ಭಾನುವಾರ, ಜನವರಿ 25, 2026

ಸರ್ಕಾರಿ ನೌಕರರ ಧ್ವನಿಯಾಗಿರುವೆ: ಪ್ರಿಯಾಂಕ್ ಖರ್ಗೆ.

ಚಿತ್ತಾಪುರ: ರಾಜ್ಯದ ವಿಧಾನಸಭೆಯಲ್ಲಿ ನಾನು
ಸರ್ಕಾರಿ ನೌಕರರ ಧ್ವನಿಯಾಗಿದ್ದೇನೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಪಟ್ಟಣದ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆದ ಕರ್ನಾಟಕ ರಾಜ್ಯ ಸರ್ಕಾರಿ/ಅರೆ ಸರ್ಕಾರಿ ಪರಿಶಿಷ್ಟ ಜಾತಿ ಪರಿಶಿಷ್ಠ ಪಂಗಡ ನೌಕರರ ಸಂಘ ಚಿತ್ತಾಪುರ ಶಾಖೆಯ ಪದಾಧಿಕಾರಿಗಳ ಪದಗ್ರಹಣ ಹಾಗೂ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಸಾಧಕರಿಗೆ “ಸೇವಾ ರತ್ನ ಪ್ರಶಸ್ತಿ” ಪ್ರಧಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರಿ ನೌಕರರ ಸಮಸ್ಯೆಗಳಿಗೆ ಮತ್ತು ಬೇಡಿಕೆಗಳ ಬಗ್ಗೆ ನಮ್ಮ ಸರ್ಕಾರ ಸ್ಪಂದಿಸಿ ಈಡೇರಿಸಲು ಬದ್ಧವಾಗಿದೆ ಎಂದರು.
ಜನಸಾಮಾನ್ಯರ ಸೇವೆಗೆ ನಾವು ಹಾಗೂ ಸರ್ಕಾರಿ ನೌಕರರು ಸದಾ ಸಿದ್ಧವಾಗಿರಬೇಕು. ಜನರ ಸ್ವಾಭಿಮಾನದ ಬದುಕು ಹಾಗೂ ಜೀವನಮಟ್ಟ ಸುಧಾರಣೆಗೆ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಿಸುವ ಪ್ರಾಮಾಣಿಕ ಸೇವೆ ಸಲ್ಲಿಸಬೇಕು ಎಂದು ಹೇಳಿದರು.

ಜಿಲ್ಲಾಧಿಕಾರಿ ಫೌಝಿಯಾ ತರನುಮ್, ಎಸ್ಪಿ ಅದ್ದೂರು ಶ್ರೀನಿವಾಸಲು, ಜಿಪಂ ಸಿಇಒ ಭಂವರಸಿಂಗ್ ಮೀನಾ, ಕೆಪಿಸಿಸಿ ಸದಸ್ಯ ನಾಗರಡ್ಡಿ ಪಾಟೀಲ ಕರದಾಳ, ಪಿಎಲ್'ಡಿ ಬ್ಯಾಂಕ್ ಅಧ್ಯಕ್ಷ ಭೀಮಣ್ಣ ಸಾಲಿ, ತಹಶೀಲ್ದಾ‌ರ್ ನಾಗಯ್ಯ ಹಿರೇಮಠ, ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ, ಗಂಗಾ ಪರಮೇಶ್ವರಿ ಶಿಕ್ಷಣ ಸಂಸ್ಥೆ ಅಧ್ಯಕ್ಷೆ ಅಮರೇಶ್ವರಿ ಚಿಂಚನಸೂರ, ಮನೂ‌ರ್ ಆಸ್ಪತ್ರೆಯ ಸಂಸ್ಥಾಪಕ ಡಾ.ಫಾರೂಕ್, ಸಂಘದ ರಾಜ್ಯಾಧ್ಯಕ್ಷ ಮಹೇಶ ಸಿ. ಹುಬಳಿ, ಗೌರವಾಧ್ಯಕ್ಷ ವಿಠಲ ಗೋಳಾ, ಕಾರ್ಯಾಧ್ಯಕ್ಷ ಜೈ ಭೀಮ್, ರಾಜ್ಯ ಪ್ರಧಾನ ಕರ್ಯಾದರ್ಶಿ ಸುಧಾಕರ ಎಸ್. ಜಡಗಿ, ರಾಜ್ಯ ಪರಿಷತ್ ಸದಸ್ಯ ಸಂತೋಷ ಸಲಗರ, ಬೆಂಗಳೂರು ನಗರ ಸಂಘದ ಅಧ್ಯಕ್ಷ ಶ್ರೀಧರ ಕೋಟ್ರೇ, ನಿವೃತ್ತ ನೌಕರರ ಸಂಘದ ಅಧ್ಯಕ್ಷ ರೇವಣಸಿದ್ದಪ್ಪ ರೋಣದ್, ವಿಜಯಲಕ್ಷ್ಮೀ, ಕವಿತಾ ದೇವಿಂದ್ರಪ್ಪ ದೊರಿ, ಶಾಂತಮಲ್ಲಪ್ಪ ಪಾಟೀಲ, ಗೌತಮಿ ಹಿರೊಳ್ಳಿ, ಸುನೀತಾ, ಜಯಶ್ರೀ, ಮಹೇಶ್ವರಿ, ಗೀತಾ ಸೇರಿದಂತೆ ಇತರರು ಇದ್ದರು.

ಪೂಜ್ಯ ವರಜ್ಯೋತಿ ಬಂತೇಜಿ ಅಣದೂರ ದಿವ್ಯಸಾನಿದ್ಯ ವಹಿಸಿದ್ದರು, ಸಂಘದ ತಾಲೂಕು ಅಧ್ಯಕ್ಷ ಅರುಣಕುಮಾರ ಎಸ್. ಚಿಂಚನಸೂರ ಅಧ್ಯಕ್ಷತೆ ವಹಿಸಿದ್ದರು. ಮನೋವಿಜ್ಞಾನಿ ಡಾ. ದಿಲೀಪಕುಮಾರ ನವಲೆ ಕಲಬುರಗಿ ಉಪನ್ಯಾಸ ನೀಡಿದರು.
ಇದೇ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದು ಸಾಧಕರನ್ನು ಸೇವಾ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು ಹಾಗೂ ಎಸ್.ಎಸ್.ಎಲ್.ಸಿ./ ಪಿ.ಯು.ಸಿ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪುರಸ್ಕಾರ, ಡಾ. ಬಿ.ಆರ್. ಅಂಬೇಡ್ಕರ ರವರ ಕುರಿತು ಪ್ರಬಂಧ ಸ್ಪರ್ದೆ, ಭಾಷಣ ಹಾಗೂ ರಸಪ್ರಶ್ನೆ ಸ್ಪರ್ದೆಯಲ್ಲಿ ವಿಜೇತರಾದ ಕಾಲೇಜು ವಸತಿ ನಿಲಯದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.

