ಬುಧವಾರ, ಜೂನ್ 25, 2025

ಪಿಂಚಣಿ ಮತ್ತು ಕುಟುಂಬ ಪಿಂಚಣಿ ಪರಿಷ್ಕರಿಸಲು ಒತ್ತಾಯ.


ಪಿಂಚಣಿ ಮತ್ತು ಕುಟುಂಬ ಪಿಂಚಣಿ ಪರಿಷ್ಕರಿಸಲು ಒತ್ತಾಯ.

ಚಿತ್ತಾಪುರ: ನಿವೃತ್ತಿ ಸರ್ಕಾರಿ ನೌಕರರಿಗೆ ಪಿಂಚಣಿ
ಮತ್ತು ಕುಟುಂಬ ಪಿಂಚಣಿ ಪರಿಷ್ಕರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ನಿವೃತ್ತ ಸರಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ರೇವಣಸಿದ್ದಪ್ಪ ರೋಣದ್ ನೇತೃತ್ವದಲ್ಲಿ ಬುಧವಾರ ಪ್ರಧಾನ ಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ತಹಸೀಲ್ದಾರ್ ಅವರಿಗೆ ಸಲ್ಲಿಸಿದರು.

ನಿವೃತ್ತ ಹೊಂದಿದ ಸರಕಾರಿ ನೌಕರರು ಆರ್ಥಿಕ ಸೌಲಭ್ಯದಿಂದ ವಂಚಿತರಾಗದಿರಲಿ ಎಂದು ಕೇಂದ್ರ ಸರ್ಕಾರವು 2004 ರಲ್ಲಿ ಹೊಸ ಪಿಂಚಣಿಯನ್ನು ಜಾರಿ ತರಲಾಗಿದೆ ಹಾಗೂ ಎಲ್ಲಾ ರಾಜ್ಯಗಳು ಸಹ ಕೇಂದ್ರ ಸರ್ಕಾರದ ಮಾದರಿಯಲ್ಲಿ ಹೊಸದಾಗಿ ಸರ್ಕಾರಿ ಸೇವೆಗೆ ಸೇರಿದ ನೌಕರರಿಗೆ ಹೊಸ ಪಿಂಚಣಿ ಯೋಜನೆಯನ್ನು ಜಾರಿಗೆ ತರಲು ಸಾಕಷ್ಟು ಹೋರಾಟವೆ ನಡೆದಿದೆ. ಇತ್ತೀಚೆಗೆ ಕೇಂದ್ರ ಸರ್ಕಾರವು ಸರ್ಕಾರಿ ನೌಕರರಿಗೆ ಹಾಗೂ ಪಿಂಚಣಿದಾರರಿಗೆ ಹೊಸ ವೇತನ ಶ್ರೇಣಿ ಪರಿಷ್ಕರಿಸಲು 8ನೇ ವೇತನ ಆಯೋಗ ರಚನೆ ಮಾಡಲಾಗಿದೆ. ಆಯೋಗದ ವರದಿಯು ಪ್ರಗತಿ ಹಂತದಲ್ಲಿದೆ ಎಂದು ತಿಳಿಸಿದ್ದಾರೆ.
ಈ ಮಧ್ಯೆ ಕೇಂದ್ರ ಸರ್ಕಾರವು ಮಾರ್ಚ್ 25 ರಂದು ಲೋಕಸಭೆಯಲ್ಲಿ ಆರ್ಥಿಕ ಬಿಲ್ಲು ಮಂಡಿಸಿ 1 ಏಪ್ರಿಲ್ 2026 ಕ್ಕೆ ಮೊದಲು ನಿವೃತ್ತಿಯಾದ ಸರ್ಕಾರಿ ನೌಕರರಿಗೆ ಪಿಂಚಣಿ ಮತ್ತು ಕುಟುಂಬ ಪಿಂಚಣಿಯನ್ನು ಪರಿಷ್ಕರಿಸಲು ಸಾಧ್ಯವಿಲ್ಲವೆಂಬ ನಿರ್ಣಯವನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರವರು ಲೋಕಸಭೆಯಲ್ಲಿ ಮಂಡಿಸಿದ್ದಾರೆ. ಇದರಿಂದ ನಿವೃತ್ತ ಸರಕಾರಿ ನೌಕರ ಪಿಂಚಣಿದಾರರಿಗೆ ಮತ್ತು ಕುಟುಂಬ ಪಿಂಚಣಿದಾರರಿಗೆ 8ನೇ ವೇತನ ಆಯೋಗದಲ್ಲಿ ಪರಿಷ್ಕರಿಸಲು ಸಾಧ್ಯವಾಗುವುದಿಲ್ಲವೆಂದು ತಿಳಿಸಿದ್ದಾರೆ. ಇದರಿಂದ ನಿವೃತ್ತ ಪಿಂಚಣಿದಾರರು ಮತ್ತು ಕುಟುಂಬ ಪಿಂಚಣಿದಾರರು ಸಂಕಷ್ಟಕ್ಕೆ ಒಳಗಾಗುತ್ತಾರೆ. ಈ ಕುರಿತು ಈಗಾಗಲೇ ದೆಹಲಿಯಲ್ಲಿ ನಾಲ್ಕು ಬಲವಾದ ಸಂಘಟನೆಗಳು ಹೋರಾಟಕ್ಕಿಳಿದಿವೆ ನಮ್ಮ ಸಂಘವು ಸಹ ಅವರಿಗೆ ಬೆಂಬಲ ನೀಡುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷ ವಿಜಯಕುಮಾ‌ರ್ ಲೊಡ್ಡೆನೋರ, ಉಪಾಧ್ಯಕ್ಷ ಕಿಶನ್ ರಾಠೋಡ, ಮಹಾದೇವಪ್ಪ ಉಪ್ಪಾರ, ಖಜಾಂಚಿ ಮಲ್ಲಣ್ಣ ಮುಡಬೂಳ, ಪ್ರಧಾನ ಕಾರ್ಯದರ್ಶಿ ಶಶೀಧರ ಪಾಟೀಲ, ಸಹ ಕಾರ್ಯದರ್ಶಿ ಸುಭಾಷ್ ಮೇಗಂಜಿ, ಸಂಘಟನಾ ಕಾರ್ಯದರ್ಶಿಗಳಾದ ಮೋನಯ್ಯ ಪಂಚಾಳ, ಬಾಬು ಕರದಾಳ, ಶಮೀಮ್, ಕಾನೂನು ಸಲಹೆಗಾರ ಮೋತಿಲಾಲ್‌ ಚವ್ಹಾಣ, ಸಾಂಸ್ಕೃತಿಕ ಕಾರ್ಯದರ್ಶಿ ದೇವಪ್ಪ ನಂದೂರಕರ್, ಕ್ರೀಡಾ ಕಾರ್ಯದರ್ಶಿ ಶಿವನಾಗಪ್ಪ ಮುತ್ತಲಗಡ್ಡಿ, ಜಂಟಿ ಕಾರ್ಯದರ್ಶಿ ಹಾಜಪ್ಪ ಬಿಳಾರ್, ನಿರ್ದೇಶಕರಾದ ಬಸವರಾಜ ಕಲಬುರಗಿ, ತುಕಾರಾಮ ನಾಯಕ, ಶ್ರೀಮತಿ ಸರಳಬಾಯಿ, ಶಾಂತಬಾಯಿ, ಶಿವಲಿಂಗಪ್ಪ ದೊಡ್ಡಮನಿ, ಮಲ್ಲೇಶಪ್ಪ ದಂಡೋತಿ, ಸಿದ್ದಯ್ಯ ಸ್ಥಾವರಮಠ, ಲಿಂಗಣ್ಣ ಮಲಕನ್, ಮುನಿಯಪ್ಪ ಸೇರಿದಂತೆ ಇತರರು ಇದ್ದರು.

ಸೋಮವಾರ, ಜೂನ್ 16, 2025

ದೇವರಲ್ಲಿ ಶ್ರದ್ಧೆ, ಭಕ್ತಿ ಇರಲಿ: ಮರೆಪ್ಪ ಮುತ್ಯಾ.

       ದೇವರಲ್ಲಿ ಶ್ರದ್ಧೆ, ಭಕ್ತಿ ಇರಲಿ: ಮರೆಪ್ಪ ಮುತ್ಯಾ.

ಚಿತ್ತಾಪುರ: ಪ್ರತಿಯೊಬ್ಬರೂ ದೇವರಲ್ಲಿ ಶ್ರದ್ಧೆ, ಭಕ್ತಿ ಇಟ್ಟುಕೊಳ್ಳಬೇಕು ಎಂದು ಹೂಡಾ(ಬಿ) ಗ್ರಾಮದ ಹಯ್ಯಾಳಸಿದ್ದೇಶ್ವರ ದೇವಸ್ಥಾನದ ಶ್ರೀಗಳಾದ ಮರೆಪ್ಪ ಮುತ್ಯಾ ಹೇಳಿದರು.

ತಾಲೂಕಿನ ಮರಗೋಳ ಗ್ರಾಮದಲ್ಲಿ ನಡೆದ ಶ್ರೀ ಬೀರಲಿಂಗೇಶ್ವರ ಹಾಗೂ ಶ್ರೀ ಮಾಳಿಂಗೇಶ್ವರರ ನೂತನ ಮಂದಿರ ಲೋಕಾರ್ಪಣೆ, ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ಗ್ರಾಮದಲ್ಲಿ ಹಾಲುಮತದ ಜನರು ಹಾಗೂ ಊರಿನವರ ಸಹಕಾರದಿಂದ ಕುರಿದೊಡ್ಡಿ ಇದ್ದ ಸ್ಥಳದಲ್ಲಿ ಇಂತಹ ಭವ್ಯ ಮಂದಿರ ನಿರ್ಮಾಣ ಮಾಡಿದ್ದು ಹೆಮ್ಮೆಯ ವಿಷಯ.ಜೀವನದಲ್ಲಿ ಏನನ್ನೂ ಸಾಧಿಸುವುದು ಸಾಧ್ಯವಿಲ್ಲವೆಂದು ಕೈಕಟ್ಟಿ ಕುಳಿತುಕೊಂಡರೆ, ಸಾಧನೆ ಮಾಡುವುದು ಅಸಾಧ್ಯ. ಗುರುವಿನ ಕೆಲಸದಲ್ಲಿ ಪ್ರಾಮಾಣಿಕ, ಶ್ರದ್ಧೆ, ಭಕ್ತಿ ಇದ್ದರೆ ಇಂತಹ ಕಾರ್ಯ ಕೆಲಸಗಳು ಆಗಲು ಸಾಧ್ಯ. ಸಮಾಜದ ಗುರುಗಳನ್ನು ಪೂಜಿಸುವುದರ ಜೊತೆಗೆ 
ಸಮಾಜದಲ್ಲಿ ಸತ್ಕಾರ್ಯ ಮಾಡುವ ಗುಣ ಬೆಳೆಸಿಕೊಳ್ಳಬೇಕು. 

ಹಾಲುಮತ ಸಮಾಜದ ಜಿಲ್ಲಾಧ್ಯಕ್ಷ ರೇವಣಸಿದ್ದಪ್ಪ ಸಾತನೂರ ಮಾತನಾಡಿ ಈ ಗ್ರಾಮದಲ್ಲಿ ಬೀರಲಿಂಗೇಶ್ವರ ಮತ್ತು ಮಾಳಿಂಗರಾಯ ದೇವಸ್ಥಾನವನ್ನು ಇಷ್ಟು ದೊಡ್ಡ ಪ್ರಮಾಣದಲ್ಲಿ ನಿರ್ಮಿಸಿರುವುದು ತುಂಬಾ ಹೆಮ್ಮೆಯ ವಿಷಯವಾಗಿದೆ ಅಲ್ಲದೇ ಇಲ್ಲಿನ ಜನರ ಸೌರ್ಹಾದತೆಯನ್ನು ಎತ್ತಿ ತೋರಿಸುತ್ತದೆ ಈ ಸಮಾಜವು ಸಧೃಡವಾಗಬೇಕಾದರೆ ನಾವುಗಳು ಎಲ್ಲರೂ ನಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿದಾಗ ಮಾತ್ರ ನಮ್ಮ ಸಮಾಜ ಶೈಕ್ಷಣಿಕವಾಗಿ ಹಾಗೂ ಆರ್ಥಿಕವಾಗಿ ಸದೃಡರಾಗಲು ಸಾಧ್ಯವಾಗುತ್ತದೆ ಎಂದರು.
ದೇವಸ್ಥಾನದ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಕೊಂಡಂಪಳ್ಳಿ ಅಧ್ಯಕ್ಷತೆ ವಹಿಸಿದ್ದರು. ದಿಗ್ಗಾಂವದ ಕಂಚಗಾರ ಹಳ್ಳಿಯ ಶ್ರೀ ಮಲ್ಲಯ್ಯ ಮಹಾಸ್ವಾಮಿಗಳು, ಶ್ರೀ ಶರಣಯ್ಯ ಸ್ವಾಮಿ, ಬೀರಣ್ಣ ಸ್ವಾಮಿ ಕೋರವಾರ, ಹಿರಗಪ್ಪ ತಾತಾ ಸೂಗೂರ, ಮುಖಂಡರಾದ ನಾಗಣ್ಣಗೌಡ, ಬಸವರಾಜ ವಾರದ, ಶರಣಗೌಡ ಪೊಲೀಸ್ ಪಾಟೀಲ್, ಅಣ್ಣಾರಾವ ಸಣ್ಣೂರಕ‌ರ್, ಶರಣು ಸಾಹು, ಬಸವರಾಜ ಪೂಜಾರಿ ಮೊಗಲಾ, ಮಲ್ಲಿಕಾರ್ಜುನ ಪೂಜಾರಿ ಮೊಗಲಾ, ಈರಪ್ಪ ಭೋವಿ, ಯಲ್ಲಾಲಿಂಗ ಪೂಜಾರಿ, ಬೀರಪ್ಪ ಹೆಬ್ಬಾಳ, ಬೀರಪ್ಪ ಮುಗಟಿ ಸೇರಿದಂತೆ ಇತರರು ವೇದಿಕೆಯಲ್ಲಿದ್ದರು.

ಇದೇ ಸಂದರ್ಭದಲ್ಲಿ ಗ್ರಾಮದಲ್ಲಿ ಉತ್ತಮ ಶಿಕ್ಷಣವನ್ನು ಪಡೆದ ಹಾಗೂ ಸಾಧನೆ ಮಾಡಿದವರಿಗೆ ಸನ್ಮಾನಿಸಲಾಯಿತು. ಕಾಶಿರಾಯ ಕಲಾಲ್ ಸ್ವಾಗತಿಸಿದರು, ನರಸಪ್ಪ ಚಿನ್ನಾಕಟ್ಟಿ ನಿರೂಪಿಸಿದರು.

ಗುರುವಾರ, ಜೂನ್ 5, 2025

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ: ಕರಣ್ ಗುಜ್ಜರ್.


ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ: ಕರಣ್ ಗುಜ್ಜರ್.

ಚಿತ್ತಾಪುರ: ಜೀವ ಸಂಕುಲದ ಉಳುವಿಗಾಗಿ ಪರಿಸರದಲ್ಲಿನ ಹಾಗೂ ನಮ್ಮ ಸುತ್ತಲಿನ ಮರ-ಗಿಡಗಳನ್ನು ಸಂರಕ್ಷಿಸುವುದು ನಮ್ಮೆಲ್ಲರ ಹೊಣೆಯಾಗಿದೆ ಎಂದು 4ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಕರಣ್ ಗುಜ್ಜರ್ ಹೇಳಿದರು.

ಪಟ್ಟಣದ ಶಿಶುವಿಹಾರ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಪ್ರಾದೇಶಿಕ ಅರಣ್ಯ ವಲಯ ಮತ್ತು ಶಿಶುವಿಹಾರ ಪ್ರಾಥಮಿಕ ಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ "ವಿಶ್ವ ಪರಿಸರ ದಿನ" ಕಾನೂನು ಅರಿವು ಕಾರ್ಯಕ್ರಮ ನಿಮಿತ್ಯ ಸಸಿಗೆ ನೀರು ಉಣಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಹಿಂದಿನ ಕಾಲದ ಜನರು ಗಿಡ-ಮರಗಳನ್ನು ಹೆಚ್ಚೆಚ್ಚು ಸಂರಕ್ಷಿಸುತ್ತಿದ್ದರು ಆದ್ರೆ ಇಂದಿನ ಕಾಲದಲ್ಲಿ ಗಿಡ-ಮರಗಳು ನಾಶ ಮಾಡುವುದು ನೋಡುತ್ತಿದ್ದೇವೆ ನಗರೀಕರಣ ಬೆಳೆದಂತೆ ಗಿಡಮರಗಳು ಸಂಖ್ಯೆ ಕಡಿಮೆ ಆಗುತ್ತಿದೆ ಮುಂದೊಂದಿನ ಆಮ್ಲಜನಕ ಬೆನ್ನಿಗೆ ಕಟ್ಟಿಕೊಂಡು ಓಡಾಡುವ ಪರಿಸ್ಥಿತಿ ಬರಬಹುದು ಹೀಗಾಗಿ ಪರಿಸರದಲ್ಲಿನ ಗಿಡಮರಗಳು ಬೆಳೆಸುವ ಮನೋಭಾವ ಕಲಿಯಬೇಕು ಪ್ರತಿದಿನ ಪರಿಸರ ದಿವಾಗಿರಲ್ಲಿ ಎಂದು ಹೇಳಿದರು.

ಶಾಲಾ ಆವರಣದಲ್ಲಿ ಕೆಲ ವಿದ್ಯಾರ್ಥಿಗಳಿಗೆ ವಿಶ್ವ ಪರಿಸರ ದಿನದ ನಿಮಿತ್ಯ ಸಸಿಗಳನ್ನು ವಿತರಿಸಲಾಗುತ್ತದೆ ಯಾವ ವಿದ್ಯಾರ್ಥಿ ದಿನನಿತ್ಯ ಸಸಿಗೆ ನೀರು ಹಾಕುವುದರ ಜೊತೆಗೆ ಸಂರಕ್ಷಿಸಿ ಚೆನ್ನಾಗಿ ಬೆಳೆಸುತ್ತಾರೆ ಆ ವಿದ್ಯಾರ್ಥಿಗೆ ಮುಂದಿನ ವರ್ಷ ನಮ್ಮ ಕೋರ್ಟ್ ವತಿಯಿಂದ ಪ್ರಶಸ್ತಿ ನೀಡುವುದಾಗಿ ಘೋಷಿಸಿದರು.

- ಅಭಿಷೇಕ್ ಆರ್ ಜೋಶಿ
ಸಿವಿಲ್ ನ್ಯಾಯಾಧೀಶರು ಚಿತ್ತಾಪುರ.
==================================

ಶಾಲಾ ಆವರಣದಲ್ಲಿ ವಿಧ್ಯಾರ್ಥಿಗಳು ಪ್ಲಾಸ್ಟಿಕ್ ಮಾಲಿನ್ಯಕ್ಕೆ ಅವಕಾಶ ಮಾಡಿಕೊಡಬೇಡಿ ಮತ್ತು ಪ್ಲಾಸ್ಟಿಕ್ ಬಳಕೆಯಿಂದ ನಮ್ಮ ಆರೋಗ್ಯದ ಮೇಲೆ ದುಷ್ಪರಿಣಾಮ ಬಿಳುವ ಸಾಧ್ಯತೆ ಇರುತ್ತದೆ ಇದರಿಂದ ಬಳಕೆ ಬೇಡ ಎಂದು ಕಿವಿ ಮಾತು ಹೇಳಿದರು.

- ಸಿಸ್ಟರ್ ಸಿಂಪ್ರೊಸ್
ಮುಖ್ಯಗುರುಗಳು, ಶಿಶುವಿಹಾರ ಹಿ.ಪ್ರಾ.ಶಾಲೆ ಚಿತ್ತಾಪೂರ

ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಕಿಶನ್ ಮಾಡಲಗಿ, ವಕೀಲರ ಸಂಘದ ಅಧ್ಯಕ್ಷ ನಾಗರಾಜ ಕಡಬೂರ, ವಲಯ ಅರಣ್ಯಾಧಿಕಾರಿ ವಿಜಯಕುಮಾರ್ ಬಡಿಗೇರ್,  ಭೆಂಥನಿ ಪ್ರೌಢ ಶಾಲಾ ಮುಖ್ಯೋಪಾಧ್ಯಾಯ ಕವಿತಾ ಬಿಎಸ್, ಸಹಾಯಕ ಸರ್ಕಾರಿ ಅಭಿಯೋಜಕರಾದ ಅಂಜನಾದೇವಿ, ವಕೀಲರಾದ ಎಸ್ಎಂ ಪಾಟೀಲ್, ಎಸ್ಎಂ ನಂದೂರಕರ್, ಶಿಕ್ಷಕರಾದ ಶೆಶಪ್ಪ ಬಡಿಗೇರ್, ಸತೀಶ್, ಸುಜಾತಾ, ಮಲ್ಲಪ್ಪ, ಕಲ್ಪನಾ, ಅರುಣಕುಮಾರ, ಸೇರಿದಂತೆ ಇತರರು ಇದ್ದರು ನಿರೂಪಣೆ ಸುಮಲತಾ ನಾಡಗೌಡ ನೆರವೇರಿಸಿದರು ವಿಶ್ವನಾಥ ಟೋನಿ ಸ್ವಾಗತಿಸಿಕೊಂಡರು ವಿಶ್ವನಾಥ ಕುಂಬಾರ ವಂದಿಸಿದರು.

ಭಾನುವಾರ, ಜೂನ್ 1, 2025

ಜನ್ಮದಿನದ ಆಚರಿಸಿದ ಅಭೀಮಾನಿಗಳು.

ಜನ್ಮದಿನದ ಆಚರಿಸಿದ ಅಭೀಮಾನಿಗಳು.

ಚಿತ್ತಾಪುರ: ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಕಾಂಗ್ರೆಸ್ ಹಿರಿಯ ಮುಖಂಡರಾದ ಶಿವರುದ್ರ ಭೀಣಿ ರವರ 56ನೇ ಜನ್ಮದಿನದ ನಿಮಿತ್ಯ ಅವರ ಅಭಿಮಾನಿ ಬಳಗದ ವತಿಯಿಂದ ಕೇಕ್ ಕತ್ತರಿಸುವ ಮೂಲಕ ಜನ್ಮದಿನ ಆಚರಿಸಿ ಸಂಭ್ರಮಿಸಿದರು.
ಈ ವೇಳೆಯಲ್ಲಿ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಚನ್ನವೀರ ಬಿ ಕಣ್ಣಿಗಿ,ಕಾಂಗ್ರೆಸ್ ಯುವ ಘಟಕ ಮಾಜಿ ಅಧ್ಯಕ್ಷ ಸಂಜಯ ಬುಳಕರ, ಶಿಕ್ಷಕರಾದ ಸದಾಶಿವ, ರೇವಣಸಿದ್ಧಪ್ಪ ರೋಣದ, ದಿಗ್ಗಾಂವ ಗ್ರಾಪಂ ಸದಸ್ಯರಾದ ಗುರುಶಾಂತ ಭಾಗೋಡಿ, ಸುರೇಶ ಅಚ್ಚೆಲಿ, ವಿವಿಎಸ್ಎಸ್ಎನ್ ಸದಸ್ಯ ಸಿದ್ದಣ್ಣ ಸಜ್ಜನ, ಗುರುಲಿಂಗ ಬಂದಳ್ಳಿ, ಭೀಮರಾಯ ದೇವರ, ಹಣಮಂತ ಭೀಮನಹಳ್ಳಿ, ಉದಯ ಕುಮಾರ ದಿಗಾಂವ್, ಶ್ರೀಧರ ಬಡಿಗೇರ್, ಬಸಪ್ಪ ದೊಡ್ಡಮನಿ, ಸಂಜಯ ಬುಳಕರ ಸೇರಿದಂತೆ ಇತರರು ಇದ್ದರು.

ಶುಕ್ರವಾರ, ಮೇ 30, 2025

ಪೌರ ಕಾರ್ಮಿಕರ ಮುಷ್ಕರದ ಎಫೆಕ್ಟ್: ಎಲ್ಲಿ ನೋಡಿದರು ಕಸವೋ ಕಸ, ಗಬ್ಬೆದ್ದು ನಾರುತ್ತಿದೆ ನಾಗಾವಿ ನಾಡು.

ಪೌರ ಕಾರ್ಮಿಕರ ಮುಷ್ಕರದ ಎಫೆಕ್ಟ್: ಎಲ್ಲಿ ನೋಡಿದರು ಕಸವೋ ಕಸ, ಗಬ್ಬೆದ್ದು ನಾರುತ್ತಿದೆ ನಾಗಾವಿ ನಾಡು.

ಚಿತ್ತಾಪುರ: ನಾಗಾವಿ ನಾಡು ಎಂದೆ ಪ್ರಸಿದ್ಧಿ ಪಡೆದ ಚಿತ್ತಾಪುರ ಪಟ್ಟಣದಲ್ಲಿ ಪುರಸಭೆ ವತಿಯಿಂದ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಸರ್ಕಾರದ ವಿರುದ್ಧ ಪೌರಕಾರ್ಮಿಕರು ನಡೆಸ್ತಿರೋ ಮುಷ್ಕರದಿಂದ ಪಟಣವೆಲ್ಲಾ ಗಬ್ಬೆದ್ದು ನಾರುತ್ತಿದೆ. ರಸ್ತೆ ಗುಡಿಸೋರಿಲ್ಲ, ಮನೆ ಮನೆಯಲ್ಲಿ ಸಂಗ್ರಹವಾಗಿರುವ ಕಸ ಕೇಳೋರಿಲ್ಲ. ಕಟ್ಟಿರುವ ಒಳ ಚರಂಡಿಗಳು ಸರಿಪಡಿಸುವವರಿಲ್ಲ. ಸ್ವಚ್ಛತಾ ವಾಹನಕ್ಕೆ ಚಾಲಕರೇ ಇಲ್ಲದೆ ನಗರವೆಲ್ಲಾ ದುರ್ನಾತ ಬೀರುತ್ತಿದೆ.

ಪಟ್ಟಣದ ಹೃದಯ ಭಾಗ ಸೇರಿದಂತೆ ಇಡೀ ಪ್ರಮುಖ ಮುಖ್ಯ ವೃತ್ತಗಳಲ್ಲಿ ಸಮರ್ಪಕವಾಗಿ ಕಸ ವಿಲೇವಾರಿಯಾಗದೇ ಇಡೀ ಪಟ್ಟಣ ಗಬ್ಬೆದ್ದು ನಾರುತ್ತಿದೆ. ಪಟ್ಟಣದ ಸ್ವಚ್ಛತಾ ಕಾರ್ಯಕ್ಕೆ ಪಾರ್ಶ್ವವಾಯು ಹೊಡೆದಂತಾಗಿದೆ. ನಿತ್ಯ 7 ಟನ್ ವಿಲೇವಾರಿಯಾಗುತ್ತಿದ್ದ ಕಸ, ಈಗ ನಗರದಲ್ಲಿಯೇ ಬಿದ್ದಿದ್ದು, ಕಳೆದ ಮೂರು ದಿನಗಳಲ್ಲಿ 21ಕ್ಕೂ ಹೆಚ್ಚು ಟನ್ ಕಸ ಸಂಗ್ರಹವಾಗಿ ವಿಲೇವಾರಿಯಾಗದೇ ಎಲ್ಲರ ಮನೆ, ರಸ್ತೆಯಲ್ಲಿಯೇ ಕೊಳೆತು, ಇಡೀ ನಗರ ದುರ್ವಾಸನೆ ಬೀರುತ್ತಿದೆ.
ಪುರಸಭೆ ಕಾರ್ಯಲಯದ ಪೌರ ಕಾರ್ಮಿಕರು,ನೀರು ಸರಬರಾಜುಗಾರರು,ವಾಹನ ಚಾಲಕರು, ಲೋಡರ್ಸ್, ಇಲಾಖೆಯ ಖಾಯಂ ಸಿಬ್ಬಂದಿ ಮತ್ತು ಹೊರ ಗುತ್ತಿಗೆ ಸಿಬ್ಬಂದಿ ವರ್ಗ ಸೇರಿ ಒಟ್ಟು 95 ಮಂದಿ ಮುಷ್ಕರಕ್ಕೆ ಬೆಂಬಲ ನೀಡಿದ್ದರಿಂದ ತರಕಾರಿ ಮಾರುಕಟ್ಟೆ, ಒಂಟ್ ಕಮಾನ್, ಸುಪ್ರಸಿದ್ಧ  ಶ್ರೀ ನಾಗಾವಿ ದೇವಸ್ಥಾನ, ಚಿತ್ತಾವಲಿ ದರ್ಗಾ, ಬಸ್ ನಿಲ್ದಾಣ, ತಹಸೀಲ್ ಕಾರ್ಯಲಯ ಸುತ್ತ ಮುತ್ತಲು, ಮತ್ತು ಲಾಡ್ಜಿಂಗ್ ಕ್ರಾಸ್ನಾ ಪರಿಸ್ಥಿತಿ ಶೋಚನೀಯವಾಗಿದೆ.
ಹೋಟೆಲ್‌ಗಳಲ್ಲಿ ಸಂಗ್ರಹವಾಗುತ್ತಿರುವ ಭಾರೀ ಪ್ರಮಾಣದ ತ್ಯಾಜ್ಯವನ್ನು ವಿಲೇವಾರಿ ಮಾಡಲು ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ. ಕೆಲವರು ರಾತ್ರಿ ವೇಳೆ ನಿರ್ಜನ ಪ್ರದೇಶಗಳಲ್ಲಿ ಕಸ ವಿಲೇವಾರಿ ಮಾಡುತ್ತಿದ್ದು, ಈಗ ಎಲ್ಲೆಂದರಲ್ಲಿ ಕಸದ ರಾಶಿ ಕಾಣುತ್ತಿದೆ. ಕೊಡಲೇ ಪುರಸಭೆ ಇಲಾಖೆ ಅಥವಾ ತಾಲೂಕು ಆಡಳಿತ ಈ ಸಮಸ್ಯೆ ಬಗೆಹರಿಸುವಲ್ಲಿ ಕ್ರಮಕ್ಕೆ ಮುಂದಾಗಬೇಕು.ಇಲ್ಲವಾದಲ್ಲಿ ಚಿತ್ತಾಪೂರ ಪಟ್ಟಣ ಒಂದು ವಾರದಲ್ಲಿ ಗಬ್ಬು ನಾರುವ ಮೂಲಕ ಪಟ್ಟಣದ ಜನತೆ ಸಾಂಕ್ರಾಮಿಕ ರೋಗಗಳಿಗೆ ಬಲಿಯಾಗುವ ಪರಿಸ್ಥಿತಿ ಬಂದ್ರೂ ಬರಬಹುದಾಗಿದೆ.

"ಎಲ್ಲಾ ನಗರ ಸ್ಥಳಿಯ ಸಂಸ್ಥೆಯ ನೌಕರರನ್ನು ರಾಜ್ಯ ಸರ್ಕಾರ ನೌಕರರೆಂದು ಪರಿಗಣಿಸಿ ಮತ್ತು ಜ್ಯೋತಿ ಸಂಜೀವಿನಿ, ಕೆಜಿಐಡಿ ಸೇರಿದಂತೆ ಸರ್ಕಾರಿ ನೌಕರರು ಪಡೆಯುವ ಎಲ್ಲಾ ಸೌಲಭ್ಯವನ್ನು ನೀಡಬೇಕೆಂಬ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ನೇತೃತ್ವದಲ್ಲಿ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದರಿಂದ ಈ ಸಮಸ್ಯೆ ಪಟ್ಟಣದಲ್ಲಿ ಆಗುತ್ತಿದೆ ಮುಖ್ಯಮಂತ್ರಿಗಳು ಸಭೆ ಕರೆದಿದ್ದಾರೆ ಎರಡು ದಿನಗಳಲ್ಲಿ ಸಮಸ್ಯೆ ಇತ್ಯರ್ಥ ಆದ್ರೇ ಎಲ್ಲಾ ಸರಿ ಆಗುತ್ತದೆ ಎಂದರು ಒಂದು ವೇಳೆ ಆಗದಿದ್ದರೆ ಮೇಲಾಧಿಕಾರಿಗೆ ಸೂಚನೆಯಂತೆ ನಡೆಯುವುದಾಗಿ ತಿಳಿಸಿದ್ದಾರೆ".

- ಮನೋಜಕುಮಾರ ಗುರಿಕಾರ
ಪುರಸಭೆ ಮುಖ್ಯಾಧಿಕಾರಿ ಚಿತ್ತಾಪುರ.

=====================================

"ಪಟ್ಟಣದಲ್ಲಿ ಕರ್ತವ್ಯಕ್ಕೆ ಪೌರ ನೌಕರರು ಗೈರಾಗುವ ಮೂಲಕ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದು. ಸಂಘದ ಬೇಡಿಕೆಗಳನ್ನು ಈಡೇರಿಸುವವರಿಗೆ  ಮುಷ್ಕರ ನಿಲ್ಲಿಸಲು ಸಾಧ್ಯವಿಲ್ಲ ಎಂದರು".

- ಸಾಬಣ್ಣ ಸಿ.ಕಾಶಿ
ತಾಲ್ಲೂಕು ಅಧ್ಯಕ್ಷರು, ಕರ್ನಾಟಕ ರಾಜ್ಯ ಪೌರ ನೌಕರರ ಸಂಘ ಚಿತ್ತಾಪೂರ.

ಬುಧವಾರ, ಮೇ 28, 2025

ಸಚಿವ ಪ್ರಿಯಾಂಕ್ ಖರ್ಗೆಗೆ ನಿಂದನೆ: ಆನಂದ ಯರಗಲ್ ಖಂಡನೆ.

ಸಚಿವ ಪ್ರಿಯಾಂಕ್ ಖರ್ಗೆಗೆ ನಿಂದನೆ: ಆನಂದ ಯರಗಲ್ ಖಂಡನೆ.
ಚಿತ್ತಾಪುರ: ರಾಜ್ಯದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರು ಹಾಗೂ ಜಿಲ್ಲಾ ಉುವಾರಿ ಸಚಿವರಾಗಿರುವ ಪ್ರಿಯಾಂಕ್ ಖರ್ಗೆಯವರಿಗೆ ಮೇಲ್ಮನೆ ಬಿಜೆಪಿ ವಿಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ ಅಸಂಸದೀಯ ಪದ ಬಳಸಿ ಮಾಡಿರುವ ನಿಂದನೆಗೆ ಕಾಂಗ್ರೆಸ್ ಯುವ ಮುಖಂಡ ಆನಂದ ಯರಗಲ್ ಖಂಡಿಸಿದ್ದಾರೆ.

ಸಚಿವರ ಅಭಿವೃದ್ದಿ ಕೆಲಸ ಕಾರ್ಯಗಳು ನೋಡಿ ಸಹಿಸದ ಬಿಜೆಪಿಯವರು ಸಚಿವ ಪ್ರಿಯಾಂಕ್ ಖರ್ಗೆ ರವರನ್ನು ನಿಂದನೆ ಮಾಡುವ ಮೂಲಕ ಹಾರಿಕೆ ಉತ್ತರ ನೀಡುತ್ತಿದ್ದಾರೆ. ನಮ್ಮ ಕ್ಷೇತ್ರದ ಜನರಿಗೆ ಕಾಂಗ್ರೆಸ್‌ ಇತಿಹಾಸ ಗೊತ್ತಿದೆ, ನಮ್ಮ ಪಕ್ಷ ಅಧಿಕಾರದಲ್ಲಿ ಇದ್ದಾಗ ಅಭಿವೃದ್ಧಿ ಕೆಲಸಗಳು ನಡೆದಿವೆ, ಬಿಜೆಪಿಯವರ ಸುಳ್ಳು ಮಾತುಗಳಿಗೆ ಜನರು ನಂಬಬೇಡಿ ಎಂದರು.

ಮಣಿಕಂಠ ರಾಠೋಡ ಕ್ಷಮೆ ಯಾಚನೆಗೆ ಮೈನಾಳಕರ್ ಆಗ್ರಹ.

ಮಣಿಕಂಠ ರಾಠೋಡ ಕ್ಷಮೆ ಯಾಚನೆಗೆ ಮೈನಾಳಕರ್ ಆಗ್ರಹ.
ಚಿತ್ತಾಪುರ: ಕೋಲಿ ಕಬ್ಬಲಿಗ ಎಸ್.ಟಿ ಹೋರಾಟ ಸಮಿತಿಯ ರಾಜ್ಯ ಘಟಕದ ಅಧ್ಯಕ್ಷ ಲಚ್ಚಪ್ಪ ಜಮಾದಾರ ಅವರನ್ನು ಅವಾಚ್ಯವಾಗಿ ಸಂಬೋಧಿಸಿ ಅವಹೇಳನ ಮಾಡಿರುವ ಬಿಜೆಪಿ ಮುಖಂಡ ಮಣಿಕಂಠ ರಾಠೋಡ ಅವರು ಕೂಡಲೆ ಕ್ಷಮೆಯಾಚಿಸಬೇಕು ಎಂದು ಕೋಲಿ ಸಮಾಜದ ಯುವ ಘಟಕದ ನಗರ ಅಧ್ಯಕ್ಷ ಬಸವರಾಜ ಮೈನಾಳಕರ್ ಆಗ್ರಹಿಸಿದ್ದಾರೆ.

ಸಾರ್ವಜನಿಕ ಮತ್ತು ರಾಜಕೀಯ ಕ್ಷೇತ್ರದಲ್ಲಿ ತಮ್ಮದೇ ಆದ ಘನತೆ ಹೊಂದಿರುವವರನ್ನು ಅವಹೇಳನ ಮಾಡಿ ರಾಜಕೀಯವಾಗಿ ಮತ್ತು ಸಾಮಾಜಿಕವಾಗಿ ಅಶಾಂತಿಯ ವಾತಾವರಣ ಸೃಷ್ಟಿಸುವ ಹುನ್ನಾರ ಮಾಡುತ್ತಿದ್ದಾರೆ ಎಂದರು. 

ಪುರಸಭೆ ಮುಂದೆ ಪೌರ ನೌಕರರ ಮುಷ್ಕರ.

ಪುರಸಭೆ ಮುಂದೆ ಪೌರ ನೌಕರರ ಮುಷ್ಕರ.
ಚಿತ್ತಾಪುರ: ಎಲ್ಲಾ ನಗರ ಸ್ಥಳಿಯ ಸಂಸ್ಥೆಯ ನೌಕರರನ್ನು ರಾಜ್ಯ ಸರ್ಕಾರ ನೌಕರರೆಂದು ಪರಿಗಣಿಸಿ ಹಾಗೂ ಜ್ಯೋತಿ ಸಂಜೀವಿನಿ, ಕೆ.ಜಿ.ಐ.ಡಿ ಸೇರಿದಂತೆ ಸರ್ಕಾರಿ ನೌಕರರು ಪಡೆಯುವ ಎಲ್ಲಾ ಸೌಲಭ್ಯವನ್ನು ನೀಡಬೇಕೆಂಬ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ನೇತೃತ್ವದಲ್ಲಿ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ ಪ್ರಯುಕ್ತ ತಾಲ್ಲೂಕು ಘಟಕ ವತಿಯಿಂದ ಮಂಗಳವಾರ ಪುರಸಭೆ ಕಚೇರಿ ಎದುರು ಪೌರಕಾರ್ಮಿಕರು ಮುಷ್ಕರ ನಡೆಸಿದ್ದಾರೆ.

ಸಂಘದ ತಾಲೂಕು ಅಧ್ಯಕ್ಷ ಸಾಬಣ್ಣ ಸಿ.ಕಾಶಿ ಮಾತನಾಡಿ, ರಾಜ್ಯಾದ್ಯಂತ ಕರ್ತವ್ಯಕ್ಕೆ ಪೌರ ನೌಕರರು ಗೈರು, ಕಸ ಸಂಗ್ರಹ ವಿಲೇವಾರಿ, ಸ್ವಚ್ಛತೆ, ನೀರು ಪೂರೈಕೆ, ಒಳಚರಂಡಿ, ನಿರ್ವಹಣೆ ಸ್ಥಗಿತಗೊಳಿಸಿ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುತ್ತಿದೆ ಎಂದು ಹೇಳಿದರು.

ಸಂಘದ ಬೇಡಿಕೆಗಳನ್ನು ಈಡೇರಿಸುವವರಿಗೆ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ ಮಾಡಲು ಸೂಚಿಸಿದಂತೆ ಚಿತ್ತಾಪುರ ಪುರಸಭೆಗೆ ಸಂಬಂಧ ಪಟ್ಟ ಕೆಲಸಗಳನ್ನು ಸ್ಥಗಿತಗೊಳಿಸಿ ಮುಷ್ಕರ ನಡೆಸಲಾಗುತ್ತಿದೆ ಎಂದರು.

ರಾಜ್ಯ ನಗರ ಸ್ಥಳಿಯ ಸಂಸ್ಥೆಗಳಲ್ಲಿ ಹೊರಗುತ್ತಿಗೆ ಅಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ನೀರು ಸರಬರಾಜು, ಚಾಲಕರು, ಲೋಡರ್ಸ, ಕ್ಲಿನರ್ಸ್, ಸ್ಯಾನಿಟರಿ ಸುಪರವೈಸರ್, ಯುಜಿಡಿ ಸಹಾಯಕರು ಸೇರಿದಂತೆ ವಿವಿಧ ವೃಂದದ ಹೊರಗುತ್ತಿಗೆ ನೌಕರರನ್ನು ನೇರ ಪಾವತಿಗೆ ಒಳಪಡಿಸುವುದು, ದಿನಗೂಲಿ ಕ್ಷೇಮಾಭಿವೃದ್ಧಿ, ಸಮಾನ ಕೆಲಸಕ್ಕೆ ಸಮಾನ ವೇತನ ನೌಕರರನ್ನು ಖಾಯಂ ಮಾಡುವುದು, ಎಲ್ಲಾ ನೌಕರರಿಗೆ ಎಸ್.ಎಫ್.ಸಿ ಮುಕ್ತ ನಿಧಿಯಿಂದ ವೇತನ ನೀಡಬೇಕು ಎಂಬ ಬೇಡಿಕೆಗಳ ಮನವಿ ಪತ್ರವನ್ನು ಪುರಸಭೆ ಮುಖ್ಯಾಧಿಕಾರಿ ಮನೋಜಕುಮಾರ ಗುರಿಕಾರ ಅವರಿಗೆ ಹಾಗೂ ತಹಸೀಲ್ದಾ‌ರ್ ಅವರಿಗೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ವೆಂಕಟೇಶ್ ಜೈಗುರು, ಖಜಾಂಚಿ ಕ್ರಾಂತಿದೇವಿ ಸೇರಿದಂತೆ ಪೌರ ನೌಕರರ ಉಪಸ್ಥಿತರಿದ್ದರು.

ಮಂಗಳವಾರ, ಮೇ 27, 2025

ವಿಪಕ್ಷ ಸ್ಥಾನ ರದ್ದತಿಗೆ ಆಗ್ರಹಿಸಿ ಮೇ. 31ಕ್ಕೆ ಬೃಹತ್ ಪ್ರತಿಭಟನೆ.

ವಿಪಕ್ಷ ಸ್ಥಾನ ರದ್ದತಿಗೆ ಆಗ್ರಹಿಸಿ ಮೇ. 31ಕ್ಕೆ ಬೃಹತ್ ಪ್ರತಿಭಟನೆ.

ಚಿತ್ತಾಪುರ: ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ವೈಯಕ್ತಿಕವಾಗಿ ನಿಂದನೆ ಮಾಡಿ, ಅಸಂವಿಧಾನಿಕವಾಗಿ ಮಾತನಾಡಿದ ಛಲವಾದಿ ನಾರಾಯಣಸ್ವಾಮಿಯ ವಿಧಾನ ಪರಿಷತ್ ಸದಸ್ಯತ್ವ ಹಾಗೂ ವಿಪಕ್ಷ ಸ್ಥಾನ ರದ್ದುಗೊಳಿಸುವಂತೆ ಆಗ್ರಹಿಸಿ ಕಲಬುರಗಿ ನಾಗರಿಕ ಹೋರಾಟ ಸಮಿತಿಯಿಂದ ಮೇ 31 ರಂದು ನಗರದಲ್ಲಿ ಬೃಹತ್‌ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಮುಖಂಡ ಮಲ್ಲಪ್ಪ ಹೊಸಮನಿ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬೃಹತ್ ಪ್ರತಿಭಟನೆಯ ನಿಮಿತ್ತ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 11ಕ್ಕೆ ನಗರದ ಜಗತ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಗುವುದು. ಆದ್ದರಿಂದ ಪ್ರತಿಭಟನೆಯಲ್ಲಿ ದಲಿತ ಸಂಘಟನೆಗಳ ಹಾಗೂ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಕರೆ ನೀಡಿದರು.

ನಾರಾಯಣಸ್ವಾಮಿ ಒಬ್ಬ ಜವಾಬ್ದಾರಿತ ಸ್ಥಾನದಲ್ಲಿದ್ದು, ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ನಾಯಿ ಎಂದು ಸಂಭೋದಿಸಿರುವುದು ಅವರ ಬೌದ್ಧಿಕ ಮಟ್ಟ ಹಾಗೂ ಸಂಸ್ಕೃತಿ ಎಂತಹದ್ದು ಎಂಬುದು ತೋರಿಸುತ್ತದೆ ಎಂದು ಹೇಳಿದರು.

ಮುಖಂಡ ದಿನೇಶ್‌ ದೊಡ್ಡಮನಿ ಮಾತನಾಡಿ, ನಾರಾಯಣಸ್ವಾಮಿ ಅವರು ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಗುಲಾಮಗಿರಿ ಮಾಡುತ್ತಾ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ್ ಖರ್ಗೆ ಅವರ ರಾಜಕೀಯ ಬೆಳವಣಿಗೆ ಸಹಿಸದೆ ಅವರ ಕುಟುಂಬವನ್ನು ಗುರಿಯಾಗಿಸಿಕೊಂಡು ಅವರನ್ನು ವೈಯಕ್ತಿಕವಾಗಿ ನಿಂದನೆ ಮಾಡಿ ರಾಜಕೀಯ ತೇಜೋವಧೆ ಮಾಡುತ್ತಿದ್ದ ಛಲವಾದಿ ನಾರಾಯಣಸ್ವಾಮಿ ವಿರುದ್ಧ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಕೋರಿದ್ದಾರೆ.

ಮುಖಂಡರಾದ ಪ್ರಕಾಶ್ ಮೂಲ ಭಾರತಿ, ರಾಜು ಕಪನೂರ, ಸುರೇಶ್ ಹಾದಿಮನಿ, ಗುಂಡಪ್ಪ ಲಂಡನಕರ್, ಪ್ರಕಾಶ್ ನಾಗನಹಳ್ಳಿ, ದೇವಿಂದ್ರ ಸಿನ್ನೂರ್, ಅಶೋಕ ವೀರ ನಾಯಕ, ಶಿವಕಾಂತ್ ಬೆಣ್ಣೂರಕರ್, ಮಲ್ಲಿಕಾರ್ಜುನ ಬೆಣ್ಣೂರಕ‌ರ್, ಸುಭಾಷ್ ಕಲ್ಮರಿ, ಶಿವಯೋಗಿ ರಾವೂರ, ಜಗನ್ನಾಥ ಮುಡಬೂಳಕ‌ರ್, ಸಾಗರ್ ಚಿಟ್ಟೇಕಾರ, ಪ್ರೇಮ್ ಸಾಗರ, ಬಸವರಾಜ ಮುಡಬೂಳಕರ್, ನಾಗೇಂದ್ರ ಬುರ್ಲಿ, ರಾಜಪ್ಪ ಹುಂಡೇಕಾರ, ಯಲ್ಲಾಲಿಂಗ ಕಲ್ಲಕ್, ದೇವಿಂದ್ರ ಭಾಗೋಡಿ, ಪೀರಪ್ಪ ಸಾಲಹಳ್ಳಿ, ಶೈಲೇಶ್ ಬೆಣ್ಣೂರಕ‌ರ್, ಶರಣು ತಲಾಟಿ, ಬಸವರಾಜ ಮುಡಬೂಳಕ‌ರ್, ಲೋಹಿತ್ ಮುದ್ದಡಗಿ, ವಿಶ್ವನಾಥ ಬೀದಿಮನಿ, ಪೃಥ್ವಿ ಸಾಗರ ಸೇರಿದಂತೆ ಇತರರು ಇದ್ದರು. ಮಲ್ಲಿಕಾರ್ಜುನ ಮುಡಬೂಳಕರ್ ಸ್ವಾಗತಿಸಿದರು, ಉದಯಕುಮಾರ್ ಸಾಗರ ನಿರೂಪಿಸಿ ವಂದಿಸಿದರು.

ಮರ ಕಟಾವು ಮಾಡಿದ ಸ್ಥಳಕ್ಕೆ ಅರಣ್ಯಾಧಿಕಾರಿ ಭೇಟಿ.

ಮರ ಕಟಾವು ಮಾಡಿದ ಸ್ಥಳಕ್ಕೆ ಅರಣ್ಯಾಧಿಕಾರಿ ಭೇಟಿ.

ಚಿತ್ತಾಪುರ: ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ಸೋಮವಾರ ಅನುಮತಿ ಪಡೆಯದೆ ಮರ ಕಟಾವು ಮಾಡಿದ ವಿಷಯ ತಿಳಿದು ಸ್ಥಳಕ್ಕೆ ವಲಯ ಅರಣ್ಯಾಧಿಕಾರಿ ವಿಜಯಕುಮಾರ ಬಡೀಗೇರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಂತರ ಮಾತನಾಡಿದ ಅವರು ಎಪಿಎಂಸಿ ಕಾರ್ಯದರ್ಶಿ ಅನುಮತಿ ಕೋರಿ ಅರಣ್ಯ ಇಲಾಖೆಗೆ ಪತ್ರ ಬರೆದಿದ್ದರು ಇನ್ನೂ ನಮ್ಮ ಇಲಾಖೆಯಿಂದ ಅನುಮತಿ ನೀಡಿರಲಿಲ್ಲ ಈಗ ಏಕಾಏಕಿ ಮರ ಕಡಿದ ವಿಷಯ ತಿಳಿದುಬಂದಿದೆ ಈ ಕುರಿತು ಕೊಡಲೆ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಉಪ ವಲಯ ಅರಣ್ಯಾಧಿಕಾರಿ ಮೊಹಮ್ಮದ್ ಜಾವೀದ್, ಅರಣ್ಯ ವೀಕ್ಷಕ ಸವಿತಾ ಸೇರಿದಂತೆ ಇತರರು ಇದ್ದರು.

ಸೋಮವಾರ, ಮೇ 26, 2025

ಮರಕ್ಕೆ ಕೊಡಲಿ, ಎಪಿಎಂಸಿ ಮತ್ತು ಅರಣ್ಯ ಇಲಾಖೆ ಜಾಣಮೌನ.

ಜಗದೇವ ಎಸ್ ಕುಂಬಾರ.
ಚಿತ್ತಾಪುರ: ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಹಾಡು ಹಗಲೇ ಮರಗಳು ಧರೆಗೆ ಉರಳಿಸುತ್ತಿದ್ದರೂ ಯಾರೂ ಕೇಳುವರಿಲ್ಲದಂತಾಗಿದೆ ಎಪಿಎಂಸಿ ಮತ್ತು ಅರಣ್ಯ ಅಧಿಕಾರಿಗಳು ಜಾಣಮೌನಕ್ಕೆ ಜಾರಿದ್ದು ನೋಡಿದರೆ ಇನ್ನೂ ಅದೆಷ್ಟೋ ಮರಳು ನೆಲಕ್ಕೆ ಉರುಳುತ್ತವೆ ಎಂಬ ಚಿಂತೆ ಸಾರ್ವಜನಿಕರಲ್ಲಿ ಚರ್ಚೆ ಆಗುತ್ತಿದೆ.

ಸುಮಾರು 50ಕ್ಕೂ ಅಧಿಕ ವರ್ಷಗಳ ಹಳೆಯದಾದ ಬೆಲೆಬಾಳುವ ಮರಗಳು ಕಡಿಯುತ್ತಿರುವುದು ನೋಡಿದರೆ ಎಪಿಎಂಸಿ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳ ಮೌನ ಹಲವಾರು ಗುಮಾನಿಗೆ ಎಡೆ ಮಾಡಿಕೊಟ್ಟಿದೆ ಎಂದು ಜನರು ದೂರುತ್ತಿದ್ದಾರೆ. ಕಾನೂನಿನ ಯಾವುದೇ ಅಳಕು ಅಂಜಿಕೆಯಿಲ್ಲದೆ ಗಿಡ, ಮರಗಳನ್ನು ಅವ್ಯಾಹತವಾಗಿ ಕಡಿಯುವ ದುಷ್ಕರ್ಮಿಗಳ ಅಟ್ಟಹಾಸ ಮುಂದುವರೆದಿದೆ.

ಕಾಡು ಬೆಳೆಸಿ ನಾಡು ಉಳಿಸಿ ಎಂದು ಅರಣ್ಯ ಇಲಾಖೆ ಘೋಷಣೆ ಕೇವಲ ದಾಖಲೆಯಲ್ಲಿ ಮಾತ್ರ ಉಳಿದಿದೆ. ಅನುಷ್ಠಾನದಲ್ಲಿ ಜಾರಿಯಾಗಿಲ್ಲ ಎಂಬುದಕ್ಕೆ ಸಾಕ್ಷಿಗಳು ಸಾಕಷ್ಟು ಸಿಗಲಿವೆ. ಸರಕಾರ ಇಲ್ಲಿನ ಗಿಡ ಮರಗಳ ರಕ್ಷಣೆಗೆ ಈಗಲಾದರೂ ಎಚ್ಚೆತ್ತು ತುರ್ತು ಕ್ರಮ ಕೈಗೂಳ್ಳಬೇಕು. ಇರದಿದ್ದರೆ ಜನ ಹೋರಾಟ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.

ದಿನಕ್ಕೆ ಒಂದೆರಡರಂತೆ ನಿತ್ಯ ಮರಗಳ ಮಾರಣ ಹೋಮ ನಡೆಸಿದರೆ ಹೀಗೆ ಬಿಟ್ಟರೆ ಕೆಲ ದಿನದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿನ ಎಲ್ಲ ಹಸಿರು ಸಂಪತ್ತು ನಾಶವಾಗಲಿದೆ ಎಂದು ಪರಿಸರ ಪ್ರೇಮಿಗಳು ಆತಂಕ ವ್ಯಕ್ತ ಪಡಿಸಿದ್ದಾರೆ.

ನಮ್ಮ ವ್ಯಾಪ್ತಿಗೆ ಒಳಪಡುವ ಎಪಿಎಂಸಿಯಲ್ಲಿ ಮರಗಳು ಕಡಿದಿದ್ದು ನಮ್ಮ ಗಮನಕ್ಕೆ ಇಲ್ಲ ಒಂದು ವೇಳೆ ಮರಗಳು ಕಡಿದಿದ್ದು ನಿಜವಾಗಿದ್ದರೆ ನಾನು ಕ್ರಮ ಕೈಗೊಳ್ಳುವೆ ನಮ್ಮ ಇಲಾಖೆಯಿಂದ ಯಾವುದೇ ರೀತಿಯ ಮರಗಳು ಕಡಿಸಲು ಸೂಚಿಸಿಲ್ಲ ಎಂದರು.

- ಶ್ರೀಮತಿ ಸವಿತಾ ಘೋನಿ.
ಕಾರ್ಯದರ್ಶಿ,ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಚಿತ್ತಾಪೂರ.

ಎಪಿಎಂಸಿಯಲ್ಲಿ ಯಾವುದೇ ರೀತಿಯ ಒಪ್ಪಿಗೆ ಪರವಾನಿಗೆ ಇರದೆ ಬೆಳಿಗ್ಗೆ ಮರ ಕಡಿದ ವಿಷಯ ತಿಳಿದು ಬಂದಿದೆ ಕೂಡಲೆ ಮರ ಕಡಿದವರ ವಿರುದ್ಧ ಕ್ರಮ ಕೈಗೊಳ್ಳಲು ಸ್ಥಳೀಯ ಪಂಚನಾಮೆ ಮಾಡಿಕೊಳ್ಳಲಾಗಿದೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

- ಮಹಮ್ಮದ್ ಜಾವೀದ್
ಉಪ ವಲಯ ಅರಣ್ಯಾಧಿಕಾರಿ ಚಿತ್ತಾಪೂರ.



ಎಸ್ಸೆಸ್ಸೆಲ್ಸಿ ಮಕ್ಕಳೊಂದಿಗೆ ಜಿಪಂ ಸಿಇಒ ಚರ್ಚೆ.

ಚಿತ್ತಾಪುರ: ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮಪಡಿಸಲು ಪೂರ್ವಸಿದ್ಧತಾ ಪರೀಕ್ಷೆ-1 ರಲ್ಲಿ ಅತ್ಯಂತ ಕಡಿಮೆ ಫಲಿತಾಂಶ ಪಡೆದ ಕರ್ನಾಟಕ ಪಬ್ಲಿಕ್ ಶಾಲೆ ಮಾಡಬೂಳ,...