ಮಂಗಳವಾರ, ಜನವರಿ 14, 2025

ಬಜಾಜ್ ಕಾಂಪ್ಲೆಕ್ಸ್ ನಲ್ಲಿ ಅನೈತಿಕ ಚಟುವಟಿಕೆ.

ಚಿತ್ತಾಪುರ: ಪಟ್ಟಣದ ಬಜಾಜ್ ಕಾಂಪ್ಲೆಕ್ಸ್ ಮಾಳಿಗೆ ಬಿ68  ಸ್ವಾಮಿ ಬರ್ತಡೇ ಸೆಲೆಬ್ರೇಶನ್ ಇವೆಂಟ್ ನಲ್ಲಿ ಸಂಶಯದ ಮೆರೆಗೆ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂದು ಮೂಲನಿವಾಸಿಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಸೇರ್ ಅಲಿ 
ಶೇಖ್ ತಿಳಿಸಿದ್ದಾರೆ.

ಜ,13 ಸೋಮವಾರ ಬೆಳಗ್ಗೆ 10:45ಕ್ಕೆ ಬರ್ತಡೇ ಸೆಲೆಬ್ರೇಶನ್ ಸಲುವಾಗಿ ಹುಡುಗ/ಹುಡುಗಿ ಸ್ವಾಮಿ ಬರ್ತಡೆ ಸೆಲೆಬ್ರೇಶನ್ ಇವೆಂಟ್ ಬಂದಿರುತ್ತಾರೆ  ಬರ್ತಡೆ ಆಚರಣೆ ಮಾಡಿಕೊಳ್ಳಲು ಬಿಟ್ಟು ಹೋಗಿರುತ್ತಾರೆ ಮಧ್ಯಾಹ್ನ 2 ಗಂಟೆಯ ನಂತರ ಹುಡುಗ/ ಹುಡುಗಿ ಮಳಿಗೆಯಿಂದ ಹೊರಗೆ ಬರುವ ದೃಶ್ಯ ಕಂಡು ಪಕ್ಕದ ಮಳಿಗೆಯವರು ಸಂಶಯದ ಮೇಲೆ ಅವರಿಗೆ ವಿಚಾರಿಸಿದಾಗ ಭಯದಿಂದ ಅವರು ಓಡಿ ಹೋಗಿರುತ್ತಾರೆ ಇಂದು ಒಂದೆ ಘಟನೆ ಅಲ್ಲಾ ಇಲ್ಲಿ ಸುಮಾರು ಸಾರಿ ಈ ರೀತಿ ಘಟನೆಗಳು ಆಗಿವೆ ಎಂದಿದ್ದಾರೆ.

 ಬರ್ತಡೇ ಸೆಲೆಬ್ರೇಶನ್ ಇವೆಂಟ್ ಒಳಗಡೆ ನೋಡಿದರೆ ಎಲ್ಲೆಂದರಲ್ಲಿ ಕಾಂಡೊಮ್ ಬಿದ್ದಿದು ಕಂಡುಬಂದಿತ್ತು. 
ಡಸ್ಟ್ ಬಿನ್ ಒಂದರಲ್ಲಿ ಕಾಂಡೊಮ್ ಬಳಕೆ ಮಾಡಿ ಬಿಸಾಡಿದ ದೃಶ್ಯ ಸಹ ಕಂಡಿತು, ಹಾಗೂ ಸಿಸಿ ಕ್ಯಾಮೆರಾ ಕಿತ್ತಿ ಹಾಕಲಾಗಿತ್ತು. ಹಾಗೆ ಬೆಳಗ್ಗೆಯಿಂದ ರಾತ್ರಿವರೆಗೂ ಇಲ್ಲಿ ಒಂದಲ್ಲ ಒಂದು ಕಾರ್ಯಕ್ರಮ ನಡೆಯುತ್ತಿರುತ್ತವೆ. ಸಮಯದ ಮಿತಿ ಇಲ್ಲ, ಒಳಗಡೆ ಮಧ್ಯಪಾನ ಸಹ ಮಾಡುತ್ತಾರೆ ಎನ್ನಲಾಗುತ್ತಿದೆ. ಇಷ್ಟೆಲ್ಲ ವಿಷಯ ಕಂಡು ಪಕ್ಕದ ಮಾಳಿಗೆಯವರಿಗೆ ಸಂಶಯ ಉಂಟಾಗಿದೆ ಎನ್ನುತ್ತಾರೆ. 

ಈ ಮಾಳಿಗೆಯ ಅಕ್ಕ-ಪಕ್ಕ ಮತ್ತು ಹಿಂದೆ-ಮುಂದೆ ಹೈಟೆಕ್ ಕಂಪ್ಯೂಟರ್ ತರಬೇತಿ, ಬ್ಯೂಟಿ ಪಾರ್ಲರ್, ಮುತ್ತೂಟ್ ಫೈನಾನ್ಸ್, ಮೇಲೆ ಶಾಲಾ ಕಾಲೇಜು, ಹೀಗೆ ಅನೇಕ ಮಾಳಿಗೆಗಳಿದ್ದು ಈ ವಿಷಯ ತಿಳಿದು ಅವರೆಲ್ಲರಿಗೂ ಮುಜುಗರ ಉಂಟಾಗಿದೆ ಎನ್ನಲಾಗಿದೆ.

ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಸ್ವಾಮಿ ಬರ್ತಡೇ ಸೆಲೆಬ್ರೇಶನ್ ಇವೆಂಟ್ ಮಾಲೀಕರನ್ನು ಕರೆಸಿ ವಿಚಾರಿಸಿ ಅಲ್ಲಿ ನಡೆಯುತ್ತಿರುವ ಅನೈತಿಕ ಚಟುವಟಿಕೆ ನಿಜಾನಾ ಸುಳ್ಳ ಎಂಬ ತನಿಖೆಯನ್ನು ಕೈಗೊಂಡು ಸತ್ಯ ಸತ್ಯತೆಯನ್ನು ಮೂಲಕ ತಪ್ಪಿತಸ್ಥನಿಗೆ ಕಾನೂನು ಕ್ರಮ ಕೈಗೊಳ್ಳಬೇಕಾಗಿ ವಿನಂತಿಸಿದ್ದಾರೆ.
 
1) ಬರ್ತಡೇ ಸೆಲೆಬ್ರೇಶನ್ ಇವೆಂಟ್ ನಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂಬ ಸುದ್ದಿ ತಿಳಿದ ಬಂದಿದೆ ಕೂಡಲೆ ಅವರನ್ನು ಮಳಿಗೆ ಖಾಲಿ ಮಾಡಿಸುವುದಾಗಿ ತಿಳಿಸಿದ್ದಾರೆ.

- ನಂದ ಕಿಶೋರ್ 
ಬಜಾಜ್ ಕಾಂಪ್ಲೆಕ್ಸ್ ಮಾಲೀಕರು ಚಿತ್ತಾಪುರ. 

2)ಬರ್ತಡೇ ಸೆಲೆಬ್ರೇಶನ್ ಇವೆಂಟ್ ಮಾಲೀಕರಾದ ಶಾಂತು ಚಿಕ್ಕಮಠ/ ಸುರೇಶ್ ಎಂಬುವರಿಗೆ ಪತ್ರಕರ್ತರು ಫೋನ್ ಮಾಡಿ ವಿಚಾರಿಸಿದರೆ ಹರಕೆ ಉತ್ತರ ನೀಡಿರುತ್ತಾರೆ.

ಗುರುವಾರ, ಜನವರಿ 2, 2025

ಸಾವಿತ್ರಿಬಾಯಿ ಪುಲೆ ಪ್ರಶಸ್ತಿಗೆ ದೇವಿಂದ್ರಮ್ಮ ಆಯ್ಕೆ


ಚಿತ್ತಾಪುರ: ದಲಿತ ವಿದ್ಯಾರ್ಥಿ ಪರಿಷತ್ ರಾಜ್ಯ ಘಟಕದಿಂದ ಮಹಿಳಾ ಸಾಧಕಿಯರಿಗೆ ಪ್ರತಿ ವರ್ಷ ನೀಡುವ ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ರಾಜ್ಯ ಮಟ್ಟದ ಪ್ರಶಸ್ತಿಗೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ಜೀವಣಗಿ ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ದೇವಿಂದ್ರಮ್ಮ ವಿ ಮಾಲಿ ಪಾಟೀಲ್ ಆಯ್ಕೆಯಾಗಿದ್ದಾರೆ.