ಸಿದ್ದಾರ್ಥ್ ಚಿಮ್ಮಾಇದಲಾಯಿ ಪ್ರಾರ್ಥಿಸಿದರು, ಶಿವಶರಣಪ್ಪ ಮಂಠಾಳೆ ಪ್ರಾಸ್ತಾವಿಕವಾಗಿ ಮಾತನಾಡಿದರು, ಶರಣಪ್ಪ ಕಟ್ಟಿ ಸ್ವಾಗತಿಸಿದರು, ಶಿವಾನಂದ ನಾಲವಾರ ನಿರೂಪಿಸಿದರು, ಸದಾಶಿವ ದೊಡ್ಡಮನಿ ವಂದಿಸಿದರು. ಕಾರ್ಯಕ್ರಮದ ಮುನ್ನ ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಮರೆವಣಿಗೆ ಪ್ರಾರಂಭವಾಗಿ ಬಸವೇಶ್ವರ ಕಲ್ಯಾಣ ಮಂಟಪದವರೆಗೆ ನಡೆಯಿತು.

ಗುರುವಾರ, ಜನವರಿ 22, 2026

ಬಿಜೆಪಿ ಕಚೇರಿಯಲ್ಲಿ ಅಂಬಿಗರ ಚೌಡಯ್ಯ ಜಯಂತಿ ಆಚರಣೆ.

ಚಿತ್ತಾಪುರ: ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಬುಧವಾರ ನಡೆದ ನಿಜಶರಣ ಅಂಬಿಗರ ಚೌಡಯ್ಯ ನವರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ತಾಲೂಕು ಅಧ್ಯಕ್ಷ ರವೀಂದ್ರ ಸಜ್ಜನಶೆಟ್ಟಿ ಅವರು ಭಾವಚಿತ್ರಕ್ಕೆ ಪೂಜೆ ಮಾಡಿ ಗೌರವ ನಮನಗಳು ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜ ಬೆಣ್ಣೂರಕರ್, ಒಬಿಸಿ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಎಮ್ಮೆನೋರ್, ನಗರಾಧ್ಯಕ್ಷ ಆನಂದ ಪಾಟೀಲ ನರಿಬೋಳ, ಮಂಡಲ ಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ ಇಟಗಿ, ನಾಗರಾಜ ಹೂಗಾರ, ಮುಖಂಡರಾದ ತಮ್ಮಣ್ಣ ಡಿಗ್ಗಿ, ಸುರೇಶ್ ಬೆನಕನಳ್ಳಿ, ಶಾಂತಕುಮಾ‌ರ್ ಮಳಖೇಡ, ದಶರಥ ದೊಡ್ಡಮನಿ, ಮೌನೇಶ್ ಭಂಕಲಗಿ, ವಿಶ್ವನಾಥ ಅಫಜಲಪುರ, ಶರಣು ಸಿದ್ರಾಮಗೋಳ, ಹನುಮಾನ್ ವ್ಯಾಸ್, ರಾಜು ರಾಠೋಡ ಸೇರಿದಂತೆ ಇತರರು ಇದ್ದರು,

ಪ್ರಜಾ ಸೌಧದಲ್ಲಿ ಅಂಬಿಗರ ಚೌಡಯ್ಯ ಜಯಂತಿ ಆಚರಣೆ

ಚಿತ್ತಾಪುರ: ಪ್ರಜಾ ಸೌಧದ ಆವರಣದಲ್ಲಿ ತಾಲೂಕು ಆಡಳಿತ ವತಿಯಿಂದ ಬುಧವಾರ ನಿಜಶರಣ ಅಂಬಿಗರ ಚೌಡಯ್ಯ ನವರ ಜಯಂತಿಯನ್ನು ಸರಳವಾಗಿ ಆಚರಣೆ ಮಾಡಲಾಯಿತು.

ತಹಸೀಲ್ದಾ‌ರ್ ನಾಗಯ್ಯ ಹಿರೇಮಠ ಅವರು ಭಾವಚಿತ್ರಕ್ಕೆ ಪೂಜೆ ಮಾಡಿ ಗೌರವ ನಮನಗಳು ಸಲ್ಲಿಸಿದರು. ಈ ಸಂದರ್ಭದಲ್ಲಿ ಕೋಲಿ ಸಮಾಜದ ತಾಲೂಕು ಅಧ್ಯಕ್ಷರಾದ ಶಿವುಕುಮಾರ ಯಾಗಾಪೂರ, ನಿಂಗಣ್ಣ ಹೆಗಲೇರಿ, ಪಿಎಲ್'ಡಿ ಬ್ಯಾಂಕ್‌ ಅಧ್ಯಕ್ಷ ಭೀಮಣ್ಣ ಸಾಲಿ, ಉಪಾಧ್ಯಕ್ಷ ವೀರುಪಾಕ್ಷಪ್ಪ ಗಡ್ಡದ, ಪಂಚ ಗ್ಯಾರಂಟಿ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಬೊಮ್ಮನಳ್ಳಿ, ಪಿಎಸ್‌ಐ ಮಂಜುನಾಥ ರೆಡ್ಡಿ, ಯುವ ಅಧ್ಯಕ್ಷರಾದ ರಾಜೇಶ ಹೊಳಿಕಟ್ಟಿ, ಮಲ್ಲಿಕಾರ್ಜುನ ಅಲ್ಲೂರಕರ್, ನಗರಾಧ್ಯಕ್ಷ ಪ್ರಭು ಹಲಕರ್ಟಿ, ಯುವ ಕಾಂಗ್ರೆಸ್‌ ಅಧ್ಯಕ್ಷ ದೇವು ಯಾಬಾಳ, ಮುಖಂಡರಾದ ಹಣಮಂತ ಸಂಕನೂರ, ರಾಮಲಿಂಗ ಬಾನ‌ರ್, ಬಸವರಾಜ ಚಿನ್ನಮಳ್ಳಿ, ತಮ್ಮಣ್ಣ ಡಿಗ್ಗಿ, ಸಾಬಣ್ಣ ಭರಾಟೆ, ಬಸಣ್ಣ ತಳವಾರ, ದಶರಥ ದೊಡ್ಡಮನಿ, ಗುಂಡು ಐನಾಪೂರ, ಶರಣು ಡೋಣಗಾಂವ, ಸಂತೋಷ ಇವಣಿ, ಸಾಬಣ್ಣ ಡಿಗ್ಗಿ, ಕಾಶಪ್ಪ ಡೋಣಗಾಂವ, ಭೀಮಾಶಂಕರ ಹೊಳಿಕಟ್ಟಿ, ರಾಜಾಹುಲಿ, ಲಕ್ಷ್ಮೀಕಾಂತ ಸಾಲಿ, ಕಿಶನ್ ಮೂಕೆ, ಶರಣು ಸಿದ್ರಾಮಗೋಳ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಕೋಲಿ ಸಮಾಜದಿಂದ ಅಂಬಿಗರ ಚೌಡಯ್ಯ ಜಯಂತಿ ಆಚರಣೆ,



