚಿವರು ಬೇರೆ ಜಿಲ್ಲೆಯವರು ಎಷ್ಟಾದರೂ ಮದ್ಯ ಮಾರಾಟ ಮಾಡಲಿ, ಚಿತ್ತಾಪುರ ತಾಲೂಕಿನಲ್ಲಿ ಹೆಚ್ಚಿನ ಪ್ರಮಾಣ ಮಾರಾಟ ಮಾಡಲು ಅನುವು ಮಾಡಿಕೊಡಬೇಡಿ ಎಂದು 
ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಅಬಕಾರಿ ಅಧಿಕಾರಿಗಳಿಗೆ ಹೇಳಿದರು ಅಬಕಾರಿ ಇಲಾಖೆ ಅಧಿಕಾರಿಗಳು ಸಚಿವರ ಮಾತಿಗೆ ಬೆಲೆ ಕೊಡದೆ ಅಕ್ರಮ ಸರಾಯಿ ಮಾರಾಟಕ್ಕೆ ಸಾಥ್ ನೀಡುವುದು ಕಂಡುಬರುತ್ತಿದೆ.
ಅಕ್ರಮ ಸರಾಯಿ ಮಾರಾಟಕ್ಕೆ ಅಧಿಕಾರಿಗಳ ಸಾಥ್.

ಪಟ್ಟಣದ  ಬಾರ್ ಗಳು, ವೈನ್‌ಶಾಪ್ ಮಳಿಗೆಗಳಿಂದ ಬೆಳಿಗ್ಗಿನ ಜಾವ 4/5 ಗಂಟೆಗೆ ಆಟೋಗಳ ಮೂಲಕ ಹೆಚ್ಚಿನ ಪ್ರಮಾಣದಲ್ಲಿ ವ್ಯವಸ್ಥಿತ  ಸರಾಯಿ ಸಾಗಾಟ ಮಾಡುವ ಜಾಲ ಬೇರುಬಿಟ್ಟಿದೆ. ಮದ್ಯ ದಂಧೆ ಹೆಚ್ಚಳವಾಗಲು ಅಧಿಕಾರಿಗಳು ಮುಖ್ಯ ಕಾರಣ. ಅಧಿಕಾರಿಗಳ ಕಣ್ಣೆದುರಲ್ಲೇ ಈ ದಂಧೆ ನಡೆಯುತ್ತಿದ್ದರೂ, ಅಧಿಕಾರಿಗಳು ಕಣ್ಣು ಮುಚ್ಚಿ ಕುಳಿತಿದ್ದಾರೆ. ಯಾವುದೇ ಕ್ರಮ ಕೈಗೊಳ್ಳದೆ ಪರೋಕ್ಷವಾಗಿ ಸಾರಾಯಿ ದಂಧೆ ಬೆಂಗಾವಲಾಗಿ ನಿಂತಿದ್ದಾರೆ. ಇನ್ನಾದರೂ ಅಧಿಕಾರಿಗಳು ಎಚ್ಚರವಹಿಸಿ ಮಾರಾಟಗಾರರ ಮೇಲೆ ಮತ್ತಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವರೇ ಎಂಬ ಪ್ರಶ್ನೆ   ಸಾರ್ವಜನಿಕ ವಲಯದಿಂದ ಕೇಳಿಬರುತ್ತಿದೆ.

ಶುಕ್ರವಾರ, ಆಗಸ್ಟ್ 4, 2023

ಗ್ಯಾರಂಟಿ ಯೋಜನೆಗಳಿಗೆ ಎಸ್ಸಿ-ಎಸ್ಟಿ ಅನುದಾನ ಬಳಕೆ ಬೇಡ: ಡಿವಿಪಿ.


ಚಿತ್ತಾಪೂರ: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಎಸ್ಸಿ-ಎಸ್ಟಿ ಸಮುದಾಯಗಳಿಗೆ ಮೀಸಲು ಇರುವ 11 ಸಾವಿರ ಕೋಟಿ ಅನುದಾನವನ್ನು ಬಳಕೆ ಮಾಡದೇ ಸಮುದಾಯದ ಅಭಿವೃದ್ಧಿಗೆ ಬಳಸುವಂತೆ ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ರಾಜ್ಯದ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ಧರಾಮಯ್ಯರವರಿಗೆ ಬರೆದ ಮನವಿ ಪತ್ರವನ್ನು ಮಾನ್ಯ ತಹಶೀಲ್ದಾರ ರವರ ಮೂಲಕ ಸಲ್ಲಿಸಿದರು.

  ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಸಂಚಾಲಕ ಜಗದೇವ ಎಸ್ ಕುಂಬಾರ ಮಾತನಾಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯಗಳ ಅಭಿವೃದ್ಧಿಗೆ ಬಳಕೆ ಆಗಬೇಕಿದ್ದ ಈ ಸಾಲಿನ ಅನುದಾನದಲ್ಲಿನ 11 ಸಾವಿರ ಕೋಟಿ ರೂಪಾಯಿ ಹಣವನ್ನು ಸರ್ಕಾರದ ಗ್ಯಾರಂಟಿ ಯೊಜನೆಗಳಿಗೆ ಬಳಸುತ್ತಿರುವುದನ್ನು ದಲಿತ ವಿದ್ಯಾರ್ಥಿ ಪರಿಷತ್ ವಿರೋಧಿಸುತ್ತದೆ. ಕೂಡಲೇ ಈ ನಿರ್ಧಾರದಿಂದ ಸರ್ಕಾರ ಹಿಂದೆ ಸರಿಯಬೇಕು. 

  ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಸಮುದಾಯಗಳ ಸಮಗ್ರ ಅಭಿವೃದ್ಧಿಗಾಗಿ ಮೀಸಲಿರಬೇಕಾಗಿದ್ದ ಹಣವನ್ನು ಸರ್ಕಾರದ ಗ್ಯಾರಂಟಿ ಯೊಜನೆಗಳಿಗಾಗಿ ಬಳಸುತ್ತಿರುವುದನ್ನು ಖಂಡನೀಯ. ಶೋಷಿತ ಸಮುದಾಯಗಳ ಹಕ್ಕು ಕಿತ್ತುಕೊಂಡು, ತಮ್ಮ ಘೋಷಣೆ ಯೋಜನೆಗಳಿಗಾಗಿ ನಮ್ಮ ಹಣಬಳಸದೆ ಈ ಸಮುದಾಯಗಳ ವಿದ್ಯಾರ್ಥಿ ಯುವಜನರ ಹಾಗೂ ನಿರುದ್ಯೋಗ ಯುವಕರ, ಮಹಿಳೆಯರ ಮಕ್ಕಳ, ರೈತ ಕೂಲಿ ಕಾರ್ಮಿಕರ, ಒಟ್ಟಾರೆ ಈ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ  ಸಮುದಾಯಗಳ ಸಮಗ್ರ ಅಭಿವೃದ್ಧಿಗೆ ಅನುದಾನ ಮೀಸಲಿಡಬೇಕೆಂದು ದಲಿತ ವಿದ್ಯಾರ್ಥಿ ಪರಿಷತ್ ಒತ್ತಾಯಿಸುತ್ತದೆ ಎಂದರು.

  ಈ ಸಂದರ್ಭದಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ತಾಲ್ಲೂಕು ಸಂಚಾಲಕ ಪೃಥ್ವಿರಾಜ್ ಸಾಗರ, ಕುಮಾರ ಜಾಧವ್, ಶರಣು ದಂಡೋತಿ, ಸುನಿಲ್ ಜಿತುರೆ, ಸೇರಿದಂತೆ ಇತರರು ಇದ್ದರು.



ಸೋಮವಾರ, ಜೂನ್ 5, 2023

ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ: ಪಲ್ಲೇದ.