ಜ.3ರಂದು ವಿಜಯಪುರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಲಾಗುವುದು ಎಂದು ದಲಿತ ವಿದ್ಯಾರ್ಥಿ ಪರಿಷತ್ತಿನ ಜಿಲ್ಲಾ ಸಂಚಾಲಕ ಜಗದೇವ ಕುಂಬಾರ ಪ್ರಕಟಣೆಗೆ ತಿಳಿಸಿದ್ದಾರೆ.

ಶುಕ್ರವಾರ, ನವೆಂಬರ್ 1, 2024

ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ.

ಚಿತ್ತಾಪುರ: ಪಟ್ಟಣದ ಮಾತೋಶ್ರೀ ಮಹಾದೇವಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 69ನೇ ಕರ್ನಾಟಕ ರಾಜ್ಯೋತ್ಸವ ನಿಮಿತ್ಯ ಭುವನೇಶ್ವರ ದೇವಿಯ ಭಾವಚಿತ್ರಕ್ಕೆ ಪೊಜೆ ನಂತರ ಪುಷ್ಪ ನಮನ ಸಲ್ಲಿಸಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಕನ್ನಡ ರಾಜ್ಯೋತ್ಸವ ಅದ್ದೂರಿಯಾಗಿ ಆಚರಿಸಿದರು. ಈ ವೇಳೆಯಲ್ಲಿ ಶಾಲೆಯ ಮುಖ್ಯಗುರುಗಳಾದ ಜಗದೇವ ಕುಂಬಾರ, ಶಿಕ್ಷಕರಾದ ವಿಶ್ವನಾಥ ಮಡಿವಾಳ, ಶ್ರೀದೇವಿ, ಸೇವಕಿ ಜಯಶ್ರೀ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.

ಕನ್ನಡ ರಾಜ್ಯೋತ್ಸವಕ್ಕೆ ಅವಮಾನ.

ಚಿತ್ತಾಪೂರ: ಈ ಬಾರಿ ಕನ್ನಡ ರಾಜ್ಯೋತ್ಸವ ಅದ್ದೂರಿಯಾಗಿ ಆಚರಿಸಬೇಕು ಎಂದು  ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು ಆದ್ರೇ ಚಿತ್ತಾಪುರ ಪಟ್ಟಣದಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸದೆ ಅವಮಾನ ಮಾಡಿದ್ದು ಕಂಡುಬಂದಿದೆ.

ಪಟ್ಟಣದ ನ್ಯಾಯಾಲಯ, ಕರ್ನಾಟಕ ಗ್ರಾಮೀಣ ಬ್ಯಾಂಕ,ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯ, ಬಿಜೆಪಿ ಮಂಡಲ ಕಾರ್ಯಾಲಯ, ಜೆಡಿಎಸ್ ಕಾರ್ಯಾಲಯ, ಭಾರತೀಯ ಸ್ಟೇಟ್ ಬ್ಯಾಂಕ, ಎಸ್ ಬಿಐ ಬ್ಯಾಂಕ,  ರೈಲುನಿಲ್ದಾಣ, ಸೇರಿದಂತೆ ಈ ಎಲ್ಲಾವುಗಳಲ್ಲಿ 69ನೇ ಕರ್ನಾಟಕ ರಾಜ್ಯೋತ್ಸವ ಆಚರಣೆ ಮಾಡದೆ ಕನ್ನಡಿಗರಿಗೆ ರಾಜ್ಯ ಸರ್ಕಾರಕ್ಕೆ ಅವಮಾನ ಮಾಡಿದಂತೆ ಆಗಿದೆ ಎನ್ನಲಾಗುತ್ತಿದೆ.


ಕೊಡಲೇ ತಾಲ್ಲೂಕು ಆಡಳಿತ ಹಾಗೂ ಜಿಲ್ಲಾ ಆಡಳಿತ ಎಚ್ಚತ್ತುಕೊಂಡು ಕನ್ನಡ ರಾಜ್ಯೋತ್ಸವ ಆಚರಣೆ ಮಾಡದೆ ಅವಮಾನಿಸಿದ ಈ ಎಲ್ಲಾ ಕಾರ್ಯಾಲಯ, ಬ್ಯಾಂಕ, ರೈಲುನಿಲ್ದಾಣ, ನ್ಯಾಯಾಲಯ ವಿರುದ್ಧ ಕ್ರಮ ಕೈಗೊಂಡು ಕಾನೂನು ರೀತಿಯಲ್ಲಿ ಕ್ರಮಕ್ಕೆ ಮುಂದಾಗಬೇಕು ಎಂದು ಒತ್ತಾಯಿಸಲಾಗಿದೆ.

ಪಟ್ಟಣದಲ್ಲಿ ಪ್ರತಿ ವರ್ಷ ಕನ್ನಡ ರಾಜ್ಯೋತ್ಸವ ಆಚರಣೆ ಮಾಡದೆ ಅವಮಾನ ಮಾಡುವುದು ಇದೇನು ಹೊಸದಲ್ಲ, ಪದೇ ಪದೇ ಕನ್ನಡ ಭಾಷೆಗೆ ಅವಮಾನ ಆಗುತ್ತಿದೆ. ಇದರ ಕುರಿತು ಸಾಕಷ್ಟು ಬಾರಿ ಮನವಿ ಹೋರಾಟ ಮಾಡಿದ್ರು ಪ್ರಯೋಜನವಾಗಿಲ್ಲ ಎನ್ನುತ್ತಾರೆ.

- ಚಂದರ ಚವ್ಹಾಣ್
ಕರವೇ, ಅಧ್ಯಕ್ಷರು ಚಿತ್ತಾಪುರ.


ತಾಲ್ಲೂಕು ಆಡಳಿತ ವತಿಯಿಂದ ನಡೆದ 69ನೇ ಕರ್ನಾಟಕ ರಾಜ್ಯೋತ್ಸವದಲ್ಲಿ ಹಳೆಯ ಭುವನೇಶ್ವರಿ ದೇವಿ ಬ್ಯಾನರ್ ಭಾವಚಿತ್ರ ಮೆರವಣಿಗೆಗೆ ಬಳಸಿದ್ದು ಕನ್ನಡ ಅಭಿಮಾನಿಗಳಲ್ಲಿ ಬೇಸರ ಮೂಡಿದೇ ಎಂದರು.

- ಲಕ್ಷ್ಮೀಕಾಂತ ತಾಂಡೂರಕರ್
ವಿಕಸೇ, ಅಧ್ಯಕ್ಷರು ಚಿತ್ತಾಪುರ.

ಕನ್ನಡ ಭಾಷೆಯನ್ನು ಗೌರವಿಸಬೇಕು: ಹಿರೇಮಠ.

ಚಿತ್ತಾಪುರ: ಕನ್ನಡ ನಾಡು ಉದಯವಾದ ದಿನವನ್ನು ಸಂಭ್ರಮಿಸುವ ಹಾಗೂ ಕನ್ನಡ ರಾಜ್ಯದ ಏಕೀಕರಣಕ್ಕಾಗಿ ಹೋರಾಡಿದ ಮಹಾತ್ಮರನ್ನು ಸ್ಮರಿಸಿ, ಗೌರವಿಸುವ ಹಾಗೂ ಕನ್ನಡಾಭಿಮಾನವನ್ನು ಮೆರೆಯುವ ಉದ್ದೇಶದಿಂದ ಪ್ರತಿವರ್ಷ ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತದೆ ಇದರ ಜೊತೆಗೆ ಕನ್ನಡ ಭಾಷೆಯನ್ನು ಗೌರವಿಸಬೇಕು ಎಂದು ತಹಸೀಲ್ದಾರ ನಾಗಯ್ಯ ಹಿರೇಮಠ ಹೇಳಿದರು.