ಚಿತ್ತಾಪುರ: ಪಟ್ಟಣದ ಲಾಡ್ಡಿಂಗ್ ಕ್ರಾಸ್ ಹತ್ತಿರದ
ಅಂಬಿಗರ ಚೌಡಯ್ಯ ವೃತ್ತದಲ್ಲಿ ತಾಲೂಕು ಕೋಲಿ ಸಮಾಜದ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ನಿಜಶರಣ ಅಂಬಿಗರ ಚೌಡಯ್ಯ ನವರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ತಾಲೂಕು ಅಧ್ಯಕ್ಷರಾದ ಶಿವುಕುಮಾರ ಯಾಗಾಪೂರ ಮತ್ತು ನಿಂಗಣ್ಣ ಹೆಗಲೇರಿ ಅವರು ಭಾವಚಿತ್ರಕ್ಕೆ ಪೂಜೆ ಮಾಡಿ ನಂತರ ಧ್ವಜಾರೋಹಣ ನೆರವೇರಿಸಿ ಗೌರವ ನಮನಗಳು ಸಲ್ಲಿಸಿದರು.

ಈ ಸಂದರ್ಭದಲ್ಲಿ ಪಿಎಲ್‌'ಡಿ ಬ್ಯಾಂಕ್ ಅಧ್ಯಕ್ಷ ಭೀಮಣ್ಣ ಸಾಲಿ, ಉಪಾಧ್ಯಕ್ಷ ವೀರುಪಾಕ್ಷಪ್ಪ ಗಡ್ಡ ಯುವ ಅಧ್ಯಕ್ಷರಾದ ರಾಜೇಶ್ ಹೊಳಿಕಟ್ಟಿ, ಮಲ್ಲಿಕಾರ್ಜುನ ಅಲ್ಲೂರಕರ್, ನಗರಾಧ್ಯಕ್ಷ ಪ್ರಭು ಹಲಕರ್ಟಿ, ಯುವ ಕಾಂಗ್ರೆಸ್ ಅಧ್ಯಕ್ಷ ದೇವು ಯಾಬಾಳ, ಮುಖಂಡರಾದ ಶರಣಪ್ಪ ನಾಟೀಕಾರ, ಹಣಮಂತ ಸಂಕನೂರ, ರಾಮಲಿಂಗ ಬಾನ‌ರ್, ಬಸವರಾಜ ಚಿನ್ನಮಳ್ಳಿ, ಭೀಮರಾಯ ಹೊತಿನಮಡಿ, ತಮ್ಮಣ್ಣ ಡಿಗ್ಗಿ, ಸಾಬಣ್ಣ ಭರಾಟೆ, ಬಸಣ್ಣ ತಳವಾರ, ದಶರಥ ದೊಡ್ಡಮನಿ, ಗುಂಡು ಐನಾಪೂರ, ಶರಣು ಡೋಣಗಾಂವ, ಕರಣಕುಮಾ‌ರ್ ಅಲ್ಲೂರ, ಅಂಬು ಹೋಳಿಕಟ್ಟಿ, ಸಂಜಯ ಬುಳಕ‌ರ್, ಸುರೇಶ್ ಗುತ್ತೇದಾರ, ಸಂತೋಷ ಪೂಜಾರಿ, ಸಂತೋಷ ಇವಣಿ, ಭೀಮಾಶಂಕರ ಹೊಳಿಕಟ್ಟಿ, ರಾಜಾಹುಲಿ, ಲಕ್ಷ್ಮೀಕಾಂತ ಸಾಲಿ, ಕಿಶನ್ ಮೂಕೆ, ಶರಣು ಸಿದ್ರಾಮಗೋಳ, ನಾಗೇಂದ್ರ ಚಪಟ್ಟಾ ಗೂಳಿ ಡಿಗ್ಗಿ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ನಿಯಮ ಗಾಳಿಗೆ ತೂರಿದ ಅಂಗಡಿಗಳು.


ನಿಯಮ ಗಾಳಿಗೆ ತೂರಿದ ಅಂಗಡಿಗಳು. 
ಪರವಾನಿಗೆ ಇಲ್ಲಾ. ರಾಜಾರೋಷವಾಗಿ ವ್ಯಾಪಾರ.

-ಜಗದೇವ ಎಸ್ ಕುಂಬಾರ.
ಚಿತ್ತಾಪುರ: ಪಟ್ಟಣದ ಪ್ರಮುಖ ರಸ್ತೆಗಳ ಅಕ್ಕಪಕ್ಕದಲ್ಲಿ ಇತ್ತೀಚಿನ ದಿನಗಳಲ್ಲಿ ನಬಾಯಿಯಂತೆ ಫಾಸ್ಟ್ ಫುಡ್ ಅಂಗಡಿಗಳು ಹಾಗೂ ಧಾಬಾಗಳು, ಖಾನಾವಳಿ, ಪಾನಿಪುರಿ, ಐಸ್ಕ್ರೀಮ್, ಚಹಾ, ಅಂಗಡಿಗಳು ತಲೆಎತ್ತಿವೆ. ಆದರೆ, ಇವುಗಳಲ್ಲಿ ಬಹುತೇಕ ಅಂಗಡಿಗಳು ಸ್ಥಳೀಯ ಪುರಸಭೆಯಿಂದ ಯಾವುದೇ ಅಧಿಕೃತ ಪರವಾನಿಗೆಯನ್ನು ಪಡೆಯದೆ ಕಾರ್ಯನಿರ್ವಹಿಸುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಪಟ್ಟಣದ ಕೆಲ ಮುಖ್ಯ ರಸ್ತೆಗಳ ಬದಿಯಲ್ಲಿ ಫುಟ್‌ಪಾತ್‌ಗಳನ್ನು ಅತಿಕ್ರಮಿಸಿಕೊಂಡು ಈ ಅಂಗಡಿಗಳನ್ನು ನಡೆಸಲಾಗುತ್ತಿದೆ. ಸಂಜೆ ವೇಳೆಯಾಗುತ್ತಿದ್ದಂತೆ ಗ್ರಾಹಕರ ವಾಹನಗಳು ರಸ್ತೆಯಲ್ಲೇ ನಿಲ್ಲುವುದರಿಂದ ವಾಹನ ಸವಾರರು ಹಾಗೂ ಪಾದಚಾರಿಗಳು ಓಡಾಡಲು ಹರಸಾಹಸ ಪಡುವಂತಾಗಿದೆ.ಬುಧವಾರ ಸಂತೆಯಂದು ಜನರು ಪಡುವ ಕಷ್ಟ ಹೇಳತೀರದು.