ಚಿತ್ತಾಪೂರ: ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ ಎನ್ನುವ ಮಾತನ್ನು ನಾವು ಚಿಕ್ಕಂದಿನಿಂದಲೇ ಕೇಳಿರುತ್ತೇವೆ. ಮಾತ್ರವಲ್ಲದೆ ಅದರ ಮೇಲೆ ಪ್ರೀತಿ, ಕಾಳಜಿಯು ಮುಖ್ಯವಾಗಿರುತ್ತದೆ. ಅದಕ್ಕನುಗುಣವಾಗಿ ವಿಶ್ವ ಪರಿಸರ ದಿನವೆಂದು ಜೂನ್‌ 5ರಂದು ಆಚರಿಸುತ್ತೇವೆ. ಈ ಮಾತು ಕೇವಲ ಆ ದಿನಕ್ಕನುಗುಣವಾಗಿರದೆ ಪ್ರತಿ ದಿನ ಸಾಧ್ಯವಾಗದಿದ್ದರೆ ವಾರಕ್ಕೊಮ್ಮೆಯಾದರೂ ಸಸ್ಯದ ಪೋಷಣೆ ಮಾಡಿದರೆ ಆ ಗಿಡವೇ ಮುಂದಿನ ಮರವಾಗಿ ನಾವು ಪ್ರಕೃತಿಗೆ ಕೊಟ್ಟ ಉಡುಗೊರೆಯಾಗುತ್ತದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಸಂತೋಷ ಎಸ್ ಪಲ್ಲೇದ ಹೇಳಿದರು.


ಪಟ್ಟಣದ ಹೊರ ವಲಯದ ಜ್ಞಾನ ಗಂಗಾ ಶಿಕ್ಷಣಾ ಸಂಸ್ಥೆಯಲ್ಲಿ ತಾಲೂಕು ಕಾನೂನು ಸೇವಾ ಸಮಿತಿ,ವಕೀಲರ ಸಂಘ,ಇವರ ಸಂಯುಕ್ತಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆ, ಪ್ಲಾಸ್ಟಿಕ್ ಕುರಿತು ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ನಿಮ್ಮ ನಿಮ್ಮ ಸುತ್ತಲಿನ ಪರಿಸರ ಸಂರಕ್ಷಣೆ ಮಾಡಿದ್ರೆ ನಮ್ಮ ಆರೋಗ್ಯ ಸುಚಿಯಾಗಿರುತ್ತದೆ. ಅಷ್ಟೇ ಅಲ್ಲದೇ ಸದೃಢ ಸಮಾಜ ನಿರ್ಮಾಣ ಮಾಡಲು ಸಾದ್ಯವಾಗುತ್ತದೆ ಎಂದರು.


ವಲಯ ಅರಣ್ಯಾಧಿಕಾರಿ ವಿಜಯಕುಮಾರ ಮಾತನಾಡಿ
ಪರಿಸರ ಮಾಲಿನ್ಯ, ಜಲಮಾಲಿನ್ಯ, ವಾಯು ಮಾಲಿನ್ಯ, ಶಬ್ದ ಮಾಲಿನ್ಯ ನಿಯಂತ್ರಣ ಮಾಡುವಲ್ಲಿ ನಾವು ನಿರಂತರಾಗಿರಬೇಕು, ನಮ್ಮ ಸುತ್ತಲಿನ ಫಲವತ್ತಾದ ಮಣ್ಣು, ಸಗಣಿ, ಒಳಸಿಕೊಂಡು ಸಸಿಗಳನ್ನು ನೆಟ್ಟು ಬೆಳೆಸಬೇಕು ಎಂದು ಕರೆ ನೀಡಿ. ಹುಟ್ಟಿದ ಪ್ರತಿಯೊಬ್ಬರಿಗೂ ಬದುಕುವ ಹಕ್ಕಿರುವಂತೆ ಎಲ್ಲ ಪಶು–ಪಕ್ಷಿ, ಪ್ರಾಣಿ, ಮರ-ಗಿಡಗಳಿಗೂ ಇದೆ. ಇವೆಲ್ಲವೂ ಬದುಕಿದಾಗ ಮಾತ್ರ ನಾವು-ನೀವು ಎಲ್ಲರೂ ಜೀವಿಸಲು ಸಾಧ್ಯ. ಅರಣ್ಯದಲ್ಲಿರುವ ಆನೆ, ಹುಲಿ, ಚಿರತೆ ಇಂದಿನ ದಿನಗಳಲ್ಲಿ ಅಲ್ಲಲ್ಲಿ ಗ್ರಾಮ, ಪಟ್ಟಣ ಮತ್ತು ನಗರಗಳಲ್ಲಿ ಕಾಣಿಸಿಕೊಳ್ಳುತ್ತಿವೆ. ಅರಣ್ಯ ನಾಶವೇ ಇದಕ್ಕೆ ಮೂಲ ಕಾರಣ. ಪ್ರಾಣಿ ಸಂಕುಲಗಳು ಅರಣ್ಯ ಬಿಟ್ಟು ಊರೊಳಗೆ ಬರುವುದು ಸಹಜ ಹೀಗಾಗಿ ಯಾರು ಭಯಪಡಬೇಡಿ ಇದಕ್ಕೆ ಪರ್ಯಾಯವಾಗಿ ಹೆಚ್ಚಿನ ಪ್ರಮಾಣ ಗಿಡ-ಮರಗಳು ಬೆಳಸುವ ಜೊತೆಗೆ ಅವುಗಳ ರಕ್ಷಣೆ ಆಗಬೇಕಾಗಿದೆ ಆದ್ದರಿಂದ ನಾವು ನಿವು ಎಲ್ಲರೂ ಪರಿಸರ ಸಂರಕ್ಷಣೆಯಲ್ಲಿ ಪಾಲ್ಗೊಳ್ಳೋಣ ಎಂದು ಹೇಳಿದರು.