ಪಟ್ಟಣದ ತಹಸೀಲ್‌ ಕಚೇರಿಯಲ್ಲಿ ತಾಲೂಕು ಆಡಳಿತ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ 69ನೇ ಕರ್ನಾಟಕ ರಾಜ್ಯೋತ್ಸವ ನಿಮಿತ್ತ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡ ಭಾಷೆಗೆ ಸಹಸ್ರಾರು ವರ್ಷಗಳ ಇತಿಹಾಸವಿದೆ,ಮೈಸೂರು ರಾಜ್ಯವು (ಈಗಿನ ಕರ್ನಾಟಕ) 1956ರ ನವೆಂಬರ್ 1ರಂದು ನಿರ್ಮಾಣವಾದುದರ ಸಂಕೇತವಾಗಿ ರಾಜ್ಯೋತ್ಸವವನ್ನು ಆಚರಿಸಲಾಗುತ್ತ ಎಂದು ಹೇಳಿದರು.

ವಿಶೇಷ ಉಪನ್ಯಾಸಕರಾಗಿ ಆಗಮಿಸಿದ ರಾವೂರಿನ ಸಚ್ಚಿದಾನಂದ ಪ್ರೌಢ ಶಾಲೆಯ ಶಿಕ್ಷಕ ಸಿದ್ದಲಿಂಗ ಬಾಳಿ ಮಾತನಾಡಿ, 1956 ನವೆಂಬರ್ 1ರಂದು ಕನ್ನಡ ಭಾಷಿಗರಿಗಾಗಿ ಒಂದು ರಾಜ್ಯ ಉದಯವಾದ ಹಿನ್ನೆಲೆ ರಾಜ್ಯೋತ್ಸವ ಆಚರಣೆಯನ್ನು ಮಾಡಲಾಯಿತು. 1973 ನವೆಂಬರ್ 1ರಂದು ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣ ಮಾಡಲಾಯಿತು ಹೀಗಾಗಿ ಕರ್ನಾಟಕ ರಾಜ್ಯೋತ್ಸವಕ್ಕೆ ತನ್ನದೇ ಆದ ಭವ್ಯ ಇಹಾಸವಿದೆ ಎಂದರು.

 ಎಲ್ಲಾ ಅಂಗಡಿ ಮುಂಗಟ್ಟುಗಳ ನಾಮಫಲಕಗಳಲ್ಲಿ ಕನ್ನಡ ಭಾಷೆಗೆ ಮೊದಲ ಅದ್ಯತೆ ನೀಡಬೇಕು. ಕನ್ನಡ ಭಾಷೆಯಲ್ಲಿ ಅಂಗಡಿ ಹಸರು ಶೇ.70 ರಷ್ಟಿದ್ದು, ಶೇ.30 ರಷ್ಟು ಇಂಗ್ಲಿಷ್‌ ಅಥವಾ ಇತರೆ ಭಾಷೆಯಲ್ಲಿ ಇರಬೇಕು ಎಂಬ ನಿಯಮವಿದೆ ಆದರೆ ರಾಜ್ಯದಲ್ಲಿ ಈ ನಿಯಮವನ್ನು ಪಾಲನೆಯಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಕನ್ನಡವನ್ನು ಕಟ್ಟುವರು ಇಂದು ಕನ್ನಡವನ್ನು ಕುಟ್ಟುವ ಕೆಲಸ ಮಾಡುತ್ತಿದ್ದಾರೆ ಮಾರ್ಮಿಕವಾಗಿ ನುಡಿದರು.
ತಾಲ್ಲೂಕು ಆಡಳಿತ ವತಿಯಿಂದ ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಮೆರವಣಿಗೆಗೆ ಚಾಲನೆ ನೀಡಿದರು ಮೆರವಣಿಗೆಯು ಪಟ್ಟಣದ ತಹಸೀಲ್ ಕಾರ್ಯಲಯದಿಂದ ರೈಲುನಿಲ್ದಾಣ, ನಾಗಾವಿ ಚೌಕ್, ಮಾರುಕಟ್ಟೆ ವೃತ್ತ, ಭುವನೇಶ್ವರಿ ವೃತ್ತ, ಅಂಬೇಡ್ಕ‌ರ್ ವೃತ್ತ, ಬಸ್ ನಿಲ್ದಾಣ, ಬಸವೇಶ್ವರ ವೃತ್ತ, ವೇದಿಕೆಗೆ ಆಗಮಿಸಿತ್ತು ಮೆರವಣಿಗೆಯಲ್ಲಿ ಡಿಜೆ ಸೌಂಡ್ ಗೆ ಕನ್ನಡದ ಹಾಡುಗಳು ರಾರಾಜಿಸಿದವು ಅಧಿಕಾರಿಗಳು ನೃತ್ಯ ಮಾಡಿ ಎಲ್ಲಾರ ಗಮನ ಸೆಳೆದರು.

ಈ ಸಂದರ್ಭದಲ್ಲಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮೊಹಮ್ಮದ್ ಅಕ್ರಂ ಪಾಷಾ, ಸಿಪಿಐ ಚಂದ್ರಶೇಖರ ತಿಗಡಿ, ಪುರಸಭೆ ಮುಖ್ಯಾಧಿಕಾರಿ ಮನೋಜಕುಮಾರ ಗುರಿಕಾರ, ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ಭೀಮಣ್ಣ ಸಾಲಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಸವರಾಜ ಬಳೂಂಡಗಿ, ಕ್ಷೇತ್ರ ಶಿಕ್ಷಣಾಧಿಕಾರಿ ಬಿರಾದಾರ, ಕಸಾಪ ಅಧ್ಯಕ್ಷ ವಿರೇಂದ್ರ ಕೊಲ್ಲೂರು, ಸರ್ಕಾರಿ ಪದವಿ ಕಾಲೇಜಿನ ಪ್ರಾಚಾರ್ಯ ಶಿವಶರಣಪ್ಪ ಬಿರಾದಾರ, ಪಿಎಸ್‌ಐ ಶ್ರೀಶೈಲ್ ಅಂಬಾಟಿ ಅಧಿಕಾರಿಗಳಾದ ಸಂಜೀವಕುಮಾರ ಮಾನಕ‌ರ್, ಮಹ್ಮದ್ ಸಲೀಂ, ಬಾಲಕೃಷ್ಣ, ವಿಜಯಕುಮಾ‌ರ್ ಬಡಿಗೇರ್, ಪ್ರಕಾಶ್ ನೈಕೋಡಿ, ಶ್ರೀಮತಿ ಆರತಿ ತುಪ್ಪದ್, ಶ್ರೀಮತಿ ಸವಿತಾ, ಚೇತನ್ ಗುರಿಕಾರ, ಶಂಕರಗೌಡ ಪಾಟೀಲ, ಅಶ್ವಥ್ ನಾರಾಯಣ, ಕರವೇ ಅಧ್ಯಕ್ಷರಾದ ನರಹರಿ ಕುಲಕರ್ಣಿ, ಚಂದರ್‌ ಚವ್ಹಾಣ, ಲಕ್ಷ್ಮೀಕಾಂತ ತಾಂಡೂರಕರ್ ಸೇರಿದಂತೆ ಇತರರು ಇದ್ದರು. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಯಿತು.

ಗ್ರೇಡ್ 2 ತಹಸೀಲ್ದಾರ್ ರಾಜಕುಮಾರ ಮರತೂರಕರ್ ಸ್ವಾಗತಿಸಿದರು, ನರಸಪ್ಪ ಚಿನ್ನಾಕಟ್ಟಿ ನಿರೂಪಿಸಿದರು.

ಭಾನುವಾರ, ಅಕ್ಟೋಬರ್ 27, 2024

ಶಿಕ್ಷಕರ ಸ್ನೇಹಿ ಪೆನಲಗೆ ಬೆಂಬಲಿಸಲು ಮನವಿ.

ಚಿತ್ತಾಪುರ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ತಾಲೂಕು ಶಾಖೆಗೆ 2024-29 ನೇ ಸಾಲಿನ ಅವಧಿಗಾಗಿ ಅ.28 ರಂದು ನಡೆಯಲಿರುವ ಚುನಾವಣೆಯಲ್ಲಿ ನಿರ್ದೇಶಕರ ಸ್ಥಾನಕ್ಕೆ ಶಿಕ್ಷಣ ಇಲಾಖೆಯ ಕೈಲಾಸ ನಗರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಬಸವರಾಜ ಬಳೂಂಡಗಿ ನೇತೃತ್ವದ ಶಿಕ್ಷಕರ ಸ್ನೇಹಿ ಪೆನಲ್ ಹಾಗೂ ಇಂಗಳಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಸಂಗಣ್ಣಗೌಡ ಮಲ್ಯದ್ ರವರ ಪ್ರಜಾಸತ್ತಾತ್ಮಕ ಕ್ರಿಯಾಶೀಲ ಶಿಕ್ಷಕರ ಪೆನಲ್ ಅವರ ನಡುವೆ ಪೈಪೋಟಿ ನಡೆಯುತ್ತಿದೆ, 

ಬಸವರಾಜ ಬಳೂಂಡಗಿ ನೇತೃತ್ವದಲ್ಲಿ ಚಿತ್ತಾಪುರ ಸರ್ಕಾರಿ ಕನ್ಯಾ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಶಿವಾನಂದ ನಾಲವಾರ, ಚಾಮನೂರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಗೌತಮಿ, ಗಂಡಗುರ್ತಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಮಹ್ಮದ್ ಜಾವೀದ್, ಅಲ್ಲೂರ.ಬಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಶಿಕ್ಷಕ ಸಾಬಣ್ಣ ಜಕಬೋ ಅವರು ತಮ್ಮ ಬೆಂಬಲಿಗರೊಂದಿಗೆ ಅಬ್ಬರದ ಪ್ರಚಾರ ನಡೆಸಿದ್ದಾರೆ.

ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಬಸವರಾಜ ಬಳೂಂಡಗಿ ರವರು ಕ್ಷೇತ್ರದಲ್ಲಿ ಸುಮಾರು 7 ವರ್ಷಕ್ಕೂ ಅಧಿಕ ವರ್ಷ ಸೇವೆ ಸಲ್ಲಿಸಿ ಈ ಕ್ಷೇತ್ರದಲ್ಲಿ ಸಾಕಷ್ಟು ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ಹಾಗೂ ಸರ್ಕಾರಿ ನೌಕರರಿಗೆ ಸಂಬಂಧಿಸಿದಂತೆ ಕೆಲಸ ಮಾಡಿದ್ದಾರೆ. ಇನ್ನೂ ಸಹ ಕ್ಷೇತ್ರದಲ್ಲಿ ಶಿಕ್ಷಕ ಕುಂದು ಕೊರತೆಗಳ ಹಾಗೂ ಸರ್ಕಾರಿ ನೌಕರರ ಸಮಸ್ಯೆಗಳ ಕುರಿತು ಸೇವೆ ಮಾಡಲು ಇಚ್ಛಿಸಿರುವೆ.
 ಇದರ ಜೊತೆಗೆ ತಾಲ್ಲೂಕಿನಲ್ಲಿ ನೌಕರರ ಸಂಘದ ತಾಲ್ಲೂಕು ಪ್ರಧಾನ ಕಾರ್ಯದರ್ಶಿಯಾಗಿ ಬಸವರಾಜ ಎಂಬತ್ತನಾಳ್ ರವರು ಸುಮಾರು 5 ವರ್ಷಗಳ ವರೆಗೆ ಸೇವೆ ಸಲ್ಲಿಸಿರುವ ಮತ್ತು ಗುಂಡಗುರ್ತಿ ಸೇರಿ ಬಿಇಓ ಇಲಾಖೆಯಲ್ಲಿ ಶಿಕ್ಷಣ ಸಂಯೋಜಕರಾಗಿ 6 ವರ್ಷ ಸೇವೆ ಸಲ್ಲಿಸಿದ ಸಂತೋಷಕುಮಾರ ಶಿರನಾಳ ರವರು ಸಹ ಪ್ರೌಢ ಶಾಲಾ ಶಿಕ್ಷಣ ವಿಭಾಗದಿಂದ ಸ್ಪರ್ಧಿಸಿದ್ದು ಅವರು ಸಹ ನಮ್ಮ ಪೆನಲ್ ನವರು ಇಗಿದ್ದು.

ನಾಳೆ ಅಕ್ಟೋಬರ 28/10/2024 ರಂದು ನಡೆಯಲಿರುವ ಚುನಾವಣೆಯಲ್ಲಿ ಪ್ರಾಥಮಿಕ ಶಾಲಾ ವಿಭಾಗದ ಚುನಾವಣೆಗೆ ಸ್ಪರ್ಧಿಸಿರುವ ಶಿಕ್ಷಕರ ಸ್ನೇಹಿ ಪೆನಲ್ ಬಸವರಾಜ ಬಳೂಂಡಗಿ ನೇತೃತ್ವದ ಪೆನಲಗೆ ಎಲ್ಲಾ ಶಿಕ್ಷಕ ವೃಂದದವರು ಮತ ನೀಡಿ ಪ್ರಚಂಡ ಬಹುಮತದಿಂದ ಆರಿಸಿ ತರಲು ವಿನಂತಿ.

ಪ್ರೌಢ ಶಾಲಾ ಶಿಕ್ಷಣ ವಿಭಾಗದಿಂದ ಬಸಪ್ಪ ಯಂಬತ್ನಾಳ್, ಸಂತೋಷಕುಮಾರ ಶಿರನಾಳ, ಇವರ ಪೆನಲ್ ಗೆ ಶಿಕ್ಷಕ ವೃಂದದವರು ಹಾಗೂ ಎಲ್ಲಾ ಸಿಬ್ಬಂದಿ ನೌಕರರು ಮತ ನೀಡಿ ಆರಿಸಿ ತರಬೇಕಾಗಿ ತಮ್ಮೇಲ್ಲರಲ್ಲಿ ಹೃದಯ ಪೂರ್ವಕ ವಿನಂತಿ.

ಮಣಿಕಂಠ ಮಾಡಿದ ಆರೋಪ ಸತ್ಯಕ್ಕೆ ದೂರ: ಮಲ್ಲಿಕಾರ್ಜುನ ಸ್ಪಷ್ಟನೆ.

ಚಿತ್ತಾಪುರ: ಬಜಾಜ್ ಕಲ್ಯಾಣ ಮಂಟಪದಲ್ಲಿ ಅ.25 ರಂದು ನಡೆದ ಜಿಲ್ಲಾ ಸಂಸದ ರಾಧಾಕೃಷ್ಣ ದೊಡ್ಡಮನಿ ಅವರ ಅಭಿನಂದನಾ ಸಮಾರಂಭದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಮಹಿಳೆಯರಿಗೆ ಹಣ ಹಂಚಿದ್ದಾರೆ ಎಂದು ಬಿಜೆಪಿ ಪರಾಜಿತ ಅಭ್ಯರ್ಥಿ ಮಣಿಕಂಠ ರಾಠೋಡ ಮಾಡಿದ ಆರೋಪ ಸತ್ಯಕ್ಕೆ ದೂರವಾಗಿದೆ ಎಂದು ಪುರಸಭೆ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಮಲ್ಲಿಕಾರ್ಜುನ ಕಾಳಗಿ ಸ್ಪಷ್ಟನೆ ನೀಡಿದ್ದಾರೆ.

ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಸಂಸದರಾದ ರಾಧಾಕೃಷ್ಣ ದೊಡ್ಡಮನಿ ಅವರು ಲೋಕಸಭಾ ಚುನಾವಣೆಯಲ್ಲಿ ಬಹುಮತದಿಂದ ಗೆಲುವು ಸಾಧಿಸಿದ್ದ ಖುಷಿಯಿಂದ ಪುರಸಭೆ ಸದಸ್ಯರು ಸ್ವಇಚ್ಛೆಯಿಂದ ಮಹಿಳೆಯರಿಗೆ ದುಡ್ಡು ಕೊಟ್ಟಿದ್ದು ಸತ್ಯ, ಆದ್ರೆ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೆಸರಿಗೆ ಕೆಟ್ಟ ಹೆಸರು ತರುವ ಪ್ರಯತ್ನ ಮಾಡುವುದು ಸರಿಯಲ್ಲ ಎಂದು ಹೇಳಿದರು.

ಈ ಸಂದರ್ಭದಲ್ಲಿ ಅಧಿಕಾರಿಗಳು ಭಾಗಿಯಾಗಿದ್ದರು ಎಂದು ಹೇಳುವ ಮಣಿಕಂಠ ಸ್ವಲ್ಪ ಆ ದಿನ ಅಲ್ಲಿ ಏನೂ ನಡೆದಿದ್ದೆ ಎಂದು ಆಲೋಚನೆ ಮಾಡಲಿ ಅಂದು ಸರ್ಕಾರದ 63 ಕೋಟಿ ರೂಪಾಯಿ ಅನುದಾನದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅಡಿಗಲ್ಲು ಸಮಾರಂಭದಲ್ಲಿ ಅಧಿಕಾರಿಗಳು ಭಾಗವಹಿಸಿದ್ದರು. ಅಭಿನಂದನಾ ಸಮಾರಂಭ ಬಜಾಜ್ ಕಲ್ಯಾಣ ಮಂಟಪದಲ್ಲಿ ಹಾಗೂ ಅಭಿವೃದ್ಧಿ ಕಾಮಗಾರಿಗಳ ಅಡಿಗಲ್ಲು ಸಮಾರಂಭ ಎಪಿಎಂಸಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು ಮೊದಲು ಇದನ್ನು ಅರಿತುಕೊಂಡು ಆರೋಪ ಮಾಡಲಿ ಎಂದು ಕಿಡಿ ಕಾರಿದರು.

ಕ್ಷೇತ್ರದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಸಾಕಷ್ಟು ಅಭಿವೃದ್ದಿ ಕೆಲಸಗಳು ಮಾಡುತ್ತಿದ್ದಾರೆ ವಿನಾಕಾರಣ ಅವರ ವಿರುದ್ಧ ಇಲ್ಲಸಲ್ಲದ ಮಾತನಾಡುವಾಗ ಸ್ವಲ್ಪ ನಾಲಿಗೆ ಹಿಡಿತದಲ್ಲಿರಲಿ, ಇಲ್ಲದಿದ್ದರೆ ಪರಿಣಾಮ ಎದುರಿಸಬೇಕಾಗುತ್ತದೆ, ಸಚಿವರ ವಿರುದ್ಧ ಮಾತನಾಡುವ ನೀವು ಕ್ಷೇತ್ರದಲ್ಲಿ ನಿಮ್ಮ ಕೊಡುಗೆ ಏನು? ಎಂದು ಮಣಿಕಂಠ ರಾಠೋಡ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಖಾರವಾಗಿ ಪ್ರಶ್ನಿಸಿದರು.

ಮಣಿಕಂಠ ರಾಠೋಡ ಎನ್ನುವ ಮಾನಸಿಕ ವ್ಯಕ್ತಿ ಕ್ಷೇತ್ರಕ್ಕೆ ಆಗಮಿಸಿ ಸಚಿವರ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡುವುದೇ ಆತನ ಸಣ್ಣತನದ ಕೆಲಸವಾಗಿದೆ. ಮಹಿಳೆಯರಿಗೆ ಹಣ ನೀಡಿದ್ದೇವೆ ಅದು ದೀಪಾವಳಿ ಕಾಣಿಕೆಯಾಗಿ ಆದ್ರೇ ಬಿಜೆಪಿಯವರೇನು ಸಾಚಾನ ಎಂದು ಪ್ರಶ್ನಿಸಿದರು ಕಳೆದ ಚುನಾವಣೆಯಲ್ಲಿ ಅನ್ನ ಪ್ರಸಾದ, ದೇವಸ್ಥಾನ ಮತ್ತು ರಸ್ತೆಗಳ ಅಭಿವೃದ್ಧಿ ಮಾಡುತ್ತೇನೆ ಎಂದು ಹೇಳಿ ಬರೀ ಶೋ ಪುಟ ಮಾಡುವ ಕೆಲಸ ಮಾಡಿದ್ದಾನೆ ಎಂದರು.

-ಜಗದೀಶ್ ಚವ್ಹಾಣ್
ಪುರಸಭೆ ಸದಸ್ಯ ಚಿತ್ತಾಪುರ.

ಕಲಬುರ್ಗಿ ಲೋಕಸಭಾ ಸದಸ್ಯ ರಾಧಾಕೃಷ್ಣ ದೊಡ್ಡಮನಿ ಅವರ ಅಭಿನಂದನಾ ಸಮಾರಂಭಕ್ಕೆ ಆಗಮಿಸಿದ್ದ ಮಹಿಳೆಯರಿಗೆ ಖುಷಿಯಿಂದ ಪುರಸಭೆ ಸದಸ್ಯರು ಸ್ವಇಚ್ಛೆಯಿಂದ ನಮ್ಮ ಸ್ವಂತ ಹಣ ನೀಡಿದ್ದೇವೆ ಇದಕ್ಕೆ ನೀವ್ಯಾರು ಕೇಳೋರು ಎಂದು ಬಿಜೆಪಿ ಮುಖಂಡರಿಗೆ ತಿರುಗೇಟು ನೀಡಿದರು.

- ವಿನೋದ ಗುತ್ತೇದಾರ
ಪುರಸಭೆ ಸದಸ್ಯ ಚಿತ್ತಾಪುರ 

ಈ ಸುದ್ದಿಗೋಷ್ಠಿಯಲ್ಲಿ ಪುರಸಭೆ ಮಾಜಿ ಅಧ್ಯಕ್ಷರು ಹಾಗೂ ಹಾಲಿ ಸದಸ್ಯ ಚಂದ್ರಶೇಖರ ಕಾಶಿ, ಪುರಸಭೆ ಮಾಜಿ ಅಧ್ಯಕ್ಷ ಶಿವಕಾಂತ್ ಬೆಣ್ಣೂರಕರ್, ಮುಖಂಡ ಸುಭಾಷ್‌ ಜಾಧವ, ಸೇರಿದಂತೆ ಇತರರು ಇದ್ದರು.

ಶುಕ್ರವಾರ, ಅಕ್ಟೋಬರ್ 25, 2024

ಮತದಾರರಿಗೆ ಧನ್ಯವಾದ ಅರ್ಪಿಸಿದ ರಾಧಾಕೃಷ್ಣ ದೊಡ್ಡಮನಿ.


ಚಿತ್ತಾಪುರ: ಕಾಂಗ್ರೆಸ್ ಪಕ್ಷ ನನ್ನನ್ನು ಗುರುತಿಸಿ ಟಿಕೇಟು ನೀಡಿತ್ತು. ನೀವೆಲ್ಲ ಜೊತೆಯಾಗಿ ಕೆಲಸ ಮಾಡಿ ಮನೆ 
ಮನೆಗೆ ಹೋಗಿ ಪ್ರಚಾರ ಮಾಡಿ ನನ್ನ ಗೆಲ್ಲುವುಗೆ ಸಹಕಾರಿಯಾಗಿದ್ದೀರಿ, ನಿಮಗೆಲ್ಲ ನಾನು ಮನಪೂರ್ವಕವಾಗಿ ಧನ್ಯವಾದಗಳನ್ನು ಅರ್ಪಿಸುವೆ ಎಂದು ಸಂಸದ ರಾಧಾಕೃಷ್ಣ ದೊಡ್ಡಮನಿ‌ ಹೇಳಿದರು.

 ಪಟ್ಟಣದ ಬಜಾಜ್ ಕಲ್ಯಾಣ ಮಂಟಪದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಮತದಾರರ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು ನಾನು ಸೇರಿದಂತೆ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು ಒಗ್ಗಟ್ಟಾಗಿ ಕೆಲಸ ಮಾಡುತ್ತೇವೆ. ನೀವೆಲ್ಲ ವಿಶ್ವಾಸವಿಟ್ಟು ನನಗೆ ಗೆಲ್ಲಿಸಿರುವುದಕ್ಕೆ ನಾನು ಆಭಾರಿಯಾಗಿದ್ದೇನೆ. ನಿಮ್ಮೆಲ್ಲರ ಸಹಕಾರ ಹೀಗೆ ಇರಲಿ, ನಾನು ಹೆಚ್ಚಿಗೆ ಮಾತನಾಡುವುದಿಲ್ಲ ನಿಮ್ಮ ಕೆಲಸ ಮಾಡುವುದಾಗಿ ಭರವಸೆ ನೀಡಿದರು.
ಕ್ಷೇತ್ರದ ಅಭಿವೃದ್ದಿಯ ಚಿತ್ರಣವನ್ನೇ ಬದಲಿಸುವೆ.
ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, ನಿಮ್ಮ ಅಭಿಮಾನದ ಅಕ್ಕರೆಗೆ ನನಗೆ ಮಾತು ಬರದಾಗಿದೆ ನೀವು ನಿಮ್ಮ ಪ್ರೀತಿ ತೋರಿಸಲು ಇಲ್ಲಿ ಸೇರಿದ್ದೀರಿ ನಿಮ್ಮ ವಿಶ್ವಾಸಕ್ಕೆ ನಮ್ಮ ಕುಟುಂಬದ ಪರವಾಗಿ ಕೋಟಿ ಕೋಟಿ ಧನ್ಯವಾದಗಳು.ನಾನು ನಿಮಗೆ ಹಲವಾರು ಸಲ ಮಾತು ಕೊಟ್ಟಿದ್ದೇನೆ. ನಮ್ಮ ಭಾಗದ ಅಭಿವೃದ್ದಿಯೇ ನನಗೆ ಮೂಲ ಮಂತ್ರ ಇಂದು ಕೂಡಾ 62 ಕೋಟಿ‌ ರೂಪಾಯಿ ವೆಚ್ಚದಲ್ಲಿ ಹಲವಾರು ಅಭಿವೃದ್ದಿ ಕಾಮಗಾರಿಗೆ ಅಡಿಗಲ್ಲು ನೆರವೇರಿಸಲಿದ್ದೇನೆ ಮಾತು ಕೊಟ್ಟಂತೆ 52,000 ಕೋಟಿ ರೂಪಾಯಿ ಖರ್ಚು ಮಾಡಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ, ಇದು ನಮ್ಮ ಸರ್ಕಾರದ ಬದ್ಧತೆ ಎಂದರು.

ಈಗಾಗಲೇ 900 ಇಂಜಿನಿಯರಗಳನ್ನು ಇಲಾಖೆಯಲ್ಲಿ ಭರ್ತಿ ಮಾಡಲಾಗಿದೆ. ಜೊತೆಗೆ ಖಾಲಿ ಇರುವ ವಿವಿಧ ಇಲಾಖೆಗಳ ಎರಡು ಲಕ್ಷ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಿದ್ದೇವೆ ನನಗೆ ಇನ್ನು ಒಂದು ವರ್ಷ ಸಮಯಾವಕಾಶ ನೀಡಿ ಕ್ಷೇತ್ರದ ಅಭಿವೃದ್ದಿಯ ಚಿತ್ರಣವನ್ನೇ ಬದಲಿಸಲಿದ್ದೇನೆ. ಕಲ್ಯಾಣ ಪಥ ಯೋಜನೆಯಡಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ರಸ್ತೆಗಳ ಅಭಿವೃದ್ದಿಗೆ 1,000 ಕೋಟಿ ರೂಪಾಯಿ ಅನುದಾನ ತೆಗೆದಿರಿಸಲಾಗಿದೆ. ಸಾಮೂಹಿಕ ಮಹಿಳೆಯರ ಶೌಚಾಲಯ ನಿರ್ಮಾಣ ನನ್ನ ಮುಂದಿನ ಗುರಿಯಾಗಿದೆ ಎಂದು ಹೇಳಿದರು.
ರಾಜ್ಯ ಸರ್ಕಾರದ ಬೊಕ್ಕಸ‌ ಖಾಲಿಯಾಗಿದೆ ಎನ್ನುವ ಬಿಜೆಪಿ ನಾಯಕರಿಗೆ ತಿರುಗೇಟು‌ ನೀಡಿದ ಖರ್ಗೆ ಇತ್ತೀಚಿಗೆ ಕಲಬುರಗಿಯಲ್ಲಿ ಸಚಿವ ಸಂಪುಟದಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ 7,000 ಕೋಟಿ ರೂಪಾಯಿ ಹಾಗೂ ಚಿತ್ತಾಪುರಕ್ಕೆ 300 ಕೋಟಿ ರೂಪಾಯಿ ಯೋಜನೆಗಳ ಒಪ್ಪಿಗೆ ‌ಸಿಕ್ಕಿದೆ. ಈಗ ಸಾಧ್ಯಕ್ಕೆ ಮೂವತ್ತು ಗ್ರಾಮಗಳ ಅಭಿವೃದ್ದಿಯ ನೀಲಿ ನಕ್ಷೆ ಹಾಕಲಾಗಿದೆ. ಇದು ಕೇವಲ ಗ್ರಾಮೀಣ ಪ್ರದೇಶ ಮಾತ್ರವಲ್ಲ, ಮುಂದೆ ಚಿತ್ತಾಪುರ, ವಾಡಿ ಸಮಗ್ರ ಅಭಿವೃದ್ದಿಯ ನೀಲಿನಕ್ಷೆ ತಯಾರಾಗಲಿದೆ ಇದಕ್ಕೆ 25 ಕೋಟಿ ರೂಪಾಯಿ ತೆಗೆದಿರಸಲಾಗಿದೆ. ವಿಜ್ಞಾನ ಕೇಂದ್ರ , ಮೃಗಾಲಯ ಸ್ಥಾಪನೆಯ ಗುರಿ ಹೊಂದಲಾಗಿದೆ ಎಂದರು.

 ತಾಲೂಕಿನಲ್ಲಿ "ಕಾಯಕ ಗ್ರಾಮ" ಯೋಜನೆ ಜಾರಿಗೆ ತರಲು ಆಲೋಚಿಸಲಾಗಿದೆ. ಇದರಲ್ಲಿ ಸಂಸದರ ಅನುದಾನ ಕೂಡಾ ಬಳಕೆಯಾಗಲಿದೆ. ಇದರ ಹಿಂದೆ ಸಂಸದ ರಾಧಾಕೃಷ್ಣ ದೊಡ್ಡಮನಿ‌ ಅವರ ಕನಸಿದೆ.‌ ಈ ಯೋಜನೆಯಡಿಯಲ್ಲಿ ಕನಿಷ್ಠ 2 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದರು.

ಸಚಿವ ಶರಣಪ್ರಕಾಶ ಪಾಟೀಲ್ ಮಾತನಾಡಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯಾಗಿದ್ದ ರಾಧಾಕೃಷ್ಣ ದೊಡ್ಡಮನಿ ಅವರಿಗೆ ನೀವೆಲ್ಲ‌ ಆಶೀರ್ವಾದ ಮಾಡಿ ಅವರನ್ನು ಕ್ಷೇತ್ರದ ಜನರ ಸೇವೆಗೆ ಕಳಿಸಿದ್ದೀರಿ.ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಮೇಲೆ ದೇಶದದಲ್ಲಿ ಕ್ರಾಂತಿಕಾರಿ ಬದಲಾವಣೆಗಳಾಗಿವೆ ಶೈಕ್ಷಣಿಕ ಹಾಗೂ ಆರೋಗ್ಯ ಕ್ಷೇತ್ರದ ಜೊತೆಗೆ‌ ಜನರ‌ ಸಾಮಾಜಿಕ‌ ಕ್ಷೇತ್ರದಲ್ಲಿ, ಬದಲಾವಣೆ ನಡೆಯುತ್ತಿದೆ ಅದೆ ಬಿಜೆಪಿ ಜನರ ನಡುವೆ ಕಲಹ ಹುಟ್ಟು ಹಾಕುತ್ತಿದೆ ಎಂದು ದೂರಿದ ಅವರು ಜನಪರ ಕಾರ್ಯಕ್ರಮಗಳು ಯಾವುದಾದರೊಂದನ್ನು ಅವರು ಜಾರಿಗೆ ತರಲಿಲ್ಲ. ಆದರೆ ನಾವು ಅಧಿಕಾರಕ್ಕೆ ಬಂದ ಮೇಲೆ ಮಹಿಳೆಯರಿಗೆ, ನಿರುದ್ಯೋಗಿ ಯುವಕರಿಗೆ ಯೋಜನೆಗಳನ್ನ ಜಾರಿಗೆ ತಂದಿದ್ದೇವೆ ಎಂದರು.
ನಾಗಾವಿ ಯಲ್ಲಮ್ಮ ದೇವಿ,ಚಿತ್ತಾವಲಿ ದರ್ಶನ.
 ಪಟ್ಟಣದ ಹೊರವಲಯದ ನಾಗಾವಿ ದೇವಾಲಯಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ತದನಂತರ, ಚಿತಾವಲಿ ದರ್ಗಾಕ್ಕೆ ಭೇಟಿ ನೀಡಿ ಗೌರವ ಸಲ್ಲಿಸಿದರು. ನಂತರ ಬಸವೇಶ್ವರ ಹಾಗೂ ಡಾ. ಬಿ ಆರ್ ಅಂಬೇಡ್ಕರ್ ಅವರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿ ಗೌರವ ಸಮರ್ಪಿಸಿದರು. ನಗರದ ಪ್ರಮುಖ ಬೀದಿಗಳಲ್ಲಿ ತೆರೆದ ವಾಹನದ ಮೂಲಕ ಮೆರವಣಿಗೆಯಲ್ಲಿ ಬಜಾಜ್ ಕಲ್ಯಾಣ ಮಂಟಪಕ್ಕೆ ಕರೆ ತರಲಾಯಿತು. ಈ ಸಂದರ್ಭದಲ್ಲಿ ಕಲಾ ತಂಡಗಳು ಹಾಗೂ ಸಾಂಸ್ಕೃತಿಕ ತಂಡಗಳು ಎಲ್ಲಾರ ಗಮನ ಸೆಳೆದವು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಎಂಎಲ್‌ಸಿ ಜಗದೇವ ಗುತ್ತೇದಾರ, ಶಾಸಕರಾದ ಎಂವೈ ಪಾಟೀಲ್, ಅಲ್ಲಮಪ್ರಭು ಪಾಟೀಲ, ಎಂಎಲ್‌ಸಿ ತಿಪ್ಪಣ್ಣಪ್ಪ ಕಮಕನೂರು, ದೇವೆಂದ್ರಪ್ಪ ಮರತೂರು, ಭಾಗನಗೌಡ ಸಂಕನೂರು,ಕೆಪಿಸಿಸಿ ಸದಸ್ಯ ನಾಗರೆಡ್ಡಿ ಪಾಟೀಲ, ಭೀಮಣ್ಣ ಸಾಲಿ, ಮಹೆಮೂದ್ ಸಾಹೇಬ್, ರೇವುನಾಯಕ ಬೆಳಮಗಿ, ಶಿವಾನಂದ ಪಾಟೀಲ, ರಮೇಶ ಮರಗೋಳ, ಅಜೀಜ್ ಸೇಟ್, ಶ್ರೀನಿವಾಸ ಸಗರ, ಶಿವರುದ್ರ ಭೀಣ್ಣಿ, ಚಂದ್ರಶೇಖರ ಕಾಶಿ, ಮಲ್ಲಿಕಾರ್ಜುನ ಕಾಳಗಿ, ವೀರಣ್ಣಗೌಡ ಪರಸರೆಡ್ಡಿ, ವಿನೋದ ಗುತ್ತೇದಾರ, ಸಂಜಯ ಬುಳಕ‌ರ್, ಮಲ್ಲಿಕಾರ್ಜುನ ಬೆಣ್ಣೂರಕ‌ರ್, ಶಿವಾಜಿ ಕಾಶಿ, ಜಗದೀಶ್ ಚವ್ಹಾಣ, ಭೀಮಸಿಂಗ್ ಚವ್ಹಾಣ, ರವಿ ರಾಠೋಡ, ನಾಗಯ್ಯ ಗುತ್ತೇದಾರ್, ಶ್ರೀಮತಿ ಶೀಲಾ ಕಾಶಿ, ಸುನೀಲ ದೂಡ್ಡಮನಿ, ಮಲ್ಲಪ್ಪ ಹೊಸಮನಿ, ಶ್ರೀಮತಿ ಶ್ವೇತಾ ಪಾಟೀಲ್, ಜಗಣ್ಣಗೌಡ ಪಾಟೀಲ್, ಸುರೇಶ ಗುತ್ತೇದಾರ್, ಸಾಬಣ್ಣ ಹೋಳಿಕಟ್ಟಿ, ಗುಂಡು ಐನಾಪೂರ, ಸಂತೋಷ ಪೂಜಾರಿ, ಉದಯಕುಮಾರ ಸಾಗರ, ಸೇರಿದಂತೆ ಇತರರು ಇದ್ದರು.

ಗುರುವಾರ, ಅಕ್ಟೋಬರ್ 24, 2024

ಮಹಿಳಾ ಶೌಚಾಲಯ ದುರಸ್ತಿಗೆ ಆಗ್ರಹ.

ಚಿತ್ತಾಪುರ: ಪಟ್ಟಣದ ಪುರಸಭೆಯ ವಾರ್ಡ್ ಸಂಖ್ಯೆ 15ರ ವ್ಯಾಪ್ತಿಯಲ್ಲಿ ಬರುವ ಒಂಬತ್ತು ಕಮಾನ್ ಏರಿಯಾದ ಮಹಿಳಾ ಶೌಚಾಲಯ ಅವ್ಯವಸ್ಥೆಯಿಂದ ಮಹಿಳೆಯರು ಶೌಚಾಲಯಕ್ಕೆ ಪರದಾಡುವ ಪರಿಸ್ಥಿತಿ ಉಂಟಾಗಿದೆ ಕೂಡಲೇ ಪುರಸಭೆ ಅಧಿಕಾರಿಗಳು ಎಚ್ಚೆತ್ತುಕೊಂಡು ದುರಸ್ತಿ ಕಾರ್ಯ ಮಾಡಬೇಕು ಎಂದು ಪುರಸಭೆ ಸದಸ್ಯ ಶ್ಯಾಮ್ ಮೇಧಾ ಆಗ್ರಹಿಸಿದ್ದಾರೆ.

ಶೌಚಾಲಯದ ಬಾಗಿಲುಗಳು ಮುರಿದು ಬಿದ್ದು ಸುಮಾರು ತಿಂಗಳುಗಳಾದರೂ ಇನ್ನೂ ರಿಪೇರಿ ಆಗಿರುವುದಿಲ್ಲ. ಮತ್ತು ಶೌಚಾಲಯದ ಸುತ್ತಲೂ ಗಿಡ ಗಂಟಿಗಳು ಬೆಳೆದಿದ್ದರಿಂದ ಶೌಚಾಲಯಕ್ಕೆ ಹೋಗಲು ಪರದಾಡುವಂತಾಗಿದೆ. ಹೊಸ ಶೌಚಾಲಯದ ನಿರ್ಮಾಣಕ್ಕಾಗಿ ಅನುದಾನ ಬಿಡುಗಡೆ ಆಗಿದ್ದರೂ ಇನ್ನೂ ಕೂಡ ಯಾವುದೇ ಕಾಮಗಾರಿ ಆರಂಭವಾಗಿರುವುದಿಲ್ಲ. ಶೌಚಾಲಯಕ್ಕೆ ಹೋಗುವ ರಸ್ತೆ ಹಾಗೂ ಸುತ್ತಮುತ್ತಲಿನ ಗಿಡಗಂಟಿಗಳು ಬೆಳೆದಿದ್ದರಿಂದ ಭಯದ ವಾತಾವರಣ ನಿರ್ಮಾಣವಾಗಿದೆ ಹೀಗಾಗಿ ಮಹಿಳೆಯರು ಆತಂಕದಲ್ಲಿದ್ದಾರೆ. ಹೊಸ ಶೌಚಾಲಯ ನಿರ್ಮಾಣ ಆಗುವವರೆಗೆ ಈಗಿರುವ ಶೌಚಾಲಯದ ರಿಪೇರಿ ಮಾಡಿಸಿ ಬೆಳೆದಿರುವ ಗಿಡಗಂಟಿಗಳು ತೆರವುಗೊಳಿಸಿ ಮಹಿಳೆಯರಿಗೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದ್ದಾರೆ.

ಅ,25ಕ್ಕೆ ಅಭಿನಂದನಾ ಸಮಾರಂಭ: ಸಾಲಿ.

ಚಿತ್ತಾಪುರ :  ಕಲಬುರಗಿಯ ನೂತನ ಸಂಸದ ಡಾ. ರಾಧಾಕೃಷ್ಣನ ದೊಡ್ಡಮನಿ ಅವರು ಸಂಸದರಾಗಿ ಪ್ರಪ್ರಥಮ ಬಾರಿ ಪಟ್ಟಣಕ್ಕೆ ಅ 25 ರಂದು ಆಗಮಿಸುತ್ತಿದ್ದು, ಕಾಂಗ್ರೆಸ್ ಪಕ್ಷದ ವತಿಯಿಂದ ಅದ್ದೂರಿಯಾಗಿ ಅಭಿನಂದನಾ ಸಮಾರಂಭ ಪಟ್ಟಣದ ಬಜಾಜ್ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬ್ಲಾಕ್ ಅಧ್ಯಕ್ಷ ಭೀಮಣ್ಣ ಸಾಲಿ ಹೇಳಿದರು.

 ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಕಾರ್ಯಕ್ರಮದ ಅಂಗವಾಗಿ ಪೂರ್ವಭಾವಿ ಸಭೆ ಜರುಗಿತು. ನಂತರ ಅವರು  ಪತ್ರಿಕಾಗೋಷ್ಠಿಯಲ್ಲಿ  ಮಾತನಾಡಿ ಸಂಸದ ಡಾ. ರಾಧಾಕೃಷ್ಣ ದೊಡ್ಡಮನಿ ಅವರು ಪಟ್ಟಣದ ಸುಪ್ರಸಿದ್ಧ  ಶ್ರೀ ನಾಗಾವಿ ಯಲ್ಲಮ್ಮ ದೇವಸ್ಥಾನಕ್ಕೆ ಮತ್ತು ಹಜರತ್ ಚಿತ್ತಶಾವಲಿ ದರ್ಗಾಕ್ಕೆ ಭೇಟಿ ನೀಡಿ ನಂತರ  ಸಂವಿಧಾನ ಶಿಲ್ಪಿ ಡಾ‌. ಬಾಬಾ ಸಾಹೇಬ ಅಂಬೇಡ್ಕರ್ ಹಾಗೂ ಶ್ರೀ ಬಸವೇಶ್ವರ ಮೂರ್ತಿಗೆ ಮಲಾರ್ಪಣೆ ಮಾಡಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಶಾಸಕ ಡಾ. ಅಜಯಸಿಂಗ, ಶಾಸಕ ಎಂವೈ ಪಾಟೀಲ, ಸೇರಿದಂತೆ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಶಾಸಕರು, ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

 ಭವ್ಯ ಮೆರವಣಿಗೆ : ಪಟ್ಟಣದ ಚಿತ್ತಾಶವಲಿ ಚೌಕದಿಂದ ಬೆಳಿಗ್ಗೆ 10 ಗಂಟೆಗೆ ಮೆರವಣಿಗೆ ಆರಂಭವಾಗಿ , ಜನತಾ ಬಂಜಾರ, ಭುನೇಶ್ವರಿ ವೃತ್ತ, ಡಾ. ಬಿ.ಆರ್ ಅಂಬೇಡ್ಕರ್ ವೃತ್ತ, ಬಸ್ ನಿಲ್ದಾಣ ಮೂಲಕ ಪಟ್ಟಣದ ಬಜಾಜ್ ಕಲ್ಯಾಣ ಮಂಟಪದ ಮುಖ್ಯ ವೇದಿಕೆಗೆ ತಲುಪುತ್ತದೆ ಎಂದು ತಿಳಿಸಿದರು.

ಈ ಸಮಾರಂಭ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯ ಕಾರ್ಯಕರ್ತೆಯರು ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಮನವಿ ಮಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಮೇಶ ಮರಗೋಳ ಕೆಪಿಸಿಸಿ ಸದಸ್ಯ ನಾಗರೆಡ್ಡಿ ಪಾಟೀಲ ಕರದಾಳ, ವಾಡಿ ಬ್ಲಾಕ್ ಅಧ್ಯಕ್ಷ ಮಹಿಮೂದ ಸಾಹೇಬ್, ಪ್ರಮುಖರಾದ ವೀರಣ್ಣಗೌಡ ಪರಸರಡ್ಡಿ ಮಲ್ಲಿಕಾರ್ಜುನ ಕಾಳಗಿ, ಮುಕ್ತಾರ ಪಟೇಲ್,  ಪ್ರಕಾಶ ಕಮಕನೂರ, ಚಂದ್ರಶೇಖರ ಕಾಶಿ, ಶಿವರುದ್ರ ಭೀಣಿ,  ಯಲ್ಲಾಲಿಂಗ ಪೂಜಾರಿ, ಬಸವರಾಜ ಚಿನಮಳ್ಳಿ, ಶಿವಾಜಿ ಕಾಶಿ, ನಜೀರ ಅಡಕಿ, ಸಲೀಂ ಸಾಬ್, ಜುಮಣ್ಣ ಪೂಜಾರಿ, ಬಸವರಾಜ ಹೊಸಳ್ಳಿ, ಶ್ರೀನಿವಾಸ ರಡ್ಡಿ ಪಾಲಪ್, ಸಂಜೆ ಬುಳ್ಳಕರ್, ಸೇರಿದಂತೆ ಇತರರು ಉಪಸ್ಥಿತದರು.

ಮಾಂಗಲ್ಯ ಸರ ಕಳ್ಳತನಕ್ಕೆ ಯತ್ನಿಸಿದ ಯುವತಿಗೆ ಗೂಸಾ.

ಚಿತ್ತಾಪುರ: ಪಟ್ಟಣದ ಬಸ್ ನಿಲ್ದಾಣದಲ್ಲಿ ಮಹಿಳೆಯ ಮಾಂಗಲ್ಯ ಸರ ಕಳ್ಳತನ ಮಾಡಲು ಯತ್ನಿಸಿದ ಯುವತಿಗೆ ಪ್ರಯಾಣಿಕರು ಥಳಿಸಿದ ಘಟನೆ ಬುಧವಾರ ನಡೆದಿದೆ.

ಬುಧವಾರ ಪಟ್ಟಣದಲ್ಲಿ ಸಂತೆ ಇರುವ ಕಾರಣ ತಾಲ್ಲೂಕಿನ ಸುತ್ತಮುತ್ತಲಿನ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಪ್ರತಿ ಬುಧವಾರ ಒಂದಲ್ಲ ಒಂದು ಕಳ್ಳತನ ಆಗುತ್ತದೆ. ಇಂದು ಸಾಯಂಕಾಲ ಬಸ್ ನಿಲ್ದಾಣದಲ್ಲಿ ದಿಗ್ಗಾಂವ್ ಮತ್ತು ಅಲ್ಲೂರ ಗ್ರಾಮದ ಮಹಿಳೆಯರ ಮಾಂಗಲ್ಯ ಸರ ಕಳ್ಳತನಕ್ಕೆ ಯತ್ನಿಸಿ ಓಡಿಹೋಗುವಾಗ ಯುವತಿಯನ್ನು ಹಿಡಿದು ಪೋಲಿಸ್‌ ಠಾಣೆಗೆ ಒಪ್ಪಿಸಿದ ಘಟನೆ ನಡೆದಿದೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ಪೊಲೀಸ ಇಲಾಖೆಯು ಬುಧವಾರ ಸಂತೆಯಂದ್ದು ಕಳ್ಳತನ ಆಗದಂತೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎನ್ನುವುದು ಸ್ಥಳೀಯರ ಅಭಿಪ್ರಾಯವಾಗಿದೆ.

ಎಸ್ಸೆಸ್ಸೆಲ್ಸಿ ಮಕ್ಕಳೊಂದಿಗೆ ಜಿಪಂ ಸಿಇಒ ಚರ್ಚೆ.

ಚಿತ್ತಾಪುರ: ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮಪಡಿಸಲು ಪೂರ್ವಸಿದ್ಧತಾ ಪರೀಕ್ಷೆ-1 ರಲ್ಲಿ ಅತ್ಯಂತ ಕಡಿಮೆ ಫಲಿತಾಂಶ ಪಡೆದ ಕರ್ನಾಟಕ ಪಬ್ಲಿಕ್ ಶಾಲೆ ಮಾಡಬೂಳ,...