ರಾಜಾಸ್ಥಾನ, ಗುಜರಾತ್, ಆಂಧ್ರ ಪ್ರದೇಶ, ಬಿಹಾರ, ಹರಿಯಾಣ ಹೀಗೆ ನಾನಾ ರಾಜ್ಯಗಳ ಜನರು ಬಂದು ಇಲ್ಲಿ ವಿವಿಧ ರೀತಿಯ ವ್ಯಾಪಾರ ವಹಿವಾಟು ನಡೆಸುತ್ತಿದ್ದಾರೆ.
ಅಂಗಡಿಗಳಲ್ಲಿ ಆಹಾರದ ಗುಣಮಟ್ಟ ಮತ್ತು ಸ್ವಚ್ಛತೆಯನ್ನು ಯಾರು ತಪಾಸಣೆ ಮಾಡುತ್ತಿಲ್ಲ. ತೆರೆದ ಜಾಗದಲ್ಲಿ ಅಡುಗೆ ಮಾಡುವುದು, ಬಳಸಿದ ನೀರನ್ನು ರಸ್ತೆಗೆ ಚೆಲ್ಲುವುದು ಮತ್ತು ಪ್ಲಾಸ್ಟಿಕ್ ತ್ಯಾಜ್ಯವನ್ನು ಬೇಕಾಬಿಟ್ಟಿ ಎಸೆಯುವುದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ.

ರಾತ್ರಿಯಾದರೂ ಕೆಲ ಧಾಬಾಗಳು ಮತ್ತು ಕೆಲ ಹೋಟೆಲ್, ಪಾನ ಶಾಪ್, ಫಾಸ್ಟ್ ಫುಡ್ ಅಂಗಡಿಗಳು ತೆರೆದಿರುತ್ತವೆ, ಇದರಿಂದ ರಾತ್ರಿ ವೇಳೆ ಅಪರಿಚಿತರು ಯಾರು ಬೇಕಾದರು ಬರುತ್ತಿದ್ದು. ರಾತ್ರಿ ವೇಳೆ ಕಳ್ಳತನ ಕೂಡ ಜಾಸ್ತಿ ಆಗುತ್ತಿವೆ ಅಲ್ಲದೆ ಯಾವುದೇ ಸುರಕ್ಷತಾ ಕ್ರಮಗಳಿಲ್ಲದೆ, ಕನಿಷ್ಠ ಪರವಾನಿಗೆಯೂ ಇಲ್ಲದೆ ಇವರು ವ್ಯಾಪಾರ ಮಾಡುತ್ತಿದ್ದಾರೆ. ಇದು ಸ್ಥಳೀಯ ಆಡಳಿತದ ಕಣ್ಣಿಗೆ ಕಾಣಿಸುತ್ತಿಲ್ಲವೇ?" ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.

"ಯಾವುದೇ ಹೊಸ ಉದ್ದಿಮೆ ಪ್ರಾರಂಭಿಸಲು ಸ್ಥಳೀಯ ಸಂಸ್ಥೆಗಳ ಅನುಮತಿ ಕಡ್ಡಾಯ. ಆದರೆ ಚಿತ್ತಾಪುರ ಪಟ್ಟಣದಲ್ಲಿ ಈ ನಿಯಮಗಳು ಕೇವಲ ಕಾಗದಕ್ಕಷ್ಟೇ ಸೀಮಿತವಾಗಿವೆ. ಪುರಸಭೆ ಅಧಿಕಾರಿಗಳು ಇತ್ತ ಗಮನಹರಿಸಿ, ಅನಧಿಕೃತವಾಗಿ ನಡೆಯುತ್ತಿರುವ ಅಂಗಡಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು".

-ನರಹರಿ ಕುಲ್ಕರ್ಣಿ
ತಾಲೂಕಾಧ್ಯಕ್ಷ, ಕರವೇ (ಪ್ರವೀಣ್ ಶೆಟ್ಟಿ ಬಣ) ಚಿತ್ತಾಪುರ.


"ಪುರಸಭೆಯಿಂದ ಪರವಾನಿಗೆ ಪಡೆಯದ ಅಂಡಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಹಾಗೂ ಒಂದು ವಾರದಲ್ಲಿ ಸಮಸ್ಯೆ ಬಗೆಹರಿಸುವುದಾಗಿ ತಿಳಿಸಿದರು".

ಮನೋಜಕುಮಾರ್ ಗುರಿಕಾರ್
ಮುಖ್ಯಾಧಿಕಾರಿಗಳು, ಪುರಸಭೆ ಚಿತ್ತಾಪುರ.

ಮಂಗಳವಾರ, ಜನವರಿ 20, 2026

ಜನವರಿ 25ಕ್ಕೆ ‘ಸೇವಾರತ್ನ’ ಪ್ರಶಸ್ತಿ ಪ್ರಧಾನ ಹಾಗೂ ಪದಗ್ರಹಣ ಸಮಾರಂಭ.

ಚಿತ್ತಾಪುರ: ಕರ್ನಾಟಕ ರಾಜ್ಯ ಸರ್ಕಾರಿ ಮತ್ತು ಅರೆ ಸರ್ಕಾರಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ನೌಕರರ ಸಂಘದ ಪದಾಧಿಕಾರಿಗಳ ಪದಗ್ರಹಣ ಹಾಗೂ ವಿವಿಧ ಕ್ಷೇತ್ರಗಳ ಸಾಧಕರಿಗೆ ‘ಸೇವಾ ರತ್ನ’ ಪ್ರಶಸ್ತಿ ಪ್ರಧಾನ ಸಮಾರಂಭವು ಜನವರಿ 25ರಂದು ಪಟ್ಟಣದಲ್ಲಿ ಅದ್ಧೂರಿಯಾಗಿ ಜರುಗಲಿದೆ ಎಂದು ಸಂಘದ ಅಧ್ಯಕ್ಷ ಅರುಣಕುಮಾರ ಚಿಂಚನಸೂರ ತಿಳಿಸಿದ್ದಾರೆ.

ಅಂದು ಬೆಳಿಗ್ಗೆ 10 ಗಂಟೆಗೆ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಬಸವೇಶ್ವರ ಕಲ್ಯಾಣ ಮಂಟಪದವರೆಗೆ ಭವ್ಯ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ತದನಂತರ ವೇದಿಕೆ ಕಾರ್ಯಕ್ರಮ ನಡೆಯಲಿದೆ.

ಗಣ್ಯರ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮಕ್ಕೆ ಅಣದೂರನ ಪೂಜ್ಯ ವರಜ್ಯೋತಿ ಬಂತೇಜಿ ಅವರು ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಹಾಗೂ ಘನ ಉಪಸ್ಥಿತರಾಗಿ ರಾಜ್ಯಸಭಾ ಸದಸ್ಯರು ಹಾಗೂ ವಿರೋಧ ಪಕ್ಷದ ನಾಯಕರಾದ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಆಗಮಿಸಲಿದ್ದಾರೆ.

ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಹಾಗೂ ಐಟಿಬಿಟಿ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಲೋಕಸಭಾ ಸದಸ್ಯರಾದ ರಾಧಾಕೃಷ್ಣ ದೊಡ್ಡಮನಿ ಅವರ ಗೌರವ ಉಪಸ್ಥಿತಿ ಇರಲಿದ್ದು, ಸಂಘದ ಅಧ್ಯಕ್ಷರಾದ ಅರುಣಕುಮಾರ ಚಿಂಚನಸೂರ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರಾದ ಜಗದೇವ ಗುತ್ತೇದಾರ್, ತಿಪ್ಪಣಪ್ಪ ಕಮಕನೂರ ಸೇರಿದಂತೆ ಹಲವು ಗಣ್ಯಾತಿಗಣ್ಯರು, ಸರ್ಕಾರಿ ಮತ್ತು ಅರೆ ಸರ್ಕಾರಿ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ 'ಸೇವಾ ರತ್ನ' ಪ್ರಶಸ್ತಿ ನೀಡಿ ಗೌರವಿಸಲಾಗುವುದು.
"ನೌಕರರ ಒಕ್ಕೂಟದ ಶಕ್ತಿ ಪ್ರದರ್ಶನ ಮತ್ತು ಸಾಧಕರನ್ನು ಗುರುತಿಸುವ ಈ ಕಾರ್ಯಕ್ರಮಕ್ಕೆ ತಾಲ್ಲೂಕಿನ ಜನತೆ ಹಾಗೂ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು" ಎಂದು ಅರುಣಕುಮಾರ ಚಿಂಚನಸೂರ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

ಶರಣಬಸವೇಶ್ವರ ದೇವಸ್ಥಾನದ ಹುಂಡಿ ಕಳವು.

ಚಿತ್ತಾಪುರ: ಪಟ್ಟಣದ ವರಣನಗರದಲ್ಲಿರುವ ಪುರಾತನ ಶರಣಬಸವೇಶ್ವರ ದೇವಸ್ಥಾನದಲ್ಲಿ ಜನೆವರಿ 19ರ ಸೋಮವಾರ ರಾತ್ರಿ ಕಳ್ಳರು ನುಗ್ಗಿ ದೇವಸ್ಥಾನದ ಹುಂಡಿಯನ್ನು ಕಳವು ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ಜನೆವರಿ 20ರ ಬೆಳಗಿನ ಜಾವ ಅರ್ಚಕರು ಎಂದಿನಂತೆ ಪೂಜೆ ಸಲ್ಲಿಸಲು ದೇವಸ್ಥಾನಕ್ಕೆ ಬಂದಾಗ, ಹುಂಡಿಯ ಬೀಗ ಮುರಿದಿರುವುದು ಕಂಡುಬಂದಿದೆ. ಹುಂಡಿಯಲ್ಲಿದ್ದ ನಗದು ಹಣವನ್ನು ಕಳ್ಳರು ದೋಚಿದ್ದಾರೆ. ಇದರಿಂದ ಆತಂಕಗೊಂಡ ಅರ್ಚಕರು ತಕ್ಷಣವೇ ದೇವಸ್ಥಾನದ ನಿರ್ವಹಣಾ ಸಮಿತಿಯ ಗಮನಕ್ಕೆ ತಂದಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆಯೇ ದೇವಸ್ಥಾನದ ಸಮಿತಿ ಸದಸ್ಯರು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪಿಎಸ್ಐ ಮಂಜುನಾಥ್ ರೆಡ್ಡಿ ಅವರ ನಿರ್ದೇಶನದ ಮೇರೆಗೆ ಪೊಲೀಸ್ ಸಿಬ್ಬಂದಿಗಳಾದ ಅನಿಲ್ ಕುಮಾರ್, ರವಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
ಕಲಬುರಗಿಯಿಂದ ಆಗಮಿಸಿದ ಜಿಲ್ಲಾ ಶ್ವಾನದಳ ಹಾಗೂ ಬೆರಳಚ್ಚು ತಜ್ಞರ ತಂಡ ಸ್ಥಳದಲ್ಲಿ ಲಭ್ಯವಿದ್ದ ಸುಳಿವುಗಳನ್ನು ಸಂಗ್ರಹಿಸಿದೆ. ಕಳ್ಳರ ಪತ್ತೆಗಾಗಿ ಪೊಲೀಸರು ದೇವಸ್ಥಾನದ ಸಿಸಿಟಿವಿ ಹಾಗೂ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದು, ತನಿಖೆ ಚುರುಕುಗೊಳಿಸಿದ್ದಾರೆ.

ದೇವಸ್ಥಾನದಲ್ಲಿ ನಡೆದ ಈ ಕಳುವು ಘಟನೆಯಿಂದ ಭಕ್ತರಲ್ಲಿ ಆತಂಕ ಮತ್ತು ಆಕ್ರೋಶ ವ್ಯಕ್ತವಾಗಿದ್ದು, ಶೀಘ್ರವೇ ಆರೋಪಿಗಳನ್ನು ಬಂಧಿಸುವಂತೆ ಶರಣಬಸವೇಶ್ವರ ದೇವಸ್ಥಾನದ ಜೀವನೋದ್ಧಾರ ಹಾಗೂ ಸೇವಾ ಟ್ರಸ್ಟ್ ಖಜಾಂಚಿ ಕೊಟೇಶ್ವರ ರೇಷ್ಮೆ, ದೇವಸ್ಥಾನದ ನಿರ್ವಹಣಾ ಸಮಿತಿ ಸದಸ್ಯ ಮಹಾದೇವ ಅಂಗಡಿ 
 ಆಗ್ರಹಿಸಿದ್ದಾರೆ.

ಶುಕ್ರವಾರ, ಜನವರಿ 2, 2026

ಇಂದು ಪರಶುರಾಮ ಅಪ್ಪಾಜಿ ಜನ್ಮ ದಿನ ಆಚರಣೆ.

ಚಿತ್ತಾಪುರ: ತಾಲೂಕಿನ ಸುಕ್ಷೇತ್ರ ಭಾಗೋಡಿ ಗ್ರಾಮದಲ್ಲಿ ಇಂದು ಪೂಜ್ಯ ಶ್ರೀ ಪರಶುರಾಮ ಅಪ್ಪಾಜಿ ರವರ 33ನೇ ಜನ್ಮ ದಿನಾಚರಣೆಯು ಅವರ ಅಭಿಮಾನಿಗಳು ಸಾಯಂಕಾಲ ಅಂಬಿಗರ ಚೌಡಯ್ಯ ಭವನದಲ್ಲಿ ಅದ್ದೂರಿಯಾಗಿ ಆಚರಿಸುತ್ತಿದ್ದಾರೆ.

ಅಪ್ಪಾಜಿ ಅವರು ಬೇಡ ಕುಟುಂಬದಲ್ಲಿ ಜನಿಸಿದ ಅವರು ನೂರಾರು ಭಕ್ತರು ಅಭಿಮಾನಿಗಳು ಹೊಂದಿದು ಅವರ ಅಪೇಕ್ಷೆಯಂತೆ ಜನ್ಮದಿನ ಆಚರಣೆ ನಡೆಯುತ್ತಿದ್ದು ಹಾಗೂ ಅನ್ನಸಂತರ್ಪಣೆ ಕೂಡ ನಡೆಯಲಿದೆ ಎಂದು ಭಕ್ತರಾದ ಖಾಸಿಂ ಪಟೇಲ್ ತಿಳಿಸಿದ್ದಾರೆ.

ಬುಧವಾರ, ಡಿಸೆಂಬರ್ 3, 2025

ಆರ್‌ಎಸ್ಎಸ್, ಬಿಜೆಪಿ ನಕಲಿ ದೇಶಭಕ್ತರು: ಹೊಸಮನಿ.

✓ಭೀಮನಡೆ ಯಶಸ್ವಿ ಬಿಜೆಪಿ ಹತಾಶೆ,   ✓ಬಿಜೆಪಿಗರ ಆರೋಪ ಸತ್ಯಕ್ಕೆ ದೂರ.

ಚಿತ್ತಾಪುರ: ಆರ್‌ಎಸ್ಎಸ್ ನವರು ತ್ರಿವರ್ಣ ಧ್ವಜಗಳು ಹಿಡಿದಿಲ್ಲ ಕೈಯಲ್ಲಿ ಬಡಗಿ ಹಿಡಿದು ಪಥಸಂಚಲನ ಮಾಡಿದ್ದರೆ ನಾವು ತ್ರಿವರ್ಣ ಧ್ವಜಗಳು ಹಿಡಿದು ಹಾಗೂ ಸಂವಿಧಾನ ಪೀಠಕೆ ಜೊತೆಗೆ ಎಲ್ಲಾ ಸಮಾಜಗಳ ಗುರುಗಳ ಭಾವಚಿತ್ರಗಳೊಂದಿಗೆ ಮೆರವಣಿಗೆ ಮಾಡಿದ್ದೇವೆ ಹಾಗಾಗಿ ಆರ್‌ಎಸ್ಎಸ್ ಮತ್ತು ಬಿಜೆಪಿ ನವರು ನಕಲಿ ದೇಶಭಕ್ತರು ನಾವು ನಿಜವಾದ ದೇಶಭಕ್ತರು ಎಂದು ದಲಿತ ಪ್ಯಾಂಥರ್ ರಾಜ್ಯಾಧ್ಯಕ್ಷ ಮಲ್ಲಪ್ಪ ಹೊಸಮನಿ ಹೇಳಿದರು.

ಪಟ್ಟಣದ ಬುದ್ಧ ಮಂದಿರದಲ್ಲಿ ಸಂವಿಧಾನ 
ಸಂರಕ್ಷಣಾ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಭೀಮ ನಡಿಗೆ ಪಥಸಂಚಲನದಲ್ಲಿ ಅಂಬೇಡ್ಕ‌ರ್ ಅನುಯಾಯಿಗಳು ಹಾಗೂ 22 ಸಮಾಜದ ಜನರು ಭಾಗವಹಿಸಿದ್ದರಿಂದ ಅಭೂತಪೂರ್ವ ಯಶಸ್ವಿಗೊಂಡಿದೆ, ಇದನ್ನು ಸಹಿಸಿಕೊಳ್ಳಲು ಆಗದ ಬಿಜೆಪಿ ಮುಖಂಡರು ಹತಾಶೆಗೊಂಡು ಇಲ್ಲಸಲ್ಲದ ಹೇಳಿಕೆ ನೀಡಿದ್ದಾರೆ ಎಂದು ಹೇಳಿದರು.

ಆ‌ರ್.ಎಸ್.ಎಸ್ ನವರು ಕೈಯಲ್ಲಿ ಬಡಗಿ ಹಿಡಿದು ಪಥ ಸಂಚಲನ ಮಾಡುವ ಮೂಲಕ ಜನರಲ್ಲಿ ಭಯದ ವಾತಾವರಣ ನಿರ್ಮಾಣ ಮಾಡಿದ್ದಾರೆ, ಆದರೆ ನಾವು ಯಾವುದೇ ಮಾರಕಾಸ್ತ್ರ ಇಲ್ಲದೇ ಶಿಸ್ತುಬದ್ಧವಾಗಿ, ಶಾಂತಿಯುತವಾಗಿ ಐತಿಹಾಸಿಕ ಭೀಮ ನಡಿಗೆ ಪಥ ಸಂಚಲನ ಮಾಡಿದ್ದೇವೆ, ಭೀಮ ನಡಿಗೆ ಪಥಸಂಚಲನದಲ್ಲಿ ಸ್ವಯಂಪ್ರೇರಿತವಾಗಿ ಜನ ಬಂದಿದ್ದಾರೆ ಯಾರನ್ನೂ ಹಣ ನೀಡಿ ಕರೆಯಿಸಿಲ್ಲ. ಪ್ರಿಯಾಂಕ್ ಖರ್ಗೆ ಅವರು ಸಂವಿಧಾನದ ಪರ ಇದ್ದಾರೆ ಹೀಗಾಗಿ ಅವರ ಪರ ಘೋಷಣೆ ಕೂಗಿದ್ದೇವೆ, ಸಂವಿಧಾನ ವಿಷಯದಲ್ಲಿ ಬಿಜೆಪಿ ಮುಖಂಡರು ರಾಜಕೀಯ ಮಾಡುವುದನ್ನು ಬಿಟ್ಟುಬಿಡಿಲ್ಲಿ ಎಂದು ಬಿಜೆಪಿ ಮುಖಂಡರಿಗೆ ತಿರುಗೇಟು ನೀಡಿದರು.

ಮಾದಿಗ ಸಮಾಜದ ಅಧ್ಯಕ್ಷ ಮಲ್ಲಿಕಾರ್ಜುನ ಬೊಮ್ಮನಳ್ಳಿ ಮಾತನಾಡಿ, ಸಂವಿಧಾನ ಪರವಾಗಿ ಯಾರು ಇರುತ್ತಾರೆ ಅವರ ಪರ ಘೋಷಣೆ ಕೂಗುತ್ತೇವೆ ಅಷ್ಟೇ ಅಲ್ಲ ತಲೆ ಮೇಲೆ ಹೊತ್ತುಕೊಂಡು ಮೆರವಣಿಗೆ ಸಹ ಮಾಡುತ್ತೇವೆ. ಭೀಮ ನಡಿಗೆ ಪಥಸಂಚಲನದಲ್ಲಿ ಎಲ್ಲಾ ಸಮಾಜದವರು ಭಾಗವಹಿಸಿದ್ದರಿಂದ ಬಿಜೆಪಿ ಅವರಿಗೆ ಹೊಟ್ಟೆ ಕಿಚ್ಚು ಆಗಿದೆ ಹೀಗಾಗಿ ಹತಾಶೆಯಿಂದ ಹೇಳಿಕೆ ನೀಡಿದ್ದಾರೆ. ಪ್ರತಿ ವರ್ಷ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಮಾಡುತ್ತೇವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಡಿಎಸ್‌ಎಸ್‌ ಜಿಲ್ಲಾ ಸಂಚಾಲಕ ಮಲ್ಲಿಕಾರ್ಜುನ ಬೆಣ್ಣೂರಕರ್, ಕೋಲಿ ಸಮಾಜದ ಅಧ್ಯಕ್ಷ ನಿಂಗಣ್ಣ ಹೆಗಲೇರಿ, ಬಂಜಾರ ಸಮಾಜದ ಅಧ್ಯಕ್ಷ ಭೀಮಸಿಂಗ ಚವ್ಹಾಣ, ಮುಸ್ಲಿಂ ಸಮಾಜದ ಅಧ್ಯಕ್ಷ ಎಂ.ಎ.ರಷೀದ್, ಮಹಾದೇವ ರಾಠೋಡ, ಮಲ್ಲಿಕಾರ್ಜುನ ಮುಡಬೂಳಕ‌ರ್, ಶರಣು ಡೋಣಗಾಂವ, ಜಗನ್ನಾಥ ಮುಡಬೂಳಕ‌ರ್, ಶರಣಪ್ಪ ಹೊನ್ನಪೂರ, ದೇವು ಯಾಬಾಳ ಇದ್ದರು.

ಸಚಿವರ ಕೈಗೊಂಬೆಯಾದ ತಹಸೀಲ್ದಾರ: ಸಜ್ಜನಶೆಟ್ಟಿ.

ಚಿತ್ತಾಪುರ: ಭೀಮ ನಡಿಗೆ ಪಥಸಂಚಲನಕ್ಕೆ
ಎರೆಡೆರಡು ಬಾರಿ ಅನುಮತಿ ನೀಡುವ ಮೂಲಕ ತಹಸೀಲ್ದಾರ್ ತಮ್ಮ ಮನಬಂದಂತೆ ವರ್ತಿಸಿದ್ದು, ಸಚಿವರ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ  ಎಂದು ಬಿಜೆಪಿ ತಾಲೂಕು ಅಧ್ಯಕ್ಷ ರವೀಂದ್ರ ಸಜ್ಜನಶೆಟ್ಟಿ ಹೇಳಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆ‌ರ್ ಎಸ್ಎಸ್ ಪಥ ಸಂಚಲನಕ್ಕೆ ತಾಲೂಕು ಕಂದಾಯ ವ್ಯಾಪ್ತಿಯಲ್ಲಿ ಇರುವವರಿಗೆ ಹಾಗೂ 350 ಜನರಿಗೆ ಮಾತ್ರ ಅವಕಾಶ ನೀಡಲಾಗಿತ್ತು, ಸಂಚಲನಕ್ಕೆ ಬರುವವರ ಐಡಿ ಕಾರ್ಡ್ ಪರಿಶೀಲನೆ ನಡೆಸಿ ಬ್ಯಾರಿಕೇಡ್ ಹಾಕಿ ನಾಕಾಬಂಧ ಹಾಕಿ, ಪಥ ಸಂಚಲನ ಫೇಲ್ ಮಾಡುವ ಉದ್ದೇಶದಿಂದ ಪೊಲೀಸರು ತುಂಬಾ ತೊಂದರೆ ನೀಡಿದ್ದರು. ಆದರೆ ಭೀಮ ನಡಿಗೆ ಪಥಸಂಚಲನಕ್ಕೆ ಯಾವುದೇ ಬ್ಯಾರಿಕೇಡ್ ಹಾಕಿಲ್ಲ, ಯಾರನ್ನು ತಪಾಸಣೆ ನಡೆಸಲಿಲ್ಲ ಮತ್ತು ಇಂತಿಷ್ಟೇ ಜನರು ಭಾಗವಹಿಸಬೇಕು ಅಂತ ಹೇಳಿಲ್ಲ ಮತ್ತು ಸಮಯ ಪರಿಪಾಲನೆ ಮಾಡಿಲ್ಲ ಹೀಗಾಗಿ ಇಲ್ಲಿ ಅಧಿಕಾರಿಗಳು ತಾರತಮ್ಯ ಮಾಡಿ ಕಾನೂನು ತಮಗೆ ಬೇಕಾದ ಹಾಗೆ ಬಳಸಿಕೊಂಡಿದ್ದಾರೆ ಎಂದು ದೂರಿದರು.

ಆರ್.ಎಸ್ಎಸ್ ಪಥ ಸಂಚಲನ ಸಮಯದಲ್ಲಿ ನಾವು ಪಥ ಸಂಚಲನ ಮಾಡುತ್ತೇವೆ ಎಂದು ಹೇಳಿದ ಸಂಘಟನೆಗಳೇ ಬೇರೆ, ಈಗ ಮಾಡಿದವರೇ ಬೇರೆನೇ ಎಂದು ಕುಟುಕಿದರು. ಶಾಂತಿಪ್ರಿಯ ಚಿತ್ತಾಪುರದಲ್ಲಿ ಇಷ್ಟೊಂದು ಗದ್ದಲ, ಅಶಾಂತಿ ವಾತಾವರಣ ನಿರ್ಮಾಣವಾಗುವುದಕ್ಕೆ ಕಾರಣ ಯಾರು ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ ಎಂದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬಸವರಾಜ ಬೆಣ್ಣೂರಕ‌ರ್ ಮಾತನಾಡಿ ಕಾನೂನು ಎಲ್ಲರಿಗೂ ಒಂದೇ ಇರುವಾಗ ಇಲ್ಲಿಯ ತಹಸೀಲ್ದಾ‌ರ್ ಸೇರಿದಂತೆ ತಾಲೂಕು ಆಡಳಿತ ಆರ್.ಎಸ್ಎಸ್ ಪಥ ಸಂಚಲನಕ್ಕೆ ಒಂದು ಕಾನೂನು, ಭೀಮ ನಡಿಗೆ ಪಥಸಂಚಲನಕ್ಕೆ ಇನ್ನೊಂದು ಕಾನೂನು ಮಾಡಿ ಕಾನೂನು ಹಾಗೂ ಪ್ರಜಾಪ್ರಭುತ್ವದ ಆಶಯಗಳನ್ನು ಗಾಳಿಗೆ ತೂರಿದ್ದಾರೆ. ತಾಲೂಕಿನ ಕಂದಾಯ ವ್ಯಾಪ್ತಿಯಲ್ಲಿ ಇರುವವರಿಗೆ ಮಾತ್ರ ಪಥಸಂಚಲನದಲ್ಲಿ ಭಾಗವಹಿಸುವ ಅವಕಾಶ ಇದೆ ಎಂದು ಆದೇಶ ಹೊರಡಿಸಿದ್ದ ತಹಸೀಲ್ದಾರ್ ಬೆಳಿಗ್ಗೆ ಬೇರೆ ಜಿಲ್ಲೆಯವರಿಗೂ ಅವಕಾಶ ಇದೆ ಎಂದು ಮತ್ತೊಂದು ಆದೇಶ ಹೊರಡಿಸಿರುವುದು ಖಂಡನೀಯ ಎಂದರು.

2015 ರಲ್ಲಿ ಸಂವಿಧಾನ ಸಮರ್ಪಣೆ ದಿನಾಚರಣೆ ಜಾರಿಗೆ ತಂದಿದ್ದೇ ಪ್ರಧಾನಿ ಮೋದಿ. ಅಂಬೇಡ್ಕ‌ರ್ ಅವರಿಗೆ ಕಾಂಗ್ರೆಸ್ ಅವಮಾನಿಸಿದೆ ಆದರೆ ಬಿಜೆಪಿ ಗೌರವಿಸಿದೆ ಎಂದರು. ಸಂವಿಧಾನದ 108 ತಿದ್ದುಪಡಿಗಳಲ್ಲಿ ಕಾಂಗ್ರೆಸ್ 100 ತಿದ್ದುಪಡಿ ಮಾಡಿದೆ ಆದರೆ ಬಿಜೆಪಿ ಬರೀ 8 ತಿದ್ದುಪಡಿ ಮಾಡಿದೆ ಎಂದು ಹೇಳಿದರು.

ಪ್ರಜಾಪ್ರಭುತ್ವದಲ್ಲಿ ಹೋರಾಟ ಮಾಡುವ ಹಕ್ಕು ಎಲ್ಲರಿಗೂ ಇದೆ ಹೀಗಾಗಿ ನಮ್ಮದು ಭೀಮ ನಡಿಗೆ ಪಥಸಂಚಲನಕ್ಕೆ ವಿರೋಧ ಇರಲಿಲ್ಲ, ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ಪಥ ಸಂಚಲನ ಮಾಡಿರುವುದಕ್ಕೆ ನಾವು ಸ್ವಾಗತಿಸುತ್ತೇವೆ ಎಂದರು.

ಸುದ್ದಿಗೋಷ್ಠಿಯಲ್ಲಿ ಪುರಸಭೆ ಮಾಜಿ ಸದಸ್ಯರಾದ ನಾಗರಾಜ ಭಂಕಲಗಿ, ಸುರೇಶ್ ಬೆನಕನಳ್ಳಿ, ಬಿಜೆಪಿ ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಎಮ್ಮೆನೋರ್, ಪ್ರಧಾನ ಕಾರ್ಯದರ್ಶಿ ನಾಗರಾಜ್ ಹೂಗಾರ, ಶಿವರಾಮ್ ಚವ್ಹಾಣ, ರಾಜು ದೊರೆ ಇದ್ದರು.

ಶುಕ್ರವಾರ, ನವೆಂಬರ್ 28, 2025

ಕನ್ನಡ ಸಾಹಿತ್ಯ ಪರಿಷತ್‌ ಕಾರ್ಯಕ್ರಮ ಆಂಗ್ಲ ಶಾಲೆಯಲ್ಲಿ : ಇಂದೂರು ಆಕ್ಷೇಪ.


ಚಿತ್ತಾಪುರ : ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಪಟ್ಟಣದಲ್ಲಿ ಸಿರಿನುಡಿ ಸಂಭ್ರಮ ಎಂಬ ಕಾರ್ಯಕ್ರಮ ಇಂದು ಶನಿವಾರ ಹಮ್ಮಿಕೊಂಡಿರುವ ಶೇಷಗಿರಿರಾವ್ ಹಿರಿಯ ಮತ್ತು ಪ್ರೌಢ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಯೋಜಿಸುವ ಮೂಲಕ ಕನ್ನಡ ಭಾಷೆಗೆ ಅವಮಾನ ಮಾಡಲಾಗುತ್ತಿದೆ ಎಂದು ತಾಲೂಕಾ ಜೈ ಕರ್ನಾಟಕ ಮಾಜಿ ಅಧ್ಯಕ್ಷ ಮಲ್ಲಿನಾಥ ಇಂದೂರು ಅವರು ಉದಯಕಾಲ ಪತ್ರಿಕೆ ಜೊತೆಗೆ ಮಾತನಾಡಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ

ಕನ್ನಡ ನಾಡು, ನುಡಿ, ನೆಲ,ಜಲ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿಗೆ ಕೊಡುಗೆ ನೀಡಿರುವ ಮತ್ತು ಶ್ರಮಿಸುತ್ತಿರುವವರನ್ನು ಗುರುತಿಸಿ ಪರಿಷತ್ತಿನಿಂದ ಸನ್ಮಾನಿಸಿ, ಪ್ರಶಸ್ತಿ ನೀಡಿ ಗೌರವಿಸುವುದು ಪರಿಷತ್ತಿನ ಸಂಪ್ರದಾಯ. ಅದನ್ನು ಮೀರಿ ಆಂಗ್ಲ ಭಾಷೆಯಲ್ಲಿ ಬೋಧನೆ ಮಾಡುವ ಉಪನ್ಯಾಸಕರಿಗೆ ಪ್ರಶಸ್ತಿಗೆ ಆಯ್ಕೆ ಮಾಡುವುದು ಅಲ್ಲದೇ ಮಾಧ್ಯಮ ಕ್ಷೇತ್ರವನ್ನು ಕಡೆಗಣಿಸುವ ಮೂಲಕ ಕನ್ನಡ ಭಾಷೆ ಬೋಧಿಸುವ ಶಿಕ್ಷಕ, ಉಪನ್ಯಾಸಕರಿಗೆ, ಹಾಗೂ ನಾಲ್ಕನೆ ಅಂಗವಾದ ಪತ್ರಿಕಾ ರಂಗವನ್ನು ಅವಮಾನ ಮಾಡಿದಂತೆ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಬಗ್ಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಿಗೆ ಕೇಳಿದಾಗ ತಾಲೂಕಾ ಅಧ್ಯಕ್ಷರಿಗೆ ಕೇಳಿ ಎಂದು ಹಾರಿಕೆ ಉತ್ತರ ನೀಡಿದ್ದಾರೆ. ತಾಲೂಕಾ ಅಧ್ಯಕ್ಷರಿಗೆ ಕೇಳಿದರೆ ಆಗಿರುವ ತಪ್ಪು ಮುಂದಿನ ಕಾರ್ಯಕ್ರಮದಲ್ಲಿ ಸರಿಪಡಿಸಿಕೊಳ್ಳೋಣ ಎಂದು ಹೇಳುವ ಮೂಲಕ ತಪ್ಪು ಒಪ್ಪಿಕೊಂಡು ಕನ್ನಡ ಭಾಷೆಗೆ ಮಾಡಿರುವ ಅವಮಾನ ಸಮರ್ಥಸಿಕೊಂಡಿದ್ದಾರೆ ಎಂದು ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ.

ಎಸ್ಸೆಸ್ಸೆಲ್ಸಿ ಮಕ್ಕಳೊಂದಿಗೆ ಜಿಪಂ ಸಿಇಒ ಚರ್ಚೆ.

ಚಿತ್ತಾಪುರ: ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮಪಡಿಸಲು ಪೂರ್ವಸಿದ್ಧತಾ ಪರೀಕ್ಷೆ-1 ರಲ್ಲಿ ಅತ್ಯಂತ ಕಡಿಮೆ ಫಲಿತಾಂಶ ಪಡೆದ ಕರ್ನಾಟಕ ಪಬ್ಲಿಕ್ ಶಾಲೆ ಮಾಡಬೂಳ,...