ಈ ಸಂದರ್ಭದಲ್ಲಿ  ಜ್ಞಾನ ಗಂಗಾ ಶಿಕ್ಷಣ ಸಂಸ್ಥೆ ಅಧ್ಯಕ್ಷ ಪ್ರಕಾಶ ಹಂಚನಾಳ, ಸಿವಿಲ್ ನ್ಯಾಯಾಧೀಶರಾದ ಸಂತೋಷಕುಮಾರ ದೈವಜ್ಞ, ಶ್ರೀಮತಿ ಅಂಜನಾದೇವಿ ಆರ್, ಗಂಗಾಧರ ಸಾಲಿಮಠ, ವಲಯ ಅರಣ್ಯಾಧಿಕಾರಿ ವಿಜಯಕುಮಾರ,ಸತೀಶ ಮುಡಬೂಳಕರ,ಶಿವಾನಂದ ಅಂಬಿಗೇರ್,  ಅರಣ್ಯ ಸಿಬ್ಬಂದಿಗಳಾದ ಜಟ್ಟೆಪ್ಪ ಸಾರಿ, ಚಂದ್ರಹಾಸ ನಾಯಕ, ಮಂಜುನಾಥ ಹಂದ್ರಾಳ, ಗುರುರಾಜ, ಸಂತೋಷ ಕುಮಾರ, ಶಿಕ್ಷಣಾ ಸಂಸ್ಥೆಯ ಸಿಬ್ಬಂದಿಗಳಾದ ಶ್ರೀಮತಿ ಶೃತಿ, ಶ್ರೀಮತಿ ಪ್ರೀಯಾಂಕಾ, ಗುರು, ರಶ್ಮಿ, ಪ್ರಶಾಂತ, ಮಲ್ಲಣ್ಣಗೌಡ, ಸೇರಿದಂತೆ ಇತರರು ಇದ್ದರು.

ಭಾನುವಾರ, ಜೂನ್ 4, 2023

ಜ್ಞಾನದ ಮಟ್ಟವನ್ನು ಹೆಚ್ಚಿಸಿಕೊಳ್ಳಿ: ಕಾಶಿನಾಥ ಗುತ್ತೇದಾರ್

ಚಿತ್ತಾಪುರ: ಗ್ರಂಥಾಲಯ ಜ್ಞಾನದ ಭಂಡಾರ ಇದ್ದಂತೆ ಹೀಗಾಗಿ ಯುವಕರು ಅಲ್ಲಿ ಇಲ್ಲಿ ಕುಳಿತುಕೊಂಡು ಹರಾಟೆ ಹೊಡೆದು ವ್ಯರ್ಥ ಸಮಯವನ್ನು ಕಳೆಯದೇ ಗ್ರಂಥಾಲಯಕ್ಕೆ ಭೇಟಿ ನೀಡಿ ವಿವಿಧ ಪುಸ್ತಕಗಳನ್ನು ಓದುವ ಮೂಲಕ ತಮ್ಮ ಜ್ಞಾನದ ಮಟ್ಟವನ್ನು ಹೆಚ್ಚಿಸಿಕೊಳ್ಳಬೇಕು ಎಂದು ನಾಗಾವಿ ಸಾಹಿತ್ಯ ಸಾಂಸ್ಕೃತಿಕ ಪರಿಷತ್ತು ಅಧ್ಯಕ್ಷ ಕಾಶಿನಾಥ ಗುತ್ತೇದಾರ ಹೇಳಿದರು.

  ಪಟ್ಟಣದ ಸ್ಟೇಷನ್ ತಾಂಡಾದ ಸೇವಾಲಾಲ್ ಮಂದಿರದ ಹತ್ತಿರ ತಾಂಡಾ ಅಭಿವೃದ್ದಿ ನಿಗಮದಿಂದ ಮಂಜೂರಾದ ನೂತನ ಗ್ರಂಥಾಲಯದ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಅವರು, ಸ್ಪರ್ಧಾತ್ಮಕ ಪರೀಕ್ಷೆಗೆ ಸಹಾಯಕವಾಗುವ ಪುಸ್ತಕಗಳು, ಭಾರತದ ಸಂವಿಧಾನ, ರಾಜಕೀಯ, ಇತಿಹಾಸ, ಅರ್ಥಶಾಸ್ತ್ರ ಸೇರಿದಂತೆ ವಿವಿಧ ವಿಷಯಗಳ ಸಾವಿರಾರು ಪುಸ್ತಕಗಳು ಒಂದೇ ಸ್ಥಳದಲ್ಲಿ ಸಂಗ್ರಹಿಸಿರುವ ಗ್ರಂಥಾಲಯಗಳು ಅಮೂಲ್ಯವಾದ ಜ್ಞಾನ ಭಂಡಾರ ಎಂದರು. ಪ್ರತಿಯೊಬ್ಬರು ತಮ್ಮ ಜ್ಞಾನದ ಹಸಿವನ್ನು ತೀರಿಸಿಕೊಳ್ಳಲು ಹೆಚ್ಚು ಹೆಚ್ಚು ಪುಸ್ತಕಗಳನ್ನು ಓದುವುದರ ಜತೆಗೆ ಮಕ್ಕಳಲ್ಲಿ ಓದುವ ಅಭಿರುಚಿಯನ್ನು ಬೆಳೆಸಬೇಕು ಎಂದು ಕಿವಿಮಾತು ಹೇಳಿದರು.

  ದೇವರ ಮೂರ್ತಿ ಇರುವುದಕ್ಕೆ ಎಲ್ಲರೂ ದೇವಸ್ಥಾನ ಎಂದು ಭಾವಿಸಿದ್ದಾರೆ ಆದರೆ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರು ಗ್ರಂಥಾಲಯವನ್ನು ದೇವಸ್ಥಾನ ಎಂದು ಭಾವಿಸಿಕೊಂಡು ಜೀವನದ ಅತ್ಯಮೂಲ್ಯ ಸಮಯ ಗ್ರಂಥಾಲಯದಲ್ಲೇ ಕಳೆದಿದ್ದರಿಂದ ಇಂದು ಮಹಾನ್ ಜ್ಞಾನಿಯಾಗಿದ್ದಾರೆ ಎಂದು ಬಣ್ಣಿಸಿದರು. ತಾಂಡಾದಲ್ಲಿ ಉದ್ಘಾಟನೆಯಾದ ಗ್ರಂಥಾಲಯವನ್ನು ದೇವಸ್ಥಾನದಂತೆ ನೋಡಿಕೊಂಡು ಇದರ ಸದುಪಯೋಗ ಮಾಡಿಕೊಳ್ಳುವ ಮೂಲಕ ಓದುವ ಹವ್ಯಾಸ ರೂಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಗ್ರಂಥಾಲಯಕ್ಕೆ ನಾನು ವಯಕ್ತಿಕವಾಗಿ ೫ ಸಾವಿರ ವೆಚ್ಚದ ವಿವಿಧ ಪುಸ್ತಕಗಳ್ನು ದೇಣಿಗೆಯಾಗಿ ನೀಡುತ್ತೇನೆ ಎಂದು ಗುತ್ತೇದಾರ ಹೇಳಿದರು.

 ಪುರಸಭೆ ಸದಸ್ಯ ಜಗದೀಶ ಚವ್ಹಾಣ್ ಇವತ್ತಿನ ದಿನಗಳಲ್ಲಿ ಓದುವ ಹವ್ಯಾಸ ಕಡಿಮೆಯಾಗಿ ಓದುಗರ ಸಂಖ್ಯೆ ಕ್ಷೀಣಿಸುತ್ತಿದೆ.ಈ ಗ್ರಂಥಾಲಯ ತಾಂಡಾ ವಿದ್ಯಾರ್ಥಿಗಳ ಕಲಿಕೆಗೆ ಜನಸಾಮಾನ್ಯರ ಜ್ಞಾನಾಭಿವೃದ್ಧಿಗೆ ಉತ್ತಮ ಅವಕಾಶಕ್ಕೆ ಕಲ್ಪಿಸಿದಂತೆ ಆಗಿದೆ ಇದರಿಂದ ಪ್ರತಿಯೊಬ್ಬರು ಗ್ರಂಥಾಲಯದ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

  ಉದ್ಘಾಟನೆ ನೆರವೇರಿಸಿದ ನಿಗಮದ ಜಿಲ್ಲಾ ಅಭಿವೃದ್ದಿ ಅಧಿಕಾರಿ ಸೂರ್ಯಕಾಂತ ರಾಠೋಡ ಮಾತನಾಡಿ, ಗ್ರಂಥಾಲಯಕ್ಕೆ ತಾಂಡಾ ಅಭಿವೃದ್ದಿ ನಿಗಮದಿಂದ ೧ಲಕ್ಷ ವೆಚ್ಚದಲ್ಲಿ ವಿವಿಧ ಸ್ಪರ್ಧಾತ್ಮಕ ಹಾಗೂ ಸಾಮಾನ್ಯ ಪುಸ್ತಕಗಳು ಹಾಗೂ ೧ ಲಕ್ಷ ವೆಚ್ಚದ ಪೀಠೋಪಕರಣಗಳು ಸೇರಿದಂತೆ ಒಟ್ಟು ೨ಲಕ್ಷ ಬಿಡುಗಡೆಯಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅನುದಾನ ನೀಡುವ ಮೂಲಕ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದು ಹೇಳಿದರು.

  ಬಂಜಾರ ಸಮಾಜದ ಹಿರಿಯ ಮುಖಂಡ ತುಕಾರಾಮ್ ನಾಯಕ, ಗೋರ್ ಸೇನಾ ಜಿಲ್ಲಾಧ್ಯಕ್ಷ ಅಶ್ವಥ ರಾಠೋಡ, ಶಿವರಾಮ ಚವ್ಹಾಣ, ಬೊಮ್ಮು ಪವಾರ, ಶಿಕ್ಷಕರಾದ ಛತ್ರು ರಾಠೋಡ, ವಿಶ್ವನಾಥ ರಾಠೋಡ ಮಾತನಾಡಿದರು. ದೇವಿದಾಸ ನಾಯಕ, ತುಕಾರಾಮ ಪವಾರ, ಕಿರಣ ನಾಯಕ, ಲಕ್ಷ್ಮಣ ನಾಯಕ, ಆರ್.ಸಿ.ರಾಮನ್, ರವೀಂದ್ರ ನಾಯಕ, ಕುಮಾರ ಚವ್ಹಾಣ, ವಾಸು ರಾಠೋಡ, ಭೀಮಾ ನಾಯಕ, ಪಿಪಿನ್ ರಾಠೋಡ, ಅನೀಲ ಪವಾರ, ಆಕಾಶ ಚವ್ಹಾಣ, ಧರ್ಮು ಜಾಧವ, ಪ್ರಭುದಾಸ ರಾಠೋಡ, ಹೀರಾಬಾಯಿ ರಾಠೋಡ ಇತರರು ಇದ್ದರು. ಭೀಮಸಿಂಗ ಪವಾರ ಪ್ರಾರ್ಥಿಸಿದರು, ಜಗದೀಶ ಪವಾರ ನಿರೂಪಿಸಿ ವಂದಿಸಿದರು.

ಬುಧವಾರ, ಮೇ 31, 2023

ಪ್ರೀಯಾಂಕ್ ಖರ್ಗೆ ಸಚಿವ ಸ್ಥಾನಕ್ಕಾಗಿ ಹರಕೆ ಈಡೇರಿಸಿದ ಅಭಿಮಾನಿ.

ಚಿತ್ತಾಪೂರ: ಮೀಸಲು ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಪ್ರಿಯಾಂಕ್ ಖರ್ಗೆ ಗೆಲುವಿಗೆ ಹಾಗೂ ಸಚಿವ ಸ್ಥಾನಕ್ಕೆ ಹೇಳವನಕೇರಿ ಗ್ರಾಮದ ಅಭಿಮಾನಿ ಹಾಗೂ ಅಲೆಮಾರಿ ಅಭಿವೃದ್ಧಿ ನಿಗಮದ ಜಿಲ್ಲಾ ಸಲಹ ಸಮಿತಿ ಸದಸ್ಯ ತಿಪ್ಪಣ್ಣ ರಾಮಣ್ಣ ಹೆಳವ ಅವರು ಮಂಗಳವಾರ ದೇವರಿಗೆ ಹರಕೆ ತಿರಿಸಿದ್ದಾರೆ.

ತೀವ್ರ ಜಿದ್ದಜಿದ್ದಿನ ಕ್ಷೇತ್ರವಾಗಿದ್ದ ಚಿತ್ತಾಪೂರ ಮತಕ್ಷೇತ್ರದ ಅಭ್ಯರ್ಥಿ ಪ್ರಿಯಾಂಕ್ ಖರ್ಗೆ ಅವರು ಚುನಾವಣೆಯಲ್ಲಿ ಅತಿ ಹೆಚ್ಚಿನ ಮತಗಳನ್ನು ಪಡೆದು ಗೆಲವು ಸಾಧಿಸಲೆಂದು ಹಾಗೂ ನೂತನ ಸರಕಾರದಲ್ಲಿ ಸಚಿವ ಸ್ಥಾನ ಸಿಗಲೆಂದು ಶ್ರೀ ನಾಗಾವಿ ಯಲ್ಲಮ್ಮ ದೇವಿ, ಯನಾಗುಂದಿ ಮಾತಾ ಮಣಿಕೇಶ್ವರಿ, ಯನಾಗುಂದಿ ಮೌಲಾಲಿ ಮುತ್ಯಾ, ಕಾನಕುರ್ತಿ ಶ್ರೀ ಯಲ್ಲಮ್ಮ ದೇವಿ, ಹಾಗೂ ಶ್ರೀ ಪರಶುರಾಮ ದೇವರಿಗೆ ಪ್ರತಿ ದೇವರಿಗೆ ಐದು ಟೆಂಗಿನಕಾಯಿ ಒಡಿಯುವ ಹರಿಕೆ ಮಾಡಿದ್ದರು.

ನೂತನ ಸರಕಾರದಲ್ಲಿ ಗ್ರಾಮೀಣ ಪಂಚಾಯತ ರಾಜಾ ಇಲಾಖೆ ಸಚಿವರಾಗಿದ್ದಕ್ಕೆ ಅಭಿಮಾನಿಯು ಖುಷಿಯಿಂದ ಮಂಗಳವಾರ ಎಲ್ಲಾ ದೇವರಿಗೆ ಭೇಟಿ ನೀಡಿ ದೇವರ ಹರಿಕೆ ತಿರಿಸಿದ್ದರು.





ಎಸ್ಸೆಸ್ಸೆಲ್ಸಿ ಮಕ್ಕಳೊಂದಿಗೆ ಜಿಪಂ ಸಿಇಒ ಚರ್ಚೆ.

ಚಿತ್ತಾಪುರ: ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮಪಡಿಸಲು ಪೂರ್ವಸಿದ್ಧತಾ ಪರೀಕ್ಷೆ-1 ರಲ್ಲಿ ಅತ್ಯಂತ ಕಡಿಮೆ ಫಲಿತಾಂಶ ಪಡೆದ ಕರ್ನಾಟಕ ಪಬ್ಲಿಕ್ ಶಾಲೆ ಮಾಡಬೂಳ,...