ಬುಧವಾರ, ಮೇ 21, 2025

ಕಾಂಗ್ರೆಸ್ ನಿಂದ ಮಿಂಚಿನ ಪ್ರತಿಭಟನೆ, ಛಲವಾದಿ ನಾರಾಯಣಸ್ವಾಮಿ ಕ್ಷಮೆಯಾಚನೆಗೆ ಆಗ್ರಹ, ತಿರಂಗಾ ಯಾತ್ರೆ ವೇದಿಕೆ ಕಾರ್ಯಕ್ರಮ ರದ್ದು.

ಚಿತ್ತಾಪುರ: ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕಲಬುರಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡುವಾಗ ಆನೆ ಹೋಗುವಾಗ ನಾಯಿಗಳು ಬೂಗಳುತ್ತವೆ ಎಂದಾಗ ಆನೆ, ನಾಯಿ ಯಾರು ಪ್ರಶ್ನಿಸಿದಾಗ ಪ್ರಧಾನಿ ನರೇಂದ್ರ ಮೋದಿ ಅವರು ಆನೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ನಾಯಿಗೆ ಹೋಲಿಕೆ ಮಾಡಿ ಮಾತನಾಡಿರುವುದನ್ನು ತೀವ್ರವಾಗಿ ಖಂಡಿಸಿದ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಪಟ್ಟಣದಲ್ಲಿ ಮಿಂಚಿನ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ತಿರಂಗಾ ಯಾತ್ರೆಯಲ್ಲಿ ಭಾಗವಹಿಸಲು ಬುಧವಾರ ಚಿತ್ತಾಪುರ ಪಟ್ಟಣಕ್ಕೆ ಆಗಮಿಸಿದ ಛಲವಾದಿ ನಾರಾಯಣಸ್ವಾಮಿ ಪ್ರವಾಸಿ ಮಂದಿರದಲ್ಲಿ ಇರುವ ವಿಷಯ ತಿಳಿಯುತ್ತಿದ್ದಂತೆಯೇ ಕಾಂಗ್ರೆಸ್ ಮುಖಂಡರು ಪ್ರವಾಸಿ ಮಂದಿರಕ್ಕೆ ಮುತ್ತಿಗೆ ಹಾಕಿ ಛಲವಾದಿ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.

ಈ ಮಧ್ಯೆ ಕಾಂಗ್ರೆಸ್ ಮುಖಂಡರು ಪ್ರವಾಸಿ ಮಂದಿರದ ಗೇಟ್ ತೆರೆದು ಒಳನುಗ್ಗುವ ಪ್ರಯತ್ನ ಮಾಡಿದಾಗ ಪೊಲೀಸ್ ಅಧಿಕಾರಿಗಳು ಪ್ರತಿಭಟನೆ ನಿರತ ಕಾಂಗ್ರೆಸ್ ಕಾರ್ಯಕರ್ತರನ್ನು ಹೊರಹಾಕಿ ಗೇಟ್ ಬಂದ್ ಮಾಡಿದರು. ಗೇಟ್ ಮುಂದೆ ಕುಳಿತುಕೊಂಡು ಕಾಂಗ್ರೆಸ್ ಮುಖಂಡರು ಹೋರಾಟ ಮುಂದುವರೆಸಿದರು. ಪ್ರವಾಸಿ ಮಂದಿರದಲ್ಲಿದ್ದ ಛಲವಾದಿ ನಾರಾಯಣಸ್ವಾಮಿ ಅವರು ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಕ್ಷಮೆ ಯಾಚಿಸಬೇಕೆಂದು ಪಟ್ಟುಹಿಡಿದಿದ್ದಾರೆ.

ಈ ಹೋರಾಟ ಮುಂದೆ ಯಾವ ರೂಪ ಪಡೆಯಲಿದೆ ಎಂಬುದು ಕಾದುನೋಡಬೇಕಿದೆ. ಸ್ಥಳದಲ್ಲಿ ಹೆಚ್ಚುವರಿ ಎಸ್ಪಿ ಮಹೇಶ ಮೇಗಣ್ಣ, ಡಿವಾಯ್ಎಸ್ಪಿ ಶಂಕರಗೌಡ ಪಾಟೀಲ, ಸಿಪಿಐ ಚಂದ್ರಶೇಖರ ತಿಗಡಿ, ನಟರಾಜ್ ಲಾಡೆ, ಜಗದೇವ ಪಾಳಾ, ಪಿಎಸ್‌ಐಗಳಾದ ಶ್ರೀಶೈಲ್ ಅಂಬಾಟಿ, ಸೇರಿದಂತೆ ಪೊಲೀಸರು ಸ್ಥಳದಲ್ಲಿದ್ದಾರೆ.

ಚಿತ್ತಾಪುರ ತಿರಂಗಾ ಯಾತ್ರೆಯಲ್ಲಿ ಭಾಗವಹಿಸಲು ಆಗಮಿಸಿದ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ರವರಿಗೆ ಅನುವು ಮಾಡಿಕೋಡಿ ಎಂದು ಬಿಜೆಪಿ ಕಾರ್ಯಕರ್ತರು ಪೋಲಿಸ ಅಧಿಕಾರಿಗಳ ಜೊತೆಗೆ ಮಾತಿನ ಸಂಘರ್ಷ ನಡೆಯಿತ್ತು.

ಕಲಬುರಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡುವಾಗ ಆನೆ ಹೋಗುವಾಗ ನಾಯಿಗಳು ಬೂಗಳುತ್ತವೆ ಎಂಬ ವಿಷಯಕ್ಕೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಮಾಡುವ ಪ್ರತಿಭಟನೆಗೆ ನಾನು ಉತ್ತರ ನೀಡಲ್ಲ, ನನ್ನಗೂ ಪ್ರಿಯಾಂಕ್ ರವರಿಗೆ ಸಂಬಂಧಿಸಿದ್ದು ಅವರು ಬೇಕಿದ್ದರೆ ನನ್ನ ಮೇಲೆ ಕೇಸು ದಾಖಲೆ ಮಾಡಲಿ ಎಂದು ಉತ್ತರಿಸಿದರು. ಸ್ಥಳದಲ್ಲಿ ಕ್ಷಮೆಯಾಚನೆಗೆ ಒತ್ತಾಯಿಸಿದರೆ ನಾನು ಪ್ರವಾಸಿ ಮಂದಿರದ ವಾಸ್ತವ್ಯ ಮಾಡುವುದಾಗಿ ಹೇಳಿದರು.

- ಛಲವಾದಿ ನಾರಾಯಣಸ್ವಾಮಿ
ವಿಧಾನ ಪರಿಷತ್ ವಿಪಕ್ಷ ನಾಯಕ.

ಕೆಲ ಕಾರ್ಯಕರ್ತೆರು ಪ್ರವಾಸಿ ಮಂದಿರಕ್ಕೆ ನುಗ್ಗಿ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಕಾರಿಗೆ ಬಣ್ಣ ಎರಚಿದರು.
ನಂತರ ಪೋಲಿಸರು ಅವರನ್ನು ಸಮಾಧಾನ ಮಾಡಿ ಕಳುಹಿಸಿದ ಘಟನೆ ನಡೆಯಿತ್ತು.

ಮಂಗಳವಾರ, ಮೇ 13, 2025

ಗ್ರಾಮೀಣ ಭಾಗದ 87 ಹಳ್ಳಿಗಳ ಅಭಿವೃದ್ದಿಗೆ ಕ್ರಿಯಾಯೋಜನೆ ಸಿದ್ದ: ಪ್ರಿಯಾಂಕ್ ಖರ್ಗೆ.

ಚಿತ್ತಾಪುರ: ಮತಕ್ಷೇತ್ರದ ಗ್ರಾಮೀಣ ಭಾಗದ ಹಳ್ಳಿಗಳ ಅಭಿವೃದ್ದಿಗಾಗಿ 150 ಕೋಟಿ ರೂಪಾಯಿ ವೆಚ್ಚದ ಕ್ರಿಯಾ ಯೋಜನೆ ಈಗಾಗಲೇ ಸಿದ್ದವಾಗಿದೆ. ಇದರ ಅಡಿಯಲ್ಲಿ 87 ಹಳ್ಳಿಗಳಿಗೆ ಅಗತ್ಯ ಅನುದಾನ ಲಭ್ಯವಾಗಲಿದ್ದು ಮುಂದಿನ ಹದಿನೈದು ದಿನಗಳಲ್ಲಿ ಈ ಯೋಜನೆಗೆ ಚಾಲನೆ ನೀಡಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ‌ ಪಂಚಾಯತ್ ರಾಜ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಪಟ್ಟಣದ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ 
ಅಮೃತ್ ಯೋಜನೆಯಡಿಯಲ್ಲಿ ಚಿತ್ತಾಪುರ ಹಾಗೂ ವಾಡಿ ಪಟ್ಟಣಕ್ಕೆ ಕುಡಿಯುವ ನೀರು ಒದಗಿಸುವ ಯೋಜನೆಗೆ ಅಡಿಗಲ್ಲು, ಪಟ್ಟಣದಲ್ಲಿ ನಿರ್ಮಾಣಗೊಂಡಿರುವ ಕ್ರೀಡಾಂಗಣ ಉದ್ಘಾಟನೆ ಸೇರಿದಂತೆ ರೂ 86.79 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಅಡಿಗಲ್ಲು ನೆರವೇರಿಸಿ ಮಾತನಾಡಿದ ಅವರು ಮೂಲಭೂತ ಸೌಕರ್ಯ, ಕುಡಿಯುವ ನೀರು ಯೋಜನೆಗಳಿಗೆ ಆದ್ಯತೆ ನೀಡಲಾಗುತ್ತಿದ್ದು ಮತ್ತು 25 ಕೋಟಿ ರೂಪಾಯಿ ವೆಚ್ಚದಲ್ಲಿ ಗುಂಡಗುರ್ತಿ ಬಳಿ ಸೋಲಾರ್ ಎನರ್ಜಿ ವಿದ್ಯುತ್ ಉತ್ಪಾದನಾ ಕೆಂದ್ರ ಸ್ಥಾಪಿಸಲಾಗುತ್ತಿದೆ. ಪ್ರಗತಿ ಪಥ ಹಾಗೂ ಕಲ್ಯಾಣ ಪಥ ಯೋಜನೆಗಳ ಅಡಿಯಲ್ಲಿ ಜಿಲ್ಲೆಯ ರಸ್ತೆ ಅಭಿವೃದ್ದಿ ಪಡಿಸಲಾಗುತ್ತಿದೆ. ಜೊತೆಗೆ ವಾಡಿ ಹಾಗೂ ಚಿತ್ತಾಪುರ ಪಟ್ಟಣದ ಅಭಿವೃದ್ದಿಗೆ ನೀಲ ನಕ್ಷೆ ತಯಾರಿಸಲಾಗುತ್ತಿದೆ‌ ಎಂದರು.
ಗ್ರಾಮೀಣಾಭಿವೃದ್ಧಿ ಇಲಾಖೆ ಅಡಿಯಲ್ಲಿ ಕೈಗೊಂಡ ಅಭಿವೃದ್ದಿ ಕಾರ್ಯಕ್ರಮಗಳ ಬಗ್ಗೆ ವಿವರ ನೀಡಿದ ಸಚಿವರು, ರಾಜ್ಯಾದ್ಯಂತ 5,770 ಅರಿವು ಕೇಂದ್ರಗಳನ್ನು ಸ್ಥಾಪಿಸಿ ಗ್ರಾಮೀಣ ಭಾಗದ ಯುವಕ ಯುವತಿಯರಿಗಾಗಿ ಜ್ಞಾನಾರ್ಜನೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ಈ ಸಲ ಒಟ್ಟು 1,281 ಕೋಟಿ ರೂಪಾಯಿ ತೆರಿಗೆ ಸಂಗ್ರಹವಾಗಿದೆ. ಇದು ದಾಖಲೆಯ ಸಂಗ್ರಹವಾಗಿದೆ. ನರೇಗಾ ಯೋಜನೆಯಡಿಯಲ್ಲಿ ತಾಯಂದಿರು ಕೆಲಸ ಮಾಡಲು ಹೋದಾಗ ಅವರ ಮಕ್ಕಳನ್ನು ಬಿಟ್ಟು ಹೋಗಲು 3,867 ಕೂಸಿನ ಮನೆ ಗಳನ್ನು ಸ್ಥಾಪಿಸಲಾಗಿದ್ದು ಅಲ್ಲಿ ಸುಮಾರು 50,000 ಮಕ್ಕಳನ್ನು ಆರೈಕೆ ಮಾಡಲಾಗುತ್ತಿದೆ ಎಂದರು.

ರೈತರ ಅನುಕೂಲಕ್ಕಾಗಿ ಜಿಲ್ಲೆಯಲ್ಲಿ ಒಟ್ಟು 9 ಗ್ರಾಹಕ ಬಾಡಿಗೆ ಸೇವಾ ಕೇಂದ್ರ ಸ್ಥಾಪನೆ ಮಾಡಿದ್ದು ಕೃಷಿ ಚಟುವಟಿಕೆ ನಡೆಸಲು ಬಾಡಿಗೆ ಆಧಾರದ ಮೇಲೆ ಕೃಷಿ ಯಂತ್ರೋಪಕರಣಗಳನ್ನು ಪಡೆಯಬಹುದಾಗಿದೆ. ಖಾಸಗಿಯವರಿಗೆ ಹೋಲಿಸಿದರೆ ಯಂತ್ರೋಪಕರಣಗಳ ಬಾಡಿಗೆ ಕೂಡಾ ಕಡಿಮೆಯಾಗಿದೆ. ಚಿತ್ತಾಪುರ ತಾಲೂಕಿನಲ್ಲಿ ಇಂತಹ 2 ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ರೈತ ಬಾಂಧವರು ಈ ಕೇಂದ್ರಗಳ ಅನುಕೂಲ ಪಡೆದುಕೊಳ್ಳಬೇಕು ಎಂದು ಸಚಿವರು ಮನವಿ ಮಾಡಿದರು.
ಕ್ಷೇತ್ರದ ಶಾಸಕ ಹಾಗೂ ಸಚಿವನಾಗಿ ನಿಮ್ಮ ಕೆಲಸ ಮಾಡುವುದು ನನ್ನ ಧರ್ಮ. ಮೂಲಭೂತ ಸೌಕರ್ಯ, ಶೈಕ್ಷಣಿಕ ಪ್ರಗತಿ ಸೇರಿದಂತೆ ನೀರಾವರಿ ಯೋಜನೆಗಳ ಅಭಿವೃದ್ದಿಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ನನ್ನ ಅವಧಿಯಲ್ಲಿ ಶಕ್ತಿ‌ ಮೀರಿ ಅಭಿವೃದ್ದಿ ಕೆಲಸ ಮಾಡಿದ್ದೇನೆ. ನೀವು ಎಷ್ಟು ಶಕ್ತಿ ತುಂಬುತ್ತಿರೋ‌ ಮತ್ತಷ್ಟು ಕೆಲಸ ಮಾಡುತ್ತೇನೆ. ನೀವು ಮಾಡುವ ಮತದಾನದ ಮೌಲ್ಯ ಅರಿತುಕೊಳ್ಳಬೇಕು ಎಂದು‌ ಮನವಿ ಮಾಡಿದ ಸಚಿವರು ಮತದಾರರ ಆಶೀರ್ವಾದದಿಂದ ಕ್ಷೇತ್ರದಲ್ಲಿ ಅಭಿವೃದ್ದಿಯಾಗುತ್ತಿವೆ. ನಾನು ಯಾವ ಉಪಕಾರ ಮಾಡುತ್ತಿಲ್ಲ ಬದಲಿಗೆ ನಿಮ್ಮ ಋಣ ತೀರಿಸುತ್ತಿದ್ದೇನೆ.

ಮೊದಲ ಬಾರಿಗೆ ಶಾಸಕ ಸ್ಥಾನಕ್ಕೆ ಸ್ಪರ್ಧಿಸುವ ಸಂದರ್ಭದಲ್ಲಿ ನಮಗೆ ಟಿಕೇಟ್ ನೀಡಲು ವಿರೋಧ ವ್ಯಕ್ತವಾಗಿತ್ತು. ಪತ್ರಿಕೆಗಳು ಕೂಡಾ ನನ್ನ ಬಗ್ಗೆ ವ್ಯಂಗ್ಯಮಾಡಿ ಹೆಡ್ ಲೈನ್ ಪ್ರಕಟಿಸಿದ್ದವು. ಆ ಸಂದರ್ಭದಲ್ಲಿ ಹಿರಿಯ ನಾಯಕ ಎಸ್ ಆರ್ ಪಾಟೀಲ್ ಐಟಿ‌/ಬಿಟಿ ಸಚಿವರಾಗಿದರು ಆಗ ನನಗೆ ಐಟಿಬಿಟಿ ಸಚಿವನಾಗಿದ್ದಾಗ ಕೆಲವರು ಟಿಕಿಸಿದರು ನನ್ನಗೆ ಏನೂ ಗೋತ್ತಿಲ್ಲ, ನನ್ನಿಂದ ಅಭಿವೃದ್ದಿ ಕೆಲಸಗಳು ಆಗಲ್ಲ ಅಂತಾ ಹೇಳುವರು ಈಗ ಕೆಲ ವರ್ಷಗಳಲ್ಲಿ ಪ್ರಿಯಾಂಕ್ ಅವರನ್ನೇ ಐಟಿ/ಬಿಟಿ ಸಚಿವರನ್ನಾಗಿ ಮಾಡಿ ಎಂದು ಎಲ್ಲರೂ ಒತ್ತಾಯಿಸಿದ್ದರು. ಇದಕ್ಕೆಲ್ಲಾ ನಿಮ್ಮ ಆಶೀರ್ವಾದವೇ ಕಾರಣ ಎಂದು ಖರ್ಗೆ ಹೇಳಿದರು.

ಚಿತ್ತಾಪುರ ಮತ ಕ್ಷೇತ್ರದ ಶಾಸಕರು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಮುಂಬರುವ ದಿನಗಳಲ್ಲಿ ಈ ರಾಜ್ಯದ ಮುಖ್ಯಮಂತ್ರಿಯಾಗುವ ಎಲ್ಲ ಅರ್ಹತೆಗಳು ಇವೇ ಎಂದರು.

- ತಿಪ್ಪಣ್ಣಪ್ಪ ಕಮಕನೂರು
ಎಂಎಲ್‌ಸಿ ಕಲಬುರಗಿ.

ಬಳ ಚರಂಡಿ ಮಂಡಳಿ ವಿಭಾಗದ ನರಸಿಂಹರೆಡ್ಡಿ ಎನ್, ಎಂಎಲ್‌ಸಿ ಹಾಗೂ ಡಿಸಿಸಿ ಅಧ್ಯಕ್ಷ ಜಗದೇವ ಗುತ್ತೇದಾರ, ಕೆಪಿಸಿಸಿ ಸದಸ್ಯ ನಾಗರೆಡ್ಡಿ ಪಾಟೀಲ್, ಮಾಜಿ ಪುರಸಭೆ ಅಧ್ಯಕ್ಷರು ಹಾಗೂ ಹಾಲಿ ಸದಸ್ಯರಾದ ಚಂದ್ರಶೇಖರ ಕಾಶಿ, ಬಾಬು ಕಾಶಿ, ಮಾತನಾಡಿದರು.

ಈ ಸಂದರ್ಭದಲ್ಲಿ ಚಂದ್ರಲಾ ಪರಮೇಶ್ವರಿ, ಪುರಸಭೆ ಅಧ್ಯಕ್ಷ ಅನ್ನಪೂರ್ಣ ನಾಗಪ್ಪ, ಜಿಲ್ಲಾಧಿಕಾರಿ‌ ಫೌಜಿಯಾ ತರನ್ನುಮ್, ಸಿಇಒ ಭಂವರ್ ಸಿಂಗ್ ಮೀನಾ, ಎಸ್ ಪಿ ಅಡ್ಡೂರು ಶ್ರೀನಿವಾಸಲು, ಸಹಾಯಕ ಆಯುಕ್ತರಾದ ಪ್ರಭುರೇಡ್ಡಿ, ತಹಸೀಲ್ದಾರ ನಾಗಯ್ಯ ಹೀರೆಮಠ, ಪುರಸಭೆ ಮುಖ್ಯಾಧಿಕಾರಿ ಮನೋಜಕುಮಾರ ಗುರಿಕಾರ್ ಮರಗೋಳ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ, ಶ್ರೀನಿವಾಸ ಸಗರ, ಶಿವಾನಂದ ಪಾಟೀಲ, ಮಹೆಬೂಬ್ ಸಾಬ್, ಮುಕ್ತರ್ ಪಟೇಲ್, ಮಲ್ಲಿಕಾರ್ಜುನ ಕಾಳಗಿ, ಶ್ರೀಮತಿ ಶೀಲಾ ಕಾಶಿ, ಶರಣಪ್ಪ ನಾಟೀಕಾರ್, ಜಗದೀಶ ಚವ್ಹಾಣ್, ವಿನೋದ ಗುತ್ತೇದಾರ್, ಸಾಬಣ್ಣ ಕಾಶಿ, ಸೇರಿದಂತೆ 
ಇತರರು ಇದ್ದರು. ಪಶು ಇಲಾಖೆ ಶಂಕರ ಕಣ್ಣಿ ಸ್ವಾಗತಿಸಿ, ಸಂತೋಷ ಕುಮಾರ ಶಿರನಾಳ ನಿರೂಪಿಸಿದರು.

ಕಾಣೆಯಾಗಿದ್ದಾರೆ

ಕಲಬುರಗಿ ಜಿಲ್ಲೆ ಶಹಾಬಾದ ತಾಲ್ಲೂಕು ಭಂಕೂರ ಪಟ್ಟಣದ ನಿವಾಸಿ ಮಹಾದೇವಪ್ಪಾ ಜಲವಾದಿ ಇವರ ಹೆಂಡತಿ ಶ್ರೀಮತಿ ಸಾವಿತ್ರಿಬಾಯಿ (41) ವರ್ಷ ಎಂಬಾತಳು ದಿನಾಂಕ 06-05-2025 ರಂದು ಮುಂಜಾನೆ 6 ಗಂಟೆ ಸುಮಾರಿಗೆ  ಮನೆಯಿಂದ ಕಾಣೆಯಾಗಿದ್ದಾರೆ. 

ವೃತ್ತಿ, ಮನೆಗೆಲಸ 4/5 ಅಡಿ ಎತ್ತರ ಸಾಧರಣ ಮೈ ಕಟ್ಟು, ದುಡ್ಡನೆ ಮುಖ, ಗೋಧಿ ಮೈ ಬಣ್ಣ, ಕನ್ನಡ, ಹಿಂದಿ ಮಾತನಾಡಲು ಬರುತ್ತದೆ. ಸುಳಿವು ಯಾರಿಗಾದರೂ ಸಿಕ್ಕಲ್ಲಿ 6360290334 ಈ ಮೊಬೈಲ್‌ ನಂಬರಗೆ  ಸಂಪರ್ಕಿಸಲು ಕೋರಲಾಗಿದೆ.ಅಥವಾ ಸ್ಥಳೀಯ ಪೋಲಿಸ ಠಾಣೆ ತಿಳಿಸಲು ಕೊರಲಾಗಿದೆ.

ಬುಧವಾರ, ಏಪ್ರಿಲ್ 30, 2025

ಪ್ರಪ್ರಥಮ ಪಾರ್ಲಿಮೆಂಟ್ ಸ್ಥಾಪಿಸಿದ್ದು ಬಸವಣ್ಣ: ಸಂಜಯ ಮಾಕಲ್.


ಚಿತ್ತಾಪುರ: ಬ್ರಿಟನ್ ದೇಶದವರು ತಮ್ಮ ಸಂಸತ್
ಪ್ರಥಮ ಎನ್ನುವರು ಆದರೆ ಅದಕ್ಕೂ ಮೊದಲೇ ಕರುನಾಡಿನಲ್ಲಿ ವಿವಿಧ ವರ್ಗಗಳ ಶರಣರ ಅಭಿಪ್ರಾಯ ಪಡೆದು, ಎಲ್ಲರಿಗೂ ಮಾನ್ಯತೆ ನೀಡಿದ ಸಮಾನತೆಯ ಹರಿಕಾರ ಬಸವಣ್ಣನವರು ಜಗತ್ತಿನಲ್ಲಿಯೇ ಪ್ರಪ್ರಥಮ ಪಾರ್ಲಿಮೆಂಟ್ ಅನುಭವ ಮಂಟಪ ನಿರ್ಮಿಸಿದರು ಎಂದು ಉಪನ್ಯಾಸಕ ಸಂಜಯ ಮಾಕಲ್ ಹೇಳಿದರು.

ಪಟ್ಟಣದ ತಹಸೀಲ್ ಕಚೇರಿಯಲ್ಲಿ ತಾಲೂಕು ಆಡಳಿತ ವತಿಯಿಂದ ಹಮ್ಮಿಕೊಂಡ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ 892 ನೇ ಜಯಂತ್ಯೋತ್ಸವ ಸಮಾರಂಭದಲ್ಲಿ ವಿಶೇಷ ಉಪನ್ಯಾಸಕರಾಗಿ ಮಾತನಾಡಿದ ಅವರು, ದೇಶದಲ್ಲಿ ಆರ್ಯರು ಬರುವ ಮುಂಚೆ ನಮ್ಮಲ್ಲಿ ಒಗ್ಗಟ್ಟು ಇತ್ತು, ಅವರು ಬಂದ ಮೇಲೆ ಒಡೆದು ಆಳ್ತಾ ಇದ್ದಾರೆ, ಅವರು ಒಡೆದು ಆಳುವುದೇ ಧರ್ಮ ಮಾಡಿದ್ದಾರೆ ಎಂದರು.

ಬುದ್ಧ, ಬಸವಣ್ಣ, ಅಂಬೇಡ್ಕ‌ರ್ ಮೂವರು ಜಾತಿ ಪದ್ಧತಿ, ಅಸಮಾನತೆ ವಿರುದ್ಧ ಹೋರಾಡಿದವರು. ಆದರೆ ದುರ್ದೈವ ಇನ್ನೂ ಅದು ಚಾಲ್ತಿಯಲ್ಲಿ ಇದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ದಿವ್ಯ ಸಾನಿಧ್ಯ ವಹಿಸಿದ್ದ ಕಂಬಳೇಶ್ವರ ಮಠದ ಶ್ರೀ ಸೋಮಶೇಖರ್ ಶಿವಾಚಾರ್ಯರು ಆಶೀರ್ವಚನ ನೀಡಿ, ಪ್ರಪಂಚಕ್ಕೆ ವಚನ ಸಾಹಿತ್ಯ ಸಂಪತ್ತು ಕೊಟ್ಟ ಮಹಾನ್ ಶರಣ ಬಸವಣ್ಣನವರು, ಸಮಾನತೆಯ ಸಮಾಜಕ್ಕಾಗಿ ಜಾತಿ ಪದ್ಧತಿ ನಿರ್ಮೂಲನೆ ಮಾಡಲು ಅವರು ಮಾಡಿದ ಕ್ರಾಂತಿ ಹೊಸ ಬದಲಾವಣೆಗೆ ನಾಂದಿ ಹಾಡಿತು ಎಂದರು.

ಮುಖ್ಯ ಅತಿಥಿಗಳಾಗಿ ಕೆಪಿಸಿಸಿ ಕಾರ್ಯದರ್ಶಿ ರಮೇಶ ಮರಗೋಳ, ಅಧ್ಯಕ್ಷತೆ ವಹಿಸಿದ್ದ ಪುರಸಭೆ ಅಧ್ಯಕ್ಷೆ ಅನ್ನಪೂರ್ಣ ಕಲ್ಲಕ್, ಸಮಾರಂಭ ಉದ್ಘಾಟಿಸಿದ ತಹಸೀಲ್ದಾ‌ರ್ ನಾಗಯ್ಯ ಹಿರೇಮಠ ಅವರು ಮಾತನಾಡಿದರು. ವೇದಿಕೆಯಲ್ಲಿ ಸಿಪಿಐ ಚಂದ್ರಶೇಖರ ತಿಗಡಿ, ಬಸವ ಜಯಂತಿ ಉತ್ಸವ ಸಮಿತಿ ಅಧ್ಯಕ್ಷ ರಮೇಶ ಬೊಮ್ಮನಳ್ಳಿ, ಬಿಜೆಪಿ ತಾಲೂಕು ಅಧ್ಯಕ್ಷ ರವೀಂದ್ರ ಸಜ್ಜನಶೆಟ್ಟಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಅಕ್ರಮ್ ಪಾಶಾ, ಆನಂದ ಪಾಟೀಲ ನರಿಬೋಳ, ಶಾಂತಣ್ಣ ಚಾಳಿಕಾರ ಇದ್ದರು.

ಕಾರ್ಯಕ್ರಮದಲ್ಲಿ ಮಲ್ಲರೆಡ್ಡಿ ಗೋಪಸೇನ್, ನಾಗಣ್ಣ ವಡ್ಡಡಗಿ, ಬಸ್ಸಣ್ಣ ತಳವಾರ, ಬಸವರಾಜಗೌಡ ಹೊನ್ನಾಳ, ಬಸವರಾಜ ಕಾಳಗಿ, ಬಸವರಾಜ ಹೂಗಾ‌ರ್, ಚಂದ್ರಶೇಖರ ಉಟಗೂರ, ಬಸವರಾಜ ಸಂಕನೂರ, ಅನಿಲ್‌ ವಡ್ಡಡಗಿ, ಶ್ರೀಕಾಂತ್ ಸುಲೇಗಾಂವ, ನಾಗರಾಜ ಕಡಬೂರ, ನಾಗರಾಜ್ ರೇಷ್ಮೆ, ಪ್ರಸಾದ್ ಅವಂಟಿ, ನಾಗರಾಜ್ ಹೂಗಾರ, ಅಂಬರೀಷ್‌ ಸುಲೇಗಾಂವ್, ಸಾಯಿನಾಥ ನಿಪ್ಪಾಣಿ, ವೀರಸಂಗಪ್ಪ ಸುಲೇಗಾಂವ, ರಾಜು ಬೆಣ್ಣೆ, ಸೋಮು ಟೋಕಾಪೂರ, ರೇವಣಸಿದ್ದಪ್ಪ ಕುರಕೋಟಿ, ಸಿದ್ದು ರಾಜಾಪುರ, ರಮೇಶ ಕಾಳನೂರ ಸೇರಿದಂತೆ ಇತರರು ಇದ್ದರು.

ಸಂತೋಷ ಶಿರಾನಾಳ ನಿರೂಪಿಸಿದರು, ಡಾ. ಶಂಕರ ಕಣ್ಣಿ ಸ್ವಾಗತಿಸಿದರು, ಗ್ರೇಡ್ -2 ತಹಸೀಲ್ದಾ‌ರ್ ರಾಜಕುಮಾರ ಮರತೂರಕರ್ ವಂದಿಸಿದರು.

ಮಂಗಳವಾರ, ಮಾರ್ಚ್ 18, 2025

ಅಪ್ಪು 50ನೇ ಹುಟ್ಟುಹಬ್ಬ ಆಚರಣೆ.

ಚಿತ್ತಾಪುರ: ನಟ ದಿವಂಗತ ಪುನೀತ್ ರಾಜ್ ಕುಮಾರ್ ಅವರ 50ನೇ ಹುಟ್ಟು ಹಬ್ಬವನ್ನು ಅಪ್ಪು ಅಭಿಮಾನಿಗಳು ಸಂಭ್ರಮದಿಂದ ಆಚರಿಸಿದರು.

ಪಟ್ಟಣದ ಲಾಡ್ಡಿಂಗ್ ಕ್ರಾಸ್ ಹತ್ತಿರ ಕರ್ನಾಟಕ ರಾಜ್ಯ ಭೋವಿ ವಡ್ಡರ ಮಹಾಸಭಾ ತಾಲೂಕ ಅಧ್ಯಕ್ಷ ವೆಂಕಟೇಶ್ ಹರವಾಳ ನೇತೃತ್ವದಲ್ಲಿ ಅಪ್ಪು ಅಭಿಮಾನಿಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ರತ್ನ ಪುನೀತ್ ರಾಜಕುಮಾ‌ರ್ ಅವರ ಜನ್ಮ ದಿನದ ಸಮಾರಂಭದಲ್ಲಿ ಕಲಾವಿದ ಬಾಬು ಕಾಶಿ ಮಾತನಾಡಿ, ಚಿಕ್ಕ ವಯಸ್ಸಿನಲ್ಲೇ ಬಾಲ ನಟನಾಗಿ ಅಭಿನಯಿಸಿ ನಂತರ ನಾಯಕ ನಟನಾಗಿ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವಂತಹ ಸಿನೇಮಾ ಮಾಡಿದ ಪುನೀತ್ ರಾಜಕುಮಾ‌ರ್ ಅವರು ಚಿತ್ರರಂಗಕ್ಕೆ ಸಲ್ಲಿಸಿದ ಸೇವೆ ಅಮೋಘವಾಗಿದೆ ಹಾಗೂ ಎಲೆಮರೆ ಕಾಯಿಯಂತೆ ಸಲ್ಲಿಸಿದ ಸಮಾಜ ಸೇವೆ ಮೆಚ್ಚುವಂಥದ್ದು ಇಂತಹ ಅಪರೂಪದ ಚಿತ್ರನಟ ಪುನೀತ್ ರಾಜಕುಮಾ‌ರ್ ಅವರ ಹೆಸರನ್ನು ಪಟ್ಟಣದ ಲಾಡ್ಡಿಂಗ್ ಕ್ರಾಸ್ ಗೆ ನಾಮಕರಣ ಮಾಡಬೇಕು ಎಂದು ಒತ್ತಾಯಿಸಿದರು.

ಮುಖ್ಯ ಅತಿಥಿಗಳಾಗಿ ಪುರಸಭೆ ಅಧ್ಯಕ್ಷೆ ಅನ್ನಪೂರ್ಣ ಕಲ್ಲಕ್ ಕೇಕ್ ಕತ್ತರಿಸಿದರು. ಮಾಜಿ ಅಧ್ಯಕ್ಷ ಚಂದ್ರಶೇಖರ ಕಾಶಿ, ಪುರಸಭೆ ಸದಸ್ಯ ವಿನೋದ ಗುತ್ತೇದಾರ, ರವಿ ವಿಟ್ಕರ್, ರಮೇಶ ಬೋಸಗಿ, ಬಾಬು ಜೆಸಿಬಿ, ತಿಮ್ಮಯ್ಯ ಪವಾರ್, ರಾಜೇಶ್ ಕಾಶಿ, ರಾಮು ಹರವಾಳ, ವಿಠಲ್ ಕಟ್ಟಿಮನಿ, ರವಿ ಇವಣಿ, ಕಾಶಿನಾಥ ಗುತ್ತೇದಾರ, ಆನಂದ್ ಗುತ್ತೇದಾರ, ನಾಗು ಕಲ್ಲಕ್, ಮಧುಸೂದನ್ ಕಾಶಿ, ಚಂದ್ರಶೇಖರ್ ಬಿಎಸ್‌ಎನ್‌ಎಲ್, ವೆಂಕಟೇಶ್ ಕಲಬುರಗಿಕರ್ ಸೇರಿದಂತೆ ಪೊಲೀಸ್ ಇಲಾಖೆಯ ಸಿಬ್ಬಂದಿಗಳಾದ ದತ್ತು ಜಾನೆ, ಮಂಜುನಾಥ್ ಕಾಶಿ, ಅಂಕುಶ್ ಕಾಶಿ, ಕಾಶಿ ಇದ್ದರು.

ಗುರುವಾರ, ಮಾರ್ಚ್ 13, 2025

ಚಿತ್ತಾಪುರ: ಅಕ್ರಮ ಮದ್ಯ ವಶ.

ಚಿತ್ತಾಪುರ: ಪಟ್ಟಣದದಲ್ಲಿ ಅಕ್ರಮವಾಗಿ ಮದ್ಯ ಸಾಗಾಣೆ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ರೂ.75045 ಮೌಲ್ಯದ ಮದ್ಯ ಹಾಗೂ ಒಂದು ಆಟೋ ವಶಕ್ಕೆ ಪಡೆದ ಘಟನೆ ನಡೆದಿದೆ.

ಪಿಎಸ್‌ಐ ಶ್ರೀಶೈಲ ಅಂಬಾಟಿ ಬುಧವಾರ ರಾತ್ರಿ ದಾಳಿ ಮಾಡಿ 650ಎಂಎಲ್ ಪವರ್ ಕೂಲ್ ಸ್ಟ್ರಾಂಗ್ ಬೀರ್ 6 ಬಾಕ್ಸ್ 10800 ರೂಪಾಯಿ, 650ಎಂಎಲ್ ಕಿಂಗ್ ಫಿಶರ್ ಸ್ಟ್ರಾಂಗ್ ಬೀರ್ 5 ಬಾಕ್ಸ್ 11250ರೂಪಾಯಿ, 90ಎಂಎಲ್ ಒರಿಜಿನಲ್ ಚಾಯ್ಸ್ ವಿಸ್ಕಿ 10 ಬಾಕ್ಸ್ 36480 ರೂಪಾಯಿ, 180ಎಂಎಲ್ ಬ್ಯಾಗ ಪೇಪರ್ ವಿಸ್ಕಿ 1 ಬಾಕ್ಸ್ 6912 ರೂಪಾಯಿ, 330 ಎಂಎಲ್ ಕಿಂಗ್ ಫಿಶರ್ ಸ್ಟ್ರಾಂಗ್ ಬೀರ್ 4 ಬಾಕ್ಸ್ 9600 ರೂಪಾಯಿ ಒಟ್ಟು 75045 ರೂಪಾಯಿ ಮೌಲ್ಯದ ಆಕ್ರಮ ಮದ್ಯ ವಶಕ್ಕೆ ಪಡೆಯುವುದರ ಜೊತೆಗೆ ಮದ್ಯ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಹಾಗೂ ಒಂದು ಆಟೋ ವಶಕ್ಕೆ ಪಡೆದುಕೊಂಡಿದ್ದಾರೆ.

ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂಬಂಧಿಸಿದ ತನಿಖೆ ಮುಂದುವರೆದಿದೆ ಎನ್ನಲಾಗಿದೆ.

ಶನಿವಾರ, ಮಾರ್ಚ್ 1, 2025

ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್ ತೆಕ್ಕೆಗೆ.

ಚಿತ್ತಾಪುರ: ಕಾಂಗ್ರೆಸ್ ಪಕ್ಷದ ಪುರಸಭೆ ಸದಸ್ಯೆಯರಾದ ಶ್ರೀಮತಿ ಅನ್ನಪೂರ್ಣ ನಾಗಪ್ಪ ಕಲ್ಲಕ್ ನೂತನ ಅಧ್ಯಕ್ಷೆಯಾಗಿ ಮತ್ತು ಶ್ರೀಮತಿ ಆತೀಯಾ ಬೇಗಂ ನಜಮೋದ್ದಿನ್ ಉಪಾಧ್ಯಕ್ಷೆಯಾಗಿ ಆಯ್ಕೆಯಾಗುವ ಮೂಲಕ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳು ಕಾಂಗ್ರೆಸ್ ತಿಕ್ಕೆಗೆ ಹೋಗಿದೆ.

ಪಟ್ಟಣದ ಪುರಸಭೆ ಕಾರ್ಯಲಯದಲ್ಲಿ ಶುಕ್ರವಾರ ನಡೆದ ಪುರಸಭೆ ಚುನಾವಣೆಗೆ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದಿಂದ ಅನ್ನಪೂರ್ಣ ಕಲ್ಲಕ್, ಬಿಜೆಪಿ ಪಕ್ಷದಿಂದ ಸುಶೀಲಾ ದೇವಸುಂಧರ ನಾಮಪತ್ರ ಸಲ್ಲಿಸಿದರು. ಒಟ್ಟು 23 ಸದಸ್ಯರ ಪೈಕಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಕಲ್ಲಕ್ ಅವರು 18 ಮತಗಳು ಪಡೆಯುವ ಮೂಲಕ ಗೆಲವು ಸಾಧಿಸಿದ್ದಾರೆ. ಬಿಜೆಪಿಯ ಸುಶೀಲಾ ದೇವಸುಂಧರ ಅವರು 5 ಮತಗಳು ಪಡೆದು ಸೋಲು ಅನುಭವಿಸಿದ್ದು, ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಆತೀಯಾ ಬೇಗಂ ಅವರು ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ನಾಗಯ್ಯ ಹಿರೇಮಠ ಅವರು ಘೋಷಣೆ ಮಾಡಿದರು.

ಇದೇ ವೇಳೆ ತಹಶೀಲ್ದಾರ್ ನಾಗಯ್ಯ ಹಿರೇಮಠ, ಪುರಸಭೆ ಮುಖ್ಯಾಧಿಕಾರಿ ಮನೋಜಕುಮಾರ ಗುರಿಕಾ‌ರ್ ಅವರು ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಸನ್ಮಾನಿಸಿ ಗೌರವಿಸಿದರು.

ಪುರಸಭೆ ಸದಸ್ಯರಾದ ಚಂದ್ರಶೇಖರ ಕಾಶಿ, ಶೀಲಾ ಕಾಶಿ, ಮಲ್ಲಿಕಾರ್ಜುನ ಕಾಳಗಿ, ಪಾಶಾ ಖುರೇಶಿ, ಸುಮಂಗಲಾ ಸಣ್ಣೂರಕರ್, ಬೇಬಿಬಾಯಿ ಜಾಧವ, ವಿನೋದ ಗುತ್ತೇದಾರ, ಕಾಶಿಬಾಯಿ ಬೆಣ್ಣೂರ್, ಜಗದೀಶ ಚವ್ಹಾಣ, ಸಂತೋಷ ಚೌದ್ರಿ, ಶ್ರುತಿ ಪೂಜಾರಿ, ಶ್ರೀನಿವಾಗರೆಡ್ಡಿ ಪಾಲಪ್, ಶಹಾರಾಜ ಬೇಗಂ, ಖಾಜಾಬಿ, ಮಹ್ಮದ್ ರಸೂಲ್ ಮುಸ್ತಫಾ, ಶಿವರಾಜ ಪಾಳೇದ್, ನಾಗರಾಜ ಭಂಕಲಗಿ, ಪ್ರಭು ಗಂಗಾಣಿ, ರಮೇಶ ಬಮ್ಮನಳ್ಳಿ ಶ್ಯಾಮ್ ಮೇಧಾ ಇದ್ದರು.

ವಿಜಯೋತ್ಸವ : ಪುರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾಗುತ್ತಿದ್ದಂತೆ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಪಟಾಕಿ ಸಿಡಿಸಿ ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು. ನಂತರ ಕಾಂಗ್ರೆಸ್ ಕಚೇರಿಯಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಭವ್ಯ ಮೆರವಣಿಗೆ ಮಾಡಲಾಯಿತು.

ಅಭಿವೃದ್ಧಿಗೆ ಶ್ರಮಿಸಿ, ಸಚಿವರ ಹೆಸರು ತನ್ನಿ: ನಾಗರೆಡ್ಡಿ ಪಾಟೀಲ.

ಚಿತ್ತಾಪುರ: ನೂತನವಾಗಿ ಪುರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದ ಸದಸ್ಯರು ಪಟ್ಟಣದ ಅಭಿವೃದ್ಧಿಗೆ ಶ್ರಮಿಸಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೆಸರು ತರಬೇಕು ಎಂದು ಕೆಪಿಸಿಸಿ ಸದಸ್ಯ ನಾಗರೆಡ್ಡಿ ಪಾಟೀಲ ಕರದಾಳ ಕಿವಿಮಾತು ಹೇಳಿದರು.

ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನೂತನ ಅಧ್ಯಕ್ಷ ಉಪಾಧ್ಯಕ್ಷರಿಗೆ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಅವರು ಒಂದೇ ಸ್ಥಾನಕ್ಕೆ ಹಲವರು ಆಕಾಂಕ್ಷಿಗಳು ಇದ್ದಾಗ ಸ್ವಲ್ಪ ಅಸಮಾಧಾನ ಇದ್ದೆ ಇರುತ್ತದೆ ಹೀಗಾಗಿ ಸ್ವಲ್ಪ ತಾಳ್ಮೆಯಿಂದ ಇರಬೇಕು ಮುಂದಿನ ದಿನಗಳಲ್ಲಿ ಸೂಕ್ತ ಸ್ಥಾನಮಾನ ಸಿಗಲಿದೆ, ಹೀಗಾಗಿ ಅಸಮಾಧಾನ ಬದಿಗಿಟ್ಟು ಎಲ್ಲರೂ ಒಗ್ಗೂಡಿ ಸರ್ವ ಸದಸ್ಯರ ಅಭಿಪ್ರಾಯ ಪಡೆದು ಅಭಿವೃದ್ಧಿಗೆ ಶ್ರಮವಹಿಸಬೇಕು ಎಂದು ಹೇಳಿದರು.

ನನ್ನ ಮೇಲೆ ವಿಶ್ವಾಸವಿಟ್ಟು ಅಧ್ಯಕ್ಷ ಸ್ಥಾನದ ಜವಾಬ್ದಾರಿ ನೀಡಿದ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕಾಂಗ್ರೆಸ್ ಪಕ್ಷದ ಎಲ್ಲಾ ಮುಖಂಡರಿಗೂ ಮತ್ತು ಪುರಸಭೆ ಸದಸ್ಯರಿಗೂ ಯಾವುದೇ ದಕ್ಕೆ ಯಾಗದಂತೆ ಎಲ್ಲರ ನಂಬಿಕೆ ಉಳಿಸಿಕೊಳ್ಳುತ್ತೇನೆ ಎಂದರು.

- ಶ್ರೀಮತಿ ಅನ್ನಪೂರ್ಣ ಕಲ್ಲಕ್
ನೂತನ ಅಧ್ಯಕ್ಷೆ ಪುರಸಭೆ ಚಿತ್ತಾಪೂರ.

ವೀಕ್ಷಕರಾಗಿ ಕಲಬುರಗಿ ಜಿಡಿಎ ಅಧ್ಯಕ್ಷ ಮಜ‌ರ್ ಅಲ್ಲಾಂಖಾನ್, ಜಿಪಂ ಮಾಜಿ ಸದಸ್ಯ ಶರಣಗೌಡ ಪಾಟೀಲ ಚಿಂಚನಸೂರ, ಈರಣ್ಣ ಝಳಕಿ, ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ಭೀಮಣ್ಣ ಸಾಲಿ, ಕೆಪಿಸಿಸಿ ಕಾರ್ಯದರ್ಶಿ ರಮೇಶ್ ಮರಗೋಳ, ಜಿಪಂ ಮಾಜಿ ಸದಸ್ಯ ಶಿವರುದ್ರಪ್ಪ ಭೀಣ್ಣಿ, ಚಂದ್ರಶೇಖರ ಕಾಶಿ, ಶೀಲಾ ಕಾಶಿ, ಮಲ್ಲಿಕಾರ್ಜುನ ಕಾಳಗಿ, ವಿನೋದ ಗುತ್ತೇದಾರ, ಅಣ್ಣಾರಾವ್ ಸಣ್ಣೂರಕರ್, ಶ್ರೀನಿವಾಸ ರೆಡ್ಡಿ ಪಾಲಪ್, ಜಗದೀಶ್ ಚವ್ಹಾಣ, ಶಿವಕಾಂತ್ ಬೆಣ್ಣೂರಕ‌ರ್, ಪಾಶಾಮಿಯ್ಯಾ ಖುರೇಷಿ, ಸಂತೋಷ್ ಚೌದರಿ, ಶಿವರಾಜ್ ಪಾಳೇದ್, ರಸೂಲ್ ಮುಸ್ತಫಾ, ಮಹ್ಮದ್ ಯಕ್ಸಾಲ್, ಜಗದೇವರೆಡ್ಡಿ ಪಾಟೀಲ, ನಾಗರೆಡ್ಡಿ ಗೋಪಸೇನ್, ಅಹ್ಮದ್ ಸೇಟ್, ನಾಗು ಕಲ್ಲಕ್‌, ಸಿದ್ದುಗೌಡ ಅಫಜಲಪುರಕ‌ರ್, ಇಸ್ಮಾಯಿಲ್ ಕಮರವಾಡಿ, ಮಹಾಂತೇಶ್‌ ಬೊಮ್ಮನಳ್ಳಿ, ಭೀಮರಾಯ ಹೊತಿನಮಡಿ, ರಾಜಣ್ಣ ಕರದಾಳ, ಸಂಜಯ ಬುಳಕರ್, ಸಂತೋಷ ಪೂಜಾರಿ, ನಜೀರ್‌ ಆಡಕಿ, ರವಿಸಾಗರ ಹೊಸಮನಿ, ಸೂರಜ್ ಕಲ್ಲಕ್, ಶರಣಪ್ಪ ಕೋರವಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಮುಕ್ತಾರ್ ಪಟೇಲ್ ನಿರೂಪಿಸಿದರು, ಯುವ ಕಾಂಗ್ರೆಸ್‌ ಅಧ್ಯಕ್ಷ ದೇವಿಂದ್ರ ಯಾಬಾಳ ದಿಗ್ಗಾಂವ ವಂದಿಸಿದರು. ನಂತರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ನೂತನ ಅಧ್ಯಕ್ಷೆ ಅನ್ನಪೂರ್ಣ ನಾಗಪ್ಪ ಕಲ್ಲಕ್ ಅವರ ಮೆರವಣಿಗೆ ನಡೆಯಿತು.

ಸೋಮವಾರ, ಫೆಬ್ರವರಿ 24, 2025

ಫೆ.25ಕ್ಕೆ ಕುಂಬಾರರ ಸಭೆ, ಮತ್ತು ಸರ್ವಜ್ಞ ಜಯಂತಿ ಆಚರಣೆ.


ಬೆಂಗಳೂರು: ರಾಜ್ಯ ಕುಂಬಾರರ ಯುವ ಸೈನ್ಯ ರಾಜ್ಯ ಘಟಕ ವತಿಯಿಂದ ಕುಂಬಾರರ ಸಭೆ ಮತ್ತು 505ನೇ ವರ್ಷದ ಸರ್ವಜ್ಞ ಜಯಂತಿ ಆಚರಣೆ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಕುಂಬಾರರ ಯುವ ಸೈನ್ಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಜಗದೇವ ಎಸ್ ಕುಂಬಾರ ತಿಳಿಸಿದ್ದಾರೆ.

ಬೆಂಗಳೂರು ನಗರದ ವಿಧಾನಸೌಧ ಮುಂಭಾಗ ಕಬ್ಬನ ಪಾರ್ಕ್ ನಲ್ಲಿ ಫೆಬ್ರುವರಿ,25 ಮಂಗಳವಾರ ಸಾಯಂಕಾಲ 4 ಗಂಟೆಗೆ ಸರ್ವಜ್ಞ ಜಯಂತಿ ಆಚರಣೆ ನಂತರ ಮಹತ್ವದ ಕುಂಬಾರರ ಸಭೆ ನಡೆಯಲಿದೆ ಈ ಒಂದು ಕಾರ್ಯಕ್ರಮದಲ್ಲಿ ಎಲ್ಲಾ ಜಿಲ್ಲಾ/ತಾಲೂಕಿನ ರಾಜ್ಯ ಕುಂಬಾರರ ಯುವ ಸೈನ್ಯ ಅಧ್ಯಕ್ಷರು ಎಲ್ಲಾ ಪದಾಧಿಕಾರಿಗಳು, ಸಮಯ ಬಿಡುವು ಮಾಡಿಕೊಂಡು ಈ ಒಂದು ಸಣ್ಣ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು ಎಂದು ತಮ್ಮಲ್ಲಿ ವಿನಂತಿಸಿಕೊಳ್ಳುತ್ತೇನೆ.

ಶುಕ್ರವಾರ, ಫೆಬ್ರವರಿ 21, 2025

ವಿವಿಧೆಡೆ ಸರ್ವಜ್ಞ ಜಯಂತಿ ಆಚರಣೆ.

ಚಿತ್ತಾಪುರ: ಪಟ್ಟಣದ ವಿವಿಧೆಡೆ ಕನ್ನಡ ಪರಂಪರೆಯ ಮಹಾನ್ ಮಾನವತಾವಾದಿ, ತತ್ವಜ್ಞಾನಿ, ತ್ರಿಪದಿಗಳ ಬ್ರಹ್ಮ ಕವಿ ಸರ್ವಜ್ಞ ಅವರ 505ನೇ ಜಯಂತಿ ಆಚರಿಸಲಾಯಿತು.

ತಹಸೀಲ್ ಕಾರ್ಯಾಲಯದಲ್ಲಿ ಸರ್ವಜ್ಞ ಅವರ ಭಾವಚಿತ್ರಕ್ಕೆ ಪೂಜೆ ಮಾಡಿ ಜಯಂತಿ ಆಚರಣೆ ಕುರಿತು ತಹಸೀಲ್ದಾರ್ ನಾಗಯ್ಯ ಹಿರೇಮಠ ಮಾತನಾಡಿ ಜನರು ಆಡುವ ಭಾಷೆಯಲ್ಲಿ ತ್ರಿಪದಿಯಗಳನ್ನು ರಚಿಸಿ ಸಮಾಜದ ಅಂಕುಡೊಂಕುಗಳನ್ನು ತಿದ್ದಿದ ಸಮಾಜ ಸುಧಾರಕ, ತ್ರಿಪದಿಗಳ ಮೂಲಕ ಕನ್ನಡ ಸಾಹಿತ್ಯ ಸಿರಿಗೆ ಅಮೂಲ್ಯ ಕೊಡುಗೆ ನೀಡಿದ ಶ್ರೇಷ್ಠ ವಚನಕಾರ ಸರ್ವಜ್ಞ ರವರ ಆದರ್ಶಗಳು ಪ್ರತಿಯೊಬ್ಬರು ಪಾಲಿಸಬೇಕು ಎಂದು ಸಲಹೆ ನೀಡಿದರು.

ಈ ವೇಳೆಯಲ್ಲಿ ರಾಜ್ಯ ಕುಂಬಾರರ ಯುವ ಸೈನ್ಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಜಗದೇವ ಕುಂಬಾರ, ಅಧ್ಯಕ್ಷ ಪ್ರಭು ಕುಂಬಾರ, ಭೀಮರಾಯ ಕುಂಬಾರ, ಶರಣು ಕುಂಬಾರ, ಇಲಾಖೆಯ ಸಿಬ್ಬಂದಿ ವರ್ಗದವರು ಇದ್ದರು.

ಪುರಸಭೆ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಸರ್ವಜ್ಞ ಜಯಂತಿಯ ನಿಮಿತ್ಯ ಸರ್ವಜ್ಞ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಜಯಂತಿ ಆಚರಿಸಿದರು ಈ ವೇಳೆಯಲ್ಲಿ ಪುರಸಭೆ ಮುಖ್ಯಾಧಿಕಾರಿ ಮನೋಜಕುಮಾರ ಗುರಿಕಾರ್, ಸುನೀಲ ಕುಮಾರ, ಶರಣಪ್ಪ, ವೆಂಕಟೇಶ ಕುಮಾರ, ಭೀಮು ಇಲಾಖೆಯ ಇತರರು ಇದ್ದರು.

ತಾಲ್ಲೂಕ ಪಂಚಾಯತ ಇಲಾಖೆಯಯಲ್ಲಿ ಹಮ್ಮಿಕೊಂಡಿದ್ದ ಸರ್ವಜ್ಞ ಜಯಂತಿಯ ಪ್ರಯುಕ್ತ ಗುರುವಾರ ಸರ್ವಜ್ಞ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪ ನಮನ ಸಲ್ಲಿಸು ಮೂಲಕ ಆಚರಿಸಿದರು.ಈ ಸಂದರ್ಭದಲ್ಲಿ ಹರೀಶ ಶಿಂಧೆ, ಗೋಪಾಲ, ಸಂದೇಶ, ಇರ್ಫಾನ್, ಅನೀಲ ಪಾಟೀಲ್, ಸಂಗೀತ ಸಜ್ಜನ್ ಇತರರು ಇದ್ದರು.

ಸರ್ಕಾರಿ ಪ್ರೌಢ ಶಾಲೆಯಲ್ಲಿ ಸರ್ವಜ್ಞ ಜಯಂತಿ ಆಚರಿಸಿ ಬಳಿಕ ಶಾಲೆಯ ಮುಖ್ಯಗುರುಗಳಾದ ಕಾಶಿರಾಯ ಕಲಾಲ್ ಮಾತನಾಡಿ ತ್ರಿಪದಿಗಳ‌ ಮೂಲಕ ಸಮಾಜದಲ್ಲಿ ಪ್ರಖರ ಚಿಂತನೆಗಳನ್ನು ಸಾರಿದ ಹೆಮ್ಮೆಯ ಕವಿ ಸರ್ವಜ್ಞರು ತೋರಿದ ದಾರಿಯಲ್ಲಿ ಸಾಗುವ ಮೂಲಕ ಜೀವನಾನುಭವ ಪಡೆದುಕೊಳ್ಳೋಣ. ತ್ರಿಪದಿ ಕವಿಗೆ ಮನದುಂಬಿ ಸ್ಮರಿಸೋಣ ಎಂದರು.
ಈ ಸಂದರ್ಭದಲ್ಲಿ ಶಾಲೆಯ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಇದ್ದರು.

ಪಶುವೈದ್ಯಕೀಯ ಇಲಾಖೆಯಲ್ಲಿ ಸರ್ವಜ್ಞ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಗೌರವ ನಮನ ಸಲ್ಲಿಸಿದರು ಈ ವೇಳೆಯಲ್ಲಿ ಇಲಾಖೆಯ ಸಿಬ್ಬಂದಿ ವರ್ಗದವರು ಇದ್ದರು.

ಮಾತೋಶ್ರೀ ಮಹಾದೇವಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಸಂತ ಶ್ರೇಷ್ಠ ಕವಿ ಸರ್ವಜ್ಞ ಜಯಂತಿಯ ಪ್ರಯುಕ್ತ ಗುರುವಾರ ಸರ್ವಜ್ಞ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಆಚರಿಸಿದರು.

ಜಗದೇವ ಕುಂಬಾರ ಮಾತನಾಡಿ ಸರ್ವಜ್ಞರ ತ್ರಿಪದಿಗಳು ಕೇವಲ ಕಾವ್ಯವಲ್ಲ, ಅವು ಜೀವನದ ತತ್ವಶಾಸ್ತ್ರ. ಅವರ ವಾಣಿ ಸರಳವಾಗಿದ್ದರೂ ಅತ್ಯಂತ ಗಹನವಾದ ಅರ್ಥವನ್ನು ಹೊಂದಿದೆ. ಜಾತಿ, ಅಸ್ಪೃಶ್ಯತೆ, ಮೂಢನಂಬಿಕೆಗಳಂತಹ ಸಮಾಜದ ಕುಂದುಗಳನ್ನು ಅವರು ತಮ್ಮ ತ್ರಿಪದಿಗಳ ಮೂಲಕ ಧೈರ್ಯದಿಂದ ಟೀಕಿಸಿದರು. ಅವರ ಮಾನವತಾವಾದಿ ದೃಷ್ಟಿಕೋನ ಮತ್ತು ತಾತ್ವಿಕ ಚಿಂತನೆ ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಗೆ ಅಮೂಲ್ಯ ಕೊಡುಗೆಯಾಗಿಯನ್ನು ನೀಡಿದ್ದಾರೆ ಎಂದು ಹೇಳಿದರು.

ವಿದ್ಯಾರ್ಥಿಗಳು ಮಹಾನ್ ವ್ಯಕ್ತಿಗಳು ನಮಗೆ ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ನಡೆಯುವುದರ ಜೊತೆಗೆ ಅವರ ಆದರ್ಶಗಳು ನಾವು ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಿಕ್ಷಕರಾದ ವಿಶ್ವನಾಥ ಮಡಿವಾಳ, ಶಿಕ್ಷಕಿ ಸಂಗೀತ, ಸಹಾಯಕಿ ಶ್ರೀಮತಿ ಜಯಶ್ರೀ ಇತರರು ಇದ್ದರು.

ಬುಧವಾರ, ಫೆಬ್ರವರಿ 19, 2025

ತಹಸೀಲನಲ್ಲಿ ಶಿವಾಜಿ ಜಯಂತ್ಯೋತ್ಸವ ಆಚರಣೆ.

ಚಿತ್ತಾಪುರ: ಪಟ್ಟಣದ ತಹಸೀಲ್ದಾರ ಕಚೇರಿಯ ಬುಧವಾರ ಹಮ್ಮಿಕೊಂಡಿದ್ದ ಛತ್ರಪತಿ ಶಿವಾಜಿ ಮಹಾರಾಜರ 395ನೇ ಜಯಂತ್ಯೋತ್ಸವ ನಿಮಿತ್ಯ ಶಿವಾಜಿ ಭಾವಚಿತ್ರಕ್ಕೆ ತಾಲೂಕು ಆಡಳಿತ ಹಾಗೂ ಸಮಾಜದ ವತಿಯಿಂದ ಪೂಜೆ ಸಲ್ಲಿಸಿ ಗೌರವ ನಮನಗಳು ಸಲ್ಲಿಸುವ ಮೂಲಕ ಸರಳವಾಗಿ ಜಯಂತ್ಯೋತ್ಸವ ಆಚರಿಸಲಾಯಿತ್ತು.

ಈ ಸಂದರ್ಭದಲ್ಲಿ ತಹಸೀಲ್ದಾರ ನಾಗಯ್ಯ ಹಿರೇಮಠ, ಗ್ರೇಡ್-2 ತಹಸೀಲ್ದಾರ್ ರಾಜಕುಮಾರ, ಪಿಎಸ್‌ಐ ಚಂದ್ರಾಮಪ್ಪ, ಸಮಾಜದ ಅಧ್ಯಕ್ಷ ಅನಿಲ್ ಯಂಡೆ, ಮುಖಂಡರಾದ ರೋಹಿತ್ ಚವ್ಹಾಣ್, ರೋಹಿತ್ ಯಂಡೆ, ಸಂತೋಷ ಗವಳಕರ್, ಆಕಾಶ್ ಸುಗಂಧಿ, ರಾಘವೇಂದ್ರ ಮೋಹಿತೆ, ಸಂಜು ಸೂರ್ಯವಂಶಿ, ಗುರು ಉಪ್ಪಾರ್, ನವೀನ್ ಚವ್ಹಾಣ್, ಅನುಪ್ ಉಬಾಳೆ, ನರಹರಿ ಕುಲ್ಕರ್ಣಿ, ಸೇರಿದಂತೆ ಇತರರು ಇದ್ದರು.

ಎಸ್ಸೆಸ್ಸೆಲ್ಸಿ ಮಕ್ಕಳೊಂದಿಗೆ ಜಿಪಂ ಸಿಇಒ ಚರ್ಚೆ.

ಚಿತ್ತಾಪುರ: ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮಪಡಿಸಲು ಪೂರ್ವಸಿದ್ಧತಾ ಪರೀಕ್ಷೆ-1 ರಲ್ಲಿ ಅತ್ಯಂತ ಕಡಿಮೆ ಫಲಿತಾಂಶ ಪಡೆದ ಕರ್ನಾಟಕ ಪಬ್ಲಿಕ್ ಶಾಲೆ ಮಾಡಬೂಳ